Homeಅಂತರಾಷ್ಟ್ರೀಯಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿ: ಒಬ್ಬನ ಮರಣ, ಹಲವರಿಗೆ ಗಾಯ

ಅಮೆರಿಕ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರ ದಾಳಿ: ಒಬ್ಬನ ಮರಣ, ಹಲವರಿಗೆ ಗಾಯ

ಒಬ್ಬ ಮಹಿಳೆಯ ಭುಜಕ್ಕೆ ಗುಂಡು ತಗುಲಿದ್ದು, ರಕ್ತಸಿಕ್ತ ಸ್ಥಿತಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -
- Advertisement -

ವಾಷಿಂಗ್ಟನ್‌ನ ಅಮೆರಿಕ ಸಂಸತ್ (ಕ್ಯಾಪಿಟಲ್) ಮೇಲೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅನಿರೀಕ್ಷಿತ ದಾಳಿ ನಡೆಸಿದ್ದು ಗಲಭೆ ಏರ್ಪಟ್ಟಿದೆ. ಗುಂಡಿನ ದಾಳಿಯಲ್ಲಿ ಒಬ್ಬ ಮೃತಮಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಲದೆ ಒಬ್ಬ ಮಹಿಳೆಯ ಭುಜಕ್ಕೆ ಗುಂಡು ತಗುಲಿದ್ದು, ರಕ್ತಸಿಕ್ತ ಸ್ಥಿತಿಯಲ್ಲಿ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ನವೆಂಬರ್ 03 ರಂದು ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾಗಿರುವ ಜೋ ಬೈಡನ್ ಅವರನ್ನು ಪ್ರಾಮಾಣೀಕರಿಸುವ ಕಾರ್ಯಕ್ರಮ ಇಂದು ನಿಗಧಿಯಾಗಿತ್ತು. ಅದಕ್ಕಾಗಿ ಹಲವಾರು ಶಾಸಕರು ಸೇರಿದ್ದರು. ಈ ವೇಳೆ ಸಂಸತ್ ಹೊರಗಿದ್ದ ಟ್ರಂಪ್ ಬೆಂಬಲಿಗರು ಬಲವಂತವಾಗಿ ಬ್ಯಾರಿಕೇಡ್ ಮುರಿದು ಒಳ ಪ್ರವೇಶಿಸಿದ್ದಾರೆ. ಇದರಂದ ಗೊಂದಲ ಉಂಟಾಗಿದ್ದು ಪೊಲೀಸರು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಗುಂಡಿನ ದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದಾನೆ.

ಇದರಿಂದ ಟ್ರಂಪ್ ಪರ ರಿಪಬ್ಲಿಕನ್ ಶಾಸಕರ ತಂಡವು ತಂದಿದ್ದ ಬಿಡೆನ್ ಅವರ ವಿಜಯದ ಬಗ್ಗೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸುತ್ತಿದ್ದ ಸೆನೆಟ್ ಮತ್ತು ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಅನಿರೀಕ್ಷಿತವಾಗಿ ಹಿಮ್ಮೆಟ್ಟಿತು.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಡೊನಾಲ್ಡ್ ಟ್ರಂಪ್ ವಿರುದ್ಧ 306-232ರಿಂದ ಅಂತರದಿಂದ ಜಯಗಳಿಸಿದ್ದಾರೆ. ಆದರೆ ಇದನ್ನು ಟ್ರಂಪ್ ಒಪ್ಪುತ್ತಿಲ್ಲ. ಹಾಗಾಗಿ ಟ್ರಂಪ್ ಬೆಂಬಲಿಗರು ಇಂದು ಸಂಸತ್ ಮೇಲೆ ದಾಳಿ ನಡೆಸಿದ್ದಾರೆ.

ಅಲ್ಲದೆ ಟ್ರಂಪ್ ಉಪಾಧ್ಯಕ್ಷ ಮೈಕ್ ಪೆನ್ಸ್ ಫಲಿತಾಂಶಗಳನ್ನು ಬದಲಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಯುಎಸ್ ಸಂವಿಧಾನವು ಚುನಾವಣೆಯ ಫಲಿತಾಂಶಗಳನ್ನು ಏಕಪಕ್ಷೀಯವಾಗಿ ರದ್ದುಗೊಳಿಸುವ ಅಧಿಕಾರವನ್ನು ಪೆನ್ಸ್‌ಗೆ ನೀಡುವುದಿಲ್ಲ, ಆದರೆ ಟ್ರಂಪ್‌ನಿಂದ ಅದನ್ನು ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ.


ಇದನ್ನೂ ಓದಿ : ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...