Homeಅಂತರಾಷ್ಟ್ರೀಯ'2 ಬಾರಿ ಮಹಾಭಿಯೋಗ' - ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!

‘2 ಬಾರಿ ಮಹಾಭಿಯೋಗ’ – ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ.

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಅಲ್ಲಿನ ಸಂಸತ್ ಎರಡನೇ ಬಾರಿಗೆ ದೋಷಾರೋಪಣೆಯನ್ನು (ಮಹಾಭಿಯೋಗ) ‌ಹೊರಿಸಿದೆ. ಹಾಗಾಗಿ ಎರಡು ಬಾರಿ ಮಹಾಭಿಯೋಗಕ್ಕೆ ಗುರಿಯಾಗಿ ಟ್ರಂಪ್ ಅಮೆರಿಕದ ಇತಿಹಾಸದಲ್ಲೇ ಕಪ್ಪುಚುಕ್ಕೆಯಾಗಿ ಉಳಿಯಲಿದ್ದಾರೆ.

ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ ಕೊನೆಯ ಅವಕಾಶವನ್ನು ಡೆಮೋಕ್ರಾಟ್ಸ್ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷೀಯ ಅವಧಿ ಕೊನೆಯಾಗಲು ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಯಾವಾಗ ಹುದ್ದೆ ಬಿಟ್ಟು ನಿರ್ಗಮಿಸುತ್ತಾರೆ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ. ಈ ಅಧಿಕಾರವನ್ನು ಈ ಮೊದಲು ಯಾರ ವಿರುದ್ಧವೂ ಬಳಸಲಾಗಿಲ್ಲ. ಅಧ್ಯಕ್ಷೀಯ ಅವಧಿ ಮುಗಿದ ಬಳಿಕವೂ, ಹುದ್ದೆ ತೊರೆಯದಿದ್ದರೆ, ಈ ತಿದ್ದುಪಡಿ ಬಳಸಿಕೊಂಡು ಸಂಸತ್ ಕ್ರಮ ಕೈಗೊಳ್ಳುತ್ತದೆ.

ಇದನ್ನೂ ಓದಿ: ಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

ಮಂಗಳವಾರ ರಾತ್ರಿ ಅಂಗೀಕರಿಸಿದ ಪದಚ್ಯುತಿ ನಿರ್ಣಯದ ಪರವಾಗಿ 223-205 ಮತಗಳು ಬಿದ್ದಿವೆ.

ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ ಮತ್ತು ಹಿಂಸಾಚಾರ, ಐವರ ಸಾವು ಪ್ರಕರಣ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಇದು ಡೊನಾಲ್ಡ್ ಟ್ರಂಪ್ ಬೆಂಬಲಿಗರ ಕೃತ್ಯವಾಗಿರುವುದರಿಂದ, ಟ್ರಂಪ್ ಅಮೆರಿಕ ಸಂಸತ್‌ನಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.

ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಷಿಂಗ್ಟನ್‌ನ ಎಫ್‌ಬಿಐ ಅಧಿಕಾರಿ ಸ್ಟೀವನ್‌ ಎಂ ಡಿ ಆಂಟುವೊನೊ, “ಕ್ಯಾಪಿಟಲ್‌ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಪ್ರತಿಭಟನಕಾರರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿ ಅಮೆರಿಕದ ಅಟಾರ್ನಿ ಕಚೇರಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಆರು ದಿನಗಳಲ್ಲಿ ನಾವು ದಂಗೆಕೋರರ ವಿರುದ್ಧ 160 ಪ್ರಕರಣಗಳನ್ನು ದಾಖಲಿಸಿದ್ದೇವೆ. ಇದು ಕೇವಲ ಆರಂಭವಷ್ಟೇ” ಎಂದು ಹೇಳಿದ್ದಾರೆ.

ಇತ್ತ ಅಮೆರಿಕ ಕ್ಯಾಪಿಟಲ್ ಮೇಲಿನ ದಾಳಿಗೂ ಮುನ್ನ ತಾನು ಮಾಡಿದ ಭಾಷಣವನ್ನು ಸಮರ್ಥಿಸಿಕೊಂಡಿರುವ ಟ್ರಂಪ್, ದೇಶದಾದ್ಯಂತ ಆಕ್ರೋಶ ಭುಗಿಲೇಳಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನನ್ನು ಟ್ರೋಲ್ ಮಾಡಿದ ಹನುಮ ವಿಹಾರಿ ಮತ್ತು ಅಶ್ವಿನ್!

ಇನ್ನು ಎರಡನೇ ಬಾರಿ ಮಹಾಭಿಯೋಗಕ್ಕೆ ಗುರಿಯಾಗಿರುವ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಮೇಲೆ ಕಳೆದ ವಾರ ಅನಾಗರಿಕ ದಾಳಿಯಾಗಿದ್ದನ್ನು ನಾವು ನೋಡಿದ್ದೇವೆ. ಇದು ನಮ್ಮ ರಾಷ್ಟ್ರದ 244 ವರ್ಷಗಳ ಇತಿಹಾಸದಲ್ಲಿ ಕಂಡು ಕೇಳರಿಯದ ಕೃತ್ಯವಾಗಿತ್ತು” ಎಂದು ಬೈಡನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...