Homeಮುಖಪುಟ'ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌'ಗೆ ನಿರ್ಬಂಧ ವಿಧಿಸಿದ ಡೊನಾಲ್ಡ್ ಟ್ರಂಪ್

‘ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌’ಗೆ ನಿರ್ಬಂಧ ವಿಧಿಸಿದ ಡೊನಾಲ್ಡ್ ಟ್ರಂಪ್

- Advertisement -
- Advertisement -

ಅಮೆರಿಕ ಮತ್ತು ಅದರ ಆಪ್ತ ಮಿತ್ರ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಕಾನೂನುಬಾಹಿರ ಮತ್ತು ಆಧಾರರಹಿತ ಕ್ರಮಗಳನ್ನು ಕೈಗೊಳ್ಳುತ್ತಿವೆ ಎಂದು ಆರೋಪಿಸಿ ‘ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ’ಕ್ಕೆ (ಐಸಿಸಿ) ನಿರ್ಬಂಧ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ಈ ಕ್ರಮವು ಅಮೆರಿಕದ ನಾಗರಿಕರು ಅಥವಾ ಮಿತ್ರರಾಷ್ಟ್ರಗಳ ವಿರುದ್ಧ ಐಸಿಸಿ ನಡೆಸುವ ತನಿಖೆಗಳಿಗೆ ಸಹಾಯ ಮಾಡುವ ವ್ಯಕ್ತಿಗಳು ಮತ್ತು ಅವರ ಕುಟುಂಬಗಳ ಮೇಲೆ ಆರ್ಥಿಕ ಮತ್ತು ವೀಸಾ ನಿರ್ಬಂಧಗಳನ್ನು ವಿಧಿಸುತ್ತದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಾಷಿಂಗ್ಟನ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಟ್ರಂಪ್ ಈ ಆದೇಶಕ್ಕೆ ಸಹಿ ಹಾಕಿದ್ದಾರೆ.

ಗಾಝಾದಲ್ಲಿ ಇಸ್ರೇಲ್ ನಡೆಸಿದ ನರಮೇಧಕ್ಕೆ ಸಂಬಂಧಿಸಿದಂತೆ ಯುದ್ದ ಅಪರಾಧ ಹೊರಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಇಸ್ರೇಲ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ 2024ರ ನವೆಂಬರ್‌ 21ರಂದು ಐಸಿಸಿ ಬಂಧನ ವಾರೆಂಟ್ ಹೊರಡಿಸಿತ್ತು.

ಗುರುವಾರ (ಫೆ.6) ಶ್ವೇತಭವನ ಹೊರಡಿಸಿದ ಪ್ರಕಟಣೆಯಲ್ಲಿ ಇಸ್ರೇಲ್ ಹಾಗೂ ಹಮಾಸ್ ನಾಯಕರ ವಿರುದ್ದ ಏಕಕಾಲದಲ್ಲಿ ವಾರೆಂಟ್ ಜಾರಿ ಮಾಡಿ, ಹಮಾಸ್ ಮತ್ತು ಇಸ್ರೇಲ್ ನಡುವೆ ಐಸಿಸಿ ಅನೈತಿಕ ಸಮಾನತೆ ತೋರ್ಪಡಿಸಿದೆ ಎಂದು ಅಮೆರಿಕ ಆಕ್ರೋಶ ವ್ಯಕ್ತಪಡಿಸಿದೆ.

ಕೋರ್ಟ್‌ನ ಇತ್ತೀಚಿನ ಕ್ರಮಗಳು ಪೂರ್ವಗ್ರಹದಿಂದ ಕೂಡಿದೆ. ಅಮೆರಿಕನ್ನರಿಗೆ ಕಿರುಕುಳ ನೀಡುವಂತಿದೆ, ನಿಂದಿಸುವಂತಿದೆ ಎಂದು ಟ್ರಂಪ್ ಕಾರ್ಯಕಾರಿ ಆದೇಶದಲ್ಲಿ ಹೇಳಲಾಗಿದೆ.

“ಐಸಿಸಿಯ ದುರುದ್ದೇಶಪೂರಿತ ನಡವಳಿಕೆಯು ಅಮೆರಿಕದ ಸಾರ್ವಭೌಮತ್ವಕ್ಕೆ ಬೆದರಿಕೆ ಹಾಕುತ್ತಿದೆ. ಅಮೆರಿಕ ಸರ್ಕಾರ ಮತ್ತು ಇಸ್ರೇಲ್ ಸೇರಿದಂತೆ ನಮ್ಮ ಮಿತ್ರರಾಷ್ಟ್ರಗಳ ನಿರ್ಣಾಯಕ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಕಾರ್ಯವನ್ನು ದುರ್ಬಲಗೊಳಿಸುತ್ತಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಮೆರಿಕ ಐಸಿಸಿಯ ಸದಸ್ಯ ರಾಷ್ಟ್ರವಲ್ಲ. ತನ್ನ ಅಧಿಕಾರಿಗಳು ಮತ್ತು ನಾಗರಿಕರ ಮೇಲೆ ಐಸಿಸಿ ಆದೇಶ ನೀಡುವುದನ್ನು ಅಮೆರಿಕ ಒಪ್ಪಿಲ್ಲ. ನಾವು ಐಸಿಸಿಯ ನ್ಯಾಯವ್ಯಾಪ್ತಿಯಲ್ಲಿ ಇಲ್ಲ ಎಂದು ಪದೇ ಪದೇ ತಿರಸ್ಕರಿಸಿದೆ.

ಇರಾನ್ ಸೇರಿದಂತೆ ಇಸ್ರೇಲ್ ವಿರೋಧಿ ಗುಂಪುಗಳನ್ನು ನಿರ್ಲಕ್ಷಿಸಿ, ಇಸ್ರೇಲ್‌ನ ಆತ್ಮರಕ್ಷಣೆಯ ಹಕ್ಕಿನ ಮೇಲೆ ಐಸಿಸಿ ನಿರ್ಬಂಧಗಳನ್ನು ಹೇರುತ್ತಿದೆ ಎಂದು ಶ್ವೇತಭವನ ಆರೋಪಿಸಿದೆ.

ಟ್ರಂಪ್ ತಮ್ಮ ಮೊದಲ ಅಧಿಕಾರಾವಧಿಯಲ್ಲಿ, ಅಮೆರಿಕದ ಪಡೆಗಳು ಅಫ್ಘಾನಿಸ್ತಾನದಲ್ಲಿ ಯುದ್ಧ ಅಪರಾಧಗಳನ್ನು ಎಸಗಿವೆಯೇ ಎಂದು ತನಿಖೆ ನಡೆಸುತ್ತಿದ್ದ ಐಸಿಸಿ ಅಧಿಕಾರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದರು. ಆ ನಿರ್ಬಂಧಗಳನ್ನು ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್ ಆಡಳಿತವು ತೆಗೆದು ಹಾಕಿತ್ತು.

ಕಳೆದ ತಿಂಗಳು, ಅಮೆರಿಕ ಸಂಸತ್‌ ಐಸಿಸಿಗೆ ಅನುಮೋದನೆ ನೀಡುವ ಮಸೂದೆ ಮೇಲೆ ಮತ ಚಲಾಯಿಸಿತ್ತು. ಆದರೆ, ಆ ಮಸೂದೆ ಸೆನೆಟ್‌ನಲ್ಲಿ ವಿಫಲವಾಗಿತ್ತು.

ಯುಗೊಸ್ಲಾವಿಯಾದ ವಿಸರ್ಜನೆ ಮತ್ತು ರುವಾಂಡಾದ ನರಮೇಧದ ನಂತರ, ಆಪಾದಿತ ದೌರ್ಜನ್ಯಗಳನ್ನು ತನಿಖೆ ಮಾಡಲು ಐಸಿಸಿಯನ್ನು 2002ರಲ್ಲಿ ಸ್ಥಾಪಿಸಲಾಯಿತು.

ಐಸಿಸಿ ಸ್ಥಾಪಿಸಿದ ರೋಮ್ ಶಾಸನವನ್ನು 120ಕ್ಕೂ ಹೆಚ್ಚು ದೇಶಗಳು ಅನುಮೋದಿಸಿವೆ. ಇನ್ನೂ 34 ದೇಶಗಳು ಸಹಿ ಹಾಕಿವೆ ಮತ್ತು ಭವಿಷ್ಯದಲ್ಲಿ ಶಾಸನ ಅಂಗೀಕರಿಸಬಹುದು.

ಅಮೆರಿಕ ಮತ್ತು ಇಸ್ರೇಲ್ ಎರಡೂ ರೋಮ್ ಶಾಸನದ ಭಾಗವಾಗಿಲ್ಲ. ಐಸಿಸಿ ಜಾಗತಿಕವಾಗಿ ಕೊನೆಯ ನ್ಯಾಯಾಲಯವಾಗಿದ್ದು, ರಾಷ್ಟ್ರೀಯ ಅಧಿಕಾರಿಗಳು ವಿಚಾರಣೆ ನಡೆಸಲು ಸಾಧ್ಯವಾಗದಿದ್ದಾಗ ಅಥವಾ ವಿಚಾರಣೆ ನಡೆಸಲು ನಿರಾಕರಿಸಿದಾಗ ಮಾತ್ರ ಮಧ್ಯಪ್ರವೇಶಿಸುತ್ತದೆ.

‘ಕತ್ತೆ ಮಾರ್ಗ’ದ ಮೂಲಕ ಅಮೆರಿಕ ಪ್ರವೇಶಿಸಲು ₹72 ಲಕ್ಷ ಪಾವತಿಸಿದ್ದ ಹರಿಯಾಣದ ಆಕಾಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...