Homeಅಂತರಾಷ್ಟ್ರೀಯದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

- Advertisement -
- Advertisement -

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ ಮೇಲೆ ವೈಮಾನಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದಾಳಿ ಮುಂದುವರಿಸುವ ಸೂಚನೆ ನೀಡಿದ್ದಾರೆ. ಈ ನಡುವೆ ತೀವ್ರ ಪ್ರತಿದಾಳಿಯ ಎಚ್ಚರಿಕೆಯನ್ನು ಇರಾನ್ ಕೂಡ ನೀಡಿದೆ.

ಇಸ್ರೇಲ್ ದಾಳಿಯ ಬಳಿಕ ಪ್ರತಿಕ್ರಿಯಿಸಿದ ಟ್ರಂಪ್, “ಇರಾನ್‌ನ ಸಂಭಾವ್ಯ ದಾಳಿಗಳನ್ನು ತಡೆಯುವ ಉದ್ದೇಶದಿಂದ ಅಮೆರಿಕ-ಇಸ್ರೇಲ್ ಜಂಟಿ ಕಾರ್ಯಾಚರಣೆ ನಡೆಸಿವೆ. ಅಮೆರಿಕ ಜನರ ಹಿತ ಕಾಯುವ ಉದ್ದೇಶ ಇದರ ಹಿಂದೆ ಇದೆ ಎಂದು ಹೇಳಿದ್ದಾರೆ.

ಪ್ರಸ್ತುತ ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ದಾಳಿ ನಡೆಸಿದೆ ಎಂದರೂ, ಇನ್ನೂ ಕೆಲ ವರದಿಗಳು ಅಮೆರಿಕವೇ ದಾಳಿ ನಡೆಸಿದೆ ಎಂದಿವೆ. ಅಮೆರಿಕ ಇಸ್ರೇಲ್‌ನ ಹೆಗಲ ಮೇಲೆ ಬಂದೂಕಿಟ್ಟು ಗುಂಡು ಹೊಡೆದಿವೆ ಎಂದಿವೆ.

“ನಾವು ಅವರ ಕ್ಷಿಪಣಿಗಳನ್ನು ನಾಶಪಡಿಸುತ್ತೇವೆ, ಅವರ ಕ್ಷಿಪಣಿ ಉದ್ಯಮವನ್ನು ನೆಲಸಮ ಮಾಡುತ್ತೇವೆ. ನಾವು ಅವರ ನೌಕಾಪಡೆಯನ್ನು ನಾಶಮಾಡುತ್ತೇವೆ. ‘ಭಯೋತ್ಪಾದಕ ಪ್ರಾಕ್ಸಿಗಳು’ ಇನ್ನು ಮುಂದೆ ಈ ಜಗತ್ತನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ. ಇದನ್ನು ನಾವು ಖಚಿತಪಡಿಸುತ್ತೇವೆ. ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಪಡೆಯದಂತೆ ನಾವು ತಡೆಯುತ್ತೇವೆ. ಅವರು ಯಾವತ್ತಿಗೂ ಪರಮಾಣು ಶಕ್ತಿ ಹೊಂದುವುದಿಲ್ಲ. ಇದು ಬಹಳ ಸರಳ ಸಂದೇಶ. ಅಮೆರಿಕ ಸಶಸ್ತ್ರ ಪಡೆಗಳ ಶಕ್ತಿಯನ್ನು ಯಾರೂ ಪ್ರಶ್ನಿಸಬಾರದು” ಎಂದು ಇರಾನ್ ಆಡಳಿತವು ಶೀಘ್ರದಲ್ಲೇ ಕಲಿಯಲಿದೆ ಎಂದು ಟ್ರಂಪ್ ಹೇಳಿದ್ದಾರೆ.

ಇರಾನ್‌ನ ಗುಪ್ತಚರ ಸಚಿವಾಲಯ, ರಕ್ಷಣಾ ಸಚಿವಾಲಯ, ಇರಾನ್‌ನ ಪರಮಾಣು ಶಕ್ತಿ ಸಂಸ್ಥೆ ಮತ್ತು ಪಾರ್ಚಿನ್ ಮಿಲಿಟರಿ ಸಂಕೀರ್ಣವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಇಸ್ರೇಲ್ ದಾಳಿಯ ಕುರಿತು ಇರಾನ್ ಅಧಿಕೃತ ಹೇಳಿಕೆ ನೀಡಿಲ್ಲ. ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್ ಅವರ ಕಚೇರಿ ಅಥವಾ ಮನೆ ಬಳಿ ಇಸ್ರೇಲ್ ಕ್ಷಿಪಣಿ ಬಿದ್ದಿದೆ. ಆದರೆ, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

ಇರಾನ್ ಆಡಳಿತದಿಂದ ಅಧಿಕೃತ ಹೇಳಿಕೆ ಬರದಿದ್ದರೂ, ಇರಾನ್ ಸಂಸತ್ತಿನ ರಾಷ್ಟ್ರೀಯ ಭದ್ರತಾ ಆಯೋಗದ ಮುಖ್ಯಸ್ಥ ಇಬ್ರಾಹಿಂ ಅಝೀಝಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

” ನಾವು ನಿಮಗೆ ಎಚ್ಚರಿಕೆ ನೀಡಿದ್ದೆವು, ಈಗ ನೀವೆ ಪ್ರಾರಂಭಿಸಿದ್ದೀರಿ, ಇನ್ನು ಇದರ ಅಂತ್ಯ ನಿಮ್ಮ ಕೈಯಲ್ಲಿ ಇಲ್ಲ” ಎಂದು ಇಬ್ರಾಹಿಂ ಅಝೀಝಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....