Homeಮುಖಪುಟ'ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌'ಗೆ ನಿರ್ಬಂಧ ವಿಧಿಸಿದ ಡೊನಾಲ್ಡ್ ಟ್ರಂಪ್

‘ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌’ಗೆ ನಿರ್ಬಂಧ ವಿಧಿಸಿದ ಡೊನಾಲ್ಡ್ ಟ್ರಂಪ್

- Advertisement -
- Advertisement -

ಅಮೆರಿಕ ಮತ್ತು ಅದರ ಆಪ್ತ ಮಿತ್ರ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಕಾನೂನುಬಾಹಿರ ಮತ್ತು ಆಧಾರರಹಿತ ಕ್ರಮಗಳನ್ನು ಕೈಗೊಳ್ಳುತ್ತಿವೆ ಎಂದು ಆರೋಪಿಸಿ ‘ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ’ಕ್ಕೆ (ಐಸಿಸಿ) ನಿರ್ಬಂಧ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ಈ ಕ್ರಮವು ಅಮೆರಿಕದ ನಾಗರಿಕರು ಅಥವಾ ಮಿತ್ರರಾಷ್ಟ್ರಗಳ ವಿರುದ್ಧ ಐಸಿಸಿ ನಡೆಸುವ ತನಿಖೆಗಳಿಗೆ ಸಹಾಯ ಮಾಡುವ ವ್ಯಕ್ತಿಗಳು ಮತ್ತು ಅವರ ಕುಟುಂಬಗಳ ಮೇಲೆ ಆರ್ಥಿಕ ಮತ್ತು ವೀಸಾ ನಿರ್ಬಂಧಗಳನ್ನು ವಿಧಿಸುತ್ತದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಾಷಿಂಗ್ಟನ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಟ್ರಂಪ್ ಈ ಆದೇಶಕ್ಕೆ ಸಹಿ ಹಾಕಿದ್ದಾರೆ.

ಗಾಝಾದಲ್ಲಿ ಇಸ್ರೇಲ್ ನಡೆಸಿದ ನರಮೇಧಕ್ಕೆ ಸಂಬಂಧಿಸಿದಂತೆ ಯುದ್ದ ಅಪರಾಧ ಹೊರಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಇಸ್ರೇಲ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ 2024ರ ನವೆಂಬರ್‌ 21ರಂದು ಐಸಿಸಿ ಬಂಧನ ವಾರೆಂಟ್ ಹೊರಡಿಸಿತ್ತು.

ಗುರುವಾರ (ಫೆ.6) ಶ್ವೇತಭವನ ಹೊರಡಿಸಿದ ಪ್ರಕಟಣೆಯಲ್ಲಿ ಇಸ್ರೇಲ್ ಹಾಗೂ ಹಮಾಸ್ ನಾಯಕರ ವಿರುದ್ದ ಏಕಕಾಲದಲ್ಲಿ ವಾರೆಂಟ್ ಜಾರಿ ಮಾಡಿ, ಹಮಾಸ್ ಮತ್ತು ಇಸ್ರೇಲ್ ನಡುವೆ ಐಸಿಸಿ ಅನೈತಿಕ ಸಮಾನತೆ ತೋರ್ಪಡಿಸಿದೆ ಎಂದು ಅಮೆರಿಕ ಆಕ್ರೋಶ ವ್ಯಕ್ತಪಡಿಸಿದೆ.

ಕೋರ್ಟ್‌ನ ಇತ್ತೀಚಿನ ಕ್ರಮಗಳು ಪೂರ್ವಗ್ರಹದಿಂದ ಕೂಡಿದೆ. ಅಮೆರಿಕನ್ನರಿಗೆ ಕಿರುಕುಳ ನೀಡುವಂತಿದೆ, ನಿಂದಿಸುವಂತಿದೆ ಎಂದು ಟ್ರಂಪ್ ಕಾರ್ಯಕಾರಿ ಆದೇಶದಲ್ಲಿ ಹೇಳಲಾಗಿದೆ.

“ಐಸಿಸಿಯ ದುರುದ್ದೇಶಪೂರಿತ ನಡವಳಿಕೆಯು ಅಮೆರಿಕದ ಸಾರ್ವಭೌಮತ್ವಕ್ಕೆ ಬೆದರಿಕೆ ಹಾಕುತ್ತಿದೆ. ಅಮೆರಿಕ ಸರ್ಕಾರ ಮತ್ತು ಇಸ್ರೇಲ್ ಸೇರಿದಂತೆ ನಮ್ಮ ಮಿತ್ರರಾಷ್ಟ್ರಗಳ ನಿರ್ಣಾಯಕ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಕಾರ್ಯವನ್ನು ದುರ್ಬಲಗೊಳಿಸುತ್ತಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಮೆರಿಕ ಐಸಿಸಿಯ ಸದಸ್ಯ ರಾಷ್ಟ್ರವಲ್ಲ. ತನ್ನ ಅಧಿಕಾರಿಗಳು ಮತ್ತು ನಾಗರಿಕರ ಮೇಲೆ ಐಸಿಸಿ ಆದೇಶ ನೀಡುವುದನ್ನು ಅಮೆರಿಕ ಒಪ್ಪಿಲ್ಲ. ನಾವು ಐಸಿಸಿಯ ನ್ಯಾಯವ್ಯಾಪ್ತಿಯಲ್ಲಿ ಇಲ್ಲ ಎಂದು ಪದೇ ಪದೇ ತಿರಸ್ಕರಿಸಿದೆ.

ಇರಾನ್ ಸೇರಿದಂತೆ ಇಸ್ರೇಲ್ ವಿರೋಧಿ ಗುಂಪುಗಳನ್ನು ನಿರ್ಲಕ್ಷಿಸಿ, ಇಸ್ರೇಲ್‌ನ ಆತ್ಮರಕ್ಷಣೆಯ ಹಕ್ಕಿನ ಮೇಲೆ ಐಸಿಸಿ ನಿರ್ಬಂಧಗಳನ್ನು ಹೇರುತ್ತಿದೆ ಎಂದು ಶ್ವೇತಭವನ ಆರೋಪಿಸಿದೆ.

ಟ್ರಂಪ್ ತಮ್ಮ ಮೊದಲ ಅಧಿಕಾರಾವಧಿಯಲ್ಲಿ, ಅಮೆರಿಕದ ಪಡೆಗಳು ಅಫ್ಘಾನಿಸ್ತಾನದಲ್ಲಿ ಯುದ್ಧ ಅಪರಾಧಗಳನ್ನು ಎಸಗಿವೆಯೇ ಎಂದು ತನಿಖೆ ನಡೆಸುತ್ತಿದ್ದ ಐಸಿಸಿ ಅಧಿಕಾರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದರು. ಆ ನಿರ್ಬಂಧಗಳನ್ನು ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್ ಆಡಳಿತವು ತೆಗೆದು ಹಾಕಿತ್ತು.

ಕಳೆದ ತಿಂಗಳು, ಅಮೆರಿಕ ಸಂಸತ್‌ ಐಸಿಸಿಗೆ ಅನುಮೋದನೆ ನೀಡುವ ಮಸೂದೆ ಮೇಲೆ ಮತ ಚಲಾಯಿಸಿತ್ತು. ಆದರೆ, ಆ ಮಸೂದೆ ಸೆನೆಟ್‌ನಲ್ಲಿ ವಿಫಲವಾಗಿತ್ತು.

ಯುಗೊಸ್ಲಾವಿಯಾದ ವಿಸರ್ಜನೆ ಮತ್ತು ರುವಾಂಡಾದ ನರಮೇಧದ ನಂತರ, ಆಪಾದಿತ ದೌರ್ಜನ್ಯಗಳನ್ನು ತನಿಖೆ ಮಾಡಲು ಐಸಿಸಿಯನ್ನು 2002ರಲ್ಲಿ ಸ್ಥಾಪಿಸಲಾಯಿತು.

ಐಸಿಸಿ ಸ್ಥಾಪಿಸಿದ ರೋಮ್ ಶಾಸನವನ್ನು 120ಕ್ಕೂ ಹೆಚ್ಚು ದೇಶಗಳು ಅನುಮೋದಿಸಿವೆ. ಇನ್ನೂ 34 ದೇಶಗಳು ಸಹಿ ಹಾಕಿವೆ ಮತ್ತು ಭವಿಷ್ಯದಲ್ಲಿ ಶಾಸನ ಅಂಗೀಕರಿಸಬಹುದು.

ಅಮೆರಿಕ ಮತ್ತು ಇಸ್ರೇಲ್ ಎರಡೂ ರೋಮ್ ಶಾಸನದ ಭಾಗವಾಗಿಲ್ಲ. ಐಸಿಸಿ ಜಾಗತಿಕವಾಗಿ ಕೊನೆಯ ನ್ಯಾಯಾಲಯವಾಗಿದ್ದು, ರಾಷ್ಟ್ರೀಯ ಅಧಿಕಾರಿಗಳು ವಿಚಾರಣೆ ನಡೆಸಲು ಸಾಧ್ಯವಾಗದಿದ್ದಾಗ ಅಥವಾ ವಿಚಾರಣೆ ನಡೆಸಲು ನಿರಾಕರಿಸಿದಾಗ ಮಾತ್ರ ಮಧ್ಯಪ್ರವೇಶಿಸುತ್ತದೆ.

‘ಕತ್ತೆ ಮಾರ್ಗ’ದ ಮೂಲಕ ಅಮೆರಿಕ ಪ್ರವೇಶಿಸಲು ₹72 ಲಕ್ಷ ಪಾವತಿಸಿದ್ದ ಹರಿಯಾಣದ ಆಕಾಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....