Homeಮುಖಪುಟ'ಜನ್ಮಸಿದ್ದ ಪೌರತ್ವ' ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮಸಿದ್ಧ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಟ್ರಂಪ್ ಈ ಆದೇಶಕ್ಕೆ ಸಹಿ ಹಾಕುತ್ತಿದ್ದಂತೆ ಅಮೆರಿಕದಲ್ಲಿ ಹೆಚ್‌ 1ಬಿ ವೀಸಾದಡಿ ಉದ್ಯೋಗ ಮಾಡುತ್ತಿರುವ ಭಾರತೀಯರು ಸೇರಿದಂತೆ ಲಕ್ಷಾಂತರ ವಿದೇಶಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಹಿಂದೆ ಹೆಚ್‌ 1ಬಿ ಉದ್ಯೋಗ ವೀಸಾದಲ್ಲಿ ಅಮೆರಿಕಕ್ಕೆ ತೆರಳಿದ ವಿದೇಶಿಗರಿಗೆ ಅಲ್ಲಿಯೇ ಮಗು ಜನಿಸಿದರೆ, ಆ ಮಗು ‘ಜನ್ಮಸಿದ್ಧ ಪೌರತ್ವ’ ಪಡೆಯುತ್ತಿತ್ತು. ಆದರೆ, ಟ್ರಂಪ್ ಆದೇಶದಿಂದ ಮಗು ಪೌರತ್ವ ಪಡೆಯಬೇಕಾದರೆ ತಂದೆ ಅಥವಾ ತಾಯಿಯಲ್ಲಿ ಒಬ್ಬರಾದರೂ ಅಮೆರಿಕದ ಪ್ರಜೆಯಾಗಿರುವುದು ಅಥವಾ ಗ್ರೀನ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಇನ್ನುಮುಂದೆ ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ವಿದೇಶಿಗರ ಮಕ್ಕಳಿಗೆ ಪೌರತ್ವ ಸಿಗುವುದಿಲ್ಲ.

ಟ್ರಂಪ್ ಆದೇಶದಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಮ್ಮ ಕುಟುಂಬವನ್ನು ಅಲ್ಲಿಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದವರಿಗೆ ಮತ್ತು ಮಕ್ಕಳು ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ಪೌರತ್ವ ಪಡೆಯುತ್ತಿದ್ದವರಿಗೆ ಹಿನ್ನಡೆಯಾಗಿದೆ.

ಏನಿದು ಯುಎಸ್ ‘ಜನ್ಮಸಿದ್ದ ಪೌರತ್ವ’

ಪ್ರಸ್ತುತ ಕಾನೂನಿನ ಪ್ರಕಾರ, 1868ರಲ್ಲಿ ಅಂತರ್ಯುದ್ಧದ ನಂತರ ಹಿಂದೆ ಗುಲಾಮರಾಗಿದ್ದ ಜನರ ಸ್ಥಿತಿಯನ್ನು ಸ್ಪಷ್ಟಪಡಿಸಲು ಅಂಗೀಕರಿಸಲಾದ ಯುಎಸ್ ಸಂವಿಧಾನದ 14ನೇ ತಿದ್ದುಪಡಿಯು ಯುಎಸ್‌ ನೆಲದಲ್ಲಿ ಜನಿಸಿದ ಬಹುತೇಕ ಎಲ್ಲಾ ಶಿಶುಗಳಿಗೆ ಪೌರತ್ವವನ್ನು ನೀಡುತ್ತದೆ. ಜನ್ಮಸಿದ್ಧ ಪೌರತ್ವ ಅಥವಾ ‘ಮಣ್ಣಿನ ಹಕ್ಕು’ ತತ್ವ ಅಳವಡಿಸಿಕೊಂಡಿರುವ ಜಗತ್ತಿನ ಸುಮಾರು 30 ದೇಶಗಳಲ್ಲಿ ಯುಎಸ್‌ ಕೂಡ ಒಂದು.

ಟ್ರಂಪ್ ಹೊಸ ಆದೇಶದಿಂದ ಏನಾಗಲಿದೆ?

ಸೋಮವಾರ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ ಆದೇಶದಿಂದ, ಯುಎಸ್‌ ನಾಗರಿಕ ಅಥವಾ ಕಾನೂನುಬದ್ಧ ಶಾಶ್ವತ ನಿವಾಸಿಯಾಗಿರುವ ಕನಿಷ್ಠ ಒಬ್ಬ ಪೋಷಕರಿಲ್ಲದೆ ಅಮೆರಿಕದಲ್ಲಿ ಜನಿಸಿದ ಮಕ್ಕಳು ಇನ್ನು ಮುಂದೆ ಸ್ವಯಂಚಾಲಿತ ಅಮೆರಿಕ ಪೌರತ್ವವನ್ನು ಪಡೆಯಲು ಸಾಧ್ಯವಿಲ್ಲ. ಫೆಡರಲ್ ಏಜೆನ್ಸಿಗಳು ಅಂತಹ ಮಕ್ಕಳಿಗೆ ಅಮೆರಿಕದ ಪೌರತ್ವವನ್ನು ಸಾಬೀತುಪಡಿಸುವ ಸಂಬಂಧಿತ ದಾಖಲೆಗಳನ್ನು ನೀಡುವುದನ್ನು ಅಥವಾ ಗುರುತಿಸುವುದನ್ನು ತಡೆಯುತ್ತದೆ. ಈ ಆದೇಶವು ಅನಧಿಕೃತ ವಲಸಿಗರಿಗೆ ಮತ್ತು ತಾತ್ಕಾಲಿಕ ವೀಸಾಗಳಲ್ಲಿ ಅಮೆರಿಕದಲ್ಲಿ ಕಾನೂನುಬದ್ಧವಾಗಿ ಇರುವ ಜನರಿಗೆ ಜನಿಸಿದ ಮಕ್ಕಳನ್ನು ಗುರಿಯಾಗಿರಿಸಿಕೊಂಡಿದೆ.

ಟ್ರಂಪ್ ಆದೇಶ ಯಾರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೆಚ್‌1-ಬಿ ವೀಸಾ ಹೊಂದಿರುವವರ ಮಕ್ಕಳ ಪರಿಸ್ಥಿತಿಯೇನು?

ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ತಾತ್ಕಾಲಿಕ ಕೆಲಸದ ವೀಸಾಗಳಲ್ಲಿ (ಹೆಚ್‌-1ಬಿ) ದೇಶದಲ್ಲಿ ಕಾನೂನುಬದ್ಧವಾಗಿ ವಾಸಿಸುವ ಜನರ ಮೇಲೆ ಟ್ರಂಪ್ ಆದೇಶ ಪರಿಣಾಮ ಬೀರಲಿದೆ. ಗ್ರೀನ್ ಕಾರ್ಡ್‌ಗಳಿಗಾಗಿ ಪ್ರಸ್ತುತ ಕಾಯುತ್ತಿರುವ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರ ಮೇಲೂ ಈ ಕಾನೂನು ಪರಿಣಾಮ ಬೀರುವ ಸಾಧ್ಯತೆಯಿದೆ.

ಯುಎಸ್ ಪೌರತ್ವ ಮತ್ತು ವಲಸೆ ಸೇವೆಗಳನ್ನು ಉಲ್ಲೇಖಿಸಿದ 2024ರ ವರದಿಗಳ ಪ್ರಕಾರ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರು ಗ್ರೀನ್ ಕಾರ್ಡ್‌ಗಳಿಗಾಗಿ ಕಾಯುತ್ತಿದ್ದಾರೆ.

ಟೈಮ್ಸ್‌ ಆಫ್ ಇಂಡಿಯಾ ವರದಿಯ ಪ್ರಕಾರ, ‘ಜನ್ಮಸಿದ್ಧ ಪೌರತ್ವ’ವನ್ನು ಕೊನೆಗೊಳಿಸುವ ಟ್ರಂಪ್ ಅವರ ಕಾರ್ಯಕಾರಿ ಆದೇಶವು ಹೆಚ್‌ 1ಬಿ ವೀಸಾ ಹೊಂದಿರುವವರ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜನ್ಮಸಿದ್ದ ಪೌರತ್ವವಿಲ್ಲದೆ, ಈ ಮಕ್ಕಳು ದೇಶದಲ್ಲಿ ಶಿಕ್ಷಣ, ವಿದ್ಯಾರ್ಥಿ ವೇತನಗಳು ಮತ್ತು ಫೆಡರಲ್ ನೆರವಿನ ಅವಕಾಶಗಳನ್ನು ಕಳೆದುಕೊಳ್ಳಬಹುದು. ಅಲ್ಲದೆ, ಇದು ಭಾರತೀಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೂ ಅಡ್ಡಿಯಾಗಬಹುದು.

ಜನ್ಮಸಿದ್ದ ಪೌರತ್ವ ಹಕ್ಕು ಕೊನೆಗೊಳಿಸುವ ಟ್ರಂಪ್ ಆದೇಶವನ್ನು ಸುಲಭವಾಗಿ ವಿವರಿಸುವುದಾದರೆ, ವಲಸಿಗರ ಮಕ್ಕಳು ತಾವು ಯುಎಸ್‌ನಲ್ಲಿ ಜನಿಸಿದ್ದೇವೆ ಎಂಬ ಪ್ರಮಾಣ ಪತ್ರವನ್ನು ಈ ಮೊದಲು ತೋರಿಸಬೇಕಿತ್ತು. ಆದರೆ, ಇನ್ನುಮುಂದೆ ತಮ್ಮ ಪೂರ್ವಜರು ಮತ್ತು ಪೋಷಕರ ಪೌರತ್ವದ ದಾಖಲೆಗಳನ್ನು ತೋರಿಸಬೇಕಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...