Homeಮುಖಪುಟ'ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌'ಗೆ ನಿರ್ಬಂಧ ವಿಧಿಸಿದ ಡೊನಾಲ್ಡ್ ಟ್ರಂಪ್

‘ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌’ಗೆ ನಿರ್ಬಂಧ ವಿಧಿಸಿದ ಡೊನಾಲ್ಡ್ ಟ್ರಂಪ್

- Advertisement -
- Advertisement -

ಅಮೆರಿಕ ಮತ್ತು ಅದರ ಆಪ್ತ ಮಿತ್ರ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಕಾನೂನುಬಾಹಿರ ಮತ್ತು ಆಧಾರರಹಿತ ಕ್ರಮಗಳನ್ನು ಕೈಗೊಳ್ಳುತ್ತಿವೆ ಎಂದು ಆರೋಪಿಸಿ ‘ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ’ಕ್ಕೆ (ಐಸಿಸಿ) ನಿರ್ಬಂಧ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ಈ ಕ್ರಮವು ಅಮೆರಿಕದ ನಾಗರಿಕರು ಅಥವಾ ಮಿತ್ರರಾಷ್ಟ್ರಗಳ ವಿರುದ್ಧ ಐಸಿಸಿ ನಡೆಸುವ ತನಿಖೆಗಳಿಗೆ ಸಹಾಯ ಮಾಡುವ ವ್ಯಕ್ತಿಗಳು ಮತ್ತು ಅವರ ಕುಟುಂಬಗಳ ಮೇಲೆ ಆರ್ಥಿಕ ಮತ್ತು ವೀಸಾ ನಿರ್ಬಂಧಗಳನ್ನು ವಿಧಿಸುತ್ತದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಾಷಿಂಗ್ಟನ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಟ್ರಂಪ್ ಈ ಆದೇಶಕ್ಕೆ ಸಹಿ ಹಾಕಿದ್ದಾರೆ.

ಗಾಝಾದಲ್ಲಿ ಇಸ್ರೇಲ್ ನಡೆಸಿದ ನರಮೇಧಕ್ಕೆ ಸಂಬಂಧಿಸಿದಂತೆ ಯುದ್ದ ಅಪರಾಧ ಹೊರಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಇಸ್ರೇಲ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ 2024ರ ನವೆಂಬರ್‌ 21ರಂದು ಐಸಿಸಿ ಬಂಧನ ವಾರೆಂಟ್ ಹೊರಡಿಸಿತ್ತು.

ಗುರುವಾರ (ಫೆ.6) ಶ್ವೇತಭವನ ಹೊರಡಿಸಿದ ಪ್ರಕಟಣೆಯಲ್ಲಿ ಇಸ್ರೇಲ್ ಹಾಗೂ ಹಮಾಸ್ ನಾಯಕರ ವಿರುದ್ದ ಏಕಕಾಲದಲ್ಲಿ ವಾರೆಂಟ್ ಜಾರಿ ಮಾಡಿ, ಹಮಾಸ್ ಮತ್ತು ಇಸ್ರೇಲ್ ನಡುವೆ ಐಸಿಸಿ ಅನೈತಿಕ ಸಮಾನತೆ ತೋರ್ಪಡಿಸಿದೆ ಎಂದು ಅಮೆರಿಕ ಆಕ್ರೋಶ ವ್ಯಕ್ತಪಡಿಸಿದೆ.

ಕೋರ್ಟ್‌ನ ಇತ್ತೀಚಿನ ಕ್ರಮಗಳು ಪೂರ್ವಗ್ರಹದಿಂದ ಕೂಡಿದೆ. ಅಮೆರಿಕನ್ನರಿಗೆ ಕಿರುಕುಳ ನೀಡುವಂತಿದೆ, ನಿಂದಿಸುವಂತಿದೆ ಎಂದು ಟ್ರಂಪ್ ಕಾರ್ಯಕಾರಿ ಆದೇಶದಲ್ಲಿ ಹೇಳಲಾಗಿದೆ.

“ಐಸಿಸಿಯ ದುರುದ್ದೇಶಪೂರಿತ ನಡವಳಿಕೆಯು ಅಮೆರಿಕದ ಸಾರ್ವಭೌಮತ್ವಕ್ಕೆ ಬೆದರಿಕೆ ಹಾಕುತ್ತಿದೆ. ಅಮೆರಿಕ ಸರ್ಕಾರ ಮತ್ತು ಇಸ್ರೇಲ್ ಸೇರಿದಂತೆ ನಮ್ಮ ಮಿತ್ರರಾಷ್ಟ್ರಗಳ ನಿರ್ಣಾಯಕ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಕಾರ್ಯವನ್ನು ದುರ್ಬಲಗೊಳಿಸುತ್ತಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಮೆರಿಕ ಐಸಿಸಿಯ ಸದಸ್ಯ ರಾಷ್ಟ್ರವಲ್ಲ. ತನ್ನ ಅಧಿಕಾರಿಗಳು ಮತ್ತು ನಾಗರಿಕರ ಮೇಲೆ ಐಸಿಸಿ ಆದೇಶ ನೀಡುವುದನ್ನು ಅಮೆರಿಕ ಒಪ್ಪಿಲ್ಲ. ನಾವು ಐಸಿಸಿಯ ನ್ಯಾಯವ್ಯಾಪ್ತಿಯಲ್ಲಿ ಇಲ್ಲ ಎಂದು ಪದೇ ಪದೇ ತಿರಸ್ಕರಿಸಿದೆ.

ಇರಾನ್ ಸೇರಿದಂತೆ ಇಸ್ರೇಲ್ ವಿರೋಧಿ ಗುಂಪುಗಳನ್ನು ನಿರ್ಲಕ್ಷಿಸಿ, ಇಸ್ರೇಲ್‌ನ ಆತ್ಮರಕ್ಷಣೆಯ ಹಕ್ಕಿನ ಮೇಲೆ ಐಸಿಸಿ ನಿರ್ಬಂಧಗಳನ್ನು ಹೇರುತ್ತಿದೆ ಎಂದು ಶ್ವೇತಭವನ ಆರೋಪಿಸಿದೆ.

ಟ್ರಂಪ್ ತಮ್ಮ ಮೊದಲ ಅಧಿಕಾರಾವಧಿಯಲ್ಲಿ, ಅಮೆರಿಕದ ಪಡೆಗಳು ಅಫ್ಘಾನಿಸ್ತಾನದಲ್ಲಿ ಯುದ್ಧ ಅಪರಾಧಗಳನ್ನು ಎಸಗಿವೆಯೇ ಎಂದು ತನಿಖೆ ನಡೆಸುತ್ತಿದ್ದ ಐಸಿಸಿ ಅಧಿಕಾರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದರು. ಆ ನಿರ್ಬಂಧಗಳನ್ನು ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್ ಆಡಳಿತವು ತೆಗೆದು ಹಾಕಿತ್ತು.

ಕಳೆದ ತಿಂಗಳು, ಅಮೆರಿಕ ಸಂಸತ್‌ ಐಸಿಸಿಗೆ ಅನುಮೋದನೆ ನೀಡುವ ಮಸೂದೆ ಮೇಲೆ ಮತ ಚಲಾಯಿಸಿತ್ತು. ಆದರೆ, ಆ ಮಸೂದೆ ಸೆನೆಟ್‌ನಲ್ಲಿ ವಿಫಲವಾಗಿತ್ತು.

ಯುಗೊಸ್ಲಾವಿಯಾದ ವಿಸರ್ಜನೆ ಮತ್ತು ರುವಾಂಡಾದ ನರಮೇಧದ ನಂತರ, ಆಪಾದಿತ ದೌರ್ಜನ್ಯಗಳನ್ನು ತನಿಖೆ ಮಾಡಲು ಐಸಿಸಿಯನ್ನು 2002ರಲ್ಲಿ ಸ್ಥಾಪಿಸಲಾಯಿತು.

ಐಸಿಸಿ ಸ್ಥಾಪಿಸಿದ ರೋಮ್ ಶಾಸನವನ್ನು 120ಕ್ಕೂ ಹೆಚ್ಚು ದೇಶಗಳು ಅನುಮೋದಿಸಿವೆ. ಇನ್ನೂ 34 ದೇಶಗಳು ಸಹಿ ಹಾಕಿವೆ ಮತ್ತು ಭವಿಷ್ಯದಲ್ಲಿ ಶಾಸನ ಅಂಗೀಕರಿಸಬಹುದು.

ಅಮೆರಿಕ ಮತ್ತು ಇಸ್ರೇಲ್ ಎರಡೂ ರೋಮ್ ಶಾಸನದ ಭಾಗವಾಗಿಲ್ಲ. ಐಸಿಸಿ ಜಾಗತಿಕವಾಗಿ ಕೊನೆಯ ನ್ಯಾಯಾಲಯವಾಗಿದ್ದು, ರಾಷ್ಟ್ರೀಯ ಅಧಿಕಾರಿಗಳು ವಿಚಾರಣೆ ನಡೆಸಲು ಸಾಧ್ಯವಾಗದಿದ್ದಾಗ ಅಥವಾ ವಿಚಾರಣೆ ನಡೆಸಲು ನಿರಾಕರಿಸಿದಾಗ ಮಾತ್ರ ಮಧ್ಯಪ್ರವೇಶಿಸುತ್ತದೆ.

‘ಕತ್ತೆ ಮಾರ್ಗ’ದ ಮೂಲಕ ಅಮೆರಿಕ ಪ್ರವೇಶಿಸಲು ₹72 ಲಕ್ಷ ಪಾವತಿಸಿದ್ದ ಹರಿಯಾಣದ ಆಕಾಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...