Homeಅಂತರಾಷ್ಟ್ರೀಯಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

- Advertisement -
- Advertisement -

“ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ ‘ನೊಬೆಲ್ ಶಾಂತಿ ಪ್ರಶಸ್ತಿ’ ಕೊಡಿ” ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ಮಾಡಿಸುತ್ತಾ ಸಾವಿರಾರು ಜೀವಗಳನ್ನು ಬಲಿ ಪಡೆಯುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಅಮೆರಿಕ ಕಾಂಗ್ರೆಸ್ (ಸಂಸತ್ತು) ಪ್ರಯತ್ನ ನಡೆಸುತ್ತಿದೆ.

ತಮ್ಮ ಅಧ್ಯಕ್ಷನ ಹುಚ್ಚುತನದಿಂದ ಅಮಾಯಗಳು ಜೀವಗಳು ಬಲಿಯಾಗುತ್ತಿರುವುದು ಅಮೆರಿಕದ ಕೆಲ ಜೀವಪರ ಸಂಸದರಿಗೆ ನೋವುಂಟು ಮಾಡಿದೆ. ಆದರೆ, ಅವರು ನೇರವಾಗಿ ಇದರ ವಿರುದ್ದ ಮಾತನಾಡಲೋ, ಇನ್ನೊಂದು ಸಂತ್ರಸ್ತ ದೇಶದ ಪರ ನಿಲ್ಲಲೋ ಸಾಧ್ಯವಾಗುತ್ತಿಲ್ಲ. ತಮ್ಮ ಮನಸ್ಸಿನಲ್ಲಿ ಮುಗ್ದ ಜೀವಗಳು ಬಲಿಯಾಗುತ್ತಿರುವ ಬೇಸರ ಇದ್ದರೂ..ಅಮೆರಿಕ ದೇಶದ ಜನಪ್ರತಿನಿಧಿಗಳಾಗಿರುವ ಅವರು, ಯುದ್ಧದ ಸಂದರ್ಭದಲ್ಲಿ ತಮ್ಮ ದೇಶದ ಪರ ನಿಲ್ಲಬೇಕಾದ ಅನಿವಾರ್ಯತೆ ಇದೆ.

ಹಾಗಾಗಿ, ಯುದ್ಧದಿಂದ ದೇಶದ ಆರ್ಥಿಕತೆ ಮೇಲೆ ಬೀರುವ ಪರಿಣಾಮ ಮತ್ತು ಕೆಲ ತಾಂತ್ರಿಕ ನೆಪಗಳನ್ನು ಮುಂದಿಟ್ಟುಕೊಂಡು ಟ್ರಂಪ್‌ ಅಧಿಕಾರಕ್ಕೆ ಕಡಿವಾಣ ಹಾಕುವ ಪ್ರಯತ್ನದಲ್ಲಿದ್ದಾರೆ.

ಅಮೆರಿಕದ ಸಂವಿಧಾನದ ಪ್ರಕಾರ, ಯುದ್ಧ ಘೋಷಿಸುವ ಅಧಿಕಾರ ಸಂಸತ್ತಿಗೆ ಇದೆ. ಆದರೆ, ಈಗ ಅಧ್ಯಕ್ಷರು ‘ರಾಷ್ಟ್ರೀಯ ಭದ್ರತೆ’ಯ ಹೆಸರಿನಲ್ಲಿ ದಾಳಿ ನಡೆಸಲು ತನಗಿರುವ ಅಧಿಕಾರವನ್ನು ದುರುಪಯೋಗಡಿಸಿಕೊಳ್ಳುತ್ತಿದ್ದಾರೆ ಎನ್ನುವುದು ಸಂಸದರ ಆರೋಪವಾಗಿದೆ. ಇದನ್ನು ವಿರೋಧಿಸಿ ಸಂಸದರು ಹೊಸ ನಿರ್ಣಯವನ್ನು ಮುಂದಿಟ್ಟಿದ್ದಾರೆ.

1973ರ ‘ವಾರ್ ಪವರ್ಸ್ ಆಕ್ಟ್’ ಅಡಿಯಲ್ಲಿ, ಅಧ್ಯಕ್ಷರು ಸೈನ್ಯವನ್ನು ಬಳಸಿದ 48 ಗಂಟೆಗಳ ಒಳಗೆ ಸಂಸತ್ತಿಗೆ ಮಾಹಿತಿ ನೀಡಬೇಕು ಮತ್ತು 60 ದಿನಗಳ ಒಳಗೆ ಅನುಮತಿ ಪಡೆಯಬೇಕು.

ಹಲವು ದಶಕಗಳ ಹಿಂದೆ (1991 ಮತ್ತು 2002 ರಲ್ಲಿ) ಇರಾಕ್ ಯುದ್ಧಕ್ಕಾಗಿ ನೀಡಲಾಗಿದ್ದ ‘ಮಿಲಿಟರಿ ಬಳಕೆಯ ಅಧಿಕಾರ’ವನ್ನು ಅಧ್ಯಕ್ಷರು ಈಗಲೂ ಬಳಸುತ್ತಿದ್ದಾರೆ. ಇದನ್ನು ರದ್ದುಗೊಳಿಸಲು ಸಂಸತ್ತು ಪ್ರಯತ್ನಿಸುತ್ತಿದೆ.

ಸಂಸತ್ತಿನ ಅನುಮತಿ ಇಲ್ಲದೆ ಇರಾನ್ ಸೇರಿದಂತೆ ಇತರ ಯಾವುದೇ ದೇಶಗಳ ವಿರುದ್ಧ ಯಾವುದೇ ಮಿಲಿಟರಿ ಕ್ರಮ ಕೈಗೊಳ್ಳದಂತೆ ಅಧ್ಯಕ್ಷರನ್ನು ತಡೆಯುವುದು ಇದರ ಉದ್ದೇಶವಾಗಿದೆ.

ಡೆಮೋಕ್ರಾಟ್ ಪಕ್ಷದ ನಾಯಕರು ಮತ್ತು ಕೆಲವು ರಿಪಬ್ಲಿಕನ್ ಸಂಸದರು (ಉದಾಹರಣೆಗೆ ಥಾಮಸ್ ಮಾಸ್ಸಿ) ಅಧ್ಯಕ್ಷರ ಅಧಿಕಾರಕ್ಕೆ ಲಗಾಮು ಹಾಕುವುದನ್ನು ಬೆಂಬಲಿಸುತ್ತಿದ್ದಾರೆ. ಅನಗತ್ಯ ಯುದ್ಧದಿಂದ ಅಮೆರಿಕದ ಆರ್ಥಿಕತೆ ಮತ್ತು ಸೈನಿಕರಿಗೆ ತೊಂದರೆಯಾಗುತ್ತದೆ ಎಂದು ಇವರು ಹೇಳಿದ್ದಾರೆ.

ಆದರೆ, ಅಧ್ಯಕ್ಷರ ಬೆಂಬಲಿಗರು ಇದನ್ನು ವಿರೋಧಿಸುತ್ತಿದ್ದಾರೆ. ಇರಾನ್‌ನ ಪರಮಾಣು ಬೆದರಿಕೆಯನ್ನು ತಡೆಯಲು ಅಧ್ಯಕ್ಷರಿಗೆ ಸಂಪೂರ್ಣ ಅಧಿಕಾರ ಇರಬೇಕು ಎಂಬುದು ಇವರ ವಾದವಾಗಿದೆ.

ಸಂಸತ್ತು ಅಧ್ಯಕ್ಷರ ಪರಮಾಧಿಕಾರದ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದರೂ, ಅಧ್ಯಕ್ಷರು ಅದನ್ನು ತಮ್ಮ ‘ವೀಟೋ’ ಅಧಿಕಾರ ಬಳಸಿ ತಡೆಹಿಡಿಯುವ ಸಾಧ್ಯತೆ ಹೆಚ್ಚಿದೆ. ಅದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಮಂಡಿಸಿದ ಜಂಟಿ ನಿರ್ಣಯದ ಮೇಲೆ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಚರ್ಚೆ ಪೂರ್ಣಗೊಂಡಿದೆ. ಈ ನಿರ್ಣಯವು ಇರಾನ್ ಮೇಲೆ ಯಾವುದೇ ಮುಂದಿನ ದಾಳಿ ನಡೆಸುವ ಮೊದಲು ಕಾಂಗ್ರೆಸ್‌ನಿಂದ ಹಣಕಾಸಿನ ಅನುಮೋದನೆ ಮತ್ತು ಅಧಿಕೃತ ಯುದ್ಧ ಘೋಷಣೆಯನ್ನು ಕಡ್ಡಾಯಗೊಳಿಸುತ್ತದೆ.

ವೈಟ್ ಹೌಸ್ ಈಗಾಗಲೇ ಈ ನಿರ್ಣಯದ ವಿರುದ್ಧ ಎಚ್ಚರಿಕೆ ನೀಡಿದೆ. ಒಂದು ವೇಳೆ ಸಂಸತ್ತು ಈ ಮಿತಿಯನ್ನು ಅಂಗೀಕರಿಸಿದರೂ, ಅಧ್ಯಕ್ಷರು ತಮ್ಮ ‘ವೀಟೋ’ ಅಧಿಕಾರ ಬಳಸಿ ಅದನ್ನು ರದ್ದುಗೊಳಿಸುವುದಾಗಿ ತಿಳಿಸಿದ್ದಾರೆ. ಇದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನ ಎರಡೂ ಸದನಗಳಲ್ಲಿ 2/3 ಬಹುಮತದ ಅಗತ್ಯವಿದೆ, ಇದು ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಕಷ್ಟಕರವಾಗಿದೆ.

ಕೆಲವು ಕಾನೂನು ತಜ್ಞರು ಮತ್ತು ಸಂಸದರು ಈ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ಕೊಂಡೊಯ್ಯಲು ಸಿದ್ಧತೆ ನಡೆಸುತ್ತಿದ್ದಾರೆ. “ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಸದೃಶ ಸನ್ನಿವೇಶ ಸೃಷ್ಟಿಸುವುದು ಸಂವಿಧಾನ ಬಾಹಿರ” ಎಂಬುದು ಇವರ ಆರೋಪವಾಗಿದೆ.

ಯುರೋಪಿಯನ್ ಒಕ್ಕೂಟ ಮತ್ತು ವಿಶ್ವಸಂಸ್ಥೆ ಅಮೆರಿಕದ ಈ ಆಂತರಿಕ ಬೆಳವಣಿಗೆಯನ್ನು ಗಮನಿಸುತ್ತಿವೆ. ಅಮೆರಿಕದ ಸಂಸತ್ತು ಅಧ್ಯಕ್ಷರ ಅಧಿಕಾರವನ್ನು ನಿಯಂತ್ರಿಸಿದರೆ ಮಾತ್ರ ಮಧ್ಯಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಯುದ್ಧವನ್ನು ತಪ್ಪಿಸಬಹುದು ಎಂಬುದು ಮಿತ್ರ ರಾಷ್ಟ್ರಗಳ ಅಭಿಪ್ರಾಯವಾಗಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಈ ವಾರವೇ ತಮ್ಮ ನಿರ್ಣಯದ ಮೇಲಿನ ಸಂಸತ್ತಿನಲ್ಲಿ ಮತದಾನಕ್ಕೆ ಒತ್ತಾಯಿಸುತ್ತಿದ್ದಾರೆ. ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಮುಂದುವರಿಸಬಾರದು ಎಂಬುದು ನಿರ್ಣಯದ ಉದ್ದೇಶ.

ಅಧ್ಯಕ್ಷರು ಈ ಯಾವುದೇ ಮಿತಿಯನ್ನು ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲ. ಅವರು ತಮ್ಮ ವಿಶೇಷ ಅಧಿಕಾರ ಬಳಸಿ ಈ ನಿರ್ಣಯವನ್ನು ತಡೆಹಿಡಿಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...