Homeಮುಖಪುಟಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

ಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಟ್ವಿಟರ್‌ ಖಾತೆಯನ್ನು ಟ್ವಿಟರ್‌ ಕಂಪನಿ ಶಾಶ್ವತವಾಗಿ ನಿರ್ಬಂಧಿಸಿದ್ದು, ಇದರ ಕುರಿತು ಜಗತ್ತಿನಾದ್ಯಂತ ವಿಭಿನ್ನ ಪ್ರತಿಕ್ರಿಯೆಗಳು ಬರುತ್ತಿವೆ. ಅಂತೆಯೇ ಭಾರತದ ಬಿಜೆಪಿ ನಾಯಕರೂ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು, ಟ್ವಿಟರ್‌ ಕಂಪನಿಯ ಈ ಕ್ರಮವನ್ನು ಖಂಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರ ಮೇಲೆಯೇ ಇಂತಹ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿರುವ ಟ್ವಿಟರ್‌, ನಮ್ಮಂತಹವರನ್ನು ಬಿಡುತ್ತದೆಯೇ ಎನ್ನುವ ಭಯ ಬಿಜೆಪಿ ನಾಯಕರಿಗೆ ಆರಂಭವಾದಂತಿದೆ. ಈ ಭಯವನ್ನು ಬಿಜೆಪಿ ನಾಯಕರು ತಮ್ಮ ಟ್ವೀಟ್‌ಗಳ ಮೂಲಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, “ಯಾರ ನಿಯಂತ್ರಣವೂ ಇಲ್ಲದ ಈ ದೈತ್ಯ ತಂತ್ರಜ್ಞಾನ ಕಂಪನಿಗಳಿಂದ ನಮ್ಮ ಪ್ರಜಾಪ್ರಭುತ್ವಕ್ಕೆ ಇರುವ ಅಪಾಯವನ್ನು ಇನ್ನೂ ಅರ್ಥಮಾಡಿಕೊಳ್ಳದವರಿಗೆ ಇದು ಎಚ್ಚರಿಕೆಯ ಕರೆಗಂಟೆಯಾಗಿದೆ. ಅವರು ಅಮೆರಿಕ ಅಧ್ಯಕ್ಷರಿಗೆ ಈ ರೀತಿ ಮಾಡಿದ್ದಾರೆ ಎಂದರೆ, ಇದನ್ನು ಯಾರಿಗಾದರೂ ಮಾಡಬಹುದು. ಭಾರತವು ನಮ್ಮ ಪ್ರಜಾಪ್ರಭುತ್ವದ ಒಳಿತಿಗಾಗಿ ಈ ಶೀಘ್ರದಲ್ಲೇ ಮಧ್ಯವರ್ತಿಗಳ ನಿಯಮಗಳನ್ನು ಪರಿಶೀಲಿಸಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಬಿಜೆಪಿ ಐಟಿ ಸೆಲ್‌ನ ರಾಷ್ಟ್ರೀಯ ಉಸ್ತುವಾರಿ ಅಮಿತ್‌ ಮಾಳವೀಯ ಟ್ವೀಟ್‌ ಮಾಡಿ, “ಪ್ರಸ್ತುತ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಖಾತೆಯನ್ನು ನಿರ್ಬಂಧಿಸಿರುವುದು ಅಪಾಯಕಾರಿಯಾಗಿದ್ದು, ಇದು ಒಂದು ಪೂರ್ವ ನಿದರ್ಶನವಾಗಿದೆ. ವಿಪರ್ಯಾಸವೆಂದರೆ ವಾಕ್‌ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಇದನ್ನು ಸಂಭ್ರಮಿಸುತ್ತಿದ್ದಾರೆ. ದೈತ್ಯ ತಂತ್ರಜ್ಞಾನ ಕಂಪನಿಗಳು ಈಗ ಓಲಿಗಾರ್ಚ್‌ಗಾಳಗಿವೆ (ಮಿತಜನ ಕೇಂದ್ರಿತ)” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ಇತ್ತೀಚೆಗೆ ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ ಎನ್ನುವ ಪತ್ರಿಕೆಯೊಂದು ಭಾರತದಲ್ಲಿನ ಫೇಸ್‌ಬುಕ್‌ ಅಲ್ಲಿನ ಆಡಳಿತ ಪಕ್ಷದೊಂದಿಗೆ ಶಾಮೀಲಾಗಿದೆ ಎನ್ನುವ ವರದಿಯೊಂದನ್ನು ಬಿಡುಗಡೆ ಮಾಡಿತ್ತು. 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲು ಬೇಕಾಗುವ ಎಲ್ಲಾ ತಂತ್ರಗಳನ್ನು ಫೇಸ್‌ಬುಕ್‌ ಅನಧಿಕೃತವಾಗಿ ಮಾಡಿತ್ತು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಲಾಗಿತ್ತು.

ಬಿಜೆಪಿಯವರ ದ್ವೇಷ ಭಾಷಣಗಳನ್ನು ನಿರ್ಬಂಧಿಸುವಲ್ಲಿ ಫೇಸ್‌ಬುಕ್‌ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ಅಮೆರಿಕದ ಪತ್ರಿಕೆ ವರದಿ ಮಾಡಿದ ನಂತರ ಭಾರತದಲ್ಲಿ ಇದಕ್ಕೆ ಸಂಬಂಧಪಟ್ಟ ಚರ್ಚೆಗಳು ತೀವ್ರವಾಗಿ ನಡೆದಿದ್ದವು. ಇದರ ಭಾಗವಾಗಿ ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಆಂಖಿದಾಸ್‌ ಕೂಡ ಇತ್ತೀಚೆಗೆ ರಾಜೀನಾಮೆ ನೀಡಿದ್ದರು.

ಇಷ್ಟೇ ಅಲ್ಲದೇ ಭಾರತದಲ್ಲಿನ ಸಾಮಾಜಿಕ ಮಾಧ್ಯಮಗಳನ್ನು ಬಿಜೆಪಿಯು ತನಗೆ ಬೇಕಾದಂತೆ ಕಾನೂನುಭಾಹಿರವಾಗಿ ಬಳಸಿಕೊಳ್ಳುತ್ತಿದೆ ಎನ್ನುವ ಆರೋಪವಿದೆ.

ಇದನ್ನೂ ಓದಿ: ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಇದಕ್ಕೆ ಪುಷ್ಟಿ ನೀಡುವ ಹತ್ತಾರು ಅಂಶಗಳನ್ನು ಕೇಂದ್ರ ಸರ್ಕಾರದ ನೀತಿಗಳು ಬಹಿರಂಗಪಡಿಸಿವೆ. ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳನ್ನು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌‌ನಲ್ಲಿ ಮನವಿ ಸಲ್ಲಿಸಿತ್ತು. ಇದರ ಭಾಗವಾಗಿ ವಾಟ್ಸಾಪ್‌ ಅನ್ನು ಫೇಸ್‌ಬುಕ್‌ಗೆ ಲಿಂಕ್‌ ಮಾಡುವಂತೆ ಹೊಸ ಅಪ್ಡೇಟ್‌ ವರ್ಶನ್‌ ಬಂದಿದೆ. ಈ ಮೂಲಕ ಬಿಜೆಪಿಗೆ ವಿರುದ್ಧವಾಗಿ ಹೊರಡುವ ಸಂದೇಶಗಳನ್ನು ಕೇಂದ್ರ ಸರ್ಕಾರವು ಕದ್ದಾಲಿಕೆ ಮಾಡುವುದರರೊಂದಿಗೆ ನಿಯಂತ್ರಿಸಲು ಪ್ರಯತ್ನಿಸುತ್ತಿದೆ.

ಇಂತಹುದೇ ಕ್ರಮವನ್ನು ಫೇಸ್‌ಬುಕ್‌ ಇಂಡಿಯಾ ಈ ಹಿಂದೆ ತೆಗೆದುಕೊಂಡಿತ್ತು. ಬಿಜೆಪಿಗೆ ವಿರುದ್ಧವಾಗಿ ವ್ಯವಹರಿಸುವ ಎಲ್ಲಾ ಪೇಜ್‌ಗಳನ್ನು ನಿರ್ಬಂಧಿಸಿತ್ತು. ಭಾರತದ ಟ್ವಿಟರ್‌ ಕೂಡ ಇದರಿಂದ ಹೊರತಾಗಿಲ್ಲ. ಹಾಗಾಗಿ ಫೇಸ್‌ಬುಕ್‌ ಮತ್ತು ಟ್ವಿಟರ್‌ ಕಂಪನಿಗಳು ಭಾರತದಲ್ಲಿ ಬಿಜೆಪಿಯ ಪರವಾಗಿವೆ. ಆದರೆ ಅದು ಜಾಗತಿಕ ಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕೆಲಸ ಮಾಡುವಂತೆ ಒತ್ತಡ ಬರುತ್ತಿದೆ.

ಇದರಿಂದ ಭಯಬಿದ್ದ ಭಾರತೀಯ ಬಿಜೆಪಿ ನಾಯಕರು ಮತ್ತು ಇನ್ನಿತರರು ತಮಗೂ ಇದೇ ಗತಿ ಬರಬಹುದು ಎಂದು ಊಹಿಸಿ, ʼತಮ್ಮ ದೊಡ್ಡಣ್ಣʼನಿಗಾದ ಗತಿಯನ್ನು ಖಂಡಿಸುತ್ತಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ವೈಯಕ್ತಿಕ ಖಾತೆಯನ್ನು (realDonaldTrump) ಟ್ವಿಟರ್ ಶಾಶ್ವತವಾಗಿ ಬ್ಯಾನ್ ಮಾಡಿದ್ದು, ಅಮೆರಿಕ ಕ್ಯಾಪಿಟಲ್ ಮೇಲಿನ ಮತ್ತೊಂದು ದಾಳಿಯನ್ನು ತಡೆಯಲು ಈ ಕ್ರಮ ಅನಿವಾರ್ಯವಾಗಿದೆ ಎಂದು ಟ್ವಿಟರ್ ಹೇಳಿದೆ.

ಇದರಿಂದ ಕೆರಳಿದ ಟ್ರಂಪ್ ‘ಟ್ವಿಟರ್ ನನ್ನ ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ’ ಎಂದು ತನ್ನ ಕಾರ್ಯಕ್ರಮಗಳ ಮತ್ತು ಚುನಾವಣಾ ಪ್ರಚಾರಕ್ಕಾಗಿ ಬಳಸುತ್ತಿದ್ದ ಟೀಮ್ ಟ್ರಂಪ್ ಖಾತೆಯಿಂದ ಟ್ವೀಟ್ ಮಾಡಿದ್ದರು. ಕೂಡಲೇ ಆ ಖಾತೆಯನ್ನೂ ಸಹ ಟ್ವಿಟರ್ ಅಮಾನತು ಮಾಡಿದೆ.

ನಾವು ಟ್ರಂಪ್‌ ಟ್ವೀಟ್‌ಗಳನ್ನು ಹತ್ತಿರದಿಂದ ಅವಲೋಕಿಸಿದ್ದೇವೆ. ಮುಂದಿನ ಹಿಂಸಾತ್ಮಕ ಅಪಾಯಗಳನ್ನು ತಡೆಯಲು ಅವರ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡುತ್ತಿದ್ದೇವೆ ಎಂದು ಟ್ವಿಟರ್ ತಿಳಿಸಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ಟ್ರಂಪ್‌ ಆಡಳಿತವಧಿಯಲ್ಲಿ ತನ್ನ ವೈಯಕ್ತಿಕ ಖಾತೆಯ ಮೂಲಕ ಆಧಾರವಿಲ್ಲದ ಆರೋಪಗಳು, ಸುಳ್ಳು ಘೋಷಣೆಗಳು, ತಪ್ಪು ಮಾಹಿತಿಗಳನ್ನು ಹರಡಿದ್ದಾರೆ ಎಂದು ಟ್ವಿಟರ್ ಆರೋಪಿಸಿದೆ.

ಟ್ರಂಪ್ ಅಧಿಕಾರವಧಿ ಮುಗಿಯುತ್ತಿದ್ದು, ಬುಧವಾರ ನಡೆದ ಯುಸ್ ಸಂಸತ್ ಮೇಲಿನ ದಾಳಿಗೆ ಟ್ರಂಪ್‌ ಅನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಇದೇ ಸಮಯಕ್ಕೆ ಕಾಯುತ್ತಿದ್ದ ಟ್ವಿಟರ್ ಟ್ರಂಪ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಎಚ್ಚರಿಕೆ ರವಾನಿಸಿದೆ.

ಬಹುದೊಡ್ಡ ಪ್ರಜಾಪ್ರಭುತ್ವ ಎಂದು ಹೇಳಿಕೊಳ್ಳುವ ದೇಶದ ಅಧ್ಯಕ್ಷರಾಗಿ ಟ್ರಂಪ್ ನಡೆದುಕೊಂಡಿದ್ದು, ಗಲಭೆಗೆ ಪ್ರಚೋದನೆ ನೀಡಿದ್ದು, ಅದರಿಂದಾಗಿ ಅವರ ಟ್ವಿಟರ್ ಖಾತೆ ಖಾಯಂ ಬ್ಯಾನ್‌ ಆಗಿದ್ದು ಎಲ್ಲವೂ ಅವರಿಗೆ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ತದನಂತರ ಟ್ರಂಪ್ ಅಧ್ಯಕ್ಷರ ಅಧಿಕೃತ ಖಾತೆ @POTUS ಮೂಲಕ ಟ್ವಿಟರ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ತೀವ್ರ ಎಡಪಂಥೀಯರ ಜೊತೆ ಸೇರಿ ಟ್ವಿಟರ್ ನನ್ನ ಮೇಲೆ ಪಿತೂರಿ ನಡೆಸುತ್ತಿದೆ ಎಂದು ದೂರಿದ್ದಾರೆ. ಆ ಟ್ವೀಟ್ ಅನ್ನು ಸಹ ಟ್ವಿಟರ್ ಡಿಲೀಟ್ ಮಾಡಿದೆ.

ಮತ್ತೊಂದು ಖಾತೆಯನ್ನು ಬಳಸಿ ಟ್ವಿಟರ್ ಅನ್ನು ಹಣಿಯಲು ಮುಂದಾಗುವುದು ನಮ್ಮ ನಿಯಮಗಳ ಉಲ್ಲಂಘಟನೆ ಎಂದು ಟ್ವಿಟರ್ ತಿಳಿಸಿದೆ.

ಯುಎಸ್ ಕ್ಯಾಪಿಟಲ್ ಮೇಲೆ ದಾಳಿ ನಡೆದಾಗ ತಾತ್ಕಾಲಿಕವಾಗಿ ಟ್ರಂಪ್ ಖಾತೆಯನ್ನು ಸ್ಥಗಿತಗೊಳಿಸಿತ್ತು. ಅದಕ್ಕೂ ಮೊದಲು ಟ್ರಂಪ್ “ನಾನು ಜನವರಿ 20ರ ಜೋ ಬೈಡೆನ್ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ, ನನ್ನ ಅಭಿಮಾನಿಗಳು ನನ್ನ ಮಾತು ಮೀರುವುದಿಲ್ಲ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಅನೋಷ್ಕಾ ಚೋಪ್ರಾ ಫೇಸ್‌ಬುಕ್‌ ಖಾತೆ ಮೂಲಕ ಪಾಕ್‌ ಪರ ಗೂಢಾಚರ್ಯೆ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತದ ಬಿಜೆಪಿ ನಾಯಕರು ಹೆದರುವುದರಲ್ಲಿ ಅರ್ಥವಿದೆ ಏಕೆಂದರೆ ಬ್ಯಾನ್ ಆಗುವಂತಹ ಸಮಾಜದಲ್ಲಿ ವಿಷ ಹರಡುವಂತಹ ಹೇಳಿಕೆಗಳನ್ನ ನೀಡುವವರು ಹೆದರುವುದರಲ್ಲಿ ತಪ್ಪೇನಿದೆ, ಸಮಾಜದಲ್ಲಿ ಗೊಂದಲ ಗದ್ದಲ ಕಲಹಗಳಿಲ್ಲದಿದ್ದರೆ ಇಂತವರಿಗೆ ಇಲ್ಲಿ ಮತ ಕೇಳಲು ಮಾತುಗಳಿರುವುದಿಲ್ಲವಲ್ಲಾ….. ಟ್ರಂಪ್ ನಂತಹ ವಿಷಕಾರಿಯನ್ನು ಜನರಿಂದ ದೂರವಿಡುವ ಪ್ರಯತ್ನ ಮಾಡಿದ ಟ್ವಿಟರ್ ಕಂಪನಿಗೆ ಅಬಿನಂದನೆ.

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...