Homeಅಂತರಾಷ್ಟ್ರೀಯಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

- Advertisement -
- Advertisement -

“ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ ‘ನೊಬೆಲ್ ಶಾಂತಿ ಪ್ರಶಸ್ತಿ’ ಕೊಡಿ” ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ಮಾಡಿಸುತ್ತಾ ಸಾವಿರಾರು ಜೀವಗಳನ್ನು ಬಲಿ ಪಡೆಯುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಅಮೆರಿಕ ಕಾಂಗ್ರೆಸ್ (ಸಂಸತ್ತು) ಪ್ರಯತ್ನ ನಡೆಸುತ್ತಿದೆ.

ತಮ್ಮ ಅಧ್ಯಕ್ಷನ ಹುಚ್ಚುತನದಿಂದ ಅಮಾಯಗಳು ಜೀವಗಳು ಬಲಿಯಾಗುತ್ತಿರುವುದು ಅಮೆರಿಕದ ಕೆಲ ಜೀವಪರ ಸಂಸದರಿಗೆ ನೋವುಂಟು ಮಾಡಿದೆ. ಆದರೆ, ಅವರು ನೇರವಾಗಿ ಇದರ ವಿರುದ್ದ ಮಾತನಾಡಲೋ, ಇನ್ನೊಂದು ಸಂತ್ರಸ್ತ ದೇಶದ ಪರ ನಿಲ್ಲಲೋ ಸಾಧ್ಯವಾಗುತ್ತಿಲ್ಲ. ತಮ್ಮ ಮನಸ್ಸಿನಲ್ಲಿ ಮುಗ್ದ ಜೀವಗಳು ಬಲಿಯಾಗುತ್ತಿರುವ ಬೇಸರ ಇದ್ದರೂ..ಅಮೆರಿಕ ದೇಶದ ಜನಪ್ರತಿನಿಧಿಗಳಾಗಿರುವ ಅವರು, ಯುದ್ಧದ ಸಂದರ್ಭದಲ್ಲಿ ತಮ್ಮ ದೇಶದ ಪರ ನಿಲ್ಲಬೇಕಾದ ಅನಿವಾರ್ಯತೆ ಇದೆ.

ಹಾಗಾಗಿ, ಯುದ್ಧದಿಂದ ದೇಶದ ಆರ್ಥಿಕತೆ ಮೇಲೆ ಬೀರುವ ಪರಿಣಾಮ ಮತ್ತು ಕೆಲ ತಾಂತ್ರಿಕ ನೆಪಗಳನ್ನು ಮುಂದಿಟ್ಟುಕೊಂಡು ಟ್ರಂಪ್‌ ಅಧಿಕಾರಕ್ಕೆ ಕಡಿವಾಣ ಹಾಕುವ ಪ್ರಯತ್ನದಲ್ಲಿದ್ದಾರೆ.

ಅಮೆರಿಕದ ಸಂವಿಧಾನದ ಪ್ರಕಾರ, ಯುದ್ಧ ಘೋಷಿಸುವ ಅಧಿಕಾರ ಸಂಸತ್ತಿಗೆ ಇದೆ. ಆದರೆ, ಈಗ ಅಧ್ಯಕ್ಷರು ‘ರಾಷ್ಟ್ರೀಯ ಭದ್ರತೆ’ಯ ಹೆಸರಿನಲ್ಲಿ ದಾಳಿ ನಡೆಸಲು ತನಗಿರುವ ಅಧಿಕಾರವನ್ನು ದುರುಪಯೋಗಡಿಸಿಕೊಳ್ಳುತ್ತಿದ್ದಾರೆ ಎನ್ನುವುದು ಸಂಸದರ ಆರೋಪವಾಗಿದೆ. ಇದನ್ನು ವಿರೋಧಿಸಿ ಸಂಸದರು ಹೊಸ ನಿರ್ಣಯವನ್ನು ಮುಂದಿಟ್ಟಿದ್ದಾರೆ.

1973ರ ‘ವಾರ್ ಪವರ್ಸ್ ಆಕ್ಟ್’ ಅಡಿಯಲ್ಲಿ, ಅಧ್ಯಕ್ಷರು ಸೈನ್ಯವನ್ನು ಬಳಸಿದ 48 ಗಂಟೆಗಳ ಒಳಗೆ ಸಂಸತ್ತಿಗೆ ಮಾಹಿತಿ ನೀಡಬೇಕು ಮತ್ತು 60 ದಿನಗಳ ಒಳಗೆ ಅನುಮತಿ ಪಡೆಯಬೇಕು.

ಹಲವು ದಶಕಗಳ ಹಿಂದೆ (1991 ಮತ್ತು 2002 ರಲ್ಲಿ) ಇರಾಕ್ ಯುದ್ಧಕ್ಕಾಗಿ ನೀಡಲಾಗಿದ್ದ ‘ಮಿಲಿಟರಿ ಬಳಕೆಯ ಅಧಿಕಾರ’ವನ್ನು ಅಧ್ಯಕ್ಷರು ಈಗಲೂ ಬಳಸುತ್ತಿದ್ದಾರೆ. ಇದನ್ನು ರದ್ದುಗೊಳಿಸಲು ಸಂಸತ್ತು ಪ್ರಯತ್ನಿಸುತ್ತಿದೆ.

ಸಂಸತ್ತಿನ ಅನುಮತಿ ಇಲ್ಲದೆ ಇರಾನ್ ಸೇರಿದಂತೆ ಇತರ ಯಾವುದೇ ದೇಶಗಳ ವಿರುದ್ಧ ಯಾವುದೇ ಮಿಲಿಟರಿ ಕ್ರಮ ಕೈಗೊಳ್ಳದಂತೆ ಅಧ್ಯಕ್ಷರನ್ನು ತಡೆಯುವುದು ಇದರ ಉದ್ದೇಶವಾಗಿದೆ.

ಡೆಮೋಕ್ರಾಟ್ ಪಕ್ಷದ ನಾಯಕರು ಮತ್ತು ಕೆಲವು ರಿಪಬ್ಲಿಕನ್ ಸಂಸದರು (ಉದಾಹರಣೆಗೆ ಥಾಮಸ್ ಮಾಸ್ಸಿ) ಅಧ್ಯಕ್ಷರ ಅಧಿಕಾರಕ್ಕೆ ಲಗಾಮು ಹಾಕುವುದನ್ನು ಬೆಂಬಲಿಸುತ್ತಿದ್ದಾರೆ. ಅನಗತ್ಯ ಯುದ್ಧದಿಂದ ಅಮೆರಿಕದ ಆರ್ಥಿಕತೆ ಮತ್ತು ಸೈನಿಕರಿಗೆ ತೊಂದರೆಯಾಗುತ್ತದೆ ಎಂದು ಇವರು ಹೇಳಿದ್ದಾರೆ.

ಆದರೆ, ಅಧ್ಯಕ್ಷರ ಬೆಂಬಲಿಗರು ಇದನ್ನು ವಿರೋಧಿಸುತ್ತಿದ್ದಾರೆ. ಇರಾನ್‌ನ ಪರಮಾಣು ಬೆದರಿಕೆಯನ್ನು ತಡೆಯಲು ಅಧ್ಯಕ್ಷರಿಗೆ ಸಂಪೂರ್ಣ ಅಧಿಕಾರ ಇರಬೇಕು ಎಂಬುದು ಇವರ ವಾದವಾಗಿದೆ.

ಸಂಸತ್ತು ಅಧ್ಯಕ್ಷರ ಪರಮಾಧಿಕಾರದ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದರೂ, ಅಧ್ಯಕ್ಷರು ಅದನ್ನು ತಮ್ಮ ‘ವೀಟೋ’ ಅಧಿಕಾರ ಬಳಸಿ ತಡೆಹಿಡಿಯುವ ಸಾಧ್ಯತೆ ಹೆಚ್ಚಿದೆ. ಅದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಮಂಡಿಸಿದ ಜಂಟಿ ನಿರ್ಣಯದ ಮೇಲೆ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಚರ್ಚೆ ಪೂರ್ಣಗೊಂಡಿದೆ. ಈ ನಿರ್ಣಯವು ಇರಾನ್ ಮೇಲೆ ಯಾವುದೇ ಮುಂದಿನ ದಾಳಿ ನಡೆಸುವ ಮೊದಲು ಕಾಂಗ್ರೆಸ್‌ನಿಂದ ಹಣಕಾಸಿನ ಅನುಮೋದನೆ ಮತ್ತು ಅಧಿಕೃತ ಯುದ್ಧ ಘೋಷಣೆಯನ್ನು ಕಡ್ಡಾಯಗೊಳಿಸುತ್ತದೆ.

ವೈಟ್ ಹೌಸ್ ಈಗಾಗಲೇ ಈ ನಿರ್ಣಯದ ವಿರುದ್ಧ ಎಚ್ಚರಿಕೆ ನೀಡಿದೆ. ಒಂದು ವೇಳೆ ಸಂಸತ್ತು ಈ ಮಿತಿಯನ್ನು ಅಂಗೀಕರಿಸಿದರೂ, ಅಧ್ಯಕ್ಷರು ತಮ್ಮ ‘ವೀಟೋ’ ಅಧಿಕಾರ ಬಳಸಿ ಅದನ್ನು ರದ್ದುಗೊಳಿಸುವುದಾಗಿ ತಿಳಿಸಿದ್ದಾರೆ. ಇದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನ ಎರಡೂ ಸದನಗಳಲ್ಲಿ 2/3 ಬಹುಮತದ ಅಗತ್ಯವಿದೆ, ಇದು ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಕಷ್ಟಕರವಾಗಿದೆ.

ಕೆಲವು ಕಾನೂನು ತಜ್ಞರು ಮತ್ತು ಸಂಸದರು ಈ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ಕೊಂಡೊಯ್ಯಲು ಸಿದ್ಧತೆ ನಡೆಸುತ್ತಿದ್ದಾರೆ. “ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಸದೃಶ ಸನ್ನಿವೇಶ ಸೃಷ್ಟಿಸುವುದು ಸಂವಿಧಾನ ಬಾಹಿರ” ಎಂಬುದು ಇವರ ಆರೋಪವಾಗಿದೆ.

ಯುರೋಪಿಯನ್ ಒಕ್ಕೂಟ ಮತ್ತು ವಿಶ್ವಸಂಸ್ಥೆ ಅಮೆರಿಕದ ಈ ಆಂತರಿಕ ಬೆಳವಣಿಗೆಯನ್ನು ಗಮನಿಸುತ್ತಿವೆ. ಅಮೆರಿಕದ ಸಂಸತ್ತು ಅಧ್ಯಕ್ಷರ ಅಧಿಕಾರವನ್ನು ನಿಯಂತ್ರಿಸಿದರೆ ಮಾತ್ರ ಮಧ್ಯಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಯುದ್ಧವನ್ನು ತಪ್ಪಿಸಬಹುದು ಎಂಬುದು ಮಿತ್ರ ರಾಷ್ಟ್ರಗಳ ಅಭಿಪ್ರಾಯವಾಗಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಈ ವಾರವೇ ತಮ್ಮ ನಿರ್ಣಯದ ಮೇಲಿನ ಸಂಸತ್ತಿನಲ್ಲಿ ಮತದಾನಕ್ಕೆ ಒತ್ತಾಯಿಸುತ್ತಿದ್ದಾರೆ. ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಮುಂದುವರಿಸಬಾರದು ಎಂಬುದು ನಿರ್ಣಯದ ಉದ್ದೇಶ.

ಅಧ್ಯಕ್ಷರು ಈ ಯಾವುದೇ ಮಿತಿಯನ್ನು ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲ. ಅವರು ತಮ್ಮ ವಿಶೇಷ ಅಧಿಕಾರ ಬಳಸಿ ಈ ನಿರ್ಣಯವನ್ನು ತಡೆಹಿಡಿಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...