Homeಅಂತರಾಷ್ಟ್ರೀಯಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

- Advertisement -
- Advertisement -

“ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ ‘ನೊಬೆಲ್ ಶಾಂತಿ ಪ್ರಶಸ್ತಿ’ ಕೊಡಿ” ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ಮಾಡಿಸುತ್ತಾ ಸಾವಿರಾರು ಜೀವಗಳನ್ನು ಬಲಿ ಪಡೆಯುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಅಮೆರಿಕ ಕಾಂಗ್ರೆಸ್ (ಸಂಸತ್ತು) ಪ್ರಯತ್ನ ನಡೆಸುತ್ತಿದೆ.

ತಮ್ಮ ಅಧ್ಯಕ್ಷನ ಹುಚ್ಚುತನದಿಂದ ಅಮಾಯಗಳು ಜೀವಗಳು ಬಲಿಯಾಗುತ್ತಿರುವುದು ಅಮೆರಿಕದ ಕೆಲ ಜೀವಪರ ಸಂಸದರಿಗೆ ನೋವುಂಟು ಮಾಡಿದೆ. ಆದರೆ, ಅವರು ನೇರವಾಗಿ ಇದರ ವಿರುದ್ದ ಮಾತನಾಡಲೋ, ಇನ್ನೊಂದು ಸಂತ್ರಸ್ತ ದೇಶದ ಪರ ನಿಲ್ಲಲೋ ಸಾಧ್ಯವಾಗುತ್ತಿಲ್ಲ. ತಮ್ಮ ಮನಸ್ಸಿನಲ್ಲಿ ಮುಗ್ದ ಜೀವಗಳು ಬಲಿಯಾಗುತ್ತಿರುವ ಬೇಸರ ಇದ್ದರೂ..ಅಮೆರಿಕ ದೇಶದ ಜನಪ್ರತಿನಿಧಿಗಳಾಗಿರುವ ಅವರು, ಯುದ್ಧದ ಸಂದರ್ಭದಲ್ಲಿ ತಮ್ಮ ದೇಶದ ಪರ ನಿಲ್ಲಬೇಕಾದ ಅನಿವಾರ್ಯತೆ ಇದೆ.

ಹಾಗಾಗಿ, ಯುದ್ಧದಿಂದ ದೇಶದ ಆರ್ಥಿಕತೆ ಮೇಲೆ ಬೀರುವ ಪರಿಣಾಮ ಮತ್ತು ಕೆಲ ತಾಂತ್ರಿಕ ನೆಪಗಳನ್ನು ಮುಂದಿಟ್ಟುಕೊಂಡು ಟ್ರಂಪ್‌ ಅಧಿಕಾರಕ್ಕೆ ಕಡಿವಾಣ ಹಾಕುವ ಪ್ರಯತ್ನದಲ್ಲಿದ್ದಾರೆ.

ಅಮೆರಿಕದ ಸಂವಿಧಾನದ ಪ್ರಕಾರ, ಯುದ್ಧ ಘೋಷಿಸುವ ಅಧಿಕಾರ ಸಂಸತ್ತಿಗೆ ಇದೆ. ಆದರೆ, ಈಗ ಅಧ್ಯಕ್ಷರು ‘ರಾಷ್ಟ್ರೀಯ ಭದ್ರತೆ’ಯ ಹೆಸರಿನಲ್ಲಿ ದಾಳಿ ನಡೆಸಲು ತನಗಿರುವ ಅಧಿಕಾರವನ್ನು ದುರುಪಯೋಗಡಿಸಿಕೊಳ್ಳುತ್ತಿದ್ದಾರೆ ಎನ್ನುವುದು ಸಂಸದರ ಆರೋಪವಾಗಿದೆ. ಇದನ್ನು ವಿರೋಧಿಸಿ ಸಂಸದರು ಹೊಸ ನಿರ್ಣಯವನ್ನು ಮುಂದಿಟ್ಟಿದ್ದಾರೆ.

1973ರ ‘ವಾರ್ ಪವರ್ಸ್ ಆಕ್ಟ್’ ಅಡಿಯಲ್ಲಿ, ಅಧ್ಯಕ್ಷರು ಸೈನ್ಯವನ್ನು ಬಳಸಿದ 48 ಗಂಟೆಗಳ ಒಳಗೆ ಸಂಸತ್ತಿಗೆ ಮಾಹಿತಿ ನೀಡಬೇಕು ಮತ್ತು 60 ದಿನಗಳ ಒಳಗೆ ಅನುಮತಿ ಪಡೆಯಬೇಕು.

ಹಲವು ದಶಕಗಳ ಹಿಂದೆ (1991 ಮತ್ತು 2002 ರಲ್ಲಿ) ಇರಾಕ್ ಯುದ್ಧಕ್ಕಾಗಿ ನೀಡಲಾಗಿದ್ದ ‘ಮಿಲಿಟರಿ ಬಳಕೆಯ ಅಧಿಕಾರ’ವನ್ನು ಅಧ್ಯಕ್ಷರು ಈಗಲೂ ಬಳಸುತ್ತಿದ್ದಾರೆ. ಇದನ್ನು ರದ್ದುಗೊಳಿಸಲು ಸಂಸತ್ತು ಪ್ರಯತ್ನಿಸುತ್ತಿದೆ.

ಸಂಸತ್ತಿನ ಅನುಮತಿ ಇಲ್ಲದೆ ಇರಾನ್ ಸೇರಿದಂತೆ ಇತರ ಯಾವುದೇ ದೇಶಗಳ ವಿರುದ್ಧ ಯಾವುದೇ ಮಿಲಿಟರಿ ಕ್ರಮ ಕೈಗೊಳ್ಳದಂತೆ ಅಧ್ಯಕ್ಷರನ್ನು ತಡೆಯುವುದು ಇದರ ಉದ್ದೇಶವಾಗಿದೆ.

ಡೆಮೋಕ್ರಾಟ್ ಪಕ್ಷದ ನಾಯಕರು ಮತ್ತು ಕೆಲವು ರಿಪಬ್ಲಿಕನ್ ಸಂಸದರು (ಉದಾಹರಣೆಗೆ ಥಾಮಸ್ ಮಾಸ್ಸಿ) ಅಧ್ಯಕ್ಷರ ಅಧಿಕಾರಕ್ಕೆ ಲಗಾಮು ಹಾಕುವುದನ್ನು ಬೆಂಬಲಿಸುತ್ತಿದ್ದಾರೆ. ಅನಗತ್ಯ ಯುದ್ಧದಿಂದ ಅಮೆರಿಕದ ಆರ್ಥಿಕತೆ ಮತ್ತು ಸೈನಿಕರಿಗೆ ತೊಂದರೆಯಾಗುತ್ತದೆ ಎಂದು ಇವರು ಹೇಳಿದ್ದಾರೆ.

ಆದರೆ, ಅಧ್ಯಕ್ಷರ ಬೆಂಬಲಿಗರು ಇದನ್ನು ವಿರೋಧಿಸುತ್ತಿದ್ದಾರೆ. ಇರಾನ್‌ನ ಪರಮಾಣು ಬೆದರಿಕೆಯನ್ನು ತಡೆಯಲು ಅಧ್ಯಕ್ಷರಿಗೆ ಸಂಪೂರ್ಣ ಅಧಿಕಾರ ಇರಬೇಕು ಎಂಬುದು ಇವರ ವಾದವಾಗಿದೆ.

ಸಂಸತ್ತು ಅಧ್ಯಕ್ಷರ ಪರಮಾಧಿಕಾರದ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದರೂ, ಅಧ್ಯಕ್ಷರು ಅದನ್ನು ತಮ್ಮ ‘ವೀಟೋ’ ಅಧಿಕಾರ ಬಳಸಿ ತಡೆಹಿಡಿಯುವ ಸಾಧ್ಯತೆ ಹೆಚ್ಚಿದೆ. ಅದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಮಂಡಿಸಿದ ಜಂಟಿ ನಿರ್ಣಯದ ಮೇಲೆ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಚರ್ಚೆ ಪೂರ್ಣಗೊಂಡಿದೆ. ಈ ನಿರ್ಣಯವು ಇರಾನ್ ಮೇಲೆ ಯಾವುದೇ ಮುಂದಿನ ದಾಳಿ ನಡೆಸುವ ಮೊದಲು ಕಾಂಗ್ರೆಸ್‌ನಿಂದ ಹಣಕಾಸಿನ ಅನುಮೋದನೆ ಮತ್ತು ಅಧಿಕೃತ ಯುದ್ಧ ಘೋಷಣೆಯನ್ನು ಕಡ್ಡಾಯಗೊಳಿಸುತ್ತದೆ.

ವೈಟ್ ಹೌಸ್ ಈಗಾಗಲೇ ಈ ನಿರ್ಣಯದ ವಿರುದ್ಧ ಎಚ್ಚರಿಕೆ ನೀಡಿದೆ. ಒಂದು ವೇಳೆ ಸಂಸತ್ತು ಈ ಮಿತಿಯನ್ನು ಅಂಗೀಕರಿಸಿದರೂ, ಅಧ್ಯಕ್ಷರು ತಮ್ಮ ‘ವೀಟೋ’ ಅಧಿಕಾರ ಬಳಸಿ ಅದನ್ನು ರದ್ದುಗೊಳಿಸುವುದಾಗಿ ತಿಳಿಸಿದ್ದಾರೆ. ಇದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನ ಎರಡೂ ಸದನಗಳಲ್ಲಿ 2/3 ಬಹುಮತದ ಅಗತ್ಯವಿದೆ, ಇದು ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಕಷ್ಟಕರವಾಗಿದೆ.

ಕೆಲವು ಕಾನೂನು ತಜ್ಞರು ಮತ್ತು ಸಂಸದರು ಈ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ಕೊಂಡೊಯ್ಯಲು ಸಿದ್ಧತೆ ನಡೆಸುತ್ತಿದ್ದಾರೆ. “ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಸದೃಶ ಸನ್ನಿವೇಶ ಸೃಷ್ಟಿಸುವುದು ಸಂವಿಧಾನ ಬಾಹಿರ” ಎಂಬುದು ಇವರ ಆರೋಪವಾಗಿದೆ.

ಯುರೋಪಿಯನ್ ಒಕ್ಕೂಟ ಮತ್ತು ವಿಶ್ವಸಂಸ್ಥೆ ಅಮೆರಿಕದ ಈ ಆಂತರಿಕ ಬೆಳವಣಿಗೆಯನ್ನು ಗಮನಿಸುತ್ತಿವೆ. ಅಮೆರಿಕದ ಸಂಸತ್ತು ಅಧ್ಯಕ್ಷರ ಅಧಿಕಾರವನ್ನು ನಿಯಂತ್ರಿಸಿದರೆ ಮಾತ್ರ ಮಧ್ಯಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಯುದ್ಧವನ್ನು ತಪ್ಪಿಸಬಹುದು ಎಂಬುದು ಮಿತ್ರ ರಾಷ್ಟ್ರಗಳ ಅಭಿಪ್ರಾಯವಾಗಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಈ ವಾರವೇ ತಮ್ಮ ನಿರ್ಣಯದ ಮೇಲಿನ ಸಂಸತ್ತಿನಲ್ಲಿ ಮತದಾನಕ್ಕೆ ಒತ್ತಾಯಿಸುತ್ತಿದ್ದಾರೆ. ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಮುಂದುವರಿಸಬಾರದು ಎಂಬುದು ನಿರ್ಣಯದ ಉದ್ದೇಶ.

ಅಧ್ಯಕ್ಷರು ಈ ಯಾವುದೇ ಮಿತಿಯನ್ನು ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲ. ಅವರು ತಮ್ಮ ವಿಶೇಷ ಅಧಿಕಾರ ಬಳಸಿ ಈ ನಿರ್ಣಯವನ್ನು ತಡೆಹಿಡಿಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...