Homeಅಂತರಾಷ್ಟ್ರೀಯಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಇಸ್ರೇಲ್ ಅಮೆರಿಕದ ಬೆಂಬಲ ಕಳೆದುಕೊಳ್ಳಲಿದೆ : ಟ್ರಂಪ್ ಎಚ್ಚರಿಕೆ

- Advertisement -
- Advertisement -

ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಕೊಂಡರೆ ಇಸ್ರೇಲ್ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಕಳೆದುಕೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಸಿದ್ದಾರೆ.

ಗುರುವಾರ (ಅ.23) ಪ್ರಕಟಗೊಂಡ ಟೈಮ್ ನಿಯತಕಾಲಿಕೆಯ ಸಂದರ್ಶನದಲ್ಲಿ, “ಪಶ್ಚಿಮ ದಂಡೆ ಸ್ವಾಧೀನಪಡಿಸಿಕೊಂಡರೆ ಪರಿಣಾಮಗಳು ತೀವ್ರವಾಗಿರುತ್ತದೆ” ಎಂದು ಟ್ರಂಪ್ ಎಚ್ಚರಿಸಿದ್ದು, ಅರಬ್ ರಾಷ್ಟ್ರಗಳಿಗೆ ಕೊಟ್ಟ ಮಾತನ್ನು ನೆನಪಿಸಿಕೊಂಡಿದ್ದಾರೆ.

“ಅದು (ಪಶ್ಚಿಮ ದಂಡೆಯ ಸ್ವಾಧೀನ) ನಡೆಯಲು ಸಾಧ್ಯವಿಲ್ಲ. ಕಾರಣ ನಾನು ಅರಬ್‌ ದೇಶಗಳಿಗೆ ಮಾತು ಕೊಟ್ಟಿದ್ದೇನೆ. ಅರಬ್‌ ದೇಶಗಳ ದೊಡ್ಡ ಬೆಂಬಲ ನಮಗಿದೆ. ಒಂದು ವೇಳೆ ಇಸ್ರೇಲ್ ಸ್ವಾಧೀನಕ್ಕೆ ಮುಂದಾದರೆ ಅಮೆರಿಕದ ನಿರ್ಣಾಯಕ ಬೆಂಬಲವನ್ನು ಅದು ಕಳೆದುಕೊಳ್ಳಲಿದೆ” ಎಂದು ಅಕ್ಟೋಬರ್ 15ರಂದು ದೂರವಾಣಿ ಮೂಲಕ ಟ್ರಂಪ್ ಹೇಳಿರುವುದಾಗಿ ಟೈಮ್‌ ನಿಯತಕಾಲಿಕೆ ವಿವರಿಸಿದೆ.

ಈ ವರ್ಷದ ಅಂತ್ಯದ ವೇಳೆಗೆ ಇಸ್ರೇಲ್ ಮತ್ತು ಅರಬ್ ರಾಷ್ಟ್ರಗಳ ನಡುವಿನ ಸಂಬಂಧವನ್ನು ಗಟ್ಟಿಗೊಳಿಸುವ ಅಬ್ರಹಾಂ ಒಪ್ಪಂದಗಳಿಗೆ ಸೌದಿ ಅರೇಬಿಯಾ ಸೇರಬಹುದು ಎಂಬ ನಿರೀಕ್ಷೆಯನ್ನು ಟ್ರಂಪ್ ವ್ಯಕ್ತಪಡಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ ಆಕ್ರಮಣ ಮತ್ತು ಇರಾನ್‌ನ ಪರಮಾಣು ಕಾರ್ಯಕ್ರಮವನ್ನು ಉಲ್ಲೇಖಿಸಿದ ಟ್ರಂಪ್, “ನೋಡಿ ಅವರಿಗೆ ಒಂದು ಸಮಸ್ಯೆ ಇತ್ತು. ಅವರಿಗೆ ಗಾಝಾ ಸಮಸ್ಯೆ ಇತ್ತು, ಅವರಿಗೆ ಇರಾನ್ ಸಮಸ್ಯೆಯೂ ಇತ್ತು. ಈಗ ಆ ಎರಡು ಸಮಸ್ಯೆಗಳು ಪರಿಹಾರಗೊಂಡಿದೆ” ಎಂದಿದ್ದಾರೆ.

ವಿಶಾಲ ಶಾಂತಿ ಕ್ರಮಗಳ ಭಾಗವಾಗಿ ‘ಫತ್ಹ್‌’ ಚಳವಳಿಯ ಉನ್ನತ ಮಟ್ಟದ ನಾಯಕ, ಪ್ಯಾಲೆಸ್ತೀನಿಯನ್ ಕೈದಿ ಮಾರ್ವಾನ್ ಬರ್ಘೌಟಿಯನ್ನು ಇಸ್ರೇಲ್ ಬಿಡುಗಡೆ ಮಾಡಬೇಕೆ ಎಂಬುವುದನ್ನು ನಿರ್ಧರಿಸುವುದಾಗಿ ಟ್ರಂಪ್ ತಿಳಿಸಿದ್ದಾರೆ.

ಕತಾರ್‌ನ ದೋಹಾದಲ್ಲಿ ಹಮಾಸ್ ಸಮಾಲೋಚಕರ ಮೇಲೆ ಇಸ್ರೇಲ್ ನಡೆಸಿದ ದಾಳಿಯನ್ನು ಟ್ರಂಪ್ ಭಯಾನಕ ಮತ್ತು ನೆತನ್ಯಾಹು ಅವರ ಯುದ್ಧತಂತ್ರದ ತಪ್ಪು ಎಂದು ಬಣ್ಣಿಸಿದ್ದಾರೆ. ಆದರೆ, ದಾಳಿಯ ಮೇಲಿನ ಆಕ್ರೋಶವು ಅಂತಿಮವಾಗಿ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮವನ್ನು ಜಾರಿಗೆ ತರಲು ಎಲ್ಲರನ್ನು ಒಟ್ಟುಗೂಡಿಸಿತು ಎಂದಿದ್ದಾರೆ.

ಇಸ್ರೇಲ್‌ಗೆ ಭೇಟಿ ನೀಡಿದ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಪಶ್ಚಿಮ ದಂಡೆಯ ಸ್ವಾಧೀನವನ್ನು ವಿರೋಧಿಸಿದ್ದು, “ಅಧ್ಯಕ್ಷ ಟ್ರಂಪ್ ಅವರು ಇಸ್ರೇಲ್ ಆಕ್ರಮಿತ ಪಶ್ಚಿಮ ದಂಡೆಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸುತ್ತಾರೆ ಮತ್ತು ಅದು ಸಂಭವಿಸುವುದಿಲ್ಲ” ಎಂದು ಹೇಳಿದ್ದಾರೆ.

1967ರಲ್ಲಿ ನಡೆದ ಆರು ದಿನಗಳ ಯುದ್ಧದಲ್ಲಿ ಇಸ್ರೇಲಿ ಸೇನೆ ಪ್ಯಾಲೆಸ್ತೀನ್‌ನ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್ ಅನ್ನು ವಶಪಡಿಸಿಕೊಂಡಿದೆ. ಅಂದಿನಿಂದ, ಈ ಪ್ಯಾಲೆಸ್ತೀನ್‌ ಪ್ರದೇಶಗಳ ನಗರಗಳಲ್ಲಿ 7,00,000 ಯಹೂದಿಗಳು ವಾಸಿಸುವ ಸುಮಾರು 160 ವಸತಿ ಪ್ರದೇಶಗಳನ್ನು ಇಸ್ರೇಲ್ ನಿರ್ಮಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. ಪ್ರಸ್ತುತ ಕನಿಷ್ಠ 3.3 ಮಿಲಿಯನ್ ಪ್ಯಾಲೆಸ್ತೀನಿಯರು ಯಹೂದಿಗಳ ಜೊತೆ ವಾಸಿಸುತ್ತಿದ್ದಾರೆ ಎಂದು ವರದಿಗಳು ಹೇಳುತ್ತವೆ.

ಇಸ್ರೇಲಿ ಪಡೆಗಳು ನಿಯಮಿತವಾಗಿ ಪಶ್ಚಿಮ ದಂಡೆ ಮತ್ತು ಪೂರ್ವ ಜೆರುಸಲೆಮ್‌ಗಳಲ್ಲಿ ಪ್ಯಾಲೆಸ್ತೀನೀಯರ ಮೇಲೆ ಅಕ್ರಮಣ ನಡೆಸುತ್ತಲೇ ಇದೆ. ಪ್ರತಿನಿತ್ಯ ಪ್ಯಾಲೆಸ್ತೀನಿಯ ಹತ್ಯೆಗಳಾಗುತ್ತಿವೆ. ಅವರ ಮನೆ, ಆಸ್ತಿ-ಪಾಸ್ತಿಗಳನ್ನು ಇಸ್ರೇಲ್‌ ಕ್ರಮೇಣ ನಾಶಪಡಿಸುತ್ತಿವೆ. ಪಶ್ಚಿಮ ದಂಡೆಯಲ್ಲಿ ವಾಸಿಸುವ ಯಹೂದಿಗಳು ಇಸ್ರೇಲ್‌ನ ಚುನಾವಣೆಗಳಲ್ಲಿ ಮತ ಚಲಾಯಿಸುವ ಹಕ್ಕನ್ನು ಹೊಂದಿದ್ದಾರೆ. ಆದರೆ, ಪ್ಯಾಲೆಸ್ತೀನಿಯರು ಆ ಹಕ್ಕಿನಿಂದ ವಂಚಿತರಾಗಿದ್ದಾರೆ.

ಆಕ್ರಮಿತ ಪಶ್ಚಿಮ ದಂಡೆಯನ್ನು ಅಧಿಕೃತವಾಗಿ ಸ್ವಾಧೀನಪಡಿಸಿಕೊಳ್ಳುವ ಅಥವಾ ಕಾನೂನು ಹೇರುವ ವಿವಾದಾತ್ಮಕ ಮಸೂದೆಗೆ ಇಸ್ರೇಲ್ ಸಂಸತ್ (ನೆಸೆಟ್) ಬುಧವಾರ (ಅ.22) ಪ್ರಾಥಮಿಕ ಅನುಮೋದನೆ ನೀಡಿದೆ.

“ಜೂಡಿಯಾ ಮತ್ತು ಸಮರಿಯಾದಲ್ಲಿ ಇಸ್ರೇಲಿ ಸಾರ್ವಭೌಮತ್ವದ ಅನ್ವಯ, 2025” ಎಂಬ ಶೀರ್ಷಿಕೆಯ ಈ ಮಸೂದೆಯನ್ನು ನೋಮ್ ಪಕ್ಷವನ್ನು ಪ್ರತಿನಿಧಿಸುವ ತೀವ್ರ ಬಲಪಂಥೀಯ ಸಂಸದ ಅವಿ ಮಾವೋಜ್ ಅವರು ಸಂಸತ್‌ನಲ್ಲಿ ಮಂಡಿಸಿದ್ದರು.

ಇಸ್ರೇಲಿ ಸಂಸತ್ತಿನ 120 ಶಾಸಕರಲ್ಲಿ 25-24 ಮತಗಳಿಂದ ಮಸೂದೆಯನ್ನು ಅಂಗೀಕರಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷವು ಮಸೂದೆಯನ್ನು ಬೆಂಬಲಿಸದಿದ್ದರೂ, ಅವರ ಒಕ್ಕೂಟದ ಕೆಲವು ಸದಸ್ಯರು, ರಾಷ್ಟ್ರೀಯ ಭದ್ರತಾ ಸಚಿವ ಇಟಮಾರ್ ಬೆನ್-ಗ್ವಿರ್ ಅವರ ಯಹೂದಿ ಶಕ್ತಿ ಪಕ್ಷ ಮತ್ತು ಹಣಕಾಸು ಸಚಿವ ಬೆಜಲೆಲ್ ಸ್ಮೋಟ್ರಿಚ್ ಅವರ ರಿಲೀಜಿಯಸ್ ಜಿಯೋನಿಸಂ ಪಕ್ಷದ ಸದಸ್ಯರು ಮಸೂದೆ ಪರ ಮತ ಚಲಾಯಿಸಿದ್ದಾರೆ.

ಇನ್ನು ಮಾಲೆ ಅದುಮಿಮ್ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಸ್ತಾಪವನ್ನು ಹೊಂದಿರುವ ವಿರೋಧ ಪಕ್ಷದ ಎರಡನೇ ಮಸೂದೆಯು 31-9 ಮತಗಳಿಂದ ಅಂಗೀಕಾರಗೊಂಡಿದೆ.

ಮಸೂದೆಯು ಆರಂಭಿಕ ಮತದಾನದಲ್ಲಿ ಅಂಗೀಕಾರವಾಗಿದ್ದರೂ, ಅಂತಿಮ ಅಂಗೀಕಾರ ಪಡೆಯಲು ಇನ್ನೂ ಮೂರು ಸುತ್ತುಗಳನ್ನು ಒಳಗೊಂಡ ದೀರ್ಘ ಶಾಸಕಾಂಗ ಪ್ರಕ್ರಿಯೆನ್ನು ಹಾದು ಹೋಗಬೇಕಿದೆ.

ಆಕ್ರಮಿತ ಪಶ್ಚಿಮ ದಂಡೆ ಸ್ವಾಧೀನ ಮಸೂದೆಗೆ ಇಸ್ರೇಲ್ ಸಂಸತ್ತು ಪ್ರಾಥಮಿಕ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...