Homeಅಂತರಾಷ್ಟ್ರೀಯಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಕೊಂಡರೆ ಇಸ್ರೇಲ್ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಕಳೆದುಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

ಗುರುವಾರ (ಅ.23) ಪ್ರಕಟಗೊಂಡ ಟೈಮ್ ನಿಯತಕಾಲಿಕೆಯ ಸಂದರ್ಶನದಲ್ಲಿ, “ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಪರಿಣಾಮಗಳು ತೀವ್ರವಾಗಿರುತ್ತದೆ” ಎಂದು ಟ್ರಂಪ್ ಎಚ್ಚರಿಸಿದ್ದು, ಅರಬ್ ರಾಷ್ಟ್ರಗಳಿಗೆ ಕೊಟ್ಟ ಮಾತನ್ನು ನೆನಪಿಸಿಕೊಂಡಿದ್ದಾರೆ.

“ಅದು (ಪಶ್ಚಿಮ ದಂಡೆಯ ಸ್ವಾಧೀನ) ನಡೆಯಲು ಸಾಧ್ಯವಿಲ್ಲ. ಕಾರಣ ನಾನು ಅರಬ್‌ ದೇಶಗಳಿಗೆ ಮಾತು ಕೊಟ್ಟಿದ್ದೇನೆ. ಅರಬ್‌ ದೇಶಗಳ ದೊಡ್ಡ ಬೆಂಬಲ ನಮಗಿದೆ. ಒಂದು ವೇಳೆ ಇಸ್ರೇಲ್ ಸ್ವಾಧೀನಕ್ಕೆ ಮುಂದಾದರೆ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಅದು ಕಳೆದುಕೊಳ್ಳಲಿದೆ” ಎಂದು ಅಕ್ಟೋಬರ್ 15ರಂದು ದೂರವಾಣಿ ಮೂಲಕ ಟ್ರಂಪ್ ಹೇಳಿರುವುದಾಗಿ ಟೈಮ್‌ ನಿಯತಕಾಲಿಕೆ ವಿವರಿಸಿದೆ.

ಈ ವರ್ಷದ ಅಂತ್ಯದ ವೇಳೆಗೆ ಇಸ್ರೇಲ್ ಮತ್ತು ಅರಬ್ ರಾಷ್ಟ್ರಗಳ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ಅಬ್ರಹಾಂ ಒಪ್ಪಂದಗಳಿಗೆ ಸೌದಿ ಅರೇಬಿಯಾ ಸೇರಬಹುದು ಎಂಬ ನಿರೀಕ್ಷೆಯನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ ಆಕ್ರಮಣ ಮತ್ತು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಉಲ್ಲೇಖಿಸಿದ ಟ್ರಂಪ್, “ನೋಡಿ ಅವರಿಗೆ ಒಂದು ಸಮಸ್ಯೆ ಇತ್ತು. ಅವರಿಗೆ ಗಾಝಾ ಸಮಸ್ಯೆ ಇತ್ತು, ಅವರಿಗೆ ಇರಾನ್ ಸಮಸ್ಯೆಯೂ ಇತ್ತು. ಈಗ ಆ ಎರಡು ಸಮಸ್ಯೆಗಳು ಪರಿಹಾರಗೊಂಡಿದೆ” ಎಂದಿದ್ದಾರೆ.

ವಿಶಾಲ ಶಾಂತಿ ಕ್ರಮಗಳ ಭಾಗವಾಗಿ ‘ಫತ್ಹ್‌’ ಚಳವಳಿಯ ಉನ್ನತ ಮಟ್ಟದ ನಾಯಕ, ಪ್ಯಾಲೆಸ್ತೀನಿಯನ್ ಕೈದಿ ಮಾರ್ವಾನ್ ಬರ್ಘೌಟಿಯನ್ನು ಇಸ್ರೇಲ್ ಬಿಡುಗಡೆ ಮಾಡಬೇಕೆ ಎಂಬುವುದನ್ನು ನಿರ್ಧರಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.

ಕತಾರ್‌ನ ದೋಹಾದಲ್ಲಿ ಹಮಾಸ್ ಸಮಾಲೋಚಕರ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ಟ್ರಂಪ್ ಭಯಾನಕ ಮತ್ತು ನೆತನ್ಯಾಹು ಅವರ ಯುದ್ಧತಂತ್ರದ ತಪ್ಪು ಎಂದು ಬಣ್ಣಿಸಿದ್ದಾರೆ. ಆದರೆ, ದಾಳಿಯ ಮೇಲಿನ ಆಕ್ರೋಶವು ಅಂತಿಮವಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮವನ್ನು ಜಾರಿಗೆ ತರಲು ಎಲ್ಲರನ್ನು ಒಟ್ಟುಗೂಡಿಸಿತು ಎಂದಿದ್ದಾರೆ.

ಇಸ್ರೇಲ್‌ಗೆ ಭೇಟಿ ನೀಡಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಪಶ್ಚಿಮ ದಂಡೆಯ ಸ್ವಾಧೀನವನ್ನು ವಿರೋಧಿಸಿದ್ದು, “ಅಧ್ಯಕ್ಷ ಟ್ರಂಪ್ ಅವರು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಾರೆ ಮತ್ತು ಅದು ಸಂಭವಿಸುವುದಿಲ್ಲ” ಎಂದು ಹೇಳಿದ್ದಾರೆ.

1967ರಲ್ಲಿ ನಡೆದ ಆರು ದಿನಗಳ ಯುದ್ಧದಲ್ಲಿ ಇಸ್ರೇಲಿ ಸೇನೆ ಪ್ಯಾಲೆಸ್ತೀನ್‌ನ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್ ಅನ್ನು ವಶಪಡಿಸಿಕೊಂಡಿದೆ. ಅಂದಿನಿಂದ, ಈ ಪ್ಯಾಲೆಸ್ತೀನ್‌ ಪ್ರದೇಶಗಳ ನಗರಗಳಲ್ಲಿ 7,00,000 ಯಹೂದಿಗಳು ವಾಸಿಸುವ ಸುಮಾರು 160 ವಸತಿ ಪ್ರದೇಶಗಳನ್ನು ಇಸ್ರೇಲ್ ನಿರ್ಮಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. ಪ್ರಸ್ತುತ ಕನಿಷ್ಠ 3.3 ಮಿಲಿಯನ್ ಪ್ಯಾಲೆಸ್ತೀನಿಯರು ಯಹೂದಿಗಳ ಜೊತೆ ವಾಸಿಸುತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ.

ಇಸ್ರೇಲಿ ಪಡೆಗಳು ನಿಯಮಿತವಾಗಿ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್‌ಗಳಲ್ಲಿ ಪ್ಯಾಲೆಸ್ತೀನೀಯರ ಮೇಲೆ ಅಕ್ರಮಣ ನಡೆಸುತ್ತಲೇ ಇದೆ. ಪ್ರತಿನಿತ್ಯ ಪ್ಯಾಲೆಸ್ತೀನಿಯ ಹತ್ಯೆಗಳಾಗುತ್ತಿವೆ. ಅವರ ಮನೆ, ಆಸ್ತಿ-ಪಾಸ್ತಿಗಳನ್ನು ಇಸ್ರೇಲ್‌ ಕ್ರಮೇಣ ನಾಶಪಡಿಸುತ್ತಿವೆ. ಪಶ್ಚಿಮ ದಂಡೆಯಲ್ಲಿ ವಾಸಿಸುವ ಯಹೂದಿಗಳು ಇಸ್ರೇಲ್‌ನ ಚುನಾವಣೆಗಳಲ್ಲಿ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. ಆದರೆ, ಪ್ಯಾಲೆಸ್ತೀನಿಯರು ಆ ಹಕ್ಕಿನಿಂದ ವಂಚಿತರಾಗಿದ್ದಾರೆ.

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅದುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಯವಿಟ್ಟು ನನಗೆ ಸಹಾಯ ಮಾಡಿ, ಇಲ್ಲಿ ನಾನು ಸಾಯುತ್ತೇನೆ..’; ಸೌದಿಯಿಂದ ಉತ್ತರ ಪ್ರದೇಶದ ವ್ಯಕ್ತಿಯ ಭಾವನಾತ್ಮಕ ಸಂದೇಶ

ಇಚ್ಛೆಗೆ ವಿರುದ್ಧವಾಗಿ ತನ್ನನ್ನು ಇಲ್ಲಿ ಬಂಧಿಸಿಡಲಾಗಿದೆ ಎಂದು ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಹೇಳಿಕೊಂಡಿರುವ ಹೃದಯ ವಿದ್ರಾವಕ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತೀಯ ರಾಯಭಾರ ಕಚೇರಿಯು ಗಮನಿಸಿ ಅವರಿಗಾಗಿ ಹುಡುಕಾಟ ಆರಂಭಿಸಿದೆ. ಉದ್ಯೋಗದಾತರು...

ಸತಾರ ವೈದ್ಯೆ ಆತ್ಮಹತ್ಯೆ ಪ್ರಕರಣ: ಟೆಕ್ಕಿ ಬಂಧನ; ಅತ್ಯಾಚಾರ ಆರೋಪಿ ಪೊಲೀಸ್ ಅಧಿಕಾರಿಗಾಗಿ ಹುಡುಕಾಟ

ಸತಾರ ಸರ್ಕಾರಿ ಆಸ್ಪತ್ರೆ ವೈದ್ಯೆಯ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಪ್ರಗತಿಯಲ್ಲಿ, ಮಹಿಳಾ ವೈದ್ಯೆಯ ಮೇಲೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಿದ ಆರೋಪ ಹೊತ್ತಿರುವ ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರನ್ನು ಪೊಲೀಸರು...

ಕರ್ನೂಲ್ ಬಸ್ ದುರಂತ: ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ 20 ಜನ

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿ 20 ಜನರು ಸಾವನ್ನಪ್ಪಿದ ಭೀಕರ ರಸ್ತೆ ಅಪಘಾತಕ್ಕೆ ಚಾಲಕನೇ ನಿರ್ಲಕ್ಷ್ಯವೇ ಕಾರಣ ಎಂದು ಮೋಲ್ನೋಟಕ್ಕೆ ಕಂಡುಬಂದಿದೆ. ಶುಕ್ರವಾರ ಬೆಳಗಿನ...

ಬಂಧನಕ್ಕೊಳಗಾದ ನಾಲ್ಕು ತಿಂಗಳ ನಂತರ ಅಸ್ಸಾಂ ಮಹಿಳೆ ಬಾಂಗ್ಲಾದಲ್ಲಿ ಪತ್ತೆ

ಬಿಬಿಸಿ ತಂಡವು ಬಾಂಗ್ಲಾದೇಶದ ಢಾಕಾದ ಮಿರ್ಪುರಾ ಪ್ರದೇಶದಲ್ಲಿ 68 ವರ್ಷದ ಸಕಿನಾ ಬೇಗಂ ಅವರನ್ನು ಪತ್ತೆ ಮಾಡಿದೆ. ಬಂಗಾಳಿ ಅರ್ಥವಾಗದ ಮತ್ತು ಪೂರ್ವ ಅಸ್ಸಾಂನ ನಲ್ಬರಿ ಜಿಲ್ಲೆಯ ಜನರು ಹೆಚ್ಚಾಗಿ ಮಾತನಾಡುವ ಅಸ್ಸಾಮಿ...

ಕೋಟಾ: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ರಾಜಸ್ಥಾನದ ಕೋಟಾದಿಂದ ಮತ್ತೊಂದು ದುರಂತ ಘಟನೆ ವರದಿಯಾಗಿದೆ, ಸರ್ಕಾರಿ ವೈದ್ಯಕೀಯ ಕಾಲೇಜಿನ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಶುಕ್ರವಾರ ಆಕಾಶವಾಣಿ ಕಾಲೋನಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಪ್ರಾಚಿ ಮೀನಾ ಇತ್ತೀಚಿನ...

ದಲಿತ ಎಂಬ ಕಾರಣಕ್ಕೆ ಬಂಗಲೆಯಿಂದ ಬಲವಂತವಾಗಿ ಹೊರಹಾಕಲಾಗಿದೆ: ಕಾಂಗ್ರೆಸ್ ನಾಯಕ ಉದಿತ್ ರಾಜ್ ಆರೋಪ

ವಿಷಯವು ಸಬ್-ನ್ಯಾಯಾಲಯದಲ್ಲಿದ್ದರೂ, ಅಧಿಕಾರಿಗಳು ತಮ್ಮ ಕುಟುಂಬವನ್ನು ನವದೆಹಲಿಯಲ್ಲಿರುವ ಪಂಡಾರ ಪಾರ್ಕ್ ಬಂಗಲೆಯಿಂದ ಬಲವಂತವಾಗಿ ಹೊರಹಾಕಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಂಸದ ಉದಿತ್ ರಾಜ್ ಶುಕ್ರವಾರ ಆರೋಪಿಸಿದ್ದಾರೆ. ಮಾಜಿ ಸಂಸದರ ಪತ್ನಿ, ನಿವೃತ್ತ...

ವಿಜಯಪುರ| ಜನನಿಬಿಡ ರಸ್ತೆಯಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆಗೈದ 60 ವರ್ಷದ ವ್ಯಕ್ತಿ

ವಿಜಯಪುರ ನಗರದ ಸಿಂದಗಿ ಪಟ್ಟಣದ ಜನನಿಬಿಡ ರಸ್ತೆಯ ಮಧ್ಯದಲ್ಲಿ ಕ್ಯಾಪ್ ಧರಿಸಿ, ಒಂದು ಕೈಯಲ್ಲಿ ಮಚ್ಚಿನಿಂದ ಮತ್ತು ಇನ್ನೊಂದು ಕೈಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಹಿಡಿದುಕೊಂಡು ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಭೀಕರವಾಗಿ ಹಲ್ಲೆ...

ಛತ್ತೀಸ್‌ಗಢ| 40 ಸಾವಿರ ರೂಪಾಯಿ ನಾಣ್ಯದಲ್ಲಿ ಪಾವತಿಸಿ ಮಗಳಿಗೆ ಸ್ಕೂಟರ್ ಕೊಡಿಸಿದ ರೈತ

ಛತ್ತೀಸ್‌ಗಢದ ಜಶ್‌ಪುರದಲ್ಲಿ, ರೈತನೊಬ್ಬ ತನ್ನ ಮಗಳಿಗಾಗಿ ಹೋಂಡಾ ಆಕ್ಟಿವಾ ಸ್ಕೂಟರ್ ಖರೀದಿಸಿದ್ದಾರೆ. ವಿಶೇಷವೆಂದರೆ, ಅದಕ್ಕಾಗಿ ಅವರು ಈವರೆಗೆ ತಾವು ಉಳಿತಾಯ ಮಾಡಿದ್ದ 40,000 ರೂಪಾಯಿಗಳನ್ನು ನಾಣ್ಯಗಳಲ್ಲಿ ಪಾವತಿಸಿದ್ದಾರೆ. ಕೇಸರಪತ್ ಗ್ರಾಮದಲ್ಲಿ ದಿನಸಿ ಮಾರಾಟ ಮಾಡುವ...

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಚಿತ್ತಾಪುರ ಆರ್‌ಎಸ್‌ಎಸ್‌ ಪಥಸಂಚಲನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್, ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್‌ 28ರಂದು ಶಾಂತಿ ಸಭೆ ನಡೆಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದೆ. ಸಬೆಗೆ ಎಲ್ಲರೂ ಸಹಕಾರ ನೀಡಬೇಕು ಎಂದು...

ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ. ಸ್ವಾಮಿನಾಥನ್ ಸಂವಿಧಾನದ ವಿರುದ್ದ ಮಾತನಾಡಿದ್ದಾರೆ: ನಿವೃತ್ತ ನ್ಯಾ. ಕೆ. ಚಂದ್ರು

ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರು ಜಾತ್ಯತೀತತೆ ಮತ್ತು ಕಾನೂನಿನ ನಿಯಮಕ್ಕೆ ವಿರುದ್ಧವಾದ ವಿಚಾರಗಳ ಪರವಾಗಿ ಬ್ಯಾಟಿಂಗ್ ಮಾಡುವ ಮೂಲಕ ಸಂವಿಧಾನಕ್ಕೆ ಮತ್ತು ತಮ್ಮ ಪ್ರಮಾಣವಚನಕ್ಕೆ ದ್ರೋಹ ಎಸಗಿದ್ದಾರೆ ಎಂದು ನಿವೃತ್ತ...