Homeಅಂತರಾಷ್ಟ್ರೀಯ'2 ಬಾರಿ ಮಹಾಭಿಯೋಗ' - ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!

‘2 ಬಾರಿ ಮಹಾಭಿಯೋಗ’ – ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ.

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಅಲ್ಲಿನ ಸಂಸತ್ ಎರಡನೇ ಬಾರಿಗೆ ದೋಷಾರೋಪಣೆಯನ್ನು (ಮಹಾಭಿಯೋಗ) ‌ಹೊರಿಸಿದೆ. ಹಾಗಾಗಿ ಎರಡು ಬಾರಿ ಮಹಾಭಿಯೋಗಕ್ಕೆ ಗುರಿಯಾಗಿ ಟ್ರಂಪ್ ಅಮೆರಿಕದ ಇತಿಹಾಸದಲ್ಲೇ ಕಪ್ಪುಚುಕ್ಕೆಯಾಗಿ ಉಳಿಯಲಿದ್ದಾರೆ.

ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ ಕೊನೆಯ ಅವಕಾಶವನ್ನು ಡೆಮೋಕ್ರಾಟ್ಸ್ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷೀಯ ಅವಧಿ ಕೊನೆಯಾಗಲು ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಯಾವಾಗ ಹುದ್ದೆ ಬಿಟ್ಟು ನಿರ್ಗಮಿಸುತ್ತಾರೆ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ. ಈ ಅಧಿಕಾರವನ್ನು ಈ ಮೊದಲು ಯಾರ ವಿರುದ್ಧವೂ ಬಳಸಲಾಗಿಲ್ಲ. ಅಧ್ಯಕ್ಷೀಯ ಅವಧಿ ಮುಗಿದ ಬಳಿಕವೂ, ಹುದ್ದೆ ತೊರೆಯದಿದ್ದರೆ, ಈ ತಿದ್ದುಪಡಿ ಬಳಸಿಕೊಂಡು ಸಂಸತ್ ಕ್ರಮ ಕೈಗೊಳ್ಳುತ್ತದೆ.

ಇದನ್ನೂ ಓದಿ: ಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

ಮಂಗಳವಾರ ರಾತ್ರಿ ಅಂಗೀಕರಿಸಿದ ಪದಚ್ಯುತಿ ನಿರ್ಣಯದ ಪರವಾಗಿ 223-205 ಮತಗಳು ಬಿದ್ದಿವೆ.

ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ ಮತ್ತು ಹಿಂಸಾಚಾರ, ಐವರ ಸಾವು ಪ್ರಕರಣ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಇದು ಡೊನಾಲ್ಡ್ ಟ್ರಂಪ್ ಬೆಂಬಲಿಗರ ಕೃತ್ಯವಾಗಿರುವುದರಿಂದ, ಟ್ರಂಪ್ ಅಮೆರಿಕ ಸಂಸತ್‌ನಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.

ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಷಿಂಗ್ಟನ್‌ನ ಎಫ್‌ಬಿಐ ಅಧಿಕಾರಿ ಸ್ಟೀವನ್‌ ಎಂ ಡಿ ಆಂಟುವೊನೊ, “ಕ್ಯಾಪಿಟಲ್‌ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಪ್ರತಿಭಟನಕಾರರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿ ಅಮೆರಿಕದ ಅಟಾರ್ನಿ ಕಚೇರಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಆರು ದಿನಗಳಲ್ಲಿ ನಾವು ದಂಗೆಕೋರರ ವಿರುದ್ಧ 160 ಪ್ರಕರಣಗಳನ್ನು ದಾಖಲಿಸಿದ್ದೇವೆ. ಇದು ಕೇವಲ ಆರಂಭವಷ್ಟೇ” ಎಂದು ಹೇಳಿದ್ದಾರೆ.

ಇತ್ತ ಅಮೆರಿಕ ಕ್ಯಾಪಿಟಲ್ ಮೇಲಿನ ದಾಳಿಗೂ ಮುನ್ನ ತಾನು ಮಾಡಿದ ಭಾಷಣವನ್ನು ಸಮರ್ಥಿಸಿಕೊಂಡಿರುವ ಟ್ರಂಪ್, ದೇಶದಾದ್ಯಂತ ಆಕ್ರೋಶ ಭುಗಿಲೇಳಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನನ್ನು ಟ್ರೋಲ್ ಮಾಡಿದ ಹನುಮ ವಿಹಾರಿ ಮತ್ತು ಅಶ್ವಿನ್!

ಇನ್ನು ಎರಡನೇ ಬಾರಿ ಮಹಾಭಿಯೋಗಕ್ಕೆ ಗುರಿಯಾಗಿರುವ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಮೇಲೆ ಕಳೆದ ವಾರ ಅನಾಗರಿಕ ದಾಳಿಯಾಗಿದ್ದನ್ನು ನಾವು ನೋಡಿದ್ದೇವೆ. ಇದು ನಮ್ಮ ರಾಷ್ಟ್ರದ 244 ವರ್ಷಗಳ ಇತಿಹಾಸದಲ್ಲಿ ಕಂಡು ಕೇಳರಿಯದ ಕೃತ್ಯವಾಗಿತ್ತು” ಎಂದು ಬೈಡನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...