Homeಅಂತರಾಷ್ಟ್ರೀಯಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

- Advertisement -
- Advertisement -

“ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ ‘ನೊಬೆಲ್ ಶಾಂತಿ ಪ್ರಶಸ್ತಿ’ ಕೊಡಿ” ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ಮಾಡಿಸುತ್ತಾ ಸಾವಿರಾರು ಜೀವಗಳನ್ನು ಬಲಿ ಪಡೆಯುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಅಮೆರಿಕ ಕಾಂಗ್ರೆಸ್ (ಸಂಸತ್ತು) ಪ್ರಯತ್ನ ನಡೆಸುತ್ತಿದೆ.

ತಮ್ಮ ಅಧ್ಯಕ್ಷನ ಹುಚ್ಚುತನದಿಂದ ಅಮಾಯಗಳು ಜೀವಗಳು ಬಲಿಯಾಗುತ್ತಿರುವುದು ಅಮೆರಿಕದ ಕೆಲ ಜೀವಪರ ಸಂಸದರಿಗೆ ನೋವುಂಟು ಮಾಡಿದೆ. ಆದರೆ, ಅವರು ನೇರವಾಗಿ ಇದರ ವಿರುದ್ದ ಮಾತನಾಡಲೋ, ಇನ್ನೊಂದು ಸಂತ್ರಸ್ತ ದೇಶದ ಪರ ನಿಲ್ಲಲೋ ಸಾಧ್ಯವಾಗುತ್ತಿಲ್ಲ. ತಮ್ಮ ಮನಸ್ಸಿನಲ್ಲಿ ಮುಗ್ದ ಜೀವಗಳು ಬಲಿಯಾಗುತ್ತಿರುವ ಬೇಸರ ಇದ್ದರೂ..ಅಮೆರಿಕ ದೇಶದ ಜನಪ್ರತಿನಿಧಿಗಳಾಗಿರುವ ಅವರು, ಯುದ್ಧದ ಸಂದರ್ಭದಲ್ಲಿ ತಮ್ಮ ದೇಶದ ಪರ ನಿಲ್ಲಬೇಕಾದ ಅನಿವಾರ್ಯತೆ ಇದೆ.

ಹಾಗಾಗಿ, ಯುದ್ಧದಿಂದ ದೇಶದ ಆರ್ಥಿಕತೆ ಮೇಲೆ ಬೀರುವ ಪರಿಣಾಮ ಮತ್ತು ಕೆಲ ತಾಂತ್ರಿಕ ನೆಪಗಳನ್ನು ಮುಂದಿಟ್ಟುಕೊಂಡು ಟ್ರಂಪ್‌ ಅಧಿಕಾರಕ್ಕೆ ಕಡಿವಾಣ ಹಾಕುವ ಪ್ರಯತ್ನದಲ್ಲಿದ್ದಾರೆ.

ಅಮೆರಿಕದ ಸಂವಿಧಾನದ ಪ್ರಕಾರ, ಯುದ್ಧ ಘೋಷಿಸುವ ಅಧಿಕಾರ ಸಂಸತ್ತಿಗೆ ಇದೆ. ಆದರೆ, ಈಗ ಅಧ್ಯಕ್ಷರು ‘ರಾಷ್ಟ್ರೀಯ ಭದ್ರತೆ’ಯ ಹೆಸರಿನಲ್ಲಿ ದಾಳಿ ನಡೆಸಲು ತನಗಿರುವ ಅಧಿಕಾರವನ್ನು ದುರುಪಯೋಗಡಿಸಿಕೊಳ್ಳುತ್ತಿದ್ದಾರೆ ಎನ್ನುವುದು ಸಂಸದರ ಆರೋಪವಾಗಿದೆ. ಇದನ್ನು ವಿರೋಧಿಸಿ ಸಂಸದರು ಹೊಸ ನಿರ್ಣಯವನ್ನು ಮುಂದಿಟ್ಟಿದ್ದಾರೆ.

1973ರ ‘ವಾರ್ ಪವರ್ಸ್ ಆಕ್ಟ್’ ಅಡಿಯಲ್ಲಿ, ಅಧ್ಯಕ್ಷರು ಸೈನ್ಯವನ್ನು ಬಳಸಿದ 48 ಗಂಟೆಗಳ ಒಳಗೆ ಸಂಸತ್ತಿಗೆ ಮಾಹಿತಿ ನೀಡಬೇಕು ಮತ್ತು 60 ದಿನಗಳ ಒಳಗೆ ಅನುಮತಿ ಪಡೆಯಬೇಕು.

ಹಲವು ದಶಕಗಳ ಹಿಂದೆ (1991 ಮತ್ತು 2002 ರಲ್ಲಿ) ಇರಾಕ್ ಯುದ್ಧಕ್ಕಾಗಿ ನೀಡಲಾಗಿದ್ದ ‘ಮಿಲಿಟರಿ ಬಳಕೆಯ ಅಧಿಕಾರ’ವನ್ನು ಅಧ್ಯಕ್ಷರು ಈಗಲೂ ಬಳಸುತ್ತಿದ್ದಾರೆ. ಇದನ್ನು ರದ್ದುಗೊಳಿಸಲು ಸಂಸತ್ತು ಪ್ರಯತ್ನಿಸುತ್ತಿದೆ.

ಸಂಸತ್ತಿನ ಅನುಮತಿ ಇಲ್ಲದೆ ಇರಾನ್ ಸೇರಿದಂತೆ ಇತರ ಯಾವುದೇ ದೇಶಗಳ ವಿರುದ್ಧ ಯಾವುದೇ ಮಿಲಿಟರಿ ಕ್ರಮ ಕೈಗೊಳ್ಳದಂತೆ ಅಧ್ಯಕ್ಷರನ್ನು ತಡೆಯುವುದು ಇದರ ಉದ್ದೇಶವಾಗಿದೆ.

ಡೆಮೋಕ್ರಾಟ್ ಪಕ್ಷದ ನಾಯಕರು ಮತ್ತು ಕೆಲವು ರಿಪಬ್ಲಿಕನ್ ಸಂಸದರು (ಉದಾಹರಣೆಗೆ ಥಾಮಸ್ ಮಾಸ್ಸಿ) ಅಧ್ಯಕ್ಷರ ಅಧಿಕಾರಕ್ಕೆ ಲಗಾಮು ಹಾಕುವುದನ್ನು ಬೆಂಬಲಿಸುತ್ತಿದ್ದಾರೆ. ಅನಗತ್ಯ ಯುದ್ಧದಿಂದ ಅಮೆರಿಕದ ಆರ್ಥಿಕತೆ ಮತ್ತು ಸೈನಿಕರಿಗೆ ತೊಂದರೆಯಾಗುತ್ತದೆ ಎಂದು ಇವರು ಹೇಳಿದ್ದಾರೆ.

ಆದರೆ, ಅಧ್ಯಕ್ಷರ ಬೆಂಬಲಿಗರು ಇದನ್ನು ವಿರೋಧಿಸುತ್ತಿದ್ದಾರೆ. ಇರಾನ್‌ನ ಪರಮಾಣು ಬೆದರಿಕೆಯನ್ನು ತಡೆಯಲು ಅಧ್ಯಕ್ಷರಿಗೆ ಸಂಪೂರ್ಣ ಅಧಿಕಾರ ಇರಬೇಕು ಎಂಬುದು ಇವರ ವಾದವಾಗಿದೆ.

ಸಂಸತ್ತು ಅಧ್ಯಕ್ಷರ ಪರಮಾಧಿಕಾರದ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದರೂ, ಅಧ್ಯಕ್ಷರು ಅದನ್ನು ತಮ್ಮ ‘ವೀಟೋ’ ಅಧಿಕಾರ ಬಳಸಿ ತಡೆಹಿಡಿಯುವ ಸಾಧ್ಯತೆ ಹೆಚ್ಚಿದೆ. ಅದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಮಂಡಿಸಿದ ಜಂಟಿ ನಿರ್ಣಯದ ಮೇಲೆ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಚರ್ಚೆ ಪೂರ್ಣಗೊಂಡಿದೆ. ಈ ನಿರ್ಣಯವು ಇರಾನ್ ಮೇಲೆ ಯಾವುದೇ ಮುಂದಿನ ದಾಳಿ ನಡೆಸುವ ಮೊದಲು ಕಾಂಗ್ರೆಸ್‌ನಿಂದ ಹಣಕಾಸಿನ ಅನುಮೋದನೆ ಮತ್ತು ಅಧಿಕೃತ ಯುದ್ಧ ಘೋಷಣೆಯನ್ನು ಕಡ್ಡಾಯಗೊಳಿಸುತ್ತದೆ.

ವೈಟ್ ಹೌಸ್ ಈಗಾಗಲೇ ಈ ನಿರ್ಣಯದ ವಿರುದ್ಧ ಎಚ್ಚರಿಕೆ ನೀಡಿದೆ. ಒಂದು ವೇಳೆ ಸಂಸತ್ತು ಈ ಮಿತಿಯನ್ನು ಅಂಗೀಕರಿಸಿದರೂ, ಅಧ್ಯಕ್ಷರು ತಮ್ಮ ‘ವೀಟೋ’ ಅಧಿಕಾರ ಬಳಸಿ ಅದನ್ನು ರದ್ದುಗೊಳಿಸುವುದಾಗಿ ತಿಳಿಸಿದ್ದಾರೆ. ಇದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನ ಎರಡೂ ಸದನಗಳಲ್ಲಿ 2/3 ಬಹುಮತದ ಅಗತ್ಯವಿದೆ, ಇದು ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಕಷ್ಟಕರವಾಗಿದೆ.

ಕೆಲವು ಕಾನೂನು ತಜ್ಞರು ಮತ್ತು ಸಂಸದರು ಈ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ಕೊಂಡೊಯ್ಯಲು ಸಿದ್ಧತೆ ನಡೆಸುತ್ತಿದ್ದಾರೆ. “ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಸದೃಶ ಸನ್ನಿವೇಶ ಸೃಷ್ಟಿಸುವುದು ಸಂವಿಧಾನ ಬಾಹಿರ” ಎಂಬುದು ಇವರ ಆರೋಪವಾಗಿದೆ.

ಯುರೋಪಿಯನ್ ಒಕ್ಕೂಟ ಮತ್ತು ವಿಶ್ವಸಂಸ್ಥೆ ಅಮೆರಿಕದ ಈ ಆಂತರಿಕ ಬೆಳವಣಿಗೆಯನ್ನು ಗಮನಿಸುತ್ತಿವೆ. ಅಮೆರಿಕದ ಸಂಸತ್ತು ಅಧ್ಯಕ್ಷರ ಅಧಿಕಾರವನ್ನು ನಿಯಂತ್ರಿಸಿದರೆ ಮಾತ್ರ ಮಧ್ಯಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಯುದ್ಧವನ್ನು ತಪ್ಪಿಸಬಹುದು ಎಂಬುದು ಮಿತ್ರ ರಾಷ್ಟ್ರಗಳ ಅಭಿಪ್ರಾಯವಾಗಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಈ ವಾರವೇ ತಮ್ಮ ನಿರ್ಣಯದ ಮೇಲಿನ ಸಂಸತ್ತಿನಲ್ಲಿ ಮತದಾನಕ್ಕೆ ಒತ್ತಾಯಿಸುತ್ತಿದ್ದಾರೆ. ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಮುಂದುವರಿಸಬಾರದು ಎಂಬುದು ನಿರ್ಣಯದ ಉದ್ದೇಶ.

ಅಧ್ಯಕ್ಷರು ಈ ಯಾವುದೇ ಮಿತಿಯನ್ನು ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲ. ಅವರು ತಮ್ಮ ವಿಶೇಷ ಅಧಿಕಾರ ಬಳಸಿ ಈ ನಿರ್ಣಯವನ್ನು ತಡೆಹಿಡಿಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...