Homeಮುಖಪುಟ'ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌'ಗೆ ನಿರ್ಬಂಧ ವಿಧಿಸಿದ ಡೊನಾಲ್ಡ್ ಟ್ರಂಪ್

‘ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌’ಗೆ ನಿರ್ಬಂಧ ವಿಧಿಸಿದ ಡೊನಾಲ್ಡ್ ಟ್ರಂಪ್

- Advertisement -
- Advertisement -

ಅಮೆರಿಕ ಮತ್ತು ಅದರ ಆಪ್ತ ಮಿತ್ರ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಕಾನೂನುಬಾಹಿರ ಮತ್ತು ಆಧಾರರಹಿತ ಕ್ರಮಗಳನ್ನು ಕೈಗೊಳ್ಳುತ್ತಿವೆ ಎಂದು ಆರೋಪಿಸಿ ‘ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ’ಕ್ಕೆ (ಐಸಿಸಿ) ನಿರ್ಬಂಧ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ಈ ಕ್ರಮವು ಅಮೆರಿಕದ ನಾಗರಿಕರು ಅಥವಾ ಮಿತ್ರರಾಷ್ಟ್ರಗಳ ವಿರುದ್ಧ ಐಸಿಸಿ ನಡೆಸುವ ತನಿಖೆಗಳಿಗೆ ಸಹಾಯ ಮಾಡುವ ವ್ಯಕ್ತಿಗಳು ಮತ್ತು ಅವರ ಕುಟುಂಬಗಳ ಮೇಲೆ ಆರ್ಥಿಕ ಮತ್ತು ವೀಸಾ ನಿರ್ಬಂಧಗಳನ್ನು ವಿಧಿಸುತ್ತದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಾಷಿಂಗ್ಟನ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಟ್ರಂಪ್ ಈ ಆದೇಶಕ್ಕೆ ಸಹಿ ಹಾಕಿದ್ದಾರೆ.

ಗಾಝಾದಲ್ಲಿ ಇಸ್ರೇಲ್ ನಡೆಸಿದ ನರಮೇಧಕ್ಕೆ ಸಂಬಂಧಿಸಿದಂತೆ ಯುದ್ದ ಅಪರಾಧ ಹೊರಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಇಸ್ರೇಲ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ 2024ರ ನವೆಂಬರ್‌ 21ರಂದು ಐಸಿಸಿ ಬಂಧನ ವಾರೆಂಟ್ ಹೊರಡಿಸಿತ್ತು.

ಗುರುವಾರ (ಫೆ.6) ಶ್ವೇತಭವನ ಹೊರಡಿಸಿದ ಪ್ರಕಟಣೆಯಲ್ಲಿ ಇಸ್ರೇಲ್ ಹಾಗೂ ಹಮಾಸ್ ನಾಯಕರ ವಿರುದ್ದ ಏಕಕಾಲದಲ್ಲಿ ವಾರೆಂಟ್ ಜಾರಿ ಮಾಡಿ, ಹಮಾಸ್ ಮತ್ತು ಇಸ್ರೇಲ್ ನಡುವೆ ಐಸಿಸಿ ಅನೈತಿಕ ಸಮಾನತೆ ತೋರ್ಪಡಿಸಿದೆ ಎಂದು ಅಮೆರಿಕ ಆಕ್ರೋಶ ವ್ಯಕ್ತಪಡಿಸಿದೆ.

ಕೋರ್ಟ್‌ನ ಇತ್ತೀಚಿನ ಕ್ರಮಗಳು ಪೂರ್ವಗ್ರಹದಿಂದ ಕೂಡಿದೆ. ಅಮೆರಿಕನ್ನರಿಗೆ ಕಿರುಕುಳ ನೀಡುವಂತಿದೆ, ನಿಂದಿಸುವಂತಿದೆ ಎಂದು ಟ್ರಂಪ್ ಕಾರ್ಯಕಾರಿ ಆದೇಶದಲ್ಲಿ ಹೇಳಲಾಗಿದೆ.

“ಐಸಿಸಿಯ ದುರುದ್ದೇಶಪೂರಿತ ನಡವಳಿಕೆಯು ಅಮೆರಿಕದ ಸಾರ್ವಭೌಮತ್ವಕ್ಕೆ ಬೆದರಿಕೆ ಹಾಕುತ್ತಿದೆ. ಅಮೆರಿಕ ಸರ್ಕಾರ ಮತ್ತು ಇಸ್ರೇಲ್ ಸೇರಿದಂತೆ ನಮ್ಮ ಮಿತ್ರರಾಷ್ಟ್ರಗಳ ನಿರ್ಣಾಯಕ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಕಾರ್ಯವನ್ನು ದುರ್ಬಲಗೊಳಿಸುತ್ತಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಮೆರಿಕ ಐಸಿಸಿಯ ಸದಸ್ಯ ರಾಷ್ಟ್ರವಲ್ಲ. ತನ್ನ ಅಧಿಕಾರಿಗಳು ಮತ್ತು ನಾಗರಿಕರ ಮೇಲೆ ಐಸಿಸಿ ಆದೇಶ ನೀಡುವುದನ್ನು ಅಮೆರಿಕ ಒಪ್ಪಿಲ್ಲ. ನಾವು ಐಸಿಸಿಯ ನ್ಯಾಯವ್ಯಾಪ್ತಿಯಲ್ಲಿ ಇಲ್ಲ ಎಂದು ಪದೇ ಪದೇ ತಿರಸ್ಕರಿಸಿದೆ.

ಇರಾನ್ ಸೇರಿದಂತೆ ಇಸ್ರೇಲ್ ವಿರೋಧಿ ಗುಂಪುಗಳನ್ನು ನಿರ್ಲಕ್ಷಿಸಿ, ಇಸ್ರೇಲ್‌ನ ಆತ್ಮರಕ್ಷಣೆಯ ಹಕ್ಕಿನ ಮೇಲೆ ಐಸಿಸಿ ನಿರ್ಬಂಧಗಳನ್ನು ಹೇರುತ್ತಿದೆ ಎಂದು ಶ್ವೇತಭವನ ಆರೋಪಿಸಿದೆ.

ಟ್ರಂಪ್ ತಮ್ಮ ಮೊದಲ ಅಧಿಕಾರಾವಧಿಯಲ್ಲಿ, ಅಮೆರಿಕದ ಪಡೆಗಳು ಅಫ್ಘಾನಿಸ್ತಾನದಲ್ಲಿ ಯುದ್ಧ ಅಪರಾಧಗಳನ್ನು ಎಸಗಿವೆಯೇ ಎಂದು ತನಿಖೆ ನಡೆಸುತ್ತಿದ್ದ ಐಸಿಸಿ ಅಧಿಕಾರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದರು. ಆ ನಿರ್ಬಂಧಗಳನ್ನು ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್ ಆಡಳಿತವು ತೆಗೆದು ಹಾಕಿತ್ತು.

ಕಳೆದ ತಿಂಗಳು, ಅಮೆರಿಕ ಸಂಸತ್‌ ಐಸಿಸಿಗೆ ಅನುಮೋದನೆ ನೀಡುವ ಮಸೂದೆ ಮೇಲೆ ಮತ ಚಲಾಯಿಸಿತ್ತು. ಆದರೆ, ಆ ಮಸೂದೆ ಸೆನೆಟ್‌ನಲ್ಲಿ ವಿಫಲವಾಗಿತ್ತು.

ಯುಗೊಸ್ಲಾವಿಯಾದ ವಿಸರ್ಜನೆ ಮತ್ತು ರುವಾಂಡಾದ ನರಮೇಧದ ನಂತರ, ಆಪಾದಿತ ದೌರ್ಜನ್ಯಗಳನ್ನು ತನಿಖೆ ಮಾಡಲು ಐಸಿಸಿಯನ್ನು 2002ರಲ್ಲಿ ಸ್ಥಾಪಿಸಲಾಯಿತು.

ಐಸಿಸಿ ಸ್ಥಾಪಿಸಿದ ರೋಮ್ ಶಾಸನವನ್ನು 120ಕ್ಕೂ ಹೆಚ್ಚು ದೇಶಗಳು ಅನುಮೋದಿಸಿವೆ. ಇನ್ನೂ 34 ದೇಶಗಳು ಸಹಿ ಹಾಕಿವೆ ಮತ್ತು ಭವಿಷ್ಯದಲ್ಲಿ ಶಾಸನ ಅಂಗೀಕರಿಸಬಹುದು.

ಅಮೆರಿಕ ಮತ್ತು ಇಸ್ರೇಲ್ ಎರಡೂ ರೋಮ್ ಶಾಸನದ ಭಾಗವಾಗಿಲ್ಲ. ಐಸಿಸಿ ಜಾಗತಿಕವಾಗಿ ಕೊನೆಯ ನ್ಯಾಯಾಲಯವಾಗಿದ್ದು, ರಾಷ್ಟ್ರೀಯ ಅಧಿಕಾರಿಗಳು ವಿಚಾರಣೆ ನಡೆಸಲು ಸಾಧ್ಯವಾಗದಿದ್ದಾಗ ಅಥವಾ ವಿಚಾರಣೆ ನಡೆಸಲು ನಿರಾಕರಿಸಿದಾಗ ಮಾತ್ರ ಮಧ್ಯಪ್ರವೇಶಿಸುತ್ತದೆ.

‘ಕತ್ತೆ ಮಾರ್ಗ’ದ ಮೂಲಕ ಅಮೆರಿಕ ಪ್ರವೇಶಿಸಲು ₹72 ಲಕ್ಷ ಪಾವತಿಸಿದ್ದ ಹರಿಯಾಣದ ಆಕಾಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...