Homeಅಂತರಾಷ್ಟ್ರೀಯಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಕೊಂಡರೆ ಇಸ್ರೇಲ್ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಕಳೆದುಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

ಗುರುವಾರ (ಅ.23) ಪ್ರಕಟಗೊಂಡ ಟೈಮ್ ನಿಯತಕಾಲಿಕೆಯ ಸಂದರ್ಶನದಲ್ಲಿ, “ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಪರಿಣಾಮಗಳು ತೀವ್ರವಾಗಿರುತ್ತದೆ” ಎಂದು ಟ್ರಂಪ್ ಎಚ್ಚರಿಸಿದ್ದು, ಅರಬ್ ರಾಷ್ಟ್ರಗಳಿಗೆ ಕೊಟ್ಟ ಮಾತನ್ನು ನೆನಪಿಸಿಕೊಂಡಿದ್ದಾರೆ.

“ಅದು (ಪಶ್ಚಿಮ ದಂಡೆಯ ಸ್ವಾಧೀನ) ನಡೆಯಲು ಸಾಧ್ಯವಿಲ್ಲ. ಕಾರಣ ನಾನು ಅರಬ್‌ ದೇಶಗಳಿಗೆ ಮಾತು ಕೊಟ್ಟಿದ್ದೇನೆ. ಅರಬ್‌ ದೇಶಗಳ ದೊಡ್ಡ ಬೆಂಬಲ ನಮಗಿದೆ. ಒಂದು ವೇಳೆ ಇಸ್ರೇಲ್ ಸ್ವಾಧೀನಕ್ಕೆ ಮುಂದಾದರೆ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಅದು ಕಳೆದುಕೊಳ್ಳಲಿದೆ” ಎಂದು ಅಕ್ಟೋಬರ್ 15ರಂದು ದೂರವಾಣಿ ಮೂಲಕ ಟ್ರಂಪ್ ಹೇಳಿರುವುದಾಗಿ ಟೈಮ್‌ ನಿಯತಕಾಲಿಕೆ ವಿವರಿಸಿದೆ.

ಈ ವರ್ಷದ ಅಂತ್ಯದ ವೇಳೆಗೆ ಇಸ್ರೇಲ್ ಮತ್ತು ಅರಬ್ ರಾಷ್ಟ್ರಗಳ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ಅಬ್ರಹಾಂ ಒಪ್ಪಂದಗಳಿಗೆ ಸೌದಿ ಅರೇಬಿಯಾ ಸೇರಬಹುದು ಎಂಬ ನಿರೀಕ್ಷೆಯನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ ಆಕ್ರಮಣ ಮತ್ತು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಉಲ್ಲೇಖಿಸಿದ ಟ್ರಂಪ್, “ನೋಡಿ ಅವರಿಗೆ ಒಂದು ಸಮಸ್ಯೆ ಇತ್ತು. ಅವರಿಗೆ ಗಾಝಾ ಸಮಸ್ಯೆ ಇತ್ತು, ಅವರಿಗೆ ಇರಾನ್ ಸಮಸ್ಯೆಯೂ ಇತ್ತು. ಈಗ ಆ ಎರಡು ಸಮಸ್ಯೆಗಳು ಪರಿಹಾರಗೊಂಡಿದೆ” ಎಂದಿದ್ದಾರೆ.

ವಿಶಾಲ ಶಾಂತಿ ಕ್ರಮಗಳ ಭಾಗವಾಗಿ ‘ಫತ್ಹ್‌’ ಚಳವಳಿಯ ಉನ್ನತ ಮಟ್ಟದ ನಾಯಕ, ಪ್ಯಾಲೆಸ್ತೀನಿಯನ್ ಕೈದಿ ಮಾರ್ವಾನ್ ಬರ್ಘೌಟಿಯನ್ನು ಇಸ್ರೇಲ್ ಬಿಡುಗಡೆ ಮಾಡಬೇಕೆ ಎಂಬುವುದನ್ನು ನಿರ್ಧರಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.

ಕತಾರ್‌ನ ದೋಹಾದಲ್ಲಿ ಹಮಾಸ್ ಸಮಾಲೋಚಕರ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ಟ್ರಂಪ್ ಭಯಾನಕ ಮತ್ತು ನೆತನ್ಯಾಹು ಅವರ ಯುದ್ಧತಂತ್ರದ ತಪ್ಪು ಎಂದು ಬಣ್ಣಿಸಿದ್ದಾರೆ. ಆದರೆ, ದಾಳಿಯ ಮೇಲಿನ ಆಕ್ರೋಶವು ಅಂತಿಮವಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮವನ್ನು ಜಾರಿಗೆ ತರಲು ಎಲ್ಲರನ್ನು ಒಟ್ಟುಗೂಡಿಸಿತು ಎಂದಿದ್ದಾರೆ.

ಇಸ್ರೇಲ್‌ಗೆ ಭೇಟಿ ನೀಡಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಪಶ್ಚಿಮ ದಂಡೆಯ ಸ್ವಾಧೀನವನ್ನು ವಿರೋಧಿಸಿದ್ದು, “ಅಧ್ಯಕ್ಷ ಟ್ರಂಪ್ ಅವರು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಾರೆ ಮತ್ತು ಅದು ಸಂಭವಿಸುವುದಿಲ್ಲ” ಎಂದು ಹೇಳಿದ್ದಾರೆ.

1967ರಲ್ಲಿ ನಡೆದ ಆರು ದಿನಗಳ ಯುದ್ಧದಲ್ಲಿ ಇಸ್ರೇಲಿ ಸೇನೆ ಪ್ಯಾಲೆಸ್ತೀನ್‌ನ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್ ಅನ್ನು ವಶಪಡಿಸಿಕೊಂಡಿದೆ. ಅಂದಿನಿಂದ, ಈ ಪ್ಯಾಲೆಸ್ತೀನ್‌ ಪ್ರದೇಶಗಳ ನಗರಗಳಲ್ಲಿ 7,00,000 ಯಹೂದಿಗಳು ವಾಸಿಸುವ ಸುಮಾರು 160 ವಸತಿ ಪ್ರದೇಶಗಳನ್ನು ಇಸ್ರೇಲ್ ನಿರ್ಮಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. ಪ್ರಸ್ತುತ ಕನಿಷ್ಠ 3.3 ಮಿಲಿಯನ್ ಪ್ಯಾಲೆಸ್ತೀನಿಯರು ಯಹೂದಿಗಳ ಜೊತೆ ವಾಸಿಸುತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ.

ಇಸ್ರೇಲಿ ಪಡೆಗಳು ನಿಯಮಿತವಾಗಿ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್‌ಗಳಲ್ಲಿ ಪ್ಯಾಲೆಸ್ತೀನೀಯರ ಮೇಲೆ ಅಕ್ರಮಣ ನಡೆಸುತ್ತಲೇ ಇದೆ. ಪ್ರತಿನಿತ್ಯ ಪ್ಯಾಲೆಸ್ತೀನಿಯ ಹತ್ಯೆಗಳಾಗುತ್ತಿವೆ. ಅವರ ಮನೆ, ಆಸ್ತಿ-ಪಾಸ್ತಿಗಳನ್ನು ಇಸ್ರೇಲ್‌ ಕ್ರಮೇಣ ನಾಶಪಡಿಸುತ್ತಿವೆ. ಪಶ್ಚಿಮ ದಂಡೆಯಲ್ಲಿ ವಾಸಿಸುವ ಯಹೂದಿಗಳು ಇಸ್ರೇಲ್‌ನ ಚುನಾವಣೆಗಳಲ್ಲಿ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. ಆದರೆ, ಪ್ಯಾಲೆಸ್ತೀನಿಯರು ಆ ಹಕ್ಕಿನಿಂದ ವಂಚಿತರಾಗಿದ್ದಾರೆ.

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅದುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...