Homeಮುಖಪುಟ'ಜನ್ಮಸಿದ್ದ ಪೌರತ್ವ' ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮಸಿದ್ಧ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಟ್ರಂಪ್ ಈ ಆದೇಶಕ್ಕೆ ಸಹಿ ಹಾಕುತ್ತಿದ್ದಂತೆ ಅಮೆರಿಕದಲ್ಲಿ ಹೆಚ್‌ 1ಬಿ ವೀಸಾದಡಿ ಉದ್ಯೋಗ ಮಾಡುತ್ತಿರುವ ಭಾರತೀಯರು ಸೇರಿದಂತೆ ಲಕ್ಷಾಂತರ ವಿದೇಶಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಹಿಂದೆ ಹೆಚ್‌ 1ಬಿ ಉದ್ಯೋಗ ವೀಸಾದಲ್ಲಿ ಅಮೆರಿಕಕ್ಕೆ ತೆರಳಿದ ವಿದೇಶಿಗರಿಗೆ ಅಲ್ಲಿಯೇ ಮಗು ಜನಿಸಿದರೆ, ಆ ಮಗು ‘ಜನ್ಮಸಿದ್ಧ ಪೌರತ್ವ’ ಪಡೆಯುತ್ತಿತ್ತು. ಆದರೆ, ಟ್ರಂಪ್ ಆದೇಶದಿಂದ ಮಗು ಪೌರತ್ವ ಪಡೆಯಬೇಕಾದರೆ ತಂದೆ ಅಥವಾ ತಾಯಿಯಲ್ಲಿ ಒಬ್ಬರಾದರೂ ಅಮೆರಿಕದ ಪ್ರಜೆಯಾಗಿರುವುದು ಅಥವಾ ಗ್ರೀನ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಇನ್ನುಮುಂದೆ ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ವಿದೇಶಿಗರ ಮಕ್ಕಳಿಗೆ ಪೌರತ್ವ ಸಿಗುವುದಿಲ್ಲ.

ಟ್ರಂಪ್ ಆದೇಶದಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಮ್ಮ ಕುಟುಂಬವನ್ನು ಅಲ್ಲಿಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದವರಿಗೆ ಮತ್ತು ಮಕ್ಕಳು ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ಪೌರತ್ವ ಪಡೆಯುತ್ತಿದ್ದವರಿಗೆ ಹಿನ್ನಡೆಯಾಗಿದೆ.

ಏನಿದು ಯುಎಸ್ ‘ಜನ್ಮಸಿದ್ದ ಪೌರತ್ವ’

ಪ್ರಸ್ತುತ ಕಾನೂನಿನ ಪ್ರಕಾರ, 1868ರಲ್ಲಿ ಅಂತರ್ಯುದ್ಧದ ನಂತರ ಹಿಂದೆ ಗುಲಾಮರಾಗಿದ್ದ ಜನರ ಸ್ಥಿತಿಯನ್ನು ಸ್ಪಷ್ಟಪಡಿಸಲು ಅಂಗೀಕರಿಸಲಾದ ಯುಎಸ್ ಸಂವಿಧಾನದ 14ನೇ ತಿದ್ದುಪಡಿಯು ಯುಎಸ್‌ ನೆಲದಲ್ಲಿ ಜನಿಸಿದ ಬಹುತೇಕ ಎಲ್ಲಾ ಶಿಶುಗಳಿಗೆ ಪೌರತ್ವವನ್ನು ನೀಡುತ್ತದೆ. ಜನ್ಮಸಿದ್ಧ ಪೌರತ್ವ ಅಥವಾ ‘ಮಣ್ಣಿನ ಹಕ್ಕು’ ತತ್ವ ಅಳವಡಿಸಿಕೊಂಡಿರುವ ಜಗತ್ತಿನ ಸುಮಾರು 30 ದೇಶಗಳಲ್ಲಿ ಯುಎಸ್‌ ಕೂಡ ಒಂದು.

ಟ್ರಂಪ್ ಹೊಸ ಆದೇಶದಿಂದ ಏನಾಗಲಿದೆ?

ಸೋಮವಾರ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ ಆದೇಶದಿಂದ, ಯುಎಸ್‌ ನಾಗರಿಕ ಅಥವಾ ಕಾನೂನುಬದ್ಧ ಶಾಶ್ವತ ನಿವಾಸಿಯಾಗಿರುವ ಕನಿಷ್ಠ ಒಬ್ಬ ಪೋಷಕರಿಲ್ಲದೆ ಅಮೆರಿಕದಲ್ಲಿ ಜನಿಸಿದ ಮಕ್ಕಳು ಇನ್ನು ಮುಂದೆ ಸ್ವಯಂಚಾಲಿತ ಅಮೆರಿಕ ಪೌರತ್ವವನ್ನು ಪಡೆಯಲು ಸಾಧ್ಯವಿಲ್ಲ. ಫೆಡರಲ್ ಏಜೆನ್ಸಿಗಳು ಅಂತಹ ಮಕ್ಕಳಿಗೆ ಅಮೆರಿಕದ ಪೌರತ್ವವನ್ನು ಸಾಬೀತುಪಡಿಸುವ ಸಂಬಂಧಿತ ದಾಖಲೆಗಳನ್ನು ನೀಡುವುದನ್ನು ಅಥವಾ ಗುರುತಿಸುವುದನ್ನು ತಡೆಯುತ್ತದೆ. ಈ ಆದೇಶವು ಅನಧಿಕೃತ ವಲಸಿಗರಿಗೆ ಮತ್ತು ತಾತ್ಕಾಲಿಕ ವೀಸಾಗಳಲ್ಲಿ ಅಮೆರಿಕದಲ್ಲಿ ಕಾನೂನುಬದ್ಧವಾಗಿ ಇರುವ ಜನರಿಗೆ ಜನಿಸಿದ ಮಕ್ಕಳನ್ನು ಗುರಿಯಾಗಿರಿಸಿಕೊಂಡಿದೆ.

ಟ್ರಂಪ್ ಆದೇಶ ಯಾರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೆಚ್‌1-ಬಿ ವೀಸಾ ಹೊಂದಿರುವವರ ಮಕ್ಕಳ ಪರಿಸ್ಥಿತಿಯೇನು?

ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ತಾತ್ಕಾಲಿಕ ಕೆಲಸದ ವೀಸಾಗಳಲ್ಲಿ (ಹೆಚ್‌-1ಬಿ) ದೇಶದಲ್ಲಿ ಕಾನೂನುಬದ್ಧವಾಗಿ ವಾಸಿಸುವ ಜನರ ಮೇಲೆ ಟ್ರಂಪ್ ಆದೇಶ ಪರಿಣಾಮ ಬೀರಲಿದೆ. ಗ್ರೀನ್ ಕಾರ್ಡ್‌ಗಳಿಗಾಗಿ ಪ್ರಸ್ತುತ ಕಾಯುತ್ತಿರುವ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರ ಮೇಲೂ ಈ ಕಾನೂನು ಪರಿಣಾಮ ಬೀರುವ ಸಾಧ್ಯತೆಯಿದೆ.

ಯುಎಸ್ ಪೌರತ್ವ ಮತ್ತು ವಲಸೆ ಸೇವೆಗಳನ್ನು ಉಲ್ಲೇಖಿಸಿದ 2024ರ ವರದಿಗಳ ಪ್ರಕಾರ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರು ಗ್ರೀನ್ ಕಾರ್ಡ್‌ಗಳಿಗಾಗಿ ಕಾಯುತ್ತಿದ್ದಾರೆ.

ಟೈಮ್ಸ್‌ ಆಫ್ ಇಂಡಿಯಾ ವರದಿಯ ಪ್ರಕಾರ, ‘ಜನ್ಮಸಿದ್ಧ ಪೌರತ್ವ’ವನ್ನು ಕೊನೆಗೊಳಿಸುವ ಟ್ರಂಪ್ ಅವರ ಕಾರ್ಯಕಾರಿ ಆದೇಶವು ಹೆಚ್‌ 1ಬಿ ವೀಸಾ ಹೊಂದಿರುವವರ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜನ್ಮಸಿದ್ದ ಪೌರತ್ವವಿಲ್ಲದೆ, ಈ ಮಕ್ಕಳು ದೇಶದಲ್ಲಿ ಶಿಕ್ಷಣ, ವಿದ್ಯಾರ್ಥಿ ವೇತನಗಳು ಮತ್ತು ಫೆಡರಲ್ ನೆರವಿನ ಅವಕಾಶಗಳನ್ನು ಕಳೆದುಕೊಳ್ಳಬಹುದು. ಅಲ್ಲದೆ, ಇದು ಭಾರತೀಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೂ ಅಡ್ಡಿಯಾಗಬಹುದು.

ಜನ್ಮಸಿದ್ದ ಪೌರತ್ವ ಹಕ್ಕು ಕೊನೆಗೊಳಿಸುವ ಟ್ರಂಪ್ ಆದೇಶವನ್ನು ಸುಲಭವಾಗಿ ವಿವರಿಸುವುದಾದರೆ, ವಲಸಿಗರ ಮಕ್ಕಳು ತಾವು ಯುಎಸ್‌ನಲ್ಲಿ ಜನಿಸಿದ್ದೇವೆ ಎಂಬ ಪ್ರಮಾಣ ಪತ್ರವನ್ನು ಈ ಮೊದಲು ತೋರಿಸಬೇಕಿತ್ತು. ಆದರೆ, ಇನ್ನುಮುಂದೆ ತಮ್ಮ ಪೂರ್ವಜರು ಮತ್ತು ಪೋಷಕರ ಪೌರತ್ವದ ದಾಖಲೆಗಳನ್ನು ತೋರಿಸಬೇಕಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...