Homeಮುಖಪುಟಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

ಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಟ್ವಿಟರ್‌ ಖಾತೆಯನ್ನು ಟ್ವಿಟರ್‌ ಕಂಪನಿ ಶಾಶ್ವತವಾಗಿ ನಿರ್ಬಂಧಿಸಿದ್ದು, ಇದರ ಕುರಿತು ಜಗತ್ತಿನಾದ್ಯಂತ ವಿಭಿನ್ನ ಪ್ರತಿಕ್ರಿಯೆಗಳು ಬರುತ್ತಿವೆ. ಅಂತೆಯೇ ಭಾರತದ ಬಿಜೆಪಿ ನಾಯಕರೂ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು, ಟ್ವಿಟರ್‌ ಕಂಪನಿಯ ಈ ಕ್ರಮವನ್ನು ಖಂಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರ ಮೇಲೆಯೇ ಇಂತಹ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿರುವ ಟ್ವಿಟರ್‌, ನಮ್ಮಂತಹವರನ್ನು ಬಿಡುತ್ತದೆಯೇ ಎನ್ನುವ ಭಯ ಬಿಜೆಪಿ ನಾಯಕರಿಗೆ ಆರಂಭವಾದಂತಿದೆ. ಈ ಭಯವನ್ನು ಬಿಜೆಪಿ ನಾಯಕರು ತಮ್ಮ ಟ್ವೀಟ್‌ಗಳ ಮೂಲಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, “ಯಾರ ನಿಯಂತ್ರಣವೂ ಇಲ್ಲದ ಈ ದೈತ್ಯ ತಂತ್ರಜ್ಞಾನ ಕಂಪನಿಗಳಿಂದ ನಮ್ಮ ಪ್ರಜಾಪ್ರಭುತ್ವಕ್ಕೆ ಇರುವ ಅಪಾಯವನ್ನು ಇನ್ನೂ ಅರ್ಥಮಾಡಿಕೊಳ್ಳದವರಿಗೆ ಇದು ಎಚ್ಚರಿಕೆಯ ಕರೆಗಂಟೆಯಾಗಿದೆ. ಅವರು ಅಮೆರಿಕ ಅಧ್ಯಕ್ಷರಿಗೆ ಈ ರೀತಿ ಮಾಡಿದ್ದಾರೆ ಎಂದರೆ, ಇದನ್ನು ಯಾರಿಗಾದರೂ ಮಾಡಬಹುದು. ಭಾರತವು ನಮ್ಮ ಪ್ರಜಾಪ್ರಭುತ್ವದ ಒಳಿತಿಗಾಗಿ ಈ ಶೀಘ್ರದಲ್ಲೇ ಮಧ್ಯವರ್ತಿಗಳ ನಿಯಮಗಳನ್ನು ಪರಿಶೀಲಿಸಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಬಿಜೆಪಿ ಐಟಿ ಸೆಲ್‌ನ ರಾಷ್ಟ್ರೀಯ ಉಸ್ತುವಾರಿ ಅಮಿತ್‌ ಮಾಳವೀಯ ಟ್ವೀಟ್‌ ಮಾಡಿ, “ಪ್ರಸ್ತುತ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಖಾತೆಯನ್ನು ನಿರ್ಬಂಧಿಸಿರುವುದು ಅಪಾಯಕಾರಿಯಾಗಿದ್ದು, ಇದು ಒಂದು ಪೂರ್ವ ನಿದರ್ಶನವಾಗಿದೆ. ವಿಪರ್ಯಾಸವೆಂದರೆ ವಾಕ್‌ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಇದನ್ನು ಸಂಭ್ರಮಿಸುತ್ತಿದ್ದಾರೆ. ದೈತ್ಯ ತಂತ್ರಜ್ಞಾನ ಕಂಪನಿಗಳು ಈಗ ಓಲಿಗಾರ್ಚ್‌ಗಾಳಗಿವೆ (ಮಿತಜನ ಕೇಂದ್ರಿತ)” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ಇತ್ತೀಚೆಗೆ ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ ಎನ್ನುವ ಪತ್ರಿಕೆಯೊಂದು ಭಾರತದಲ್ಲಿನ ಫೇಸ್‌ಬುಕ್‌ ಅಲ್ಲಿನ ಆಡಳಿತ ಪಕ್ಷದೊಂದಿಗೆ ಶಾಮೀಲಾಗಿದೆ ಎನ್ನುವ ವರದಿಯೊಂದನ್ನು ಬಿಡುಗಡೆ ಮಾಡಿತ್ತು. 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲು ಬೇಕಾಗುವ ಎಲ್ಲಾ ತಂತ್ರಗಳನ್ನು ಫೇಸ್‌ಬುಕ್‌ ಅನಧಿಕೃತವಾಗಿ ಮಾಡಿತ್ತು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಲಾಗಿತ್ತು.

ಬಿಜೆಪಿಯವರ ದ್ವೇಷ ಭಾಷಣಗಳನ್ನು ನಿರ್ಬಂಧಿಸುವಲ್ಲಿ ಫೇಸ್‌ಬುಕ್‌ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ಅಮೆರಿಕದ ಪತ್ರಿಕೆ ವರದಿ ಮಾಡಿದ ನಂತರ ಭಾರತದಲ್ಲಿ ಇದಕ್ಕೆ ಸಂಬಂಧಪಟ್ಟ ಚರ್ಚೆಗಳು ತೀವ್ರವಾಗಿ ನಡೆದಿದ್ದವು. ಇದರ ಭಾಗವಾಗಿ ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಆಂಖಿದಾಸ್‌ ಕೂಡ ಇತ್ತೀಚೆಗೆ ರಾಜೀನಾಮೆ ನೀಡಿದ್ದರು.

ಇಷ್ಟೇ ಅಲ್ಲದೇ ಭಾರತದಲ್ಲಿನ ಸಾಮಾಜಿಕ ಮಾಧ್ಯಮಗಳನ್ನು ಬಿಜೆಪಿಯು ತನಗೆ ಬೇಕಾದಂತೆ ಕಾನೂನುಭಾಹಿರವಾಗಿ ಬಳಸಿಕೊಳ್ಳುತ್ತಿದೆ ಎನ್ನುವ ಆರೋಪವಿದೆ.

ಇದನ್ನೂ ಓದಿ: ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಇದಕ್ಕೆ ಪುಷ್ಟಿ ನೀಡುವ ಹತ್ತಾರು ಅಂಶಗಳನ್ನು ಕೇಂದ್ರ ಸರ್ಕಾರದ ನೀತಿಗಳು ಬಹಿರಂಗಪಡಿಸಿವೆ. ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳನ್ನು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌‌ನಲ್ಲಿ ಮನವಿ ಸಲ್ಲಿಸಿತ್ತು. ಇದರ ಭಾಗವಾಗಿ ವಾಟ್ಸಾಪ್‌ ಅನ್ನು ಫೇಸ್‌ಬುಕ್‌ಗೆ ಲಿಂಕ್‌ ಮಾಡುವಂತೆ ಹೊಸ ಅಪ್ಡೇಟ್‌ ವರ್ಶನ್‌ ಬಂದಿದೆ. ಈ ಮೂಲಕ ಬಿಜೆಪಿಗೆ ವಿರುದ್ಧವಾಗಿ ಹೊರಡುವ ಸಂದೇಶಗಳನ್ನು ಕೇಂದ್ರ ಸರ್ಕಾರವು ಕದ್ದಾಲಿಕೆ ಮಾಡುವುದರರೊಂದಿಗೆ ನಿಯಂತ್ರಿಸಲು ಪ್ರಯತ್ನಿಸುತ್ತಿದೆ.

ಇಂತಹುದೇ ಕ್ರಮವನ್ನು ಫೇಸ್‌ಬುಕ್‌ ಇಂಡಿಯಾ ಈ ಹಿಂದೆ ತೆಗೆದುಕೊಂಡಿತ್ತು. ಬಿಜೆಪಿಗೆ ವಿರುದ್ಧವಾಗಿ ವ್ಯವಹರಿಸುವ ಎಲ್ಲಾ ಪೇಜ್‌ಗಳನ್ನು ನಿರ್ಬಂಧಿಸಿತ್ತು. ಭಾರತದ ಟ್ವಿಟರ್‌ ಕೂಡ ಇದರಿಂದ ಹೊರತಾಗಿಲ್ಲ. ಹಾಗಾಗಿ ಫೇಸ್‌ಬುಕ್‌ ಮತ್ತು ಟ್ವಿಟರ್‌ ಕಂಪನಿಗಳು ಭಾರತದಲ್ಲಿ ಬಿಜೆಪಿಯ ಪರವಾಗಿವೆ. ಆದರೆ ಅದು ಜಾಗತಿಕ ಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕೆಲಸ ಮಾಡುವಂತೆ ಒತ್ತಡ ಬರುತ್ತಿದೆ.

ಇದರಿಂದ ಭಯಬಿದ್ದ ಭಾರತೀಯ ಬಿಜೆಪಿ ನಾಯಕರು ಮತ್ತು ಇನ್ನಿತರರು ತಮಗೂ ಇದೇ ಗತಿ ಬರಬಹುದು ಎಂದು ಊಹಿಸಿ, ʼತಮ್ಮ ದೊಡ್ಡಣ್ಣʼನಿಗಾದ ಗತಿಯನ್ನು ಖಂಡಿಸುತ್ತಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ವೈಯಕ್ತಿಕ ಖಾತೆಯನ್ನು (realDonaldTrump) ಟ್ವಿಟರ್ ಶಾಶ್ವತವಾಗಿ ಬ್ಯಾನ್ ಮಾಡಿದ್ದು, ಅಮೆರಿಕ ಕ್ಯಾಪಿಟಲ್ ಮೇಲಿನ ಮತ್ತೊಂದು ದಾಳಿಯನ್ನು ತಡೆಯಲು ಈ ಕ್ರಮ ಅನಿವಾರ್ಯವಾಗಿದೆ ಎಂದು ಟ್ವಿಟರ್ ಹೇಳಿದೆ.

ಇದರಿಂದ ಕೆರಳಿದ ಟ್ರಂಪ್ ‘ಟ್ವಿಟರ್ ನನ್ನ ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ’ ಎಂದು ತನ್ನ ಕಾರ್ಯಕ್ರಮಗಳ ಮತ್ತು ಚುನಾವಣಾ ಪ್ರಚಾರಕ್ಕಾಗಿ ಬಳಸುತ್ತಿದ್ದ ಟೀಮ್ ಟ್ರಂಪ್ ಖಾತೆಯಿಂದ ಟ್ವೀಟ್ ಮಾಡಿದ್ದರು. ಕೂಡಲೇ ಆ ಖಾತೆಯನ್ನೂ ಸಹ ಟ್ವಿಟರ್ ಅಮಾನತು ಮಾಡಿದೆ.

ನಾವು ಟ್ರಂಪ್‌ ಟ್ವೀಟ್‌ಗಳನ್ನು ಹತ್ತಿರದಿಂದ ಅವಲೋಕಿಸಿದ್ದೇವೆ. ಮುಂದಿನ ಹಿಂಸಾತ್ಮಕ ಅಪಾಯಗಳನ್ನು ತಡೆಯಲು ಅವರ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡುತ್ತಿದ್ದೇವೆ ಎಂದು ಟ್ವಿಟರ್ ತಿಳಿಸಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ಟ್ರಂಪ್‌ ಆಡಳಿತವಧಿಯಲ್ಲಿ ತನ್ನ ವೈಯಕ್ತಿಕ ಖಾತೆಯ ಮೂಲಕ ಆಧಾರವಿಲ್ಲದ ಆರೋಪಗಳು, ಸುಳ್ಳು ಘೋಷಣೆಗಳು, ತಪ್ಪು ಮಾಹಿತಿಗಳನ್ನು ಹರಡಿದ್ದಾರೆ ಎಂದು ಟ್ವಿಟರ್ ಆರೋಪಿಸಿದೆ.

ಟ್ರಂಪ್ ಅಧಿಕಾರವಧಿ ಮುಗಿಯುತ್ತಿದ್ದು, ಬುಧವಾರ ನಡೆದ ಯುಸ್ ಸಂಸತ್ ಮೇಲಿನ ದಾಳಿಗೆ ಟ್ರಂಪ್‌ ಅನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಇದೇ ಸಮಯಕ್ಕೆ ಕಾಯುತ್ತಿದ್ದ ಟ್ವಿಟರ್ ಟ್ರಂಪ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಎಚ್ಚರಿಕೆ ರವಾನಿಸಿದೆ.

ಬಹುದೊಡ್ಡ ಪ್ರಜಾಪ್ರಭುತ್ವ ಎಂದು ಹೇಳಿಕೊಳ್ಳುವ ದೇಶದ ಅಧ್ಯಕ್ಷರಾಗಿ ಟ್ರಂಪ್ ನಡೆದುಕೊಂಡಿದ್ದು, ಗಲಭೆಗೆ ಪ್ರಚೋದನೆ ನೀಡಿದ್ದು, ಅದರಿಂದಾಗಿ ಅವರ ಟ್ವಿಟರ್ ಖಾತೆ ಖಾಯಂ ಬ್ಯಾನ್‌ ಆಗಿದ್ದು ಎಲ್ಲವೂ ಅವರಿಗೆ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ತದನಂತರ ಟ್ರಂಪ್ ಅಧ್ಯಕ್ಷರ ಅಧಿಕೃತ ಖಾತೆ @POTUS ಮೂಲಕ ಟ್ವಿಟರ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ತೀವ್ರ ಎಡಪಂಥೀಯರ ಜೊತೆ ಸೇರಿ ಟ್ವಿಟರ್ ನನ್ನ ಮೇಲೆ ಪಿತೂರಿ ನಡೆಸುತ್ತಿದೆ ಎಂದು ದೂರಿದ್ದಾರೆ. ಆ ಟ್ವೀಟ್ ಅನ್ನು ಸಹ ಟ್ವಿಟರ್ ಡಿಲೀಟ್ ಮಾಡಿದೆ.

ಮತ್ತೊಂದು ಖಾತೆಯನ್ನು ಬಳಸಿ ಟ್ವಿಟರ್ ಅನ್ನು ಹಣಿಯಲು ಮುಂದಾಗುವುದು ನಮ್ಮ ನಿಯಮಗಳ ಉಲ್ಲಂಘಟನೆ ಎಂದು ಟ್ವಿಟರ್ ತಿಳಿಸಿದೆ.

ಯುಎಸ್ ಕ್ಯಾಪಿಟಲ್ ಮೇಲೆ ದಾಳಿ ನಡೆದಾಗ ತಾತ್ಕಾಲಿಕವಾಗಿ ಟ್ರಂಪ್ ಖಾತೆಯನ್ನು ಸ್ಥಗಿತಗೊಳಿಸಿತ್ತು. ಅದಕ್ಕೂ ಮೊದಲು ಟ್ರಂಪ್ “ನಾನು ಜನವರಿ 20ರ ಜೋ ಬೈಡೆನ್ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ, ನನ್ನ ಅಭಿಮಾನಿಗಳು ನನ್ನ ಮಾತು ಮೀರುವುದಿಲ್ಲ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಅನೋಷ್ಕಾ ಚೋಪ್ರಾ ಫೇಸ್‌ಬುಕ್‌ ಖಾತೆ ಮೂಲಕ ಪಾಕ್‌ ಪರ ಗೂಢಾಚರ್ಯೆ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತದ ಬಿಜೆಪಿ ನಾಯಕರು ಹೆದರುವುದರಲ್ಲಿ ಅರ್ಥವಿದೆ ಏಕೆಂದರೆ ಬ್ಯಾನ್ ಆಗುವಂತಹ ಸಮಾಜದಲ್ಲಿ ವಿಷ ಹರಡುವಂತಹ ಹೇಳಿಕೆಗಳನ್ನ ನೀಡುವವರು ಹೆದರುವುದರಲ್ಲಿ ತಪ್ಪೇನಿದೆ, ಸಮಾಜದಲ್ಲಿ ಗೊಂದಲ ಗದ್ದಲ ಕಲಹಗಳಿಲ್ಲದಿದ್ದರೆ ಇಂತವರಿಗೆ ಇಲ್ಲಿ ಮತ ಕೇಳಲು ಮಾತುಗಳಿರುವುದಿಲ್ಲವಲ್ಲಾ….. ಟ್ರಂಪ್ ನಂತಹ ವಿಷಕಾರಿಯನ್ನು ಜನರಿಂದ ದೂರವಿಡುವ ಪ್ರಯತ್ನ ಮಾಡಿದ ಟ್ವಿಟರ್ ಕಂಪನಿಗೆ ಅಬಿನಂದನೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...