Homeಮುಖಪುಟ'ಜನ್ಮಸಿದ್ದ ಪೌರತ್ವ' ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮಸಿದ್ಧ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಟ್ರಂಪ್ ಈ ಆದೇಶಕ್ಕೆ ಸಹಿ ಹಾಕುತ್ತಿದ್ದಂತೆ ಅಮೆರಿಕದಲ್ಲಿ ಹೆಚ್‌ 1ಬಿ ವೀಸಾದಡಿ ಉದ್ಯೋಗ ಮಾಡುತ್ತಿರುವ ಭಾರತೀಯರು ಸೇರಿದಂತೆ ಲಕ್ಷಾಂತರ ವಿದೇಶಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಹಿಂದೆ ಹೆಚ್‌ 1ಬಿ ಉದ್ಯೋಗ ವೀಸಾದಲ್ಲಿ ಅಮೆರಿಕಕ್ಕೆ ತೆರಳಿದ ವಿದೇಶಿಗರಿಗೆ ಅಲ್ಲಿಯೇ ಮಗು ಜನಿಸಿದರೆ, ಆ ಮಗು ‘ಜನ್ಮಸಿದ್ಧ ಪೌರತ್ವ’ ಪಡೆಯುತ್ತಿತ್ತು. ಆದರೆ, ಟ್ರಂಪ್ ಆದೇಶದಿಂದ ಮಗು ಪೌರತ್ವ ಪಡೆಯಬೇಕಾದರೆ ತಂದೆ ಅಥವಾ ತಾಯಿಯಲ್ಲಿ ಒಬ್ಬರಾದರೂ ಅಮೆರಿಕದ ಪ್ರಜೆಯಾಗಿರುವುದು ಅಥವಾ ಗ್ರೀನ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಇನ್ನುಮುಂದೆ ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ವಿದೇಶಿಗರ ಮಕ್ಕಳಿಗೆ ಪೌರತ್ವ ಸಿಗುವುದಿಲ್ಲ.

ಟ್ರಂಪ್ ಆದೇಶದಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಮ್ಮ ಕುಟುಂಬವನ್ನು ಅಲ್ಲಿಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದವರಿಗೆ ಮತ್ತು ಮಕ್ಕಳು ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ಪೌರತ್ವ ಪಡೆಯುತ್ತಿದ್ದವರಿಗೆ ಹಿನ್ನಡೆಯಾಗಿದೆ.

ಏನಿದು ಯುಎಸ್ ‘ಜನ್ಮಸಿದ್ದ ಪೌರತ್ವ’

ಪ್ರಸ್ತುತ ಕಾನೂನಿನ ಪ್ರಕಾರ, 1868ರಲ್ಲಿ ಅಂತರ್ಯುದ್ಧದ ನಂತರ ಹಿಂದೆ ಗುಲಾಮರಾಗಿದ್ದ ಜನರ ಸ್ಥಿತಿಯನ್ನು ಸ್ಪಷ್ಟಪಡಿಸಲು ಅಂಗೀಕರಿಸಲಾದ ಯುಎಸ್ ಸಂವಿಧಾನದ 14ನೇ ತಿದ್ದುಪಡಿಯು ಯುಎಸ್‌ ನೆಲದಲ್ಲಿ ಜನಿಸಿದ ಬಹುತೇಕ ಎಲ್ಲಾ ಶಿಶುಗಳಿಗೆ ಪೌರತ್ವವನ್ನು ನೀಡುತ್ತದೆ. ಜನ್ಮಸಿದ್ಧ ಪೌರತ್ವ ಅಥವಾ ‘ಮಣ್ಣಿನ ಹಕ್ಕು’ ತತ್ವ ಅಳವಡಿಸಿಕೊಂಡಿರುವ ಜಗತ್ತಿನ ಸುಮಾರು 30 ದೇಶಗಳಲ್ಲಿ ಯುಎಸ್‌ ಕೂಡ ಒಂದು.

ಟ್ರಂಪ್ ಹೊಸ ಆದೇಶದಿಂದ ಏನಾಗಲಿದೆ?

ಸೋಮವಾರ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ ಆದೇಶದಿಂದ, ಯುಎಸ್‌ ನಾಗರಿಕ ಅಥವಾ ಕಾನೂನುಬದ್ಧ ಶಾಶ್ವತ ನಿವಾಸಿಯಾಗಿರುವ ಕನಿಷ್ಠ ಒಬ್ಬ ಪೋಷಕರಿಲ್ಲದೆ ಅಮೆರಿಕದಲ್ಲಿ ಜನಿಸಿದ ಮಕ್ಕಳು ಇನ್ನು ಮುಂದೆ ಸ್ವಯಂಚಾಲಿತ ಅಮೆರಿಕ ಪೌರತ್ವವನ್ನು ಪಡೆಯಲು ಸಾಧ್ಯವಿಲ್ಲ. ಫೆಡರಲ್ ಏಜೆನ್ಸಿಗಳು ಅಂತಹ ಮಕ್ಕಳಿಗೆ ಅಮೆರಿಕದ ಪೌರತ್ವವನ್ನು ಸಾಬೀತುಪಡಿಸುವ ಸಂಬಂಧಿತ ದಾಖಲೆಗಳನ್ನು ನೀಡುವುದನ್ನು ಅಥವಾ ಗುರುತಿಸುವುದನ್ನು ತಡೆಯುತ್ತದೆ. ಈ ಆದೇಶವು ಅನಧಿಕೃತ ವಲಸಿಗರಿಗೆ ಮತ್ತು ತಾತ್ಕಾಲಿಕ ವೀಸಾಗಳಲ್ಲಿ ಅಮೆರಿಕದಲ್ಲಿ ಕಾನೂನುಬದ್ಧವಾಗಿ ಇರುವ ಜನರಿಗೆ ಜನಿಸಿದ ಮಕ್ಕಳನ್ನು ಗುರಿಯಾಗಿರಿಸಿಕೊಂಡಿದೆ.

ಟ್ರಂಪ್ ಆದೇಶ ಯಾರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೆಚ್‌1-ಬಿ ವೀಸಾ ಹೊಂದಿರುವವರ ಮಕ್ಕಳ ಪರಿಸ್ಥಿತಿಯೇನು?

ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ತಾತ್ಕಾಲಿಕ ಕೆಲಸದ ವೀಸಾಗಳಲ್ಲಿ (ಹೆಚ್‌-1ಬಿ) ದೇಶದಲ್ಲಿ ಕಾನೂನುಬದ್ಧವಾಗಿ ವಾಸಿಸುವ ಜನರ ಮೇಲೆ ಟ್ರಂಪ್ ಆದೇಶ ಪರಿಣಾಮ ಬೀರಲಿದೆ. ಗ್ರೀನ್ ಕಾರ್ಡ್‌ಗಳಿಗಾಗಿ ಪ್ರಸ್ತುತ ಕಾಯುತ್ತಿರುವ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರ ಮೇಲೂ ಈ ಕಾನೂನು ಪರಿಣಾಮ ಬೀರುವ ಸಾಧ್ಯತೆಯಿದೆ.

ಯುಎಸ್ ಪೌರತ್ವ ಮತ್ತು ವಲಸೆ ಸೇವೆಗಳನ್ನು ಉಲ್ಲೇಖಿಸಿದ 2024ರ ವರದಿಗಳ ಪ್ರಕಾರ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರು ಗ್ರೀನ್ ಕಾರ್ಡ್‌ಗಳಿಗಾಗಿ ಕಾಯುತ್ತಿದ್ದಾರೆ.

ಟೈಮ್ಸ್‌ ಆಫ್ ಇಂಡಿಯಾ ವರದಿಯ ಪ್ರಕಾರ, ‘ಜನ್ಮಸಿದ್ಧ ಪೌರತ್ವ’ವನ್ನು ಕೊನೆಗೊಳಿಸುವ ಟ್ರಂಪ್ ಅವರ ಕಾರ್ಯಕಾರಿ ಆದೇಶವು ಹೆಚ್‌ 1ಬಿ ವೀಸಾ ಹೊಂದಿರುವವರ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜನ್ಮಸಿದ್ದ ಪೌರತ್ವವಿಲ್ಲದೆ, ಈ ಮಕ್ಕಳು ದೇಶದಲ್ಲಿ ಶಿಕ್ಷಣ, ವಿದ್ಯಾರ್ಥಿ ವೇತನಗಳು ಮತ್ತು ಫೆಡರಲ್ ನೆರವಿನ ಅವಕಾಶಗಳನ್ನು ಕಳೆದುಕೊಳ್ಳಬಹುದು. ಅಲ್ಲದೆ, ಇದು ಭಾರತೀಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೂ ಅಡ್ಡಿಯಾಗಬಹುದು.

ಜನ್ಮಸಿದ್ದ ಪೌರತ್ವ ಹಕ್ಕು ಕೊನೆಗೊಳಿಸುವ ಟ್ರಂಪ್ ಆದೇಶವನ್ನು ಸುಲಭವಾಗಿ ವಿವರಿಸುವುದಾದರೆ, ವಲಸಿಗರ ಮಕ್ಕಳು ತಾವು ಯುಎಸ್‌ನಲ್ಲಿ ಜನಿಸಿದ್ದೇವೆ ಎಂಬ ಪ್ರಮಾಣ ಪತ್ರವನ್ನು ಈ ಮೊದಲು ತೋರಿಸಬೇಕಿತ್ತು. ಆದರೆ, ಇನ್ನುಮುಂದೆ ತಮ್ಮ ಪೂರ್ವಜರು ಮತ್ತು ಪೋಷಕರ ಪೌರತ್ವದ ದಾಖಲೆಗಳನ್ನು ತೋರಿಸಬೇಕಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...