Homeಮುಖಪುಟವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಅಮೆರಿಕದ ಅಧ್ಯಕ್ಷರಾಗಿ ಸೋಮವಾರ (ಜ.20) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ (ಡಬ್ಲ್ಯುಹೆಚ್‌ಒ) ಹೊರ ಬರುವ ಕಾರ್ಯಕಾರಿ ಆದೇಶಕ್ಕೆ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಇತರ ಅಂತಾರಾಷ್ಟ್ರೀಯ ಆರೋಗ್ಯ ಬಿಕ್ಕಟ್ಟುಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ಸದಸ್ಯ ರಾಷ್ಟ್ರಗಳ ರಾಜಕೀಯ ಪ್ರಭಾವದಿಂದ ಡಬ್ಲ್ಯುಹೆಚ್‌ಒ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಡಬ್ಲ್ಯುಹೆಚ್‌ಒಗೆ ಆರ್ಥಿಕ ಸಹಾಯ ನೀಡುವ ವಿಷಯದಲ್ಲೂ ಅಮೆರಿಕಕ್ಕೆ ಅನ್ಯಾಯವಾಗಿದೆ. ಚೀನಾದಂತ ದೊಡ್ಡ ದೇಶಗಳು ಅವರ ಪಾಲನ್ನು ಸರಿಯಾಗಿ ಕೊಡದ ಕಾರಣ, ಅಮೆರಿಕ ಹೆಚ್ಚಿನ ಹೊರೆ ಹೊತ್ತುಕೊಳ್ಳಬೇಕಾಗಿದೆ” ಎಂದು ಟ್ರಂಪ್ ತಿಳಿಸಿದ್ದಾರೆ.

“ಡಬ್ಲ್ಯುಹೆಚ್ಒ ನಮ್ಮನ್ನು ಅಳಿಸಿ ಹಾಕಲು ನೋಡಿತು, ಎಲ್ಲರೂ ನಮ್ಮನ್ನು ತುಳಿಯಲು ನೋಡಿದರು. ಆದರೆ, ಇದು ಇನ್ನು ಮುಂದೆ ನಡೆಯುವುದಿಲ್ಲ” ಎಂದು ಆದೇಶಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ಟ್ರಂಪ್ ಹೇಳಿದ್ದಾರೆ.

ಟ್ರಂಪ್ ಕ್ರಮದಿಂದ ಅಮೆರಿಕ ಮುಂದಿನ 12 ತಿಂಗಳ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯನ್ನು ತೊರೆಯಲಿದೆ ಮತ್ತು ಎಲ್ಲಾ ಹಣಕಾಸಿನ ನೆರವನ್ನು ನಿಲ್ಲಿಸಲಿದೆ. ಅಮೆರಿಕ ಡಬ್ಲ್ಯುಹೆಚ್ಒನ ಅತಿದೊಡ್ಡ ಆರ್ಥಿಕ ಬೆಂಬಲಿಗನಾಗಿದ್ದು, ಅದರ ಒಟ್ಟಾರೆ ನಿಧಿಯ ಸುಮಾರು 18ರಷ್ಟು ಪಾಲು ನೀಡುತ್ತಿದೆ. ಡಬ್ಲ್ಯುಹೆಚ್ಒನ 2024-2025ರ ಬಜೆಟ್ 6.8 ಬಿಲಿಯನ್ ಡಾಲರ್ ಆಗಿತ್ತು.

ಟ್ರಂಪ್ ಡಬ್ಲ್ಯುಹೆಚ್‌ಒನಿಂದ ಹೊರ ಬರಲು ಮುಂದಾಗಿರುವುದು ಅನಿರೀಕ್ಷಿತವಲ್ಲ. ಅವರು 2020ರಲ್ಲಿ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ, “ಕೋವಿಡ್ ಮೂಲಕ ಜಗತ್ತನ್ನು ದಾರಿ ತಪ್ಪಿಸುವ ಚೀನಾದ ಪ್ರಯತ್ನಗಳಿಗೆ ಡಬ್ಲ್ಯುಹೆಚ್‌ ಸಹಾಯ ಮಾಡುತ್ತಿದೆ” ಎಂದು ಆರೋಪಿಸಿ ಅದರಿಂದ ಹೊರ ಬರಲು ಕ್ರಮ ಕೈಗೊಂಡಿದ್ದರು.

ಟ್ರಂಪ್ ಆರೋಪಗಳನ್ನು ನಿರಾಕರಿಸಿರುವ ಡಬ್ಲ್ಯುಹೆಚ್‌ಒ, ಕೋವಿಡ್ ಸೋಂಕಿತ ಪ್ರಾಣಿಗಳೊಂದಿಗಿನ ಮಾನವ ಸಂಪರ್ಕದಿಂದ ರೋಗ ಹರಡಿದೆಯೇ ಅಥವಾ ದೇಶೀಯ ಪ್ರಯೋಗಾಲಯದಲ್ಲಿ ಇದೇ ರೀತಿಯ ವೈರಸ್‌ಗಳ ಸಂಶೋಧನೆಯಿಂದಾಗಿ ಹರಡಿದೆಯೇ ಎಂಬುವುದನ್ನು ನಿರ್ಧರಿಸಲು ಮಾಹಿತಿ ಹಂಚಿಕೊಳ್ಳಲು ಚೀನಾವನ್ನು ಒತ್ತಾಯಿಸುತ್ತಲೇ ಇದ್ದೇವೆ ಎಂದು ಹೇಳಿದೆ.

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...

ಪಶ್ಚಿಮ ಬಂಗಾಳ: ನಂದಿಗ್ರಾಮದಲ್ಲಿ ಎಸ್‌ಐಆರ್ ಪೂರಕ ಪಟ್ಟಿಯಿಂದ 95% ಮುಸ್ಲಿಂ ಮತದಾರರ ಹೆಸರು ತೆಗೆದುಹಾಕಲಾಗಿದೆ: ವರದಿ 

ಸುವೇಂದು ಅಧಿಕಾರಿ ಪ್ರತಿನಿಧಿಸುವ ಪೂರ್ವ ಮಿಡ್ನಾಪುರ ವಿಧಾನಸಭಾ ಕ್ಷೇತ್ರವಾದ ನಂದಿಗ್ರಾಮದಲ್ಲಿ ಒಂದು ಅಧ್ಯಯನವು ಆತಂಕಕಾರಿ ಅಸಮಾನತೆಯನ್ನು ಎತ್ತಿ ತೋರಿಸಿದೆ, ಅಲ್ಲಿ ಮತದಾರರಲ್ಲಿ ಕಡಿಮೆ ಪಾಲು ಇದ್ದರೂ ಎಸ್‌ಐಆರ್ ಪೂರಕ ಪಟ್ಟಿಯಿಂದ ಅಳಿಸಲಾದ ಮತದಾರರಲ್ಲಿ...

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...