Homeಅಂತರಾಷ್ಟ್ರೀಯಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ಟ್ರಂಪ್ : ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿಯ ಭರವಸೆ

ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ಟ್ರಂಪ್ : ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿಯ ಭರವಸೆ

- Advertisement -
- Advertisement -

ಎರಡು ವರ್ಷಗಳ ನರಮೇಧದ ಬಳಿಕ, ಕತಾರ್, ಈಜಿಪ್ಟ್ ಮತ್ತು ಟರ್ಕಿಯ ನಾಯಕರೊಂದಿಗೆ ಸೋಮವಾರ (ಅ.13) ಗಾಝಾ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಧ್ಯಪ್ರಾಚ್ಯದಲ್ಲಿ ಶಾಶ್ವತ ಶಾಂತಿಯ ಭರವಸೆ ನೀಡಿದ್ದಾರೆ.

ಈಜಿಪ್ಟ್‌ನ ಶರ್ಮ್ ಅಲ್-ಶೇಖ್‌ನಲ್ಲಿ ನಡೆದ ‘ಗಾಝಾ ಶಾಂತಿ ಶೃಂಗ’ದಲ್ಲಿ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ವಿವಿಧ ರಾಷ್ಟ್ರಗಳ 25ಕ್ಕೂ ಹೆಚ್ಚು ಪ್ರಮುಖ ನಾಯಕರು ಈ ಶೃಂಗಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ಬಳಿಕ ಮಾತನಾಡಿದ ಟ್ರಂಪ್, “ಇವತ್ತಿನ ದಿನ ಮಧ್ಯಪ್ರಾಚ್ಯಕ್ಕೆ ಮಾತ್ರವಲ್ಲ, ಇಡೀ ಜಗತ್ತಿಗೆ ಅದ್ಭುತವಾದ ದಿನ’ ಎಂದು ಹೇಳಿದ್ದಾರೆ.

ಈ ದಾಖಲೆಯು ನೀತಿ, ನಿಯಮಗಳು ಸೇರಿದಂತೆ ಹಲವು ವಿಷಯಗಳನ್ನು ಒಳಗೊಂಡಿದೆ. ಈ ಹಂತಕ್ಕೆ ಬರಲು 3 ಸಾವಿರ ವರ್ಷಗಳು ಬೇಕಾಯಿತು ಎಂದು ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ಟ್ರಂಪ್ ಆವರ್ತಿಸಿ ಹೇಳಿದ್ದಾರೆ.

ಗಾಝಾ ಶಾಂತಿ ಶೃಂಗ ಅತ್ಯಂತ ಮಹತ್ವದ ಸಭೆ. ಇದರಲ್ಲಿ ಪಾಲ್ಗೊಂಡಿರುವುದೇ ಒಂದು ‘ಗೌರವ’ ಎಂದು ಟ್ರಂಪ್ ಶ್ಲಾಘಿಷಿಸಿದ್ದಾರೆ.

ಟ್ರಂಪ್ ಮತ್ತು ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್-ಸಿಸಿ ನೇತೃತ್ವದಲ್ಲಿ ನಡೆದ ಶೃಂಗ ಸಭೆಯಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ದೋಗಾನ್, ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್, ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ, ಜೋರ್ಡಾನ್ ರಾಜ ಅಬ್ದುಲ್ಲ, ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್, ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಬಹ್ರೇನ್ ರಾಜ ಹಮದ್ ಬಿನ್ ಈಸಾ ಅಲ್ ಖಲೀಫಾ ಮುಂತಾದ ವಿಶ್ವ ನಾಯಕರು ಭಾಗವಹಿಸಿದ್ದರು.

ಸಭೆಯಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್‌-ಸಿಸಿ ಅವರಿಂದ ಕೊನೆಯ ಕ್ಷಣದ ಆಹ್ವಾನ ಬಂದಿತ್ತು ಎನ್ನಲಾಗಿದೆ. ಹಾಗಾಗಿ, ಮೋದಿ ಬದಲಾಗಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಭಾರತವನ್ನು ಪ್ರತಿನಿಧಿಸಿದ್ದರು.

ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಈಜಿಪ್ಟ್ ಅಧ್ಯಕ್ಷ ಅಬ್ದುಲ್ ಫತ್ತಾಹ್ ಅಲ್-ಸಿಸಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ “ಈಜಿಪ್ಟ್‌ನ ಅತ್ಯುನ್ನತ ಗೌರವವಾದ ‘ಆರ್ಡರ್ ಆಫ್ ದಿ ನೈಲ್’ ನೀಡುವುದಾಗಿ ಹೇಳಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಸಿಸಿ, ಗಾಝಾ ಕದನ ವಿರಾಮಕ್ಕಾಗಿ ಟ್ರಂಪ್ ಅವರನ್ನು ಹೊಗಳಿದ್ದಾರೆ. “ಟ್ರಂಪ್ ಅವರೇ ನಿಮ್ಮ ಶ್ರೇಷ್ಠತೆಯೇ ಈ ಕದನ ವಿರಾಮ ಒಪ್ಪಂದಕ್ಕೆ ಬರಲು ಸಾಧ್ಯವಾಗಿದೆ. ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡುವ ಸಾಮರ್ಥ್ಯ ಕೇವಲ ನಿಮಗೆ ಮಾತ್ರ ಇದೆ” ಎಂದಿದ್ದಾರೆ.

ಗಾಝಾ ಕದನ ವಿರಾಮದ ಭಾಗವಾಗಿ ಹಮಾಸ್ 20 ಇಸ್ರೇಲಿ ಒತ್ತೆಯಾಳುಗಳನ್ನು ಸೋಮವಾರ ಬಿಡುಗಡೆ ಮಾಡಿದೆ. ಇದಕ್ಕೆ ಬದಲಾಗಿ 1968 ಪ್ಯಾಲೆಸ್ತೀನ್ ಬಂಧಿತರನ್ನು ಇಸ್ರೇಲ್ ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.

ಇಸ್ರೇಲ್‌-ಹಮಾಸ್‌ನಿಂದ ಬಂಧಿತರು, ಒತ್ತೆಯಾಳುಗಳ ಹಸ್ತಾಂತರ: ಇಸ್ರೇಲ್‌ ಸಂಸತ್‌ನಲ್ಲಿ ಟ್ರಂಪ್ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಬ್ರಾಹ್ಮಣರಂತೆ ಸಂಸ್ಕೃತ ಅಧ್ಯಯನ ಮಾಡಲು ಸಾಧ್ಯವಿಲ್ಲ..’ ಎಂದು ದಲಿತ ವಿದ್ಯಾರ್ಥಿಗೆ ಪಿಎಚ್‌ಡಿ ತಡೆಹಿಡಿದ ಡೀನ್

ಕೇರಳ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ (ಪಿಎಚ್‌ಡಿ) ವಿಪಿನ್ ವಿಜಯನ್ ಅವರು ಸಂಸ್ಕೃತ ವಿಭಾಗದ ಡೀನ್ ಡಾ. ಸಿ. ಎನ್. ವಿಜಯಕುಮಾರಿ ಅವರ ವಿರುದ್ಧ ಗಂಭೀರ ಆರೋಪ ಹೊರಿಸಿದ್ದಾರೆ. "ಡೀನ್ ಆರ್‌ಎಸ್‌ಎಸ್-ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ....

ಎಎಂಯು ಕ್ಯಾಂಪಸ್‌ನಲ್ಲಿ ಗುಂಡಿನದಾಳಿ; ಅಪಹರಣ ಪ್ರಯತ್ನದ ಆರೋಪ

ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ವಿದ್ಯಾರ್ಥಿ ಕಾರ್ಯಕರ್ತನೊಬ್ಬನ ಮೇಲೆ ನವೆಂಬರ್ 5, 2025 ರ ಸಂಜೆ ಗ್ರಂಥಾಲಯದ ಪಾರ್ಕಿಂಗ್ ಪ್ರದೇಶದಲ್ಲಿ ನಾಲ್ವರು ಅಪರಿಚಿತ ವ್ಯಕ್ತಿಗಳು ಸೇರಿದಂತೆ ಏಳು ಜನರ ಗುಂಪು ದಾಳಿ ನಡೆಸಿದೆ...

ಹೆದ್ದಾರಿ, ಶಾಲೆ, ಆಸ್ಪತ್ರೆ, ರೈಲು ನಿಲ್ದಾಣಗಳಿಂದ ಬೀದಿ ನಾಯಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಆದೇಶ

ನಾಯಿ ಕಡಿತದ ಘಟನೆಗಳಲ್ಲಿ ಆತಂಕಕಾರಿ ಏರಿಕೆಯನ್ನು ಉಲ್ಲೇಖಿಸಿ ಪ್ರಮುಖ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್, ಎಲ್ಲ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಸಾರ್ವಜನಿಕ ಕ್ರೀಡಾ ಸಂಕೀರ್ಣಗಳು, ಬಸ್ ನಿಲ್ದಾಣಗಳು, ಡಿಪೋಗಳು ಮತ್ತು ರೈಲು ನಿಲ್ದಾಣಗಳಿಗೆ...

ಉತ್ತರ ಪ್ರದೇಶ| ಆರ್‌ಪಿಎಫ್ ಕಸ್ಟಡಿಯಲ್ಲಿ ದಲಿತ ವ್ಯಕ್ತಿ ಸಾವು; ಚಿತ್ರಹಿಂಸೆ ಆರೋಪ ಮಾಡಿದ ಮೃತನ ಕುಟುಂಬ

ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ರೈಲ್ವೆ ರಕ್ಷಣಾ ಪಡೆ ಕಸ್ಟಡಿಯಲ್ಲಿ ದಲಿತ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಅವರ ಮೇಲೆ ಕಬ್ಬಿಣದ ರಾಡ್ ಮತ್ತು ಚಾಕುಗಳಿಂದ ಹಲ್ಲೆ ನಡೆಸಿರುವ ಆಳವಾದ ಗಾಯದ ಗುರುತುಗಳು ಇವೆ ಎಂದು...

ಜೆಎನ್‌ಯು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಎಡಪಂಥೀಯ ಒಕ್ಕೂಟ

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ನಾಲ್ಕೂ ಸ್ಥಾನಗಳಲ್ಲಿ ಎಡ ಪಕ್ಷಗಳ ವಿದ್ಯಾರ್ಥಿ ಸಂಘಟನೆಗಳು ಜಯ ಸಾಧಿಸಿವೆ. ಈ ಮೂಲಕ ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ...

‘ಚುನಾವಣೆ ಕಳ್ಳತನ’ದ ಮೂಲಕ ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ತೋರಿಸುತ್ತೇನೆ’: ರಾಹುಲ್ ಗಾಂಧಿ

ದೆಹಲಿ: ಚುನಾವಣಾ ಅಕ್ರಮಗಳನ್ನು ಬಹಿರಂಗಪಡಿಸುವ ಪ್ರಕ್ರಿಯೆಯನ್ನು ಮುಂದುವರಿಸುವುದಾಗಿ ಮತ್ತು ನರೇಂದ್ರ ಮೋದಿ "ಚುನಾವ್ ಚೋರಿ" (ಚುನಾವಣಾ ಕಳ್ಳತನ) ಮೂಲಕ ಹೇಗೆ ಪ್ರಧಾನಿಯಾದರು ಎಂಬುದನ್ನು ದೇಶದ ಯುವಜನರಿಗೆ ತೋರಿಸುವುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಹುಜನರನ್ನು ಬಾಲಿವುಡ್ ನಿರ್ಲಕ್ಷಿಸಿದೆ, ಶೇ.10-15 ರಷ್ಟಿರುವ ಪ್ರಬಲ ಜಾತಿಗಳ ಕಥೆ ಮಾತ್ರ ಹೇಳಿದೆ: ನೀರಜ್ ಘಯ್ವಾನ್

ನೀರಜ್ ಘಯ್ವಾನ್ ಅವರ ಇತ್ತೀಚಿನ ಬಾಲಿವುಡ್ ಚಿತ್ರ 'ಹೋಮ್‌ಬೌಂಡ್' ಆಧುನಿಕ ಭಾರತೀಯ ಸಮಾಜದಲ್ಲಿ ಇರುವ ಜಾತಿ ಅಸಮಾನತೆಗಳ ಮೇಲೆ ಬೆಳಕು ಚೆಲ್ಲುತ್ತದೆ. ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದಿನ ವರ್ಷ ಆಸ್ಕರ್‌ಗೆ...

ಬಿಹಾರದಲ್ಲೂ ಮತಗಳ್ಳತನ ಮಾಡಲು ಎನ್‌ಡಿಎ ಪ್ರಯತ್ನಿಸುತ್ತಿದೆ: ಪ್ರಿಯಾಂಕಾ ಗಾಂಧಿ

ಹರಿಯಾಣದಲ್ಲಿ ಮತಗಳ್ಳತನ ಮಾಡಿದಂತೆ ಬಿಹಾರದಲ್ಲೂ ಮಾಡಲು ಎನ್‌ಡಿಎ ತಯಾರಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.  ಸೀತಮ್‌ ಹಾರಿ ಹಾಗೂ ಚಂಪಾರಣ್ಯ ಜಿಲ್ಲೆಯಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ...

ಕಬ್ಬಿಗೆ ‘ಎಫ್‌ಆರ್‌ಪಿ’ ನಿರ್ಧಾರ ಮಾಡಿರುವುದು ಕೇಂದ್ರ ಸರ್ಕಾರ: ಸಿಎಂ ಸಿದ್ದರಾಮಯ್ಯ

ಕಬ್ಬಿಗೆ ಎಫ್‌ಆರ್‌ಪಿ (ನ್ಯಾಯಯುತ ಮತ್ತು ಲಾಭದಾಯಕ ಬೆಲೆ) ನಿರ್ಧರಿಸಿರುವುದು ಕೇಂದ್ರದ ಬಿಜೆಪಿ ಸರ್ಕಾರ. ಆದ್ದರಿಂದ, ರೈತರು ಯಾವುದೇ ಕಾರಣಕ್ಕೂ ರೈತ ದ್ರೋಹಿಯಾದ ರಾಜ್ಯದ ಬಿಜೆಪಿಯವರ ಮರಳು ಮಾತುಗಳಿಗೆ ಬಲಿಯಾಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬಿಹಾರ ವಿಧಾನಸಭಾ ಚುನಾವಣೆ 2025: ಮಧ್ಯಾಹ್ನ 3 ಗಂಟೆಯವರೆಗೂ ಶೇ. 53 ರಷ್ಟು ಮತದಾನ

ಪಾಟ್ನಾ: ತೀವ್ರ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆಯ ಮೊದಲ ಹಂತದ ಚುನಾವಣೆ ಪ್ರಗತಿಯಲ್ಲಿದ್ದು, ಕೇಂದ್ರ ಚುನಾವಣಾ ಆಯೋಗ ಹಂಚಿಕೊಂಡ ಮಾಹಿತಿಯ ಪ್ರಕಾರ ಮಧ್ಯಾಹ್ನ 3 ಗಂಟೆಯವರೆಗೂ ಶೇ.53.77 ರಷ್ಟು ಮತದಾನವಾಗಿದೆ. 18 ಜಿಲ್ಲೆಗಳ ಪೈಕಿ...