Homeಮುಖಪುಟ'ಜನ್ಮಸಿದ್ದ ಪೌರತ್ವ' ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮಸಿದ್ಧ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಟ್ರಂಪ್ ಈ ಆದೇಶಕ್ಕೆ ಸಹಿ ಹಾಕುತ್ತಿದ್ದಂತೆ ಅಮೆರಿಕದಲ್ಲಿ ಹೆಚ್‌ 1ಬಿ ವೀಸಾದಡಿ ಉದ್ಯೋಗ ಮಾಡುತ್ತಿರುವ ಭಾರತೀಯರು ಸೇರಿದಂತೆ ಲಕ್ಷಾಂತರ ವಿದೇಶಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಹಿಂದೆ ಹೆಚ್‌ 1ಬಿ ಉದ್ಯೋಗ ವೀಸಾದಲ್ಲಿ ಅಮೆರಿಕಕ್ಕೆ ತೆರಳಿದ ವಿದೇಶಿಗರಿಗೆ ಅಲ್ಲಿಯೇ ಮಗು ಜನಿಸಿದರೆ, ಆ ಮಗು ‘ಜನ್ಮಸಿದ್ಧ ಪೌರತ್ವ’ ಪಡೆಯುತ್ತಿತ್ತು. ಆದರೆ, ಟ್ರಂಪ್ ಆದೇಶದಿಂದ ಮಗು ಪೌರತ್ವ ಪಡೆಯಬೇಕಾದರೆ ತಂದೆ ಅಥವಾ ತಾಯಿಯಲ್ಲಿ ಒಬ್ಬರಾದರೂ ಅಮೆರಿಕದ ಪ್ರಜೆಯಾಗಿರುವುದು ಅಥವಾ ಗ್ರೀನ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಇನ್ನುಮುಂದೆ ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ವಿದೇಶಿಗರ ಮಕ್ಕಳಿಗೆ ಪೌರತ್ವ ಸಿಗುವುದಿಲ್ಲ.

ಟ್ರಂಪ್ ಆದೇಶದಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಮ್ಮ ಕುಟುಂಬವನ್ನು ಅಲ್ಲಿಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದವರಿಗೆ ಮತ್ತು ಮಕ್ಕಳು ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ಪೌರತ್ವ ಪಡೆಯುತ್ತಿದ್ದವರಿಗೆ ಹಿನ್ನಡೆಯಾಗಿದೆ.

ಏನಿದು ಯುಎಸ್ ‘ಜನ್ಮಸಿದ್ದ ಪೌರತ್ವ’

ಪ್ರಸ್ತುತ ಕಾನೂನಿನ ಪ್ರಕಾರ, 1868ರಲ್ಲಿ ಅಂತರ್ಯುದ್ಧದ ನಂತರ ಹಿಂದೆ ಗುಲಾಮರಾಗಿದ್ದ ಜನರ ಸ್ಥಿತಿಯನ್ನು ಸ್ಪಷ್ಟಪಡಿಸಲು ಅಂಗೀಕರಿಸಲಾದ ಯುಎಸ್ ಸಂವಿಧಾನದ 14ನೇ ತಿದ್ದುಪಡಿಯು ಯುಎಸ್‌ ನೆಲದಲ್ಲಿ ಜನಿಸಿದ ಬಹುತೇಕ ಎಲ್ಲಾ ಶಿಶುಗಳಿಗೆ ಪೌರತ್ವವನ್ನು ನೀಡುತ್ತದೆ. ಜನ್ಮಸಿದ್ಧ ಪೌರತ್ವ ಅಥವಾ ‘ಮಣ್ಣಿನ ಹಕ್ಕು’ ತತ್ವ ಅಳವಡಿಸಿಕೊಂಡಿರುವ ಜಗತ್ತಿನ ಸುಮಾರು 30 ದೇಶಗಳಲ್ಲಿ ಯುಎಸ್‌ ಕೂಡ ಒಂದು.

ಟ್ರಂಪ್ ಹೊಸ ಆದೇಶದಿಂದ ಏನಾಗಲಿದೆ?

ಸೋಮವಾರ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ ಆದೇಶದಿಂದ, ಯುಎಸ್‌ ನಾಗರಿಕ ಅಥವಾ ಕಾನೂನುಬದ್ಧ ಶಾಶ್ವತ ನಿವಾಸಿಯಾಗಿರುವ ಕನಿಷ್ಠ ಒಬ್ಬ ಪೋಷಕರಿಲ್ಲದೆ ಅಮೆರಿಕದಲ್ಲಿ ಜನಿಸಿದ ಮಕ್ಕಳು ಇನ್ನು ಮುಂದೆ ಸ್ವಯಂಚಾಲಿತ ಅಮೆರಿಕ ಪೌರತ್ವವನ್ನು ಪಡೆಯಲು ಸಾಧ್ಯವಿಲ್ಲ. ಫೆಡರಲ್ ಏಜೆನ್ಸಿಗಳು ಅಂತಹ ಮಕ್ಕಳಿಗೆ ಅಮೆರಿಕದ ಪೌರತ್ವವನ್ನು ಸಾಬೀತುಪಡಿಸುವ ಸಂಬಂಧಿತ ದಾಖಲೆಗಳನ್ನು ನೀಡುವುದನ್ನು ಅಥವಾ ಗುರುತಿಸುವುದನ್ನು ತಡೆಯುತ್ತದೆ. ಈ ಆದೇಶವು ಅನಧಿಕೃತ ವಲಸಿಗರಿಗೆ ಮತ್ತು ತಾತ್ಕಾಲಿಕ ವೀಸಾಗಳಲ್ಲಿ ಅಮೆರಿಕದಲ್ಲಿ ಕಾನೂನುಬದ್ಧವಾಗಿ ಇರುವ ಜನರಿಗೆ ಜನಿಸಿದ ಮಕ್ಕಳನ್ನು ಗುರಿಯಾಗಿರಿಸಿಕೊಂಡಿದೆ.

ಟ್ರಂಪ್ ಆದೇಶ ಯಾರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೆಚ್‌1-ಬಿ ವೀಸಾ ಹೊಂದಿರುವವರ ಮಕ್ಕಳ ಪರಿಸ್ಥಿತಿಯೇನು?

ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ತಾತ್ಕಾಲಿಕ ಕೆಲಸದ ವೀಸಾಗಳಲ್ಲಿ (ಹೆಚ್‌-1ಬಿ) ದೇಶದಲ್ಲಿ ಕಾನೂನುಬದ್ಧವಾಗಿ ವಾಸಿಸುವ ಜನರ ಮೇಲೆ ಟ್ರಂಪ್ ಆದೇಶ ಪರಿಣಾಮ ಬೀರಲಿದೆ. ಗ್ರೀನ್ ಕಾರ್ಡ್‌ಗಳಿಗಾಗಿ ಪ್ರಸ್ತುತ ಕಾಯುತ್ತಿರುವ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರ ಮೇಲೂ ಈ ಕಾನೂನು ಪರಿಣಾಮ ಬೀರುವ ಸಾಧ್ಯತೆಯಿದೆ.

ಯುಎಸ್ ಪೌರತ್ವ ಮತ್ತು ವಲಸೆ ಸೇವೆಗಳನ್ನು ಉಲ್ಲೇಖಿಸಿದ 2024ರ ವರದಿಗಳ ಪ್ರಕಾರ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರು ಗ್ರೀನ್ ಕಾರ್ಡ್‌ಗಳಿಗಾಗಿ ಕಾಯುತ್ತಿದ್ದಾರೆ.

ಟೈಮ್ಸ್‌ ಆಫ್ ಇಂಡಿಯಾ ವರದಿಯ ಪ್ರಕಾರ, ‘ಜನ್ಮಸಿದ್ಧ ಪೌರತ್ವ’ವನ್ನು ಕೊನೆಗೊಳಿಸುವ ಟ್ರಂಪ್ ಅವರ ಕಾರ್ಯಕಾರಿ ಆದೇಶವು ಹೆಚ್‌ 1ಬಿ ವೀಸಾ ಹೊಂದಿರುವವರ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜನ್ಮಸಿದ್ದ ಪೌರತ್ವವಿಲ್ಲದೆ, ಈ ಮಕ್ಕಳು ದೇಶದಲ್ಲಿ ಶಿಕ್ಷಣ, ವಿದ್ಯಾರ್ಥಿ ವೇತನಗಳು ಮತ್ತು ಫೆಡರಲ್ ನೆರವಿನ ಅವಕಾಶಗಳನ್ನು ಕಳೆದುಕೊಳ್ಳಬಹುದು. ಅಲ್ಲದೆ, ಇದು ಭಾರತೀಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೂ ಅಡ್ಡಿಯಾಗಬಹುದು.

ಜನ್ಮಸಿದ್ದ ಪೌರತ್ವ ಹಕ್ಕು ಕೊನೆಗೊಳಿಸುವ ಟ್ರಂಪ್ ಆದೇಶವನ್ನು ಸುಲಭವಾಗಿ ವಿವರಿಸುವುದಾದರೆ, ವಲಸಿಗರ ಮಕ್ಕಳು ತಾವು ಯುಎಸ್‌ನಲ್ಲಿ ಜನಿಸಿದ್ದೇವೆ ಎಂಬ ಪ್ರಮಾಣ ಪತ್ರವನ್ನು ಈ ಮೊದಲು ತೋರಿಸಬೇಕಿತ್ತು. ಆದರೆ, ಇನ್ನುಮುಂದೆ ತಮ್ಮ ಪೂರ್ವಜರು ಮತ್ತು ಪೋಷಕರ ಪೌರತ್ವದ ದಾಖಲೆಗಳನ್ನು ತೋರಿಸಬೇಕಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...