Homeಅಂತರಾಷ್ಟ್ರೀಯಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

- Advertisement -
- Advertisement -

“ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ ‘ನೊಬೆಲ್ ಶಾಂತಿ ಪ್ರಶಸ್ತಿ’ ಕೊಡಿ” ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ಮಾಡಿಸುತ್ತಾ ಸಾವಿರಾರು ಜೀವಗಳನ್ನು ಬಲಿ ಪಡೆಯುತ್ತಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಅಮೆರಿಕ ಕಾಂಗ್ರೆಸ್ (ಸಂಸತ್ತು) ಪ್ರಯತ್ನ ನಡೆಸುತ್ತಿದೆ.

ತಮ್ಮ ಅಧ್ಯಕ್ಷನ ಹುಚ್ಚುತನದಿಂದ ಅಮಾಯಗಳು ಜೀವಗಳು ಬಲಿಯಾಗುತ್ತಿರುವುದು ಅಮೆರಿಕದ ಕೆಲ ಜೀವಪರ ಸಂಸದರಿಗೆ ನೋವುಂಟು ಮಾಡಿದೆ. ಆದರೆ, ಅವರು ನೇರವಾಗಿ ಇದರ ವಿರುದ್ದ ಮಾತನಾಡಲೋ, ಇನ್ನೊಂದು ಸಂತ್ರಸ್ತ ದೇಶದ ಪರ ನಿಲ್ಲಲೋ ಸಾಧ್ಯವಾಗುತ್ತಿಲ್ಲ. ತಮ್ಮ ಮನಸ್ಸಿನಲ್ಲಿ ಮುಗ್ದ ಜೀವಗಳು ಬಲಿಯಾಗುತ್ತಿರುವ ಬೇಸರ ಇದ್ದರೂ..ಅಮೆರಿಕ ದೇಶದ ಜನಪ್ರತಿನಿಧಿಗಳಾಗಿರುವ ಅವರು, ಯುದ್ಧದ ಸಂದರ್ಭದಲ್ಲಿ ತಮ್ಮ ದೇಶದ ಪರ ನಿಲ್ಲಬೇಕಾದ ಅನಿವಾರ್ಯತೆ ಇದೆ.

ಹಾಗಾಗಿ, ಯುದ್ಧದಿಂದ ದೇಶದ ಆರ್ಥಿಕತೆ ಮೇಲೆ ಬೀರುವ ಪರಿಣಾಮ ಮತ್ತು ಕೆಲ ತಾಂತ್ರಿಕ ನೆಪಗಳನ್ನು ಮುಂದಿಟ್ಟುಕೊಂಡು ಟ್ರಂಪ್‌ ಅಧಿಕಾರಕ್ಕೆ ಕಡಿವಾಣ ಹಾಕುವ ಪ್ರಯತ್ನದಲ್ಲಿದ್ದಾರೆ.

ಅಮೆರಿಕದ ಸಂವಿಧಾನದ ಪ್ರಕಾರ, ಯುದ್ಧ ಘೋಷಿಸುವ ಅಧಿಕಾರ ಸಂಸತ್ತಿಗೆ ಇದೆ. ಆದರೆ, ಈಗ ಅಧ್ಯಕ್ಷರು ‘ರಾಷ್ಟ್ರೀಯ ಭದ್ರತೆ’ಯ ಹೆಸರಿನಲ್ಲಿ ದಾಳಿ ನಡೆಸಲು ತನಗಿರುವ ಅಧಿಕಾರವನ್ನು ದುರುಪಯೋಗಡಿಸಿಕೊಳ್ಳುತ್ತಿದ್ದಾರೆ ಎನ್ನುವುದು ಸಂಸದರ ಆರೋಪವಾಗಿದೆ. ಇದನ್ನು ವಿರೋಧಿಸಿ ಸಂಸದರು ಹೊಸ ನಿರ್ಣಯವನ್ನು ಮುಂದಿಟ್ಟಿದ್ದಾರೆ.

1973ರ ‘ವಾರ್ ಪವರ್ಸ್ ಆಕ್ಟ್’ ಅಡಿಯಲ್ಲಿ, ಅಧ್ಯಕ್ಷರು ಸೈನ್ಯವನ್ನು ಬಳಸಿದ 48 ಗಂಟೆಗಳ ಒಳಗೆ ಸಂಸತ್ತಿಗೆ ಮಾಹಿತಿ ನೀಡಬೇಕು ಮತ್ತು 60 ದಿನಗಳ ಒಳಗೆ ಅನುಮತಿ ಪಡೆಯಬೇಕು.

ಹಲವು ದಶಕಗಳ ಹಿಂದೆ (1991 ಮತ್ತು 2002 ರಲ್ಲಿ) ಇರಾಕ್ ಯುದ್ಧಕ್ಕಾಗಿ ನೀಡಲಾಗಿದ್ದ ‘ಮಿಲಿಟರಿ ಬಳಕೆಯ ಅಧಿಕಾರ’ವನ್ನು ಅಧ್ಯಕ್ಷರು ಈಗಲೂ ಬಳಸುತ್ತಿದ್ದಾರೆ. ಇದನ್ನು ರದ್ದುಗೊಳಿಸಲು ಸಂಸತ್ತು ಪ್ರಯತ್ನಿಸುತ್ತಿದೆ.

ಸಂಸತ್ತಿನ ಅನುಮತಿ ಇಲ್ಲದೆ ಇರಾನ್ ಸೇರಿದಂತೆ ಇತರ ಯಾವುದೇ ದೇಶಗಳ ವಿರುದ್ಧ ಯಾವುದೇ ಮಿಲಿಟರಿ ಕ್ರಮ ಕೈಗೊಳ್ಳದಂತೆ ಅಧ್ಯಕ್ಷರನ್ನು ತಡೆಯುವುದು ಇದರ ಉದ್ದೇಶವಾಗಿದೆ.

ಡೆಮೋಕ್ರಾಟ್ ಪಕ್ಷದ ನಾಯಕರು ಮತ್ತು ಕೆಲವು ರಿಪಬ್ಲಿಕನ್ ಸಂಸದರು (ಉದಾಹರಣೆಗೆ ಥಾಮಸ್ ಮಾಸ್ಸಿ) ಅಧ್ಯಕ್ಷರ ಅಧಿಕಾರಕ್ಕೆ ಲಗಾಮು ಹಾಕುವುದನ್ನು ಬೆಂಬಲಿಸುತ್ತಿದ್ದಾರೆ. ಅನಗತ್ಯ ಯುದ್ಧದಿಂದ ಅಮೆರಿಕದ ಆರ್ಥಿಕತೆ ಮತ್ತು ಸೈನಿಕರಿಗೆ ತೊಂದರೆಯಾಗುತ್ತದೆ ಎಂದು ಇವರು ಹೇಳಿದ್ದಾರೆ.

ಆದರೆ, ಅಧ್ಯಕ್ಷರ ಬೆಂಬಲಿಗರು ಇದನ್ನು ವಿರೋಧಿಸುತ್ತಿದ್ದಾರೆ. ಇರಾನ್‌ನ ಪರಮಾಣು ಬೆದರಿಕೆಯನ್ನು ತಡೆಯಲು ಅಧ್ಯಕ್ಷರಿಗೆ ಸಂಪೂರ್ಣ ಅಧಿಕಾರ ಇರಬೇಕು ಎಂಬುದು ಇವರ ವಾದವಾಗಿದೆ.

ಸಂಸತ್ತು ಅಧ್ಯಕ್ಷರ ಪರಮಾಧಿಕಾರದ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದರೂ, ಅಧ್ಯಕ್ಷರು ಅದನ್ನು ತಮ್ಮ ‘ವೀಟೋ’ ಅಧಿಕಾರ ಬಳಸಿ ತಡೆಹಿಡಿಯುವ ಸಾಧ್ಯತೆ ಹೆಚ್ಚಿದೆ. ಅದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಮಂಡಿಸಿದ ಜಂಟಿ ನಿರ್ಣಯದ ಮೇಲೆ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ ಚರ್ಚೆ ಪೂರ್ಣಗೊಂಡಿದೆ. ಈ ನಿರ್ಣಯವು ಇರಾನ್ ಮೇಲೆ ಯಾವುದೇ ಮುಂದಿನ ದಾಳಿ ನಡೆಸುವ ಮೊದಲು ಕಾಂಗ್ರೆಸ್‌ನಿಂದ ಹಣಕಾಸಿನ ಅನುಮೋದನೆ ಮತ್ತು ಅಧಿಕೃತ ಯುದ್ಧ ಘೋಷಣೆಯನ್ನು ಕಡ್ಡಾಯಗೊಳಿಸುತ್ತದೆ.

ವೈಟ್ ಹೌಸ್ ಈಗಾಗಲೇ ಈ ನಿರ್ಣಯದ ವಿರುದ್ಧ ಎಚ್ಚರಿಕೆ ನೀಡಿದೆ. ಒಂದು ವೇಳೆ ಸಂಸತ್ತು ಈ ಮಿತಿಯನ್ನು ಅಂಗೀಕರಿಸಿದರೂ, ಅಧ್ಯಕ್ಷರು ತಮ್ಮ ‘ವೀಟೋ’ ಅಧಿಕಾರ ಬಳಸಿ ಅದನ್ನು ರದ್ದುಗೊಳಿಸುವುದಾಗಿ ತಿಳಿಸಿದ್ದಾರೆ. ಇದನ್ನು ಮೀರಿ ಕಾನೂನು ಜಾರಿಗೆ ತರಲು ಸಂಸತ್ತಿನ ಎರಡೂ ಸದನಗಳಲ್ಲಿ 2/3 ಬಹುಮತದ ಅಗತ್ಯವಿದೆ, ಇದು ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಕಷ್ಟಕರವಾಗಿದೆ.

ಕೆಲವು ಕಾನೂನು ತಜ್ಞರು ಮತ್ತು ಸಂಸದರು ಈ ವಿಷಯವನ್ನು ಸುಪ್ರೀಂ ಕೋರ್ಟ್‌ಗೆ ಕೊಂಡೊಯ್ಯಲು ಸಿದ್ಧತೆ ನಡೆಸುತ್ತಿದ್ದಾರೆ. “ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಸದೃಶ ಸನ್ನಿವೇಶ ಸೃಷ್ಟಿಸುವುದು ಸಂವಿಧಾನ ಬಾಹಿರ” ಎಂಬುದು ಇವರ ಆರೋಪವಾಗಿದೆ.

ಯುರೋಪಿಯನ್ ಒಕ್ಕೂಟ ಮತ್ತು ವಿಶ್ವಸಂಸ್ಥೆ ಅಮೆರಿಕದ ಈ ಆಂತರಿಕ ಬೆಳವಣಿಗೆಯನ್ನು ಗಮನಿಸುತ್ತಿವೆ. ಅಮೆರಿಕದ ಸಂಸತ್ತು ಅಧ್ಯಕ್ಷರ ಅಧಿಕಾರವನ್ನು ನಿಯಂತ್ರಿಸಿದರೆ ಮಾತ್ರ ಮಧ್ಯಪ್ರಾಚ್ಯದಲ್ಲಿ ದೊಡ್ಡ ಮಟ್ಟದ ಯುದ್ಧವನ್ನು ತಪ್ಪಿಸಬಹುದು ಎಂಬುದು ಮಿತ್ರ ರಾಷ್ಟ್ರಗಳ ಅಭಿಪ್ರಾಯವಾಗಿದೆ.

ಸಂಸದರಾದ ರೋ ಖನ್ನಾ ಮತ್ತು ಥಾಮಸ್ ಮಾಸ್ಸಿ ಅವರು ಈ ವಾರವೇ ತಮ್ಮ ನಿರ್ಣಯದ ಮೇಲಿನ ಸಂಸತ್ತಿನಲ್ಲಿ ಮತದಾನಕ್ಕೆ ಒತ್ತಾಯಿಸುತ್ತಿದ್ದಾರೆ. ಅಧ್ಯಕ್ಷರು ಸಂಸತ್ತಿನ ಅನುಮತಿ ಇಲ್ಲದೆ ಯುದ್ಧ ಮುಂದುವರಿಸಬಾರದು ಎಂಬುದು ನಿರ್ಣಯದ ಉದ್ದೇಶ.

ಅಧ್ಯಕ್ಷರು ಈ ಯಾವುದೇ ಮಿತಿಯನ್ನು ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲ. ಅವರು ತಮ್ಮ ವಿಶೇಷ ಅಧಿಕಾರ ಬಳಸಿ ಈ ನಿರ್ಣಯವನ್ನು ತಡೆಹಿಡಿಯಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...