Homeಅಂತರಾಷ್ಟ್ರೀಯಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಕೊಂಡರೆ ಇಸ್ರೇಲ್ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಕಳೆದುಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

ಗುರುವಾರ (ಅ.23) ಪ್ರಕಟಗೊಂಡ ಟೈಮ್ ನಿಯತಕಾಲಿಕೆಯ ಸಂದರ್ಶನದಲ್ಲಿ, “ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಪರಿಣಾಮಗಳು ತೀವ್ರವಾಗಿರುತ್ತದೆ” ಎಂದು ಟ್ರಂಪ್ ಎಚ್ಚರಿಸಿದ್ದು, ಅರಬ್ ರಾಷ್ಟ್ರಗಳಿಗೆ ಕೊಟ್ಟ ಮಾತನ್ನು ನೆನಪಿಸಿಕೊಂಡಿದ್ದಾರೆ.

“ಅದು (ಪಶ್ಚಿಮ ದಂಡೆಯ ಸ್ವಾಧೀನ) ನಡೆಯಲು ಸಾಧ್ಯವಿಲ್ಲ. ಕಾರಣ ನಾನು ಅರಬ್‌ ದೇಶಗಳಿಗೆ ಮಾತು ಕೊಟ್ಟಿದ್ದೇನೆ. ಅರಬ್‌ ದೇಶಗಳ ದೊಡ್ಡ ಬೆಂಬಲ ನಮಗಿದೆ. ಒಂದು ವೇಳೆ ಇಸ್ರೇಲ್ ಸ್ವಾಧೀನಕ್ಕೆ ಮುಂದಾದರೆ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಅದು ಕಳೆದುಕೊಳ್ಳಲಿದೆ” ಎಂದು ಅಕ್ಟೋಬರ್ 15ರಂದು ದೂರವಾಣಿ ಮೂಲಕ ಟ್ರಂಪ್ ಹೇಳಿರುವುದಾಗಿ ಟೈಮ್‌ ನಿಯತಕಾಲಿಕೆ ವಿವರಿಸಿದೆ.

ಈ ವರ್ಷದ ಅಂತ್ಯದ ವೇಳೆಗೆ ಇಸ್ರೇಲ್ ಮತ್ತು ಅರಬ್ ರಾಷ್ಟ್ರಗಳ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ಅಬ್ರಹಾಂ ಒಪ್ಪಂದಗಳಿಗೆ ಸೌದಿ ಅರೇಬಿಯಾ ಸೇರಬಹುದು ಎಂಬ ನಿರೀಕ್ಷೆಯನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ ಆಕ್ರಮಣ ಮತ್ತು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಉಲ್ಲೇಖಿಸಿದ ಟ್ರಂಪ್, “ನೋಡಿ ಅವರಿಗೆ ಒಂದು ಸಮಸ್ಯೆ ಇತ್ತು. ಅವರಿಗೆ ಗಾಝಾ ಸಮಸ್ಯೆ ಇತ್ತು, ಅವರಿಗೆ ಇರಾನ್ ಸಮಸ್ಯೆಯೂ ಇತ್ತು. ಈಗ ಆ ಎರಡು ಸಮಸ್ಯೆಗಳು ಪರಿಹಾರಗೊಂಡಿದೆ” ಎಂದಿದ್ದಾರೆ.

ವಿಶಾಲ ಶಾಂತಿ ಕ್ರಮಗಳ ಭಾಗವಾಗಿ ‘ಫತ್ಹ್‌’ ಚಳವಳಿಯ ಉನ್ನತ ಮಟ್ಟದ ನಾಯಕ, ಪ್ಯಾಲೆಸ್ತೀನಿಯನ್ ಕೈದಿ ಮಾರ್ವಾನ್ ಬರ್ಘೌಟಿಯನ್ನು ಇಸ್ರೇಲ್ ಬಿಡುಗಡೆ ಮಾಡಬೇಕೆ ಎಂಬುವುದನ್ನು ನಿರ್ಧರಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.

ಕತಾರ್‌ನ ದೋಹಾದಲ್ಲಿ ಹಮಾಸ್ ಸಮಾಲೋಚಕರ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ಟ್ರಂಪ್ ಭಯಾನಕ ಮತ್ತು ನೆತನ್ಯಾಹು ಅವರ ಯುದ್ಧತಂತ್ರದ ತಪ್ಪು ಎಂದು ಬಣ್ಣಿಸಿದ್ದಾರೆ. ಆದರೆ, ದಾಳಿಯ ಮೇಲಿನ ಆಕ್ರೋಶವು ಅಂತಿಮವಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮವನ್ನು ಜಾರಿಗೆ ತರಲು ಎಲ್ಲರನ್ನು ಒಟ್ಟುಗೂಡಿಸಿತು ಎಂದಿದ್ದಾರೆ.

ಇಸ್ರೇಲ್‌ಗೆ ಭೇಟಿ ನೀಡಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಪಶ್ಚಿಮ ದಂಡೆಯ ಸ್ವಾಧೀನವನ್ನು ವಿರೋಧಿಸಿದ್ದು, “ಅಧ್ಯಕ್ಷ ಟ್ರಂಪ್ ಅವರು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಾರೆ ಮತ್ತು ಅದು ಸಂಭವಿಸುವುದಿಲ್ಲ” ಎಂದು ಹೇಳಿದ್ದಾರೆ.

1967ರಲ್ಲಿ ನಡೆದ ಆರು ದಿನಗಳ ಯುದ್ಧದಲ್ಲಿ ಇಸ್ರೇಲಿ ಸೇನೆ ಪ್ಯಾಲೆಸ್ತೀನ್‌ನ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್ ಅನ್ನು ವಶಪಡಿಸಿಕೊಂಡಿದೆ. ಅಂದಿನಿಂದ, ಈ ಪ್ಯಾಲೆಸ್ತೀನ್‌ ಪ್ರದೇಶಗಳ ನಗರಗಳಲ್ಲಿ 7,00,000 ಯಹೂದಿಗಳು ವಾಸಿಸುವ ಸುಮಾರು 160 ವಸತಿ ಪ್ರದೇಶಗಳನ್ನು ಇಸ್ರೇಲ್ ನಿರ್ಮಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. ಪ್ರಸ್ತುತ ಕನಿಷ್ಠ 3.3 ಮಿಲಿಯನ್ ಪ್ಯಾಲೆಸ್ತೀನಿಯರು ಯಹೂದಿಗಳ ಜೊತೆ ವಾಸಿಸುತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ.

ಇಸ್ರೇಲಿ ಪಡೆಗಳು ನಿಯಮಿತವಾಗಿ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್‌ಗಳಲ್ಲಿ ಪ್ಯಾಲೆಸ್ತೀನೀಯರ ಮೇಲೆ ಅಕ್ರಮಣ ನಡೆಸುತ್ತಲೇ ಇದೆ. ಪ್ರತಿನಿತ್ಯ ಪ್ಯಾಲೆಸ್ತೀನಿಯ ಹತ್ಯೆಗಳಾಗುತ್ತಿವೆ. ಅವರ ಮನೆ, ಆಸ್ತಿ-ಪಾಸ್ತಿಗಳನ್ನು ಇಸ್ರೇಲ್‌ ಕ್ರಮೇಣ ನಾಶಪಡಿಸುತ್ತಿವೆ. ಪಶ್ಚಿಮ ದಂಡೆಯಲ್ಲಿ ವಾಸಿಸುವ ಯಹೂದಿಗಳು ಇಸ್ರೇಲ್‌ನ ಚುನಾವಣೆಗಳಲ್ಲಿ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. ಆದರೆ, ಪ್ಯಾಲೆಸ್ತೀನಿಯರು ಆ ಹಕ್ಕಿನಿಂದ ವಂಚಿತರಾಗಿದ್ದಾರೆ.

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅದುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....