Homeಅಂತರಾಷ್ಟ್ರೀಯಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

- Advertisement -
- Advertisement -

“ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ ‘ನೊಬೆಲ್ ಶಾಂತಿ ಪ್ರಶಸ್ತಿ’ ಕೊಡಿ” ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ಮಾಡಿಸುತ್ತಾ ಸಾವಿರಾರು ಜೀವಗಳನ್ನು ಬಲಿ ಪಡೆಯುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಅಮೆರಿಕ ಕಾಂಗ್ರೆಸ್ (ಸಂಸತ್ತು) ಪ್ರಯತ್ನ ನಡೆಸುತ್ತಿದೆ.

ತಮ್ಮ ಅಧ್ಯಕ್ಷನ ಹುಚ್ಚುತನದಿಂದ ಅಮಾಯಗಳು ಜೀವಗಳು ಬಲಿಯಾಗುತ್ತಿರುವುದು ಅಮೆರಿಕದ ಕೆಲ ಜೀವಪರ ಸಂಸದರಿಗೆ ನೋವುಂಟು ಮಾಡಿದೆ. ಆದರೆ, ಅವರು ನೇರವಾಗಿ ಇದರ ವಿರುದ್ದ ಮಾತನಾಡಲೋ, ಇನ್ನೊಂದು ಸಂತ್ರಸ್ತ ದೇಶದ ಪರ ನಿಲ್ಲಲೋ ಸಾಧ್ಯವಾಗುತ್ತಿಲ್ಲ. ತಮ್ಮ ಮನಸ್ಸಿನಲ್ಲಿ ಮುಗ್ದ ಜೀವಗಳು ಬಲಿಯಾಗುತ್ತಿರುವ ಬೇಸರ ಇದ್ದರೂ..ಅಮೆರಿಕ ದೇಶದ ಜನಪ್ರತಿನಿಧಿಗಳಾಗಿರುವ ಅವರು, ಯುದ್ಧದ ಸಂದರ್ಭದಲ್ಲಿ ತಮ್ಮ ದೇಶದ ಪರ ನಿಲ್ಲಬೇಕಾದ ಅನಿವಾರ್ಯತೆ ಇದೆ.

ಹಾಗಾಗಿ, ಯುದ್ಧದಿಂದ ದೇಶದ ಆರ್ಥಿಕತೆ ಮೇಲೆ ಬೀರುವ ಪರಿಣಾಮ ಮತ್ತು ಕೆಲ ತಾಂತ್ರಿಕ ನೆಪಗಳನ್ನು ಮುಂದಿಟ್ಟುಕೊಂಡು ಟ್ರಂಪ್‌ ಅಧಿಕಾರಕ್ಕೆ ಕಡಿವಾಣ ಹಾಕುವ ಪ್ರಯತ್ನದಲ್ಲಿದ್ದಾರೆ.

ಅಮೆರಿಕದ ಸಂವಿಧಾನದ ಪ್ರಕಾರ, ಯುದ್ಧ ಘೋಷಿಸುವ ಅಧಿಕಾರ ಸಂಸತ್ತಿಗೆ ಇದೆ. ಆದರೆ, ಈಗ ಅಧ್ಯಕ್ಷರು ‘ರಾಷ್ಟ್ರೀಯ ಭದ್ರತೆ’ಯ ಹೆಸರಿನಲ್ಲಿ ದಾಳಿ ನಡೆಸಲು ತನಗಿರುವ ಅಧಿಕಾರವನ್ನು ದುರುಪಯೋಗಡಿಸಿಕೊಳ್ಳುತ್ತಿದ್ದಾರೆ ಎನ್ನುವುದು ಸಂಸದರ ಆರೋಪವಾಗಿದೆ. ಇದನ್ನು ವಿರೋಧಿಸಿ ಸಂಸದರು ಹೊಸ ನಿರ್ಣಯವನ್ನು ಮುಂದಿಟ್ಟಿದ್ದಾರೆ.

1973ರ ‘ವಾರ್ ಪವರ್ಸ್ ಆಕ್ಟ್’ ಅಡಿಯಲ್ಲಿ, ಅಧ್ಯಕ್ಷರು ಸೈನ್ಯವನ್ನು ಬಳಸಿದ 48 ಗಂಟೆಗಳ ಒಳಗೆ ಸಂಸತ್ತಿಗೆ ಮಾಹಿತಿ ನೀಡಬೇಕು ಮತ್ತು 60 ದಿನಗಳ ಒಳಗೆ ಅನುಮತಿ ಪಡೆಯಬೇಕು.

ಹಲವು ದಶಕಗಳ ಹಿಂದೆ (1991 ಮತ್ತು 2002 ರಲ್ಲಿ) ಇರಾಕ್ ಯುದ್ಧಕ್ಕಾಗಿ ನೀಡಲಾಗಿದ್ದ ‘ಮಿಲಿಟರಿ ಬಳಕೆಯ ಅಧಿಕಾರ’ವನ್ನು ಅಧ್ಯಕ್ಷರು ಈಗಲೂ ಬಳಸುತ್ತಿದ್ದಾರೆ. ಇದನ್ನು ರದ್ದುಗೊಳಿಸಲು ಸಂಸತ್ತು ಪ್ರಯತ್ನಿಸುತ್ತಿದೆ.

ಸಂಸತ್ತಿನ ಅನುಮತಿ ಇಲ್ಲದೆ ಇರಾನ್ ಸೇರಿದಂತೆ ಇತರ ಯಾವುದೇ ದೇಶಗಳ ವಿರುದ್ಧ ಯಾವುದೇ ಮಿಲಿಟರಿ ಕ್ರಮ ಕೈಗೊಳ್ಳದಂತೆ ಅಧ್ಯಕ್ಷರನ್ನು ತಡೆಯುವುದು ಇದರ ಉದ್ದೇಶವಾಗಿದೆ.

ಡೆಮೋಕ್ರಾಟ್ ಪಕ್ಷದ ನಾಯಕರು ಮತ್ತು ಕೆಲವು ರಿಪಬ್ಲಿಕನ್ ಸಂಸದರು (ಉದಾಹರಣೆಗೆ ಥಾಮಸ್ ಮಾಸ್ಸಿ) ಅಧ್ಯಕ್ಷರ ಅಧಿಕಾರಕ್ಕೆ ಲಗಾಮು ಹಾಕುವುದನ್ನು ಬೆಂಬಲಿಸುತ್ತಿದ್ದಾರೆ. ಅನಗತ್ಯ ಯುದ್ಧದಿಂದ ಅಮೆರಿಕದ ಆರ್ಥಿಕತೆ ಮತ್ತು ಸೈನಿಕರಿಗೆ ತೊಂದರೆಯಾಗುತ್ತದೆ ಎಂದು ಇವರು ಹೇಳಿದ್ದಾರೆ.

ಆದರೆ, ಅಧ್ಯಕ್ಷರ ಬೆಂಬಲಿಗರು ಇದನ್ನು ವಿರೋಧಿಸುತ್ತಿದ್ದಾರೆ. ಇರಾನ್‌ನ ಪರಮಾಣು ಬೆದರಿಕೆಯನ್ನು ತಡೆಯಲು ಅಧ್ಯಕ್ಷರಿಗೆ ಸಂಪೂರ್ಣ ಅಧಿಕಾರ ಇರಬೇಕು ಎಂಬುದು ಇವರ ವಾದವಾಗಿದೆ.

ಸಂಸತ್ತು ಅಧ್ಯಕ್ಷರ ಪರಮಾಧಿಕಾರದ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದರೂ, ಅಧ್ಯಕ್ಷರು ಅದನ್ನು ತಮ್ಮ ‘ವೀಟೋ’ ಅಧಿಕಾರ ಬಳಸಿ ತಡೆಹಿಡಿಯುವ ಸಾಧ್ಯತೆ ಹೆಚ್ಚಿದೆ. ಅದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಮಂಡಿಸಿದ ಜಂಟಿ ನಿರ್ಣಯದ ಮೇಲೆ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಚರ್ಚೆ ಪೂರ್ಣಗೊಂಡಿದೆ. ಈ ನಿರ್ಣಯವು ಇರಾನ್ ಮೇಲೆ ಯಾವುದೇ ಮುಂದಿನ ದಾಳಿ ನಡೆಸುವ ಮೊದಲು ಕಾಂಗ್ರೆಸ್‌ನಿಂದ ಹಣಕಾಸಿನ ಅನುಮೋದನೆ ಮತ್ತು ಅಧಿಕೃತ ಯುದ್ಧ ಘೋಷಣೆಯನ್ನು ಕಡ್ಡಾಯಗೊಳಿಸುತ್ತದೆ.

ವೈಟ್ ಹೌಸ್ ಈಗಾಗಲೇ ಈ ನಿರ್ಣಯದ ವಿರುದ್ಧ ಎಚ್ಚರಿಕೆ ನೀಡಿದೆ. ಒಂದು ವೇಳೆ ಸಂಸತ್ತು ಈ ಮಿತಿಯನ್ನು ಅಂಗೀಕರಿಸಿದರೂ, ಅಧ್ಯಕ್ಷರು ತಮ್ಮ ‘ವೀಟೋ’ ಅಧಿಕಾರ ಬಳಸಿ ಅದನ್ನು ರದ್ದುಗೊಳಿಸುವುದಾಗಿ ತಿಳಿಸಿದ್ದಾರೆ. ಇದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನ ಎರಡೂ ಸದನಗಳಲ್ಲಿ 2/3 ಬಹುಮತದ ಅಗತ್ಯವಿದೆ, ಇದು ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಕಷ್ಟಕರವಾಗಿದೆ.

ಕೆಲವು ಕಾನೂನು ತಜ್ಞರು ಮತ್ತು ಸಂಸದರು ಈ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ಕೊಂಡೊಯ್ಯಲು ಸಿದ್ಧತೆ ನಡೆಸುತ್ತಿದ್ದಾರೆ. “ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಸದೃಶ ಸನ್ನಿವೇಶ ಸೃಷ್ಟಿಸುವುದು ಸಂವಿಧಾನ ಬಾಹಿರ” ಎಂಬುದು ಇವರ ಆರೋಪವಾಗಿದೆ.

ಯುರೋಪಿಯನ್ ಒಕ್ಕೂಟ ಮತ್ತು ವಿಶ್ವಸಂಸ್ಥೆ ಅಮೆರಿಕದ ಈ ಆಂತರಿಕ ಬೆಳವಣಿಗೆಯನ್ನು ಗಮನಿಸುತ್ತಿವೆ. ಅಮೆರಿಕದ ಸಂಸತ್ತು ಅಧ್ಯಕ್ಷರ ಅಧಿಕಾರವನ್ನು ನಿಯಂತ್ರಿಸಿದರೆ ಮಾತ್ರ ಮಧ್ಯಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಯುದ್ಧವನ್ನು ತಪ್ಪಿಸಬಹುದು ಎಂಬುದು ಮಿತ್ರ ರಾಷ್ಟ್ರಗಳ ಅಭಿಪ್ರಾಯವಾಗಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಈ ವಾರವೇ ತಮ್ಮ ನಿರ್ಣಯದ ಮೇಲಿನ ಸಂಸತ್ತಿನಲ್ಲಿ ಮತದಾನಕ್ಕೆ ಒತ್ತಾಯಿಸುತ್ತಿದ್ದಾರೆ. ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಮುಂದುವರಿಸಬಾರದು ಎಂಬುದು ನಿರ್ಣಯದ ಉದ್ದೇಶ.

ಅಧ್ಯಕ್ಷರು ಈ ಯಾವುದೇ ಮಿತಿಯನ್ನು ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲ. ಅವರು ತಮ್ಮ ವಿಶೇಷ ಅಧಿಕಾರ ಬಳಸಿ ಈ ನಿರ್ಣಯವನ್ನು ತಡೆಹಿಡಿಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....