Homeಮುಖಪುಟ'ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌'ಗೆ ನಿರ್ಬಂಧ ವಿಧಿಸಿದ ಡೊನಾಲ್ಡ್ ಟ್ರಂಪ್

‘ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌’ಗೆ ನಿರ್ಬಂಧ ವಿಧಿಸಿದ ಡೊನಾಲ್ಡ್ ಟ್ರಂಪ್

- Advertisement -
- Advertisement -

ಅಮೆರಿಕ ಮತ್ತು ಅದರ ಆಪ್ತ ಮಿತ್ರ ಇಸ್ರೇಲ್ ಅನ್ನು ಗುರಿಯಾಗಿಸಿಕೊಂಡು ಕಾನೂನುಬಾಹಿರ ಮತ್ತು ಆಧಾರರಹಿತ ಕ್ರಮಗಳನ್ನು ಕೈಗೊಳ್ಳುತ್ತಿವೆ ಎಂದು ಆರೋಪಿಸಿ ‘ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ’ಕ್ಕೆ (ಐಸಿಸಿ) ನಿರ್ಬಂಧ ವಿಧಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ಈ ಕ್ರಮವು ಅಮೆರಿಕದ ನಾಗರಿಕರು ಅಥವಾ ಮಿತ್ರರಾಷ್ಟ್ರಗಳ ವಿರುದ್ಧ ಐಸಿಸಿ ನಡೆಸುವ ತನಿಖೆಗಳಿಗೆ ಸಹಾಯ ಮಾಡುವ ವ್ಯಕ್ತಿಗಳು ಮತ್ತು ಅವರ ಕುಟುಂಬಗಳ ಮೇಲೆ ಆರ್ಥಿಕ ಮತ್ತು ವೀಸಾ ನಿರ್ಬಂಧಗಳನ್ನು ವಿಧಿಸುತ್ತದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಾಷಿಂಗ್ಟನ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಟ್ರಂಪ್ ಈ ಆದೇಶಕ್ಕೆ ಸಹಿ ಹಾಕಿದ್ದಾರೆ.

ಗಾಝಾದಲ್ಲಿ ಇಸ್ರೇಲ್ ನಡೆಸಿದ ನರಮೇಧಕ್ಕೆ ಸಂಬಂಧಿಸಿದಂತೆ ಯುದ್ದ ಅಪರಾಧ ಹೊರಿಸಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಮಾಜಿ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಮತ್ತು ಇಸ್ರೇಲ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ಹಮಾಸ್‌ ಮಿಲಿಟರಿ ಮುಖ್ಯಸ್ಥ ಮೊಹಮ್ಮದ್ ಡೀಫ್‌ (ಮೊಹಮ್ಮದ್ ದಿಯಾಬ್ ಇಬ್ರಾಹಿಂ ಅಲ್-ಮಸ್ರಿ) ವಿರುದ್ದ 2024ರ ನವೆಂಬರ್‌ 21ರಂದು ಐಸಿಸಿ ಬಂಧನ ವಾರೆಂಟ್ ಹೊರಡಿಸಿತ್ತು.

ಗುರುವಾರ (ಫೆ.6) ಶ್ವೇತಭವನ ಹೊರಡಿಸಿದ ಪ್ರಕಟಣೆಯಲ್ಲಿ ಇಸ್ರೇಲ್ ಹಾಗೂ ಹಮಾಸ್ ನಾಯಕರ ವಿರುದ್ದ ಏಕಕಾಲದಲ್ಲಿ ವಾರೆಂಟ್ ಜಾರಿ ಮಾಡಿ, ಹಮಾಸ್ ಮತ್ತು ಇಸ್ರೇಲ್ ನಡುವೆ ಐಸಿಸಿ ಅನೈತಿಕ ಸಮಾನತೆ ತೋರ್ಪಡಿಸಿದೆ ಎಂದು ಅಮೆರಿಕ ಆಕ್ರೋಶ ವ್ಯಕ್ತಪಡಿಸಿದೆ.

ಕೋರ್ಟ್‌ನ ಇತ್ತೀಚಿನ ಕ್ರಮಗಳು ಪೂರ್ವಗ್ರಹದಿಂದ ಕೂಡಿದೆ. ಅಮೆರಿಕನ್ನರಿಗೆ ಕಿರುಕುಳ ನೀಡುವಂತಿದೆ, ನಿಂದಿಸುವಂತಿದೆ ಎಂದು ಟ್ರಂಪ್ ಕಾರ್ಯಕಾರಿ ಆದೇಶದಲ್ಲಿ ಹೇಳಲಾಗಿದೆ.

“ಐಸಿಸಿಯ ದುರುದ್ದೇಶಪೂರಿತ ನಡವಳಿಕೆಯು ಅಮೆರಿಕದ ಸಾರ್ವಭೌಮತ್ವಕ್ಕೆ ಬೆದರಿಕೆ ಹಾಕುತ್ತಿದೆ. ಅಮೆರಿಕ ಸರ್ಕಾರ ಮತ್ತು ಇಸ್ರೇಲ್ ಸೇರಿದಂತೆ ನಮ್ಮ ಮಿತ್ರರಾಷ್ಟ್ರಗಳ ನಿರ್ಣಾಯಕ ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿ ಕಾರ್ಯವನ್ನು ದುರ್ಬಲಗೊಳಿಸುತ್ತಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಮೆರಿಕ ಐಸಿಸಿಯ ಸದಸ್ಯ ರಾಷ್ಟ್ರವಲ್ಲ. ತನ್ನ ಅಧಿಕಾರಿಗಳು ಮತ್ತು ನಾಗರಿಕರ ಮೇಲೆ ಐಸಿಸಿ ಆದೇಶ ನೀಡುವುದನ್ನು ಅಮೆರಿಕ ಒಪ್ಪಿಲ್ಲ. ನಾವು ಐಸಿಸಿಯ ನ್ಯಾಯವ್ಯಾಪ್ತಿಯಲ್ಲಿ ಇಲ್ಲ ಎಂದು ಪದೇ ಪದೇ ತಿರಸ್ಕರಿಸಿದೆ.

ಇರಾನ್ ಸೇರಿದಂತೆ ಇಸ್ರೇಲ್ ವಿರೋಧಿ ಗುಂಪುಗಳನ್ನು ನಿರ್ಲಕ್ಷಿಸಿ, ಇಸ್ರೇಲ್‌ನ ಆತ್ಮರಕ್ಷಣೆಯ ಹಕ್ಕಿನ ಮೇಲೆ ಐಸಿಸಿ ನಿರ್ಬಂಧಗಳನ್ನು ಹೇರುತ್ತಿದೆ ಎಂದು ಶ್ವೇತಭವನ ಆರೋಪಿಸಿದೆ.

ಟ್ರಂಪ್ ತಮ್ಮ ಮೊದಲ ಅಧಿಕಾರಾವಧಿಯಲ್ಲಿ, ಅಮೆರಿಕದ ಪಡೆಗಳು ಅಫ್ಘಾನಿಸ್ತಾನದಲ್ಲಿ ಯುದ್ಧ ಅಪರಾಧಗಳನ್ನು ಎಸಗಿವೆಯೇ ಎಂದು ತನಿಖೆ ನಡೆಸುತ್ತಿದ್ದ ಐಸಿಸಿ ಅಧಿಕಾರಿಗಳ ಮೇಲೆ ನಿರ್ಬಂಧಗಳನ್ನು ವಿಧಿಸಿದ್ದರು. ಆ ನಿರ್ಬಂಧಗಳನ್ನು ನಿರ್ಗಮಿತ ಅಧ್ಯಕ್ಷ ಜೋ ಬೈಡೆನ್ ಆಡಳಿತವು ತೆಗೆದು ಹಾಕಿತ್ತು.

ಕಳೆದ ತಿಂಗಳು, ಅಮೆರಿಕ ಸಂಸತ್‌ ಐಸಿಸಿಗೆ ಅನುಮೋದನೆ ನೀಡುವ ಮಸೂದೆ ಮೇಲೆ ಮತ ಚಲಾಯಿಸಿತ್ತು. ಆದರೆ, ಆ ಮಸೂದೆ ಸೆನೆಟ್‌ನಲ್ಲಿ ವಿಫಲವಾಗಿತ್ತು.

ಯುಗೊಸ್ಲಾವಿಯಾದ ವಿಸರ್ಜನೆ ಮತ್ತು ರುವಾಂಡಾದ ನರಮೇಧದ ನಂತರ, ಆಪಾದಿತ ದೌರ್ಜನ್ಯಗಳನ್ನು ತನಿಖೆ ಮಾಡಲು ಐಸಿಸಿಯನ್ನು 2002ರಲ್ಲಿ ಸ್ಥಾಪಿಸಲಾಯಿತು.

ಐಸಿಸಿ ಸ್ಥಾಪಿಸಿದ ರೋಮ್ ಶಾಸನವನ್ನು 120ಕ್ಕೂ ಹೆಚ್ಚು ದೇಶಗಳು ಅನುಮೋದಿಸಿವೆ. ಇನ್ನೂ 34 ದೇಶಗಳು ಸಹಿ ಹಾಕಿವೆ ಮತ್ತು ಭವಿಷ್ಯದಲ್ಲಿ ಶಾಸನ ಅಂಗೀಕರಿಸಬಹುದು.

ಅಮೆರಿಕ ಮತ್ತು ಇಸ್ರೇಲ್ ಎರಡೂ ರೋಮ್ ಶಾಸನದ ಭಾಗವಾಗಿಲ್ಲ. ಐಸಿಸಿ ಜಾಗತಿಕವಾಗಿ ಕೊನೆಯ ನ್ಯಾಯಾಲಯವಾಗಿದ್ದು, ರಾಷ್ಟ್ರೀಯ ಅಧಿಕಾರಿಗಳು ವಿಚಾರಣೆ ನಡೆಸಲು ಸಾಧ್ಯವಾಗದಿದ್ದಾಗ ಅಥವಾ ವಿಚಾರಣೆ ನಡೆಸಲು ನಿರಾಕರಿಸಿದಾಗ ಮಾತ್ರ ಮಧ್ಯಪ್ರವೇಶಿಸುತ್ತದೆ.

‘ಕತ್ತೆ ಮಾರ್ಗ’ದ ಮೂಲಕ ಅಮೆರಿಕ ಪ್ರವೇಶಿಸಲು ₹72 ಲಕ್ಷ ಪಾವತಿಸಿದ್ದ ಹರಿಯಾಣದ ಆಕಾಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...