Homeಮುಖಪುಟವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ | ಸ್ಪಷ್ಟೀಕರಣ ನೀಡುವಂತೆ ಮೋದಿಗೆ ಕಾಂಗ್ರೆಸ್ ಒತ್ತಾಯ

ವ್ಯಾಪಾರ ನಿಲ್ಲಿಸುವುದಾಗಿ ಟ್ರಂಪ್ ಬೆದರಿಕೆ | ಸ್ಪಷ್ಟೀಕರಣ ನೀಡುವಂತೆ ಮೋದಿಗೆ ಕಾಂಗ್ರೆಸ್ ಒತ್ತಾಯ

- Advertisement -
- Advertisement -

ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕಾಗಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮವನ್ನು ಒಪ್ಪಿಕೊಂಡಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ವ್ಯಾಪಕ ವಿವಾದವನ್ನು ಹುಟ್ಟುಹಾಕಿದೆ. ಅವರ ಹೇಳಿಕೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ಪಷ್ಟೀಕರಣ ನೀಡುವಂತೆ ಕಾಂಗ್ರೆಸ್ ಸೋಮವಾರ ಪ್ರಶ್ನಿಸಿದೆ.

“ಪ್ರಧಾನಿ ಬಹಳ ವಿಳಂಬವಾಗಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದ ಕೆಲವು ನಿಮಿಷಗಳ ಹಿಂದೆ ಅಮೆರಿಕ ಅಧ್ಯಕ್ಷ ಟ್ರಂಪ್ ಬಹಿರಂಗಪಡಿಸಿದ ಮಾಹಿತಿ ಎಲ್ಲವನ್ನೂ ತಲೆಕೆಳಗೆ ಮಾಡಿದೆ. ಪ್ರಧಾನಿ ಅವರು ಅವುಗಳ ಬಗ್ಗೆ ಸಂಪೂರ್ಣವಾಗಿ ಮೌನವಾಗಿದ್ದರು.” ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಭಾರತವು ಅಮೆರಿಕದ ಮಧ್ಯಸ್ಥಿಕೆಗೆ ಒಪ್ಪಿಕೊಂಡಿದೆಯೇ ಅಥವಾ “ತಟಸ್ಥ” ಸ್ಥಳದಲ್ಲಿ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಲು ಒಪ್ಪಿಕೊಂಡಿದೆಯೇ ಎಂದು ರಮೇಶ್ ಪ್ರಶ್ನಿಸಿದ್ದಾರೆ. ಆಟೋಮೊಬೈಲ್ ಮತ್ತು ಕೃಷಿಯಂತಹ ಕ್ಷೇತ್ರಗಳಲ್ಲಿ ಭಾರತೀಯ ಮಾರುಕಟ್ಟೆಗಳಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂಬ ಅಮೆರಿಕದ ಬೇಡಿಕೆಗಳನ್ನು ಒಪ್ಪಿಕೊಳ್ಳಲು ಭಾರತ ಈಗ ಸಿದ್ಧವಾಗಿದೆಯೇ ಎಂದು ಅವರು ಕೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ “ಪೂರ್ಣ ಮತ್ತು ತಕ್ಷಣದ ಕದನ ವಿರಾಮ”ದ ಮಾತುಕತೆ ತನ್ನ ಮಧ್ಯಸ್ಥಿಕೆಯಿಂದ ನಡೆದಿದೆ ಎಂಬ ಹೇಳಿಕೆಯನ್ನು ಟ್ರಂಪ್ ಸೋಮವಾರ ಪುನರುಚ್ಚರಿಸಿದ್ದಾರೆ.

“ಮೋದಿ ಅವರ ಹೇಳಿಕೆ ಮತ್ತು ಅಮೆರಿಕ ಅಧ್ಯಕ್ಷರ ಹೇಳಿಕೆಯನ್ನು ನಾನು ಕೇಳಿದೆ. ಇದು ತೀವ್ರ ಸಮಸ್ಯಾತ್ಮಕ ವಿಚಾರ” ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಬಣ್ಣಿಸಿದ್ದಾರೆ.

“ಆಪರೇಷನ್ ಸಿಂಧೂರ್ ಅನ್ನು ನಿಲ್ಲಿಸುವಂತೆ ಮಾಡಲು ವ್ಯಾಪಾರವನ್ನು ಬೆದರಿಕೆಯಾಗಿ ಬಳಸಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷರು ಹೇಳುತ್ತಾರೆ. ಪ್ರಧಾನಿ ಇದಕ್ಕೆ ಪ್ರತಿಕ್ರಿಯಿಸುತ್ತಾರೆಂದು ನಾವು ನಿರೀಕ್ಷಿಸಿದ್ದೆವು. ದುರದೃಷ್ಟವಶಾತ್, ಅವರು ಪ್ರತಿಕ್ರಿಯಿಸಲಿಲ್ಲ.” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮೋದಿಯನ್ನು ನೇರವಾಗಿ ಪ್ರಶ್ನಿಸದೆ, ಟ್ರಂಪ್ ಅವರ ಪೋಸ್ಟ್ ಅನ್ನು “ಭಾರತಕ್ಕೆ ನಿರಾಶಾದಾಯಕ” ಎಂದು ಕರೆದ್ದಾರೆ.

ಪಹಲ್ವಾಮ್ ದಾಳಿಯ ನಂತರ ಭಾರತ ನಡೆಸಿದ ಆಪರೇಷನ್ ಸಿಂಧೂರದ ನಂತರ ನಾಲ್ಕು ದಿನಗಳ ಕಾಲ ಉಭಯ ದೇಶಗಳ ನಡುವೆ ಮಿಲಿಟರಿ ಉದ್ವಿಗ್ನತೆ ಉಂಟಾಗಿತ್ತು. ಅದಾಗ್ಯೂ, ಭಾರತ ಮತ್ತು ಪಾಕಿಸ್ತಾನ ಎಲ್ಲಾ ಗುಂಡಿನ ದಾಳಿಯನ್ನು ನಿಲ್ಲಿಸಲು ಶನಿವಾರ ಒಪ್ಪಿಕೊಂಡವು.

ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಶನಿವಾರ ಮಧ್ಯಾಹ್ನ ಭಾರತಕ್ಕೆ ಕರೆ ಮಾಡಿ ಚಕಮಕಿಯನ್ನು ಕೊನೆಗೊಳಿಸಲು ಪ್ರಸ್ತಾಪಿಸಿದ್ದಾರೆ ಎಂದು ಇದೇ ವೇಳೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಈ ನಿಲುವನ್ನು ಪುನರುಚ್ಚರಿಸಿದ್ದಾರೆ. ಪಾಕಿಸ್ತಾನದ “ಪರಮಾಣು ಬೆದರಿಕೆ”ಯನ್ನು ಸಹಿಸಲು ಸಾಧ್ಯವಿಲ್ಲ ಮತ್ತು ಆಪರೇಷನ್ ಸಿಂಧೂರ್ ಈಗ ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ನೀತಿಯಾಗಿದೆ ಎಂದು ಮೋದಿ ಹೇಳಿದ್ದಾರೆ.

“ಭಯೋತ್ಪಾದನೆ ಮತ್ತು ಮಾತುಕತೆ” ಏಕಕಾಲದಲ್ಲಿ ನಡೆಯಲು ಸಾಧ್ಯವಿಲ್ಲ ಎಂಬ ಭಾರತದ ನಿಲುವನ್ನು ಮೋದಿ ಪುನರುಚ್ಚರಿಸಿದ್ದಾರೆ. “ಭಯೋತ್ಪಾದನೆ ಮತ್ತು ವ್ಯಾಪಾರ ಏಕಕಾಲದಲ್ಲಿ ನಡೆಯಲು ಸಾಧ್ಯವಿಲ್ಲ, ಮತ್ತು ನೀರು ಮತ್ತು ರಕ್ತ ಏಕಕಾಲದಲ್ಲಿ ಹರಿಯಲು ಸಾಧ್ಯವಿಲ್ಲ” ಎಂದು ಅವರು ಏಪ್ರಿಲ್ 23 ರಂದು ನವದೆಹಲಿ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದ್ದನ್ನು ಉಲ್ಲೇಖಿಸಿ ಹೇಳಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡ ಕೆಲವೇ ನಿಮಿಷಗಳ ನಂತರ ಶನಿವಾರ ಭಾರತದ ವಿದೇಶಾಂಗ ಕಾರ್ಯದರ್ಶಿ ಈ ಬಗ್ಗೆ ಘೋಷಣೆ ಮಾಡಿದ್ದರು.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರು ಸಾಮಾಜಿಕ ಮಾಧ್ಯಮದಲ್ಲಿ ಭಾರತ ಮತ್ತು ಪಾಕಿಸ್ತಾನ “ತಟಸ್ಥ ಸ್ಥಳದಲ್ಲಿ ವ್ಯಾಪಕವಾದ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸಲು” ಒಪ್ಪಿಕೊಂಡಿವೆ ಎಂದು ಹೇಳಿಕೊಂಡಿದ್ದರು. ವ್ಯಾಪಾರ ನಿಲ್ಲಿಸುವುದಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

2019 ರ ಪೊಲ್ಲಾಚಿ ಲೈಂಗಿಕ ದೌರ್ಜನ್ಯ ಪ್ರಕರಣ | ಎಲ್ಲಾ ಒಂಬತ್ತು ಆರೋಪಿಗಳು ದೋಷಿಗಳು ಎಂದು ತೀರ್ಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...