Homeಅಂತರಾಷ್ಟ್ರೀಯ'2 ಬಾರಿ ಮಹಾಭಿಯೋಗ' - ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!

‘2 ಬಾರಿ ಮಹಾಭಿಯೋಗ’ – ಅಮೆರಿಕ ಇತಿಹಾಸದಲ್ಲಿ ಕಪ್ಪುಚುಕ್ಕೆಯಾದ ಟ್ರಂಪ್!

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ.

- Advertisement -
- Advertisement -

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ನಂತರ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಅಲ್ಲಿನ ಸಂಸತ್ ಎರಡನೇ ಬಾರಿಗೆ ದೋಷಾರೋಪಣೆಯನ್ನು (ಮಹಾಭಿಯೋಗ) ‌ಹೊರಿಸಿದೆ. ಹಾಗಾಗಿ ಎರಡು ಬಾರಿ ಮಹಾಭಿಯೋಗಕ್ಕೆ ಗುರಿಯಾಗಿ ಟ್ರಂಪ್ ಅಮೆರಿಕದ ಇತಿಹಾಸದಲ್ಲೇ ಕಪ್ಪುಚುಕ್ಕೆಯಾಗಿ ಉಳಿಯಲಿದ್ದಾರೆ.

ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ ಕೊನೆಯ ಅವಕಾಶವನ್ನು ಡೆಮೋಕ್ರಾಟ್ಸ್ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷೀಯ ಅವಧಿ ಕೊನೆಯಾಗಲು ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಯಾವಾಗ ಹುದ್ದೆ ಬಿಟ್ಟು ನಿರ್ಗಮಿಸುತ್ತಾರೆ ಎನ್ನುವುದು ಇನ್ನೂ ಖಚಿತವಾಗಿಲ್ಲ.

ಅಧ್ಯಕ್ಷೀಯ ಅವಧಿ ಮುಗಿಯುತ್ತಿದ್ದರೂ, ನಿಯಮದಂತೆ ಹುದ್ದೆ ತೊರೆಯಲು ಮುಂದಾಗದಿರುವ ಟ್ರಂಪ್ ವಿರುದ್ದ 25 ನೇ ತಿದ್ದುಪಡಿಯ ವಿಶೇಷ ಅಧಿಕಾರವನ್ನು ಬಳಸಲು ಅಲ್ಲಿನ ಪ್ರತಿನಿಧಿಗಳು ಒಪ್ಪಿಗೆ ನೀಡಿದ್ದಾರೆ. ಈ ಅಧಿಕಾರವನ್ನು ಈ ಮೊದಲು ಯಾರ ವಿರುದ್ಧವೂ ಬಳಸಲಾಗಿಲ್ಲ. ಅಧ್ಯಕ್ಷೀಯ ಅವಧಿ ಮುಗಿದ ಬಳಿಕವೂ, ಹುದ್ದೆ ತೊರೆಯದಿದ್ದರೆ, ಈ ತಿದ್ದುಪಡಿ ಬಳಸಿಕೊಂಡು ಸಂಸತ್ ಕ್ರಮ ಕೈಗೊಳ್ಳುತ್ತದೆ.

ಇದನ್ನೂ ಓದಿ: ಗೌರಿ ಕಾರ್ನರ್: “ಪಾಪ ಇದು ಬಯಲು ಸೀಮೇದು ನೋಡ್ರಿ ಹೆಂಗೆ ಗಾಬರಿಯಾಗಿದೆ”

ಮಂಗಳವಾರ ರಾತ್ರಿ ಅಂಗೀಕರಿಸಿದ ಪದಚ್ಯುತಿ ನಿರ್ಣಯದ ಪರವಾಗಿ 223-205 ಮತಗಳು ಬಿದ್ದಿವೆ.

ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ ಮತ್ತು ಹಿಂಸಾಚಾರ, ಐವರ ಸಾವು ಪ್ರಕರಣ ದೊಡ್ಡ ಕೋಲಾಹಲ ಸೃಷ್ಟಿಸಿದೆ. ಇದು ಡೊನಾಲ್ಡ್ ಟ್ರಂಪ್ ಬೆಂಬಲಿಗರ ಕೃತ್ಯವಾಗಿರುವುದರಿಂದ, ಟ್ರಂಪ್ ಅಮೆರಿಕ ಸಂಸತ್‌ನಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.

ಇದರ ಬೆನ್ನಲ್ಲೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾಷಿಂಗ್ಟನ್‌ನ ಎಫ್‌ಬಿಐ ಅಧಿಕಾರಿ ಸ್ಟೀವನ್‌ ಎಂ ಡಿ ಆಂಟುವೊನೊ, “ಕ್ಯಾಪಿಟಲ್‌ ಮೇಲಿನ ದಾಳಿಯಲ್ಲಿ ಭಾಗವಹಿಸಿದ ಪ್ರತಿಭಟನಕಾರರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಕುರಿತಾಗಿ ಅಮೆರಿಕದ ಅಟಾರ್ನಿ ಕಚೇರಿ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಆರು ದಿನಗಳಲ್ಲಿ ನಾವು ದಂಗೆಕೋರರ ವಿರುದ್ಧ 160 ಪ್ರಕರಣಗಳನ್ನು ದಾಖಲಿಸಿದ್ದೇವೆ. ಇದು ಕೇವಲ ಆರಂಭವಷ್ಟೇ” ಎಂದು ಹೇಳಿದ್ದಾರೆ.

ಇತ್ತ ಅಮೆರಿಕ ಕ್ಯಾಪಿಟಲ್ ಮೇಲಿನ ದಾಳಿಗೂ ಮುನ್ನ ತಾನು ಮಾಡಿದ ಭಾಷಣವನ್ನು ಸಮರ್ಥಿಸಿಕೊಂಡಿರುವ ಟ್ರಂಪ್, ದೇಶದಾದ್ಯಂತ ಆಕ್ರೋಶ ಭುಗಿಲೇಳಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನನ್ನು ಟ್ರೋಲ್ ಮಾಡಿದ ಹನುಮ ವಿಹಾರಿ ಮತ್ತು ಅಶ್ವಿನ್!

ಇನ್ನು ಎರಡನೇ ಬಾರಿ ಮಹಾಭಿಯೋಗಕ್ಕೆ ಗುರಿಯಾಗಿರುವ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೋ ಬೈಡನ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಮೇಲೆ ಕಳೆದ ವಾರ ಅನಾಗರಿಕ ದಾಳಿಯಾಗಿದ್ದನ್ನು ನಾವು ನೋಡಿದ್ದೇವೆ. ಇದು ನಮ್ಮ ರಾಷ್ಟ್ರದ 244 ವರ್ಷಗಳ ಇತಿಹಾಸದಲ್ಲಿ ಕಂಡು ಕೇಳರಿಯದ ಕೃತ್ಯವಾಗಿತ್ತು” ಎಂದು ಬೈಡನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲೆ ಲೋಹ್ರಿ (ಸಂಕ್ರಾಂತಿ) ಆಚರಿಸಿ, ಕೇಂದ್ರಕ್ಕೆ ತಲೆ ಬಾಗುವುದಿಲ್ಲವೆಂದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...