Homeಮುಖಪುಟಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

ಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಟ್ವಿಟರ್‌ ಖಾತೆಯನ್ನು ಟ್ವಿಟರ್‌ ಕಂಪನಿ ಶಾಶ್ವತವಾಗಿ ನಿರ್ಬಂಧಿಸಿದ್ದು, ಇದರ ಕುರಿತು ಜಗತ್ತಿನಾದ್ಯಂತ ವಿಭಿನ್ನ ಪ್ರತಿಕ್ರಿಯೆಗಳು ಬರುತ್ತಿವೆ. ಅಂತೆಯೇ ಭಾರತದ ಬಿಜೆಪಿ ನಾಯಕರೂ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು, ಟ್ವಿಟರ್‌ ಕಂಪನಿಯ ಈ ಕ್ರಮವನ್ನು ಖಂಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರ ಮೇಲೆಯೇ ಇಂತಹ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿರುವ ಟ್ವಿಟರ್‌, ನಮ್ಮಂತಹವರನ್ನು ಬಿಡುತ್ತದೆಯೇ ಎನ್ನುವ ಭಯ ಬಿಜೆಪಿ ನಾಯಕರಿಗೆ ಆರಂಭವಾದಂತಿದೆ. ಈ ಭಯವನ್ನು ಬಿಜೆಪಿ ನಾಯಕರು ತಮ್ಮ ಟ್ವೀಟ್‌ಗಳ ಮೂಲಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, “ಯಾರ ನಿಯಂತ್ರಣವೂ ಇಲ್ಲದ ಈ ದೈತ್ಯ ತಂತ್ರಜ್ಞಾನ ಕಂಪನಿಗಳಿಂದ ನಮ್ಮ ಪ್ರಜಾಪ್ರಭುತ್ವಕ್ಕೆ ಇರುವ ಅಪಾಯವನ್ನು ಇನ್ನೂ ಅರ್ಥಮಾಡಿಕೊಳ್ಳದವರಿಗೆ ಇದು ಎಚ್ಚರಿಕೆಯ ಕರೆಗಂಟೆಯಾಗಿದೆ. ಅವರು ಅಮೆರಿಕ ಅಧ್ಯಕ್ಷರಿಗೆ ಈ ರೀತಿ ಮಾಡಿದ್ದಾರೆ ಎಂದರೆ, ಇದನ್ನು ಯಾರಿಗಾದರೂ ಮಾಡಬಹುದು. ಭಾರತವು ನಮ್ಮ ಪ್ರಜಾಪ್ರಭುತ್ವದ ಒಳಿತಿಗಾಗಿ ಈ ಶೀಘ್ರದಲ್ಲೇ ಮಧ್ಯವರ್ತಿಗಳ ನಿಯಮಗಳನ್ನು ಪರಿಶೀಲಿಸಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಬಿಜೆಪಿ ಐಟಿ ಸೆಲ್‌ನ ರಾಷ್ಟ್ರೀಯ ಉಸ್ತುವಾರಿ ಅಮಿತ್‌ ಮಾಳವೀಯ ಟ್ವೀಟ್‌ ಮಾಡಿ, “ಪ್ರಸ್ತುತ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಖಾತೆಯನ್ನು ನಿರ್ಬಂಧಿಸಿರುವುದು ಅಪಾಯಕಾರಿಯಾಗಿದ್ದು, ಇದು ಒಂದು ಪೂರ್ವ ನಿದರ್ಶನವಾಗಿದೆ. ವಿಪರ್ಯಾಸವೆಂದರೆ ವಾಕ್‌ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಇದನ್ನು ಸಂಭ್ರಮಿಸುತ್ತಿದ್ದಾರೆ. ದೈತ್ಯ ತಂತ್ರಜ್ಞಾನ ಕಂಪನಿಗಳು ಈಗ ಓಲಿಗಾರ್ಚ್‌ಗಾಳಗಿವೆ (ಮಿತಜನ ಕೇಂದ್ರಿತ)” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ಇತ್ತೀಚೆಗೆ ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ ಎನ್ನುವ ಪತ್ರಿಕೆಯೊಂದು ಭಾರತದಲ್ಲಿನ ಫೇಸ್‌ಬುಕ್‌ ಅಲ್ಲಿನ ಆಡಳಿತ ಪಕ್ಷದೊಂದಿಗೆ ಶಾಮೀಲಾಗಿದೆ ಎನ್ನುವ ವರದಿಯೊಂದನ್ನು ಬಿಡುಗಡೆ ಮಾಡಿತ್ತು. 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲು ಬೇಕಾಗುವ ಎಲ್ಲಾ ತಂತ್ರಗಳನ್ನು ಫೇಸ್‌ಬುಕ್‌ ಅನಧಿಕೃತವಾಗಿ ಮಾಡಿತ್ತು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಲಾಗಿತ್ತು.

ಬಿಜೆಪಿಯವರ ದ್ವೇಷ ಭಾಷಣಗಳನ್ನು ನಿರ್ಬಂಧಿಸುವಲ್ಲಿ ಫೇಸ್‌ಬುಕ್‌ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ಅಮೆರಿಕದ ಪತ್ರಿಕೆ ವರದಿ ಮಾಡಿದ ನಂತರ ಭಾರತದಲ್ಲಿ ಇದಕ್ಕೆ ಸಂಬಂಧಪಟ್ಟ ಚರ್ಚೆಗಳು ತೀವ್ರವಾಗಿ ನಡೆದಿದ್ದವು. ಇದರ ಭಾಗವಾಗಿ ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಆಂಖಿದಾಸ್‌ ಕೂಡ ಇತ್ತೀಚೆಗೆ ರಾಜೀನಾಮೆ ನೀಡಿದ್ದರು.

ಇಷ್ಟೇ ಅಲ್ಲದೇ ಭಾರತದಲ್ಲಿನ ಸಾಮಾಜಿಕ ಮಾಧ್ಯಮಗಳನ್ನು ಬಿಜೆಪಿಯು ತನಗೆ ಬೇಕಾದಂತೆ ಕಾನೂನುಭಾಹಿರವಾಗಿ ಬಳಸಿಕೊಳ್ಳುತ್ತಿದೆ ಎನ್ನುವ ಆರೋಪವಿದೆ.

ಇದನ್ನೂ ಓದಿ: ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಇದಕ್ಕೆ ಪುಷ್ಟಿ ನೀಡುವ ಹತ್ತಾರು ಅಂಶಗಳನ್ನು ಕೇಂದ್ರ ಸರ್ಕಾರದ ನೀತಿಗಳು ಬಹಿರಂಗಪಡಿಸಿವೆ. ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳನ್ನು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌‌ನಲ್ಲಿ ಮನವಿ ಸಲ್ಲಿಸಿತ್ತು. ಇದರ ಭಾಗವಾಗಿ ವಾಟ್ಸಾಪ್‌ ಅನ್ನು ಫೇಸ್‌ಬುಕ್‌ಗೆ ಲಿಂಕ್‌ ಮಾಡುವಂತೆ ಹೊಸ ಅಪ್ಡೇಟ್‌ ವರ್ಶನ್‌ ಬಂದಿದೆ. ಈ ಮೂಲಕ ಬಿಜೆಪಿಗೆ ವಿರುದ್ಧವಾಗಿ ಹೊರಡುವ ಸಂದೇಶಗಳನ್ನು ಕೇಂದ್ರ ಸರ್ಕಾರವು ಕದ್ದಾಲಿಕೆ ಮಾಡುವುದರರೊಂದಿಗೆ ನಿಯಂತ್ರಿಸಲು ಪ್ರಯತ್ನಿಸುತ್ತಿದೆ.

ಇಂತಹುದೇ ಕ್ರಮವನ್ನು ಫೇಸ್‌ಬುಕ್‌ ಇಂಡಿಯಾ ಈ ಹಿಂದೆ ತೆಗೆದುಕೊಂಡಿತ್ತು. ಬಿಜೆಪಿಗೆ ವಿರುದ್ಧವಾಗಿ ವ್ಯವಹರಿಸುವ ಎಲ್ಲಾ ಪೇಜ್‌ಗಳನ್ನು ನಿರ್ಬಂಧಿಸಿತ್ತು. ಭಾರತದ ಟ್ವಿಟರ್‌ ಕೂಡ ಇದರಿಂದ ಹೊರತಾಗಿಲ್ಲ. ಹಾಗಾಗಿ ಫೇಸ್‌ಬುಕ್‌ ಮತ್ತು ಟ್ವಿಟರ್‌ ಕಂಪನಿಗಳು ಭಾರತದಲ್ಲಿ ಬಿಜೆಪಿಯ ಪರವಾಗಿವೆ. ಆದರೆ ಅದು ಜಾಗತಿಕ ಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕೆಲಸ ಮಾಡುವಂತೆ ಒತ್ತಡ ಬರುತ್ತಿದೆ.

ಇದರಿಂದ ಭಯಬಿದ್ದ ಭಾರತೀಯ ಬಿಜೆಪಿ ನಾಯಕರು ಮತ್ತು ಇನ್ನಿತರರು ತಮಗೂ ಇದೇ ಗತಿ ಬರಬಹುದು ಎಂದು ಊಹಿಸಿ, ʼತಮ್ಮ ದೊಡ್ಡಣ್ಣʼನಿಗಾದ ಗತಿಯನ್ನು ಖಂಡಿಸುತ್ತಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ವೈಯಕ್ತಿಕ ಖಾತೆಯನ್ನು (realDonaldTrump) ಟ್ವಿಟರ್ ಶಾಶ್ವತವಾಗಿ ಬ್ಯಾನ್ ಮಾಡಿದ್ದು, ಅಮೆರಿಕ ಕ್ಯಾಪಿಟಲ್ ಮೇಲಿನ ಮತ್ತೊಂದು ದಾಳಿಯನ್ನು ತಡೆಯಲು ಈ ಕ್ರಮ ಅನಿವಾರ್ಯವಾಗಿದೆ ಎಂದು ಟ್ವಿಟರ್ ಹೇಳಿದೆ.

ಇದರಿಂದ ಕೆರಳಿದ ಟ್ರಂಪ್ ‘ಟ್ವಿಟರ್ ನನ್ನ ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ’ ಎಂದು ತನ್ನ ಕಾರ್ಯಕ್ರಮಗಳ ಮತ್ತು ಚುನಾವಣಾ ಪ್ರಚಾರಕ್ಕಾಗಿ ಬಳಸುತ್ತಿದ್ದ ಟೀಮ್ ಟ್ರಂಪ್ ಖಾತೆಯಿಂದ ಟ್ವೀಟ್ ಮಾಡಿದ್ದರು. ಕೂಡಲೇ ಆ ಖಾತೆಯನ್ನೂ ಸಹ ಟ್ವಿಟರ್ ಅಮಾನತು ಮಾಡಿದೆ.

ನಾವು ಟ್ರಂಪ್‌ ಟ್ವೀಟ್‌ಗಳನ್ನು ಹತ್ತಿರದಿಂದ ಅವಲೋಕಿಸಿದ್ದೇವೆ. ಮುಂದಿನ ಹಿಂಸಾತ್ಮಕ ಅಪಾಯಗಳನ್ನು ತಡೆಯಲು ಅವರ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡುತ್ತಿದ್ದೇವೆ ಎಂದು ಟ್ವಿಟರ್ ತಿಳಿಸಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ಟ್ರಂಪ್‌ ಆಡಳಿತವಧಿಯಲ್ಲಿ ತನ್ನ ವೈಯಕ್ತಿಕ ಖಾತೆಯ ಮೂಲಕ ಆಧಾರವಿಲ್ಲದ ಆರೋಪಗಳು, ಸುಳ್ಳು ಘೋಷಣೆಗಳು, ತಪ್ಪು ಮಾಹಿತಿಗಳನ್ನು ಹರಡಿದ್ದಾರೆ ಎಂದು ಟ್ವಿಟರ್ ಆರೋಪಿಸಿದೆ.

ಟ್ರಂಪ್ ಅಧಿಕಾರವಧಿ ಮುಗಿಯುತ್ತಿದ್ದು, ಬುಧವಾರ ನಡೆದ ಯುಸ್ ಸಂಸತ್ ಮೇಲಿನ ದಾಳಿಗೆ ಟ್ರಂಪ್‌ ಅನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಇದೇ ಸಮಯಕ್ಕೆ ಕಾಯುತ್ತಿದ್ದ ಟ್ವಿಟರ್ ಟ್ರಂಪ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಎಚ್ಚರಿಕೆ ರವಾನಿಸಿದೆ.

ಬಹುದೊಡ್ಡ ಪ್ರಜಾಪ್ರಭುತ್ವ ಎಂದು ಹೇಳಿಕೊಳ್ಳುವ ದೇಶದ ಅಧ್ಯಕ್ಷರಾಗಿ ಟ್ರಂಪ್ ನಡೆದುಕೊಂಡಿದ್ದು, ಗಲಭೆಗೆ ಪ್ರಚೋದನೆ ನೀಡಿದ್ದು, ಅದರಿಂದಾಗಿ ಅವರ ಟ್ವಿಟರ್ ಖಾತೆ ಖಾಯಂ ಬ್ಯಾನ್‌ ಆಗಿದ್ದು ಎಲ್ಲವೂ ಅವರಿಗೆ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ತದನಂತರ ಟ್ರಂಪ್ ಅಧ್ಯಕ್ಷರ ಅಧಿಕೃತ ಖಾತೆ @POTUS ಮೂಲಕ ಟ್ವಿಟರ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ತೀವ್ರ ಎಡಪಂಥೀಯರ ಜೊತೆ ಸೇರಿ ಟ್ವಿಟರ್ ನನ್ನ ಮೇಲೆ ಪಿತೂರಿ ನಡೆಸುತ್ತಿದೆ ಎಂದು ದೂರಿದ್ದಾರೆ. ಆ ಟ್ವೀಟ್ ಅನ್ನು ಸಹ ಟ್ವಿಟರ್ ಡಿಲೀಟ್ ಮಾಡಿದೆ.

ಮತ್ತೊಂದು ಖಾತೆಯನ್ನು ಬಳಸಿ ಟ್ವಿಟರ್ ಅನ್ನು ಹಣಿಯಲು ಮುಂದಾಗುವುದು ನಮ್ಮ ನಿಯಮಗಳ ಉಲ್ಲಂಘಟನೆ ಎಂದು ಟ್ವಿಟರ್ ತಿಳಿಸಿದೆ.

ಯುಎಸ್ ಕ್ಯಾಪಿಟಲ್ ಮೇಲೆ ದಾಳಿ ನಡೆದಾಗ ತಾತ್ಕಾಲಿಕವಾಗಿ ಟ್ರಂಪ್ ಖಾತೆಯನ್ನು ಸ್ಥಗಿತಗೊಳಿಸಿತ್ತು. ಅದಕ್ಕೂ ಮೊದಲು ಟ್ರಂಪ್ “ನಾನು ಜನವರಿ 20ರ ಜೋ ಬೈಡೆನ್ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ, ನನ್ನ ಅಭಿಮಾನಿಗಳು ನನ್ನ ಮಾತು ಮೀರುವುದಿಲ್ಲ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಅನೋಷ್ಕಾ ಚೋಪ್ರಾ ಫೇಸ್‌ಬುಕ್‌ ಖಾತೆ ಮೂಲಕ ಪಾಕ್‌ ಪರ ಗೂಢಾಚರ್ಯೆ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತದ ಬಿಜೆಪಿ ನಾಯಕರು ಹೆದರುವುದರಲ್ಲಿ ಅರ್ಥವಿದೆ ಏಕೆಂದರೆ ಬ್ಯಾನ್ ಆಗುವಂತಹ ಸಮಾಜದಲ್ಲಿ ವಿಷ ಹರಡುವಂತಹ ಹೇಳಿಕೆಗಳನ್ನ ನೀಡುವವರು ಹೆದರುವುದರಲ್ಲಿ ತಪ್ಪೇನಿದೆ, ಸಮಾಜದಲ್ಲಿ ಗೊಂದಲ ಗದ್ದಲ ಕಲಹಗಳಿಲ್ಲದಿದ್ದರೆ ಇಂತವರಿಗೆ ಇಲ್ಲಿ ಮತ ಕೇಳಲು ಮಾತುಗಳಿರುವುದಿಲ್ಲವಲ್ಲಾ….. ಟ್ರಂಪ್ ನಂತಹ ವಿಷಕಾರಿಯನ್ನು ಜನರಿಂದ ದೂರವಿಡುವ ಪ್ರಯತ್ನ ಮಾಡಿದ ಟ್ವಿಟರ್ ಕಂಪನಿಗೆ ಅಬಿನಂದನೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...