Homeಮುಖಪುಟಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

ಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಟ್ವಿಟರ್‌ ಖಾತೆಯನ್ನು ಟ್ವಿಟರ್‌ ಕಂಪನಿ ಶಾಶ್ವತವಾಗಿ ನಿರ್ಬಂಧಿಸಿದ್ದು, ಇದರ ಕುರಿತು ಜಗತ್ತಿನಾದ್ಯಂತ ವಿಭಿನ್ನ ಪ್ರತಿಕ್ರಿಯೆಗಳು ಬರುತ್ತಿವೆ. ಅಂತೆಯೇ ಭಾರತದ ಬಿಜೆಪಿ ನಾಯಕರೂ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು, ಟ್ವಿಟರ್‌ ಕಂಪನಿಯ ಈ ಕ್ರಮವನ್ನು ಖಂಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರ ಮೇಲೆಯೇ ಇಂತಹ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿರುವ ಟ್ವಿಟರ್‌, ನಮ್ಮಂತಹವರನ್ನು ಬಿಡುತ್ತದೆಯೇ ಎನ್ನುವ ಭಯ ಬಿಜೆಪಿ ನಾಯಕರಿಗೆ ಆರಂಭವಾದಂತಿದೆ. ಈ ಭಯವನ್ನು ಬಿಜೆಪಿ ನಾಯಕರು ತಮ್ಮ ಟ್ವೀಟ್‌ಗಳ ಮೂಲಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, “ಯಾರ ನಿಯಂತ್ರಣವೂ ಇಲ್ಲದ ಈ ದೈತ್ಯ ತಂತ್ರಜ್ಞಾನ ಕಂಪನಿಗಳಿಂದ ನಮ್ಮ ಪ್ರಜಾಪ್ರಭುತ್ವಕ್ಕೆ ಇರುವ ಅಪಾಯವನ್ನು ಇನ್ನೂ ಅರ್ಥಮಾಡಿಕೊಳ್ಳದವರಿಗೆ ಇದು ಎಚ್ಚರಿಕೆಯ ಕರೆಗಂಟೆಯಾಗಿದೆ. ಅವರು ಅಮೆರಿಕ ಅಧ್ಯಕ್ಷರಿಗೆ ಈ ರೀತಿ ಮಾಡಿದ್ದಾರೆ ಎಂದರೆ, ಇದನ್ನು ಯಾರಿಗಾದರೂ ಮಾಡಬಹುದು. ಭಾರತವು ನಮ್ಮ ಪ್ರಜಾಪ್ರಭುತ್ವದ ಒಳಿತಿಗಾಗಿ ಈ ಶೀಘ್ರದಲ್ಲೇ ಮಧ್ಯವರ್ತಿಗಳ ನಿಯಮಗಳನ್ನು ಪರಿಶೀಲಿಸಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಬಿಜೆಪಿ ಐಟಿ ಸೆಲ್‌ನ ರಾಷ್ಟ್ರೀಯ ಉಸ್ತುವಾರಿ ಅಮಿತ್‌ ಮಾಳವೀಯ ಟ್ವೀಟ್‌ ಮಾಡಿ, “ಪ್ರಸ್ತುತ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಖಾತೆಯನ್ನು ನಿರ್ಬಂಧಿಸಿರುವುದು ಅಪಾಯಕಾರಿಯಾಗಿದ್ದು, ಇದು ಒಂದು ಪೂರ್ವ ನಿದರ್ಶನವಾಗಿದೆ. ವಿಪರ್ಯಾಸವೆಂದರೆ ವಾಕ್‌ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಇದನ್ನು ಸಂಭ್ರಮಿಸುತ್ತಿದ್ದಾರೆ. ದೈತ್ಯ ತಂತ್ರಜ್ಞಾನ ಕಂಪನಿಗಳು ಈಗ ಓಲಿಗಾರ್ಚ್‌ಗಾಳಗಿವೆ (ಮಿತಜನ ಕೇಂದ್ರಿತ)” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ಇತ್ತೀಚೆಗೆ ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ ಎನ್ನುವ ಪತ್ರಿಕೆಯೊಂದು ಭಾರತದಲ್ಲಿನ ಫೇಸ್‌ಬುಕ್‌ ಅಲ್ಲಿನ ಆಡಳಿತ ಪಕ್ಷದೊಂದಿಗೆ ಶಾಮೀಲಾಗಿದೆ ಎನ್ನುವ ವರದಿಯೊಂದನ್ನು ಬಿಡುಗಡೆ ಮಾಡಿತ್ತು. 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲು ಬೇಕಾಗುವ ಎಲ್ಲಾ ತಂತ್ರಗಳನ್ನು ಫೇಸ್‌ಬುಕ್‌ ಅನಧಿಕೃತವಾಗಿ ಮಾಡಿತ್ತು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಲಾಗಿತ್ತು.

ಬಿಜೆಪಿಯವರ ದ್ವೇಷ ಭಾಷಣಗಳನ್ನು ನಿರ್ಬಂಧಿಸುವಲ್ಲಿ ಫೇಸ್‌ಬುಕ್‌ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ಅಮೆರಿಕದ ಪತ್ರಿಕೆ ವರದಿ ಮಾಡಿದ ನಂತರ ಭಾರತದಲ್ಲಿ ಇದಕ್ಕೆ ಸಂಬಂಧಪಟ್ಟ ಚರ್ಚೆಗಳು ತೀವ್ರವಾಗಿ ನಡೆದಿದ್ದವು. ಇದರ ಭಾಗವಾಗಿ ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಆಂಖಿದಾಸ್‌ ಕೂಡ ಇತ್ತೀಚೆಗೆ ರಾಜೀನಾಮೆ ನೀಡಿದ್ದರು.

ಇಷ್ಟೇ ಅಲ್ಲದೇ ಭಾರತದಲ್ಲಿನ ಸಾಮಾಜಿಕ ಮಾಧ್ಯಮಗಳನ್ನು ಬಿಜೆಪಿಯು ತನಗೆ ಬೇಕಾದಂತೆ ಕಾನೂನುಭಾಹಿರವಾಗಿ ಬಳಸಿಕೊಳ್ಳುತ್ತಿದೆ ಎನ್ನುವ ಆರೋಪವಿದೆ.

ಇದನ್ನೂ ಓದಿ: ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಇದಕ್ಕೆ ಪುಷ್ಟಿ ನೀಡುವ ಹತ್ತಾರು ಅಂಶಗಳನ್ನು ಕೇಂದ್ರ ಸರ್ಕಾರದ ನೀತಿಗಳು ಬಹಿರಂಗಪಡಿಸಿವೆ. ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳನ್ನು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌‌ನಲ್ಲಿ ಮನವಿ ಸಲ್ಲಿಸಿತ್ತು. ಇದರ ಭಾಗವಾಗಿ ವಾಟ್ಸಾಪ್‌ ಅನ್ನು ಫೇಸ್‌ಬುಕ್‌ಗೆ ಲಿಂಕ್‌ ಮಾಡುವಂತೆ ಹೊಸ ಅಪ್ಡೇಟ್‌ ವರ್ಶನ್‌ ಬಂದಿದೆ. ಈ ಮೂಲಕ ಬಿಜೆಪಿಗೆ ವಿರುದ್ಧವಾಗಿ ಹೊರಡುವ ಸಂದೇಶಗಳನ್ನು ಕೇಂದ್ರ ಸರ್ಕಾರವು ಕದ್ದಾಲಿಕೆ ಮಾಡುವುದರರೊಂದಿಗೆ ನಿಯಂತ್ರಿಸಲು ಪ್ರಯತ್ನಿಸುತ್ತಿದೆ.

ಇಂತಹುದೇ ಕ್ರಮವನ್ನು ಫೇಸ್‌ಬುಕ್‌ ಇಂಡಿಯಾ ಈ ಹಿಂದೆ ತೆಗೆದುಕೊಂಡಿತ್ತು. ಬಿಜೆಪಿಗೆ ವಿರುದ್ಧವಾಗಿ ವ್ಯವಹರಿಸುವ ಎಲ್ಲಾ ಪೇಜ್‌ಗಳನ್ನು ನಿರ್ಬಂಧಿಸಿತ್ತು. ಭಾರತದ ಟ್ವಿಟರ್‌ ಕೂಡ ಇದರಿಂದ ಹೊರತಾಗಿಲ್ಲ. ಹಾಗಾಗಿ ಫೇಸ್‌ಬುಕ್‌ ಮತ್ತು ಟ್ವಿಟರ್‌ ಕಂಪನಿಗಳು ಭಾರತದಲ್ಲಿ ಬಿಜೆಪಿಯ ಪರವಾಗಿವೆ. ಆದರೆ ಅದು ಜಾಗತಿಕ ಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕೆಲಸ ಮಾಡುವಂತೆ ಒತ್ತಡ ಬರುತ್ತಿದೆ.

ಇದರಿಂದ ಭಯಬಿದ್ದ ಭಾರತೀಯ ಬಿಜೆಪಿ ನಾಯಕರು ಮತ್ತು ಇನ್ನಿತರರು ತಮಗೂ ಇದೇ ಗತಿ ಬರಬಹುದು ಎಂದು ಊಹಿಸಿ, ʼತಮ್ಮ ದೊಡ್ಡಣ್ಣʼನಿಗಾದ ಗತಿಯನ್ನು ಖಂಡಿಸುತ್ತಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ವೈಯಕ್ತಿಕ ಖಾತೆಯನ್ನು (realDonaldTrump) ಟ್ವಿಟರ್ ಶಾಶ್ವತವಾಗಿ ಬ್ಯಾನ್ ಮಾಡಿದ್ದು, ಅಮೆರಿಕ ಕ್ಯಾಪಿಟಲ್ ಮೇಲಿನ ಮತ್ತೊಂದು ದಾಳಿಯನ್ನು ತಡೆಯಲು ಈ ಕ್ರಮ ಅನಿವಾರ್ಯವಾಗಿದೆ ಎಂದು ಟ್ವಿಟರ್ ಹೇಳಿದೆ.

ಇದರಿಂದ ಕೆರಳಿದ ಟ್ರಂಪ್ ‘ಟ್ವಿಟರ್ ನನ್ನ ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ’ ಎಂದು ತನ್ನ ಕಾರ್ಯಕ್ರಮಗಳ ಮತ್ತು ಚುನಾವಣಾ ಪ್ರಚಾರಕ್ಕಾಗಿ ಬಳಸುತ್ತಿದ್ದ ಟೀಮ್ ಟ್ರಂಪ್ ಖಾತೆಯಿಂದ ಟ್ವೀಟ್ ಮಾಡಿದ್ದರು. ಕೂಡಲೇ ಆ ಖಾತೆಯನ್ನೂ ಸಹ ಟ್ವಿಟರ್ ಅಮಾನತು ಮಾಡಿದೆ.

ನಾವು ಟ್ರಂಪ್‌ ಟ್ವೀಟ್‌ಗಳನ್ನು ಹತ್ತಿರದಿಂದ ಅವಲೋಕಿಸಿದ್ದೇವೆ. ಮುಂದಿನ ಹಿಂಸಾತ್ಮಕ ಅಪಾಯಗಳನ್ನು ತಡೆಯಲು ಅವರ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡುತ್ತಿದ್ದೇವೆ ಎಂದು ಟ್ವಿಟರ್ ತಿಳಿಸಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ಟ್ರಂಪ್‌ ಆಡಳಿತವಧಿಯಲ್ಲಿ ತನ್ನ ವೈಯಕ್ತಿಕ ಖಾತೆಯ ಮೂಲಕ ಆಧಾರವಿಲ್ಲದ ಆರೋಪಗಳು, ಸುಳ್ಳು ಘೋಷಣೆಗಳು, ತಪ್ಪು ಮಾಹಿತಿಗಳನ್ನು ಹರಡಿದ್ದಾರೆ ಎಂದು ಟ್ವಿಟರ್ ಆರೋಪಿಸಿದೆ.

ಟ್ರಂಪ್ ಅಧಿಕಾರವಧಿ ಮುಗಿಯುತ್ತಿದ್ದು, ಬುಧವಾರ ನಡೆದ ಯುಸ್ ಸಂಸತ್ ಮೇಲಿನ ದಾಳಿಗೆ ಟ್ರಂಪ್‌ ಅನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಇದೇ ಸಮಯಕ್ಕೆ ಕಾಯುತ್ತಿದ್ದ ಟ್ವಿಟರ್ ಟ್ರಂಪ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಎಚ್ಚರಿಕೆ ರವಾನಿಸಿದೆ.

ಬಹುದೊಡ್ಡ ಪ್ರಜಾಪ್ರಭುತ್ವ ಎಂದು ಹೇಳಿಕೊಳ್ಳುವ ದೇಶದ ಅಧ್ಯಕ್ಷರಾಗಿ ಟ್ರಂಪ್ ನಡೆದುಕೊಂಡಿದ್ದು, ಗಲಭೆಗೆ ಪ್ರಚೋದನೆ ನೀಡಿದ್ದು, ಅದರಿಂದಾಗಿ ಅವರ ಟ್ವಿಟರ್ ಖಾತೆ ಖಾಯಂ ಬ್ಯಾನ್‌ ಆಗಿದ್ದು ಎಲ್ಲವೂ ಅವರಿಗೆ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ತದನಂತರ ಟ್ರಂಪ್ ಅಧ್ಯಕ್ಷರ ಅಧಿಕೃತ ಖಾತೆ @POTUS ಮೂಲಕ ಟ್ವಿಟರ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ತೀವ್ರ ಎಡಪಂಥೀಯರ ಜೊತೆ ಸೇರಿ ಟ್ವಿಟರ್ ನನ್ನ ಮೇಲೆ ಪಿತೂರಿ ನಡೆಸುತ್ತಿದೆ ಎಂದು ದೂರಿದ್ದಾರೆ. ಆ ಟ್ವೀಟ್ ಅನ್ನು ಸಹ ಟ್ವಿಟರ್ ಡಿಲೀಟ್ ಮಾಡಿದೆ.

ಮತ್ತೊಂದು ಖಾತೆಯನ್ನು ಬಳಸಿ ಟ್ವಿಟರ್ ಅನ್ನು ಹಣಿಯಲು ಮುಂದಾಗುವುದು ನಮ್ಮ ನಿಯಮಗಳ ಉಲ್ಲಂಘಟನೆ ಎಂದು ಟ್ವಿಟರ್ ತಿಳಿಸಿದೆ.

ಯುಎಸ್ ಕ್ಯಾಪಿಟಲ್ ಮೇಲೆ ದಾಳಿ ನಡೆದಾಗ ತಾತ್ಕಾಲಿಕವಾಗಿ ಟ್ರಂಪ್ ಖಾತೆಯನ್ನು ಸ್ಥಗಿತಗೊಳಿಸಿತ್ತು. ಅದಕ್ಕೂ ಮೊದಲು ಟ್ರಂಪ್ “ನಾನು ಜನವರಿ 20ರ ಜೋ ಬೈಡೆನ್ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ, ನನ್ನ ಅಭಿಮಾನಿಗಳು ನನ್ನ ಮಾತು ಮೀರುವುದಿಲ್ಲ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಅನೋಷ್ಕಾ ಚೋಪ್ರಾ ಫೇಸ್‌ಬುಕ್‌ ಖಾತೆ ಮೂಲಕ ಪಾಕ್‌ ಪರ ಗೂಢಾಚರ್ಯೆ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತದ ಬಿಜೆಪಿ ನಾಯಕರು ಹೆದರುವುದರಲ್ಲಿ ಅರ್ಥವಿದೆ ಏಕೆಂದರೆ ಬ್ಯಾನ್ ಆಗುವಂತಹ ಸಮಾಜದಲ್ಲಿ ವಿಷ ಹರಡುವಂತಹ ಹೇಳಿಕೆಗಳನ್ನ ನೀಡುವವರು ಹೆದರುವುದರಲ್ಲಿ ತಪ್ಪೇನಿದೆ, ಸಮಾಜದಲ್ಲಿ ಗೊಂದಲ ಗದ್ದಲ ಕಲಹಗಳಿಲ್ಲದಿದ್ದರೆ ಇಂತವರಿಗೆ ಇಲ್ಲಿ ಮತ ಕೇಳಲು ಮಾತುಗಳಿರುವುದಿಲ್ಲವಲ್ಲಾ….. ಟ್ರಂಪ್ ನಂತಹ ವಿಷಕಾರಿಯನ್ನು ಜನರಿಂದ ದೂರವಿಡುವ ಪ್ರಯತ್ನ ಮಾಡಿದ ಟ್ವಿಟರ್ ಕಂಪನಿಗೆ ಅಬಿನಂದನೆ.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...