Homeಅಂತರಾಷ್ಟ್ರೀಯಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಕೊಂಡರೆ ಇಸ್ರೇಲ್ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಕಳೆದುಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

ಗುರುವಾರ (ಅ.23) ಪ್ರಕಟಗೊಂಡ ಟೈಮ್ ನಿಯತಕಾಲಿಕೆಯ ಸಂದರ್ಶನದಲ್ಲಿ, “ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಪರಿಣಾಮಗಳು ತೀವ್ರವಾಗಿರುತ್ತದೆ” ಎಂದು ಟ್ರಂಪ್ ಎಚ್ಚರಿಸಿದ್ದು, ಅರಬ್ ರಾಷ್ಟ್ರಗಳಿಗೆ ಕೊಟ್ಟ ಮಾತನ್ನು ನೆನಪಿಸಿಕೊಂಡಿದ್ದಾರೆ.

“ಅದು (ಪಶ್ಚಿಮ ದಂಡೆಯ ಸ್ವಾಧೀನ) ನಡೆಯಲು ಸಾಧ್ಯವಿಲ್ಲ. ಕಾರಣ ನಾನು ಅರಬ್‌ ದೇಶಗಳಿಗೆ ಮಾತು ಕೊಟ್ಟಿದ್ದೇನೆ. ಅರಬ್‌ ದೇಶಗಳ ದೊಡ್ಡ ಬೆಂಬಲ ನಮಗಿದೆ. ಒಂದು ವೇಳೆ ಇಸ್ರೇಲ್ ಸ್ವಾಧೀನಕ್ಕೆ ಮುಂದಾದರೆ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಅದು ಕಳೆದುಕೊಳ್ಳಲಿದೆ” ಎಂದು ಅಕ್ಟೋಬರ್ 15ರಂದು ದೂರವಾಣಿ ಮೂಲಕ ಟ್ರಂಪ್ ಹೇಳಿರುವುದಾಗಿ ಟೈಮ್‌ ನಿಯತಕಾಲಿಕೆ ವಿವರಿಸಿದೆ.

ಈ ವರ್ಷದ ಅಂತ್ಯದ ವೇಳೆಗೆ ಇಸ್ರೇಲ್ ಮತ್ತು ಅರಬ್ ರಾಷ್ಟ್ರಗಳ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ಅಬ್ರಹಾಂ ಒಪ್ಪಂದಗಳಿಗೆ ಸೌದಿ ಅರೇಬಿಯಾ ಸೇರಬಹುದು ಎಂಬ ನಿರೀಕ್ಷೆಯನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ ಆಕ್ರಮಣ ಮತ್ತು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಉಲ್ಲೇಖಿಸಿದ ಟ್ರಂಪ್, “ನೋಡಿ ಅವರಿಗೆ ಒಂದು ಸಮಸ್ಯೆ ಇತ್ತು. ಅವರಿಗೆ ಗಾಝಾ ಸಮಸ್ಯೆ ಇತ್ತು, ಅವರಿಗೆ ಇರಾನ್ ಸಮಸ್ಯೆಯೂ ಇತ್ತು. ಈಗ ಆ ಎರಡು ಸಮಸ್ಯೆಗಳು ಪರಿಹಾರಗೊಂಡಿದೆ” ಎಂದಿದ್ದಾರೆ.

ವಿಶಾಲ ಶಾಂತಿ ಕ್ರಮಗಳ ಭಾಗವಾಗಿ ‘ಫತ್ಹ್‌’ ಚಳವಳಿಯ ಉನ್ನತ ಮಟ್ಟದ ನಾಯಕ, ಪ್ಯಾಲೆಸ್ತೀನಿಯನ್ ಕೈದಿ ಮಾರ್ವಾನ್ ಬರ್ಘೌಟಿಯನ್ನು ಇಸ್ರೇಲ್ ಬಿಡುಗಡೆ ಮಾಡಬೇಕೆ ಎಂಬುವುದನ್ನು ನಿರ್ಧರಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.

ಕತಾರ್‌ನ ದೋಹಾದಲ್ಲಿ ಹಮಾಸ್ ಸಮಾಲೋಚಕರ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ಟ್ರಂಪ್ ಭಯಾನಕ ಮತ್ತು ನೆತನ್ಯಾಹು ಅವರ ಯುದ್ಧತಂತ್ರದ ತಪ್ಪು ಎಂದು ಬಣ್ಣಿಸಿದ್ದಾರೆ. ಆದರೆ, ದಾಳಿಯ ಮೇಲಿನ ಆಕ್ರೋಶವು ಅಂತಿಮವಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮವನ್ನು ಜಾರಿಗೆ ತರಲು ಎಲ್ಲರನ್ನು ಒಟ್ಟುಗೂಡಿಸಿತು ಎಂದಿದ್ದಾರೆ.

ಇಸ್ರೇಲ್‌ಗೆ ಭೇಟಿ ನೀಡಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಪಶ್ಚಿಮ ದಂಡೆಯ ಸ್ವಾಧೀನವನ್ನು ವಿರೋಧಿಸಿದ್ದು, “ಅಧ್ಯಕ್ಷ ಟ್ರಂಪ್ ಅವರು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಾರೆ ಮತ್ತು ಅದು ಸಂಭವಿಸುವುದಿಲ್ಲ” ಎಂದು ಹೇಳಿದ್ದಾರೆ.

1967ರಲ್ಲಿ ನಡೆದ ಆರು ದಿನಗಳ ಯುದ್ಧದಲ್ಲಿ ಇಸ್ರೇಲಿ ಸೇನೆ ಪ್ಯಾಲೆಸ್ತೀನ್‌ನ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್ ಅನ್ನು ವಶಪಡಿಸಿಕೊಂಡಿದೆ. ಅಂದಿನಿಂದ, ಈ ಪ್ಯಾಲೆಸ್ತೀನ್‌ ಪ್ರದೇಶಗಳ ನಗರಗಳಲ್ಲಿ 7,00,000 ಯಹೂದಿಗಳು ವಾಸಿಸುವ ಸುಮಾರು 160 ವಸತಿ ಪ್ರದೇಶಗಳನ್ನು ಇಸ್ರೇಲ್ ನಿರ್ಮಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. ಪ್ರಸ್ತುತ ಕನಿಷ್ಠ 3.3 ಮಿಲಿಯನ್ ಪ್ಯಾಲೆಸ್ತೀನಿಯರು ಯಹೂದಿಗಳ ಜೊತೆ ವಾಸಿಸುತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ.

ಇಸ್ರೇಲಿ ಪಡೆಗಳು ನಿಯಮಿತವಾಗಿ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್‌ಗಳಲ್ಲಿ ಪ್ಯಾಲೆಸ್ತೀನೀಯರ ಮೇಲೆ ಅಕ್ರಮಣ ನಡೆಸುತ್ತಲೇ ಇದೆ. ಪ್ರತಿನಿತ್ಯ ಪ್ಯಾಲೆಸ್ತೀನಿಯ ಹತ್ಯೆಗಳಾಗುತ್ತಿವೆ. ಅವರ ಮನೆ, ಆಸ್ತಿ-ಪಾಸ್ತಿಗಳನ್ನು ಇಸ್ರೇಲ್‌ ಕ್ರಮೇಣ ನಾಶಪಡಿಸುತ್ತಿವೆ. ಪಶ್ಚಿಮ ದಂಡೆಯಲ್ಲಿ ವಾಸಿಸುವ ಯಹೂದಿಗಳು ಇಸ್ರೇಲ್‌ನ ಚುನಾವಣೆಗಳಲ್ಲಿ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. ಆದರೆ, ಪ್ಯಾಲೆಸ್ತೀನಿಯರು ಆ ಹಕ್ಕಿನಿಂದ ವಂಚಿತರಾಗಿದ್ದಾರೆ.

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅದುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...