Homeಮುಖಪುಟ'ಜನ್ಮಸಿದ್ದ ಪೌರತ್ವ' ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

‘ಜನ್ಮಸಿದ್ದ ಪೌರತ್ವ’ ಹಕ್ಕು ರದ್ದುಗೊಳಿಸಿದ ಟ್ರಂಪ್ : ಆತಂಕದಲ್ಲಿ ಲಕ್ಷಾಂತರ ಭಾರತೀಯರು

- Advertisement -
- Advertisement -

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮಸಿದ್ಧ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಟ್ರಂಪ್ ಈ ಆದೇಶಕ್ಕೆ ಸಹಿ ಹಾಕುತ್ತಿದ್ದಂತೆ ಅಮೆರಿಕದಲ್ಲಿ ಹೆಚ್‌ 1ಬಿ ವೀಸಾದಡಿ ಉದ್ಯೋಗ ಮಾಡುತ್ತಿರುವ ಭಾರತೀಯರು ಸೇರಿದಂತೆ ಲಕ್ಷಾಂತರ ವಿದೇಶಿಗರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಹಿಂದೆ ಹೆಚ್‌ 1ಬಿ ಉದ್ಯೋಗ ವೀಸಾದಲ್ಲಿ ಅಮೆರಿಕಕ್ಕೆ ತೆರಳಿದ ವಿದೇಶಿಗರಿಗೆ ಅಲ್ಲಿಯೇ ಮಗು ಜನಿಸಿದರೆ, ಆ ಮಗು ‘ಜನ್ಮಸಿದ್ಧ ಪೌರತ್ವ’ ಪಡೆಯುತ್ತಿತ್ತು. ಆದರೆ, ಟ್ರಂಪ್ ಆದೇಶದಿಂದ ಮಗು ಪೌರತ್ವ ಪಡೆಯಬೇಕಾದರೆ ತಂದೆ ಅಥವಾ ತಾಯಿಯಲ್ಲಿ ಒಬ್ಬರಾದರೂ ಅಮೆರಿಕದ ಪ್ರಜೆಯಾಗಿರುವುದು ಅಥವಾ ಗ್ರೀನ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಇನ್ನುಮುಂದೆ ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ವಿದೇಶಿಗರ ಮಕ್ಕಳಿಗೆ ಪೌರತ್ವ ಸಿಗುವುದಿಲ್ಲ.

ಟ್ರಂಪ್ ಆದೇಶದಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ತಮ್ಮ ಕುಟುಂಬವನ್ನು ಅಲ್ಲಿಗೆ ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದವರಿಗೆ ಮತ್ತು ಮಕ್ಕಳು ಅಮೆರಿಕದಲ್ಲಿ ಹುಟ್ಟಿದ ಕಾರಣಕ್ಕೆ ಪೌರತ್ವ ಪಡೆಯುತ್ತಿದ್ದವರಿಗೆ ಹಿನ್ನಡೆಯಾಗಿದೆ.

ಏನಿದು ಯುಎಸ್ ‘ಜನ್ಮಸಿದ್ದ ಪೌರತ್ವ’

ಪ್ರಸ್ತುತ ಕಾನೂನಿನ ಪ್ರಕಾರ, 1868ರಲ್ಲಿ ಅಂತರ್ಯುದ್ಧದ ನಂತರ ಹಿಂದೆ ಗುಲಾಮರಾಗಿದ್ದ ಜನರ ಸ್ಥಿತಿಯನ್ನು ಸ್ಪಷ್ಟಪಡಿಸಲು ಅಂಗೀಕರಿಸಲಾದ ಯುಎಸ್ ಸಂವಿಧಾನದ 14ನೇ ತಿದ್ದುಪಡಿಯು ಯುಎಸ್‌ ನೆಲದಲ್ಲಿ ಜನಿಸಿದ ಬಹುತೇಕ ಎಲ್ಲಾ ಶಿಶುಗಳಿಗೆ ಪೌರತ್ವವನ್ನು ನೀಡುತ್ತದೆ. ಜನ್ಮಸಿದ್ಧ ಪೌರತ್ವ ಅಥವಾ ‘ಮಣ್ಣಿನ ಹಕ್ಕು’ ತತ್ವ ಅಳವಡಿಸಿಕೊಂಡಿರುವ ಜಗತ್ತಿನ ಸುಮಾರು 30 ದೇಶಗಳಲ್ಲಿ ಯುಎಸ್‌ ಕೂಡ ಒಂದು.

ಟ್ರಂಪ್ ಹೊಸ ಆದೇಶದಿಂದ ಏನಾಗಲಿದೆ?

ಸೋಮವಾರ ಡೊನಾಲ್ಡ್ ಟ್ರಂಪ್ ಸಹಿ ಮಾಡಿದ ಆದೇಶದಿಂದ, ಯುಎಸ್‌ ನಾಗರಿಕ ಅಥವಾ ಕಾನೂನುಬದ್ಧ ಶಾಶ್ವತ ನಿವಾಸಿಯಾಗಿರುವ ಕನಿಷ್ಠ ಒಬ್ಬ ಪೋಷಕರಿಲ್ಲದೆ ಅಮೆರಿಕದಲ್ಲಿ ಜನಿಸಿದ ಮಕ್ಕಳು ಇನ್ನು ಮುಂದೆ ಸ್ವಯಂಚಾಲಿತ ಅಮೆರಿಕ ಪೌರತ್ವವನ್ನು ಪಡೆಯಲು ಸಾಧ್ಯವಿಲ್ಲ. ಫೆಡರಲ್ ಏಜೆನ್ಸಿಗಳು ಅಂತಹ ಮಕ್ಕಳಿಗೆ ಅಮೆರಿಕದ ಪೌರತ್ವವನ್ನು ಸಾಬೀತುಪಡಿಸುವ ಸಂಬಂಧಿತ ದಾಖಲೆಗಳನ್ನು ನೀಡುವುದನ್ನು ಅಥವಾ ಗುರುತಿಸುವುದನ್ನು ತಡೆಯುತ್ತದೆ. ಈ ಆದೇಶವು ಅನಧಿಕೃತ ವಲಸಿಗರಿಗೆ ಮತ್ತು ತಾತ್ಕಾಲಿಕ ವೀಸಾಗಳಲ್ಲಿ ಅಮೆರಿಕದಲ್ಲಿ ಕಾನೂನುಬದ್ಧವಾಗಿ ಇರುವ ಜನರಿಗೆ ಜನಿಸಿದ ಮಕ್ಕಳನ್ನು ಗುರಿಯಾಗಿರಿಸಿಕೊಂಡಿದೆ.

ಟ್ರಂಪ್ ಆದೇಶ ಯಾರ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೆಚ್‌1-ಬಿ ವೀಸಾ ಹೊಂದಿರುವವರ ಮಕ್ಕಳ ಪರಿಸ್ಥಿತಿಯೇನು?

ಪ್ರವಾಸಿಗರು, ವಿದ್ಯಾರ್ಥಿಗಳು ಮತ್ತು ತಾತ್ಕಾಲಿಕ ಕೆಲಸದ ವೀಸಾಗಳಲ್ಲಿ (ಹೆಚ್‌-1ಬಿ) ದೇಶದಲ್ಲಿ ಕಾನೂನುಬದ್ಧವಾಗಿ ವಾಸಿಸುವ ಜನರ ಮೇಲೆ ಟ್ರಂಪ್ ಆದೇಶ ಪರಿಣಾಮ ಬೀರಲಿದೆ. ಗ್ರೀನ್ ಕಾರ್ಡ್‌ಗಳಿಗಾಗಿ ಪ್ರಸ್ತುತ ಕಾಯುತ್ತಿರುವ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರ ಮೇಲೂ ಈ ಕಾನೂನು ಪರಿಣಾಮ ಬೀರುವ ಸಾಧ್ಯತೆಯಿದೆ.

ಯುಎಸ್ ಪೌರತ್ವ ಮತ್ತು ವಲಸೆ ಸೇವೆಗಳನ್ನು ಉಲ್ಲೇಖಿಸಿದ 2024ರ ವರದಿಗಳ ಪ್ರಕಾರ, ಒಂದು ಮಿಲಿಯನ್‌ಗಿಂತಲೂ ಹೆಚ್ಚು ಭಾರತೀಯರು ಗ್ರೀನ್ ಕಾರ್ಡ್‌ಗಳಿಗಾಗಿ ಕಾಯುತ್ತಿದ್ದಾರೆ.

ಟೈಮ್ಸ್‌ ಆಫ್ ಇಂಡಿಯಾ ವರದಿಯ ಪ್ರಕಾರ, ‘ಜನ್ಮಸಿದ್ಧ ಪೌರತ್ವ’ವನ್ನು ಕೊನೆಗೊಳಿಸುವ ಟ್ರಂಪ್ ಅವರ ಕಾರ್ಯಕಾರಿ ಆದೇಶವು ಹೆಚ್‌ 1ಬಿ ವೀಸಾ ಹೊಂದಿರುವವರ ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಜನ್ಮಸಿದ್ದ ಪೌರತ್ವವಿಲ್ಲದೆ, ಈ ಮಕ್ಕಳು ದೇಶದಲ್ಲಿ ಶಿಕ್ಷಣ, ವಿದ್ಯಾರ್ಥಿ ವೇತನಗಳು ಮತ್ತು ಫೆಡರಲ್ ನೆರವಿನ ಅವಕಾಶಗಳನ್ನು ಕಳೆದುಕೊಳ್ಳಬಹುದು. ಅಲ್ಲದೆ, ಇದು ಭಾರತೀಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೂ ಅಡ್ಡಿಯಾಗಬಹುದು.

ಜನ್ಮಸಿದ್ದ ಪೌರತ್ವ ಹಕ್ಕು ಕೊನೆಗೊಳಿಸುವ ಟ್ರಂಪ್ ಆದೇಶವನ್ನು ಸುಲಭವಾಗಿ ವಿವರಿಸುವುದಾದರೆ, ವಲಸಿಗರ ಮಕ್ಕಳು ತಾವು ಯುಎಸ್‌ನಲ್ಲಿ ಜನಿಸಿದ್ದೇವೆ ಎಂಬ ಪ್ರಮಾಣ ಪತ್ರವನ್ನು ಈ ಮೊದಲು ತೋರಿಸಬೇಕಿತ್ತು. ಆದರೆ, ಇನ್ನುಮುಂದೆ ತಮ್ಮ ಪೂರ್ವಜರು ಮತ್ತು ಪೋಷಕರ ಪೌರತ್ವದ ದಾಖಲೆಗಳನ್ನು ತೋರಿಸಬೇಕಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...