Homeಮುಖಪುಟವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರ ಬರುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಅಮೆರಿಕದ ಅಧ್ಯಕ್ಷರಾಗಿ ಸೋಮವಾರ (ಜ.20) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಶ್ವ ಆರೋಗ್ಯ ಸಂಸ್ಥೆಯಿಂದ (ಡಬ್ಲ್ಯುಹೆಚ್‌ಒ) ಹೊರ ಬರುವ ಕಾರ್ಯಕಾರಿ ಆದೇಶಕ್ಕೆ ಡೊನಾಲ್ಡ್ ಟ್ರಂಪ್ ಸಹಿ ಹಾಕಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯು ಕೋವಿಡ್-19 ಸಾಂಕ್ರಾಮಿಕ ರೋಗ ಮತ್ತು ಇತರ ಅಂತಾರಾಷ್ಟ್ರೀಯ ಆರೋಗ್ಯ ಬಿಕ್ಕಟ್ಟುಗಳನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

ಸದಸ್ಯ ರಾಷ್ಟ್ರಗಳ ರಾಜಕೀಯ ಪ್ರಭಾವದಿಂದ ಡಬ್ಲ್ಯುಹೆಚ್‌ಒ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಡಬ್ಲ್ಯುಹೆಚ್‌ಒಗೆ ಆರ್ಥಿಕ ಸಹಾಯ ನೀಡುವ ವಿಷಯದಲ್ಲೂ ಅಮೆರಿಕಕ್ಕೆ ಅನ್ಯಾಯವಾಗಿದೆ. ಚೀನಾದಂತ ದೊಡ್ಡ ದೇಶಗಳು ಅವರ ಪಾಲನ್ನು ಸರಿಯಾಗಿ ಕೊಡದ ಕಾರಣ, ಅಮೆರಿಕ ಹೆಚ್ಚಿನ ಹೊರೆ ಹೊತ್ತುಕೊಳ್ಳಬೇಕಾಗಿದೆ” ಎಂದು ಟ್ರಂಪ್ ತಿಳಿಸಿದ್ದಾರೆ.

“ಡಬ್ಲ್ಯುಹೆಚ್ಒ ನಮ್ಮನ್ನು ಅಳಿಸಿ ಹಾಕಲು ನೋಡಿತು, ಎಲ್ಲರೂ ನಮ್ಮನ್ನು ತುಳಿಯಲು ನೋಡಿದರು. ಆದರೆ, ಇದು ಇನ್ನು ಮುಂದೆ ನಡೆಯುವುದಿಲ್ಲ” ಎಂದು ಆದೇಶಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ಟ್ರಂಪ್ ಹೇಳಿದ್ದಾರೆ.

ಟ್ರಂಪ್ ಕ್ರಮದಿಂದ ಅಮೆರಿಕ ಮುಂದಿನ 12 ತಿಂಗಳ ಅವಧಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆಯನ್ನು ತೊರೆಯಲಿದೆ ಮತ್ತು ಎಲ್ಲಾ ಹಣಕಾಸಿನ ನೆರವನ್ನು ನಿಲ್ಲಿಸಲಿದೆ. ಅಮೆರಿಕ ಡಬ್ಲ್ಯುಹೆಚ್ಒನ ಅತಿದೊಡ್ಡ ಆರ್ಥಿಕ ಬೆಂಬಲಿಗನಾಗಿದ್ದು, ಅದರ ಒಟ್ಟಾರೆ ನಿಧಿಯ ಸುಮಾರು 18ರಷ್ಟು ಪಾಲು ನೀಡುತ್ತಿದೆ. ಡಬ್ಲ್ಯುಹೆಚ್ಒನ 2024-2025ರ ಬಜೆಟ್ 6.8 ಬಿಲಿಯನ್ ಡಾಲರ್ ಆಗಿತ್ತು.

ಟ್ರಂಪ್ ಡಬ್ಲ್ಯುಹೆಚ್‌ಒನಿಂದ ಹೊರ ಬರಲು ಮುಂದಾಗಿರುವುದು ಅನಿರೀಕ್ಷಿತವಲ್ಲ. ಅವರು 2020ರಲ್ಲಿ ಅಧ್ಯಕ್ಷರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ, “ಕೋವಿಡ್ ಮೂಲಕ ಜಗತ್ತನ್ನು ದಾರಿ ತಪ್ಪಿಸುವ ಚೀನಾದ ಪ್ರಯತ್ನಗಳಿಗೆ ಡಬ್ಲ್ಯುಹೆಚ್‌ ಸಹಾಯ ಮಾಡುತ್ತಿದೆ” ಎಂದು ಆರೋಪಿಸಿ ಅದರಿಂದ ಹೊರ ಬರಲು ಕ್ರಮ ಕೈಗೊಂಡಿದ್ದರು.

ಟ್ರಂಪ್ ಆರೋಪಗಳನ್ನು ನಿರಾಕರಿಸಿರುವ ಡಬ್ಲ್ಯುಹೆಚ್‌ಒ, ಕೋವಿಡ್ ಸೋಂಕಿತ ಪ್ರಾಣಿಗಳೊಂದಿಗಿನ ಮಾನವ ಸಂಪರ್ಕದಿಂದ ರೋಗ ಹರಡಿದೆಯೇ ಅಥವಾ ದೇಶೀಯ ಪ್ರಯೋಗಾಲಯದಲ್ಲಿ ಇದೇ ರೀತಿಯ ವೈರಸ್‌ಗಳ ಸಂಶೋಧನೆಯಿಂದಾಗಿ ಹರಡಿದೆಯೇ ಎಂಬುವುದನ್ನು ನಿರ್ಧರಿಸಲು ಮಾಹಿತಿ ಹಂಚಿಕೊಳ್ಳಲು ಚೀನಾವನ್ನು ಒತ್ತಾಯಿಸುತ್ತಲೇ ಇದ್ದೇವೆ ಎಂದು ಹೇಳಿದೆ.

ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...