Homeಮುಖಪುಟಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

ಟ್ರಂಪ್‌ ಟ್ವಿಟರ್‌ ಖಾತೆ ಬ್ಯಾನ್: ಭಾರತದಲ್ಲಿ‌ ಬೆದರಿದ BJP ನಾಯಕರ ಪ್ರತಿಕ್ರಿಯೆ ಏನು?

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಟ್ವಿಟರ್‌ ಖಾತೆಯನ್ನು ಟ್ವಿಟರ್‌ ಕಂಪನಿ ಶಾಶ್ವತವಾಗಿ ನಿರ್ಬಂಧಿಸಿದ್ದು, ಇದರ ಕುರಿತು ಜಗತ್ತಿನಾದ್ಯಂತ ವಿಭಿನ್ನ ಪ್ರತಿಕ್ರಿಯೆಗಳು ಬರುತ್ತಿವೆ. ಅಂತೆಯೇ ಭಾರತದ ಬಿಜೆಪಿ ನಾಯಕರೂ ಕೂಡ ಇದಕ್ಕೆ ಪ್ರತಿಕ್ರಿಯಿಸಿದ್ದು, ಟ್ವಿಟರ್‌ ಕಂಪನಿಯ ಈ ಕ್ರಮವನ್ನು ಖಂಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರ ಮೇಲೆಯೇ ಇಂತಹ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡಿರುವ ಟ್ವಿಟರ್‌, ನಮ್ಮಂತಹವರನ್ನು ಬಿಡುತ್ತದೆಯೇ ಎನ್ನುವ ಭಯ ಬಿಜೆಪಿ ನಾಯಕರಿಗೆ ಆರಂಭವಾದಂತಿದೆ. ಈ ಭಯವನ್ನು ಬಿಜೆಪಿ ನಾಯಕರು ತಮ್ಮ ಟ್ವೀಟ್‌ಗಳ ಮೂಲಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, “ಯಾರ ನಿಯಂತ್ರಣವೂ ಇಲ್ಲದ ಈ ದೈತ್ಯ ತಂತ್ರಜ್ಞಾನ ಕಂಪನಿಗಳಿಂದ ನಮ್ಮ ಪ್ರಜಾಪ್ರಭುತ್ವಕ್ಕೆ ಇರುವ ಅಪಾಯವನ್ನು ಇನ್ನೂ ಅರ್ಥಮಾಡಿಕೊಳ್ಳದವರಿಗೆ ಇದು ಎಚ್ಚರಿಕೆಯ ಕರೆಗಂಟೆಯಾಗಿದೆ. ಅವರು ಅಮೆರಿಕ ಅಧ್ಯಕ್ಷರಿಗೆ ಈ ರೀತಿ ಮಾಡಿದ್ದಾರೆ ಎಂದರೆ, ಇದನ್ನು ಯಾರಿಗಾದರೂ ಮಾಡಬಹುದು. ಭಾರತವು ನಮ್ಮ ಪ್ರಜಾಪ್ರಭುತ್ವದ ಒಳಿತಿಗಾಗಿ ಈ ಶೀಘ್ರದಲ್ಲೇ ಮಧ್ಯವರ್ತಿಗಳ ನಿಯಮಗಳನ್ನು ಪರಿಶೀಲಿಸಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಬಿಜೆಪಿ ಐಟಿ ಸೆಲ್‌ನ ರಾಷ್ಟ್ರೀಯ ಉಸ್ತುವಾರಿ ಅಮಿತ್‌ ಮಾಳವೀಯ ಟ್ವೀಟ್‌ ಮಾಡಿ, “ಪ್ರಸ್ತುತ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಖಾತೆಯನ್ನು ನಿರ್ಬಂಧಿಸಿರುವುದು ಅಪಾಯಕಾರಿಯಾಗಿದ್ದು, ಇದು ಒಂದು ಪೂರ್ವ ನಿದರ್ಶನವಾಗಿದೆ. ವಿಪರ್ಯಾಸವೆಂದರೆ ವಾಕ್‌ಸ್ವಾತಂತ್ರ್ಯದ ಬಗ್ಗೆ ಮಾತನಾಡುವವರು ಇದನ್ನು ಸಂಭ್ರಮಿಸುತ್ತಿದ್ದಾರೆ. ದೈತ್ಯ ತಂತ್ರಜ್ಞಾನ ಕಂಪನಿಗಳು ಈಗ ಓಲಿಗಾರ್ಚ್‌ಗಾಳಗಿವೆ (ಮಿತಜನ ಕೇಂದ್ರಿತ)” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ಇತ್ತೀಚೆಗೆ ಅಮೆರಿಕದ ವಾಲ್‌ಸ್ಟ್ರೀಟ್‌ ಜರ್ನಲ್‌ ಎನ್ನುವ ಪತ್ರಿಕೆಯೊಂದು ಭಾರತದಲ್ಲಿನ ಫೇಸ್‌ಬುಕ್‌ ಅಲ್ಲಿನ ಆಡಳಿತ ಪಕ್ಷದೊಂದಿಗೆ ಶಾಮೀಲಾಗಿದೆ ಎನ್ನುವ ವರದಿಯೊಂದನ್ನು ಬಿಡುಗಡೆ ಮಾಡಿತ್ತು. 2014 ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಹಿಡಿಯಲು ಬೇಕಾಗುವ ಎಲ್ಲಾ ತಂತ್ರಗಳನ್ನು ಫೇಸ್‌ಬುಕ್‌ ಅನಧಿಕೃತವಾಗಿ ಮಾಡಿತ್ತು ಎನ್ನುವುದನ್ನು ದಾಖಲೆ ಸಮೇತ ಸಾಬೀತುಪಡಿಸಲಾಗಿತ್ತು.

ಬಿಜೆಪಿಯವರ ದ್ವೇಷ ಭಾಷಣಗಳನ್ನು ನಿರ್ಬಂಧಿಸುವಲ್ಲಿ ಫೇಸ್‌ಬುಕ್‌ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದನ್ನು ಅಮೆರಿಕದ ಪತ್ರಿಕೆ ವರದಿ ಮಾಡಿದ ನಂತರ ಭಾರತದಲ್ಲಿ ಇದಕ್ಕೆ ಸಂಬಂಧಪಟ್ಟ ಚರ್ಚೆಗಳು ತೀವ್ರವಾಗಿ ನಡೆದಿದ್ದವು. ಇದರ ಭಾಗವಾಗಿ ಫೇಸ್‌ಬುಕ್‌ ಇಂಡಿಯಾದ ಮುಖ್ಯಸ್ಥೆ ಆಂಖಿದಾಸ್‌ ಕೂಡ ಇತ್ತೀಚೆಗೆ ರಾಜೀನಾಮೆ ನೀಡಿದ್ದರು.

ಇಷ್ಟೇ ಅಲ್ಲದೇ ಭಾರತದಲ್ಲಿನ ಸಾಮಾಜಿಕ ಮಾಧ್ಯಮಗಳನ್ನು ಬಿಜೆಪಿಯು ತನಗೆ ಬೇಕಾದಂತೆ ಕಾನೂನುಭಾಹಿರವಾಗಿ ಬಳಸಿಕೊಳ್ಳುತ್ತಿದೆ ಎನ್ನುವ ಆರೋಪವಿದೆ.

ಇದನ್ನೂ ಓದಿ: ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಇದಕ್ಕೆ ಪುಷ್ಟಿ ನೀಡುವ ಹತ್ತಾರು ಅಂಶಗಳನ್ನು ಕೇಂದ್ರ ಸರ್ಕಾರದ ನೀತಿಗಳು ಬಹಿರಂಗಪಡಿಸಿವೆ. ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳನ್ನು ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌‌ನಲ್ಲಿ ಮನವಿ ಸಲ್ಲಿಸಿತ್ತು. ಇದರ ಭಾಗವಾಗಿ ವಾಟ್ಸಾಪ್‌ ಅನ್ನು ಫೇಸ್‌ಬುಕ್‌ಗೆ ಲಿಂಕ್‌ ಮಾಡುವಂತೆ ಹೊಸ ಅಪ್ಡೇಟ್‌ ವರ್ಶನ್‌ ಬಂದಿದೆ. ಈ ಮೂಲಕ ಬಿಜೆಪಿಗೆ ವಿರುದ್ಧವಾಗಿ ಹೊರಡುವ ಸಂದೇಶಗಳನ್ನು ಕೇಂದ್ರ ಸರ್ಕಾರವು ಕದ್ದಾಲಿಕೆ ಮಾಡುವುದರರೊಂದಿಗೆ ನಿಯಂತ್ರಿಸಲು ಪ್ರಯತ್ನಿಸುತ್ತಿದೆ.

ಇಂತಹುದೇ ಕ್ರಮವನ್ನು ಫೇಸ್‌ಬುಕ್‌ ಇಂಡಿಯಾ ಈ ಹಿಂದೆ ತೆಗೆದುಕೊಂಡಿತ್ತು. ಬಿಜೆಪಿಗೆ ವಿರುದ್ಧವಾಗಿ ವ್ಯವಹರಿಸುವ ಎಲ್ಲಾ ಪೇಜ್‌ಗಳನ್ನು ನಿರ್ಬಂಧಿಸಿತ್ತು. ಭಾರತದ ಟ್ವಿಟರ್‌ ಕೂಡ ಇದರಿಂದ ಹೊರತಾಗಿಲ್ಲ. ಹಾಗಾಗಿ ಫೇಸ್‌ಬುಕ್‌ ಮತ್ತು ಟ್ವಿಟರ್‌ ಕಂಪನಿಗಳು ಭಾರತದಲ್ಲಿ ಬಿಜೆಪಿಯ ಪರವಾಗಿವೆ. ಆದರೆ ಅದು ಜಾಗತಿಕ ಮಟ್ಟದಲ್ಲಿ ನಿಷ್ಪಕ್ಷಪಾತವಾಗಿ ಕೆಲಸ ಮಾಡುವಂತೆ ಒತ್ತಡ ಬರುತ್ತಿದೆ.

ಇದರಿಂದ ಭಯಬಿದ್ದ ಭಾರತೀಯ ಬಿಜೆಪಿ ನಾಯಕರು ಮತ್ತು ಇನ್ನಿತರರು ತಮಗೂ ಇದೇ ಗತಿ ಬರಬಹುದು ಎಂದು ಊಹಿಸಿ, ʼತಮ್ಮ ದೊಡ್ಡಣ್ಣʼನಿಗಾದ ಗತಿಯನ್ನು ಖಂಡಿಸುತ್ತಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರವರ ವೈಯಕ್ತಿಕ ಖಾತೆಯನ್ನು (realDonaldTrump) ಟ್ವಿಟರ್ ಶಾಶ್ವತವಾಗಿ ಬ್ಯಾನ್ ಮಾಡಿದ್ದು, ಅಮೆರಿಕ ಕ್ಯಾಪಿಟಲ್ ಮೇಲಿನ ಮತ್ತೊಂದು ದಾಳಿಯನ್ನು ತಡೆಯಲು ಈ ಕ್ರಮ ಅನಿವಾರ್ಯವಾಗಿದೆ ಎಂದು ಟ್ವಿಟರ್ ಹೇಳಿದೆ.

ಇದರಿಂದ ಕೆರಳಿದ ಟ್ರಂಪ್ ‘ಟ್ವಿಟರ್ ನನ್ನ ಮಾತನಾಡುವ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುತ್ತಿದೆ’ ಎಂದು ತನ್ನ ಕಾರ್ಯಕ್ರಮಗಳ ಮತ್ತು ಚುನಾವಣಾ ಪ್ರಚಾರಕ್ಕಾಗಿ ಬಳಸುತ್ತಿದ್ದ ಟೀಮ್ ಟ್ರಂಪ್ ಖಾತೆಯಿಂದ ಟ್ವೀಟ್ ಮಾಡಿದ್ದರು. ಕೂಡಲೇ ಆ ಖಾತೆಯನ್ನೂ ಸಹ ಟ್ವಿಟರ್ ಅಮಾನತು ಮಾಡಿದೆ.

ನಾವು ಟ್ರಂಪ್‌ ಟ್ವೀಟ್‌ಗಳನ್ನು ಹತ್ತಿರದಿಂದ ಅವಲೋಕಿಸಿದ್ದೇವೆ. ಮುಂದಿನ ಹಿಂಸಾತ್ಮಕ ಅಪಾಯಗಳನ್ನು ತಡೆಯಲು ಅವರ ಖಾತೆಯನ್ನು ಶಾಶ್ವತವಾಗಿ ಬ್ಯಾನ್ ಮಾಡುತ್ತಿದ್ದೇವೆ ಎಂದು ಟ್ವಿಟರ್ ತಿಳಿಸಿದೆ.

ಇದನ್ನೂ ಓದಿ: ಫೇಸ್‌ಬುಕ್‌ ಇಂಡಿಯಾ ಸಿಇಓ ಅಂಖಿ ದಾಸ್ ವಿರುದ್ದ ಸಿಡಿದೆದ್ದ ಸಹೋದ್ಯೋಗಿಗಳು!

ಟ್ರಂಪ್‌ ಆಡಳಿತವಧಿಯಲ್ಲಿ ತನ್ನ ವೈಯಕ್ತಿಕ ಖಾತೆಯ ಮೂಲಕ ಆಧಾರವಿಲ್ಲದ ಆರೋಪಗಳು, ಸುಳ್ಳು ಘೋಷಣೆಗಳು, ತಪ್ಪು ಮಾಹಿತಿಗಳನ್ನು ಹರಡಿದ್ದಾರೆ ಎಂದು ಟ್ವಿಟರ್ ಆರೋಪಿಸಿದೆ.

ಟ್ರಂಪ್ ಅಧಿಕಾರವಧಿ ಮುಗಿಯುತ್ತಿದ್ದು, ಬುಧವಾರ ನಡೆದ ಯುಸ್ ಸಂಸತ್ ಮೇಲಿನ ದಾಳಿಗೆ ಟ್ರಂಪ್‌ ಅನ್ನು ಹೊಣೆಗಾರರನ್ನಾಗಿ ಮಾಡಲಾಗಿದೆ. ಇದೇ ಸಮಯಕ್ಕೆ ಕಾಯುತ್ತಿದ್ದ ಟ್ವಿಟರ್ ಟ್ರಂಪ್ ಖಾತೆಗಳನ್ನು ಸ್ಥಗಿತಗೊಳಿಸುವ ಮೂಲಕ ಎಚ್ಚರಿಕೆ ರವಾನಿಸಿದೆ.

ಬಹುದೊಡ್ಡ ಪ್ರಜಾಪ್ರಭುತ್ವ ಎಂದು ಹೇಳಿಕೊಳ್ಳುವ ದೇಶದ ಅಧ್ಯಕ್ಷರಾಗಿ ಟ್ರಂಪ್ ನಡೆದುಕೊಂಡಿದ್ದು, ಗಲಭೆಗೆ ಪ್ರಚೋದನೆ ನೀಡಿದ್ದು, ಅದರಿಂದಾಗಿ ಅವರ ಟ್ವಿಟರ್ ಖಾತೆ ಖಾಯಂ ಬ್ಯಾನ್‌ ಆಗಿದ್ದು ಎಲ್ಲವೂ ಅವರಿಗೆ ಮುಜುಗರ ಉಂಟುಮಾಡಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ತದನಂತರ ಟ್ರಂಪ್ ಅಧ್ಯಕ್ಷರ ಅಧಿಕೃತ ಖಾತೆ @POTUS ಮೂಲಕ ಟ್ವಿಟರ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ತೀವ್ರ ಎಡಪಂಥೀಯರ ಜೊತೆ ಸೇರಿ ಟ್ವಿಟರ್ ನನ್ನ ಮೇಲೆ ಪಿತೂರಿ ನಡೆಸುತ್ತಿದೆ ಎಂದು ದೂರಿದ್ದಾರೆ. ಆ ಟ್ವೀಟ್ ಅನ್ನು ಸಹ ಟ್ವಿಟರ್ ಡಿಲೀಟ್ ಮಾಡಿದೆ.

ಮತ್ತೊಂದು ಖಾತೆಯನ್ನು ಬಳಸಿ ಟ್ವಿಟರ್ ಅನ್ನು ಹಣಿಯಲು ಮುಂದಾಗುವುದು ನಮ್ಮ ನಿಯಮಗಳ ಉಲ್ಲಂಘಟನೆ ಎಂದು ಟ್ವಿಟರ್ ತಿಳಿಸಿದೆ.

ಯುಎಸ್ ಕ್ಯಾಪಿಟಲ್ ಮೇಲೆ ದಾಳಿ ನಡೆದಾಗ ತಾತ್ಕಾಲಿಕವಾಗಿ ಟ್ರಂಪ್ ಖಾತೆಯನ್ನು ಸ್ಥಗಿತಗೊಳಿಸಿತ್ತು. ಅದಕ್ಕೂ ಮೊದಲು ಟ್ರಂಪ್ “ನಾನು ಜನವರಿ 20ರ ಜೋ ಬೈಡೆನ್ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ, ನನ್ನ ಅಭಿಮಾನಿಗಳು ನನ್ನ ಮಾತು ಮೀರುವುದಿಲ್ಲ” ಎಂದು ಟ್ವೀಟ್ ಮಾಡಿದ್ದರು.


ಇದನ್ನೂ ಓದಿ: ಅನೋಷ್ಕಾ ಚೋಪ್ರಾ ಫೇಸ್‌ಬುಕ್‌ ಖಾತೆ ಮೂಲಕ ಪಾಕ್‌ ಪರ ಗೂಢಾಚರ್ಯೆ: ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಭಾರತದ ಬಿಜೆಪಿ ನಾಯಕರು ಹೆದರುವುದರಲ್ಲಿ ಅರ್ಥವಿದೆ ಏಕೆಂದರೆ ಬ್ಯಾನ್ ಆಗುವಂತಹ ಸಮಾಜದಲ್ಲಿ ವಿಷ ಹರಡುವಂತಹ ಹೇಳಿಕೆಗಳನ್ನ ನೀಡುವವರು ಹೆದರುವುದರಲ್ಲಿ ತಪ್ಪೇನಿದೆ, ಸಮಾಜದಲ್ಲಿ ಗೊಂದಲ ಗದ್ದಲ ಕಲಹಗಳಿಲ್ಲದಿದ್ದರೆ ಇಂತವರಿಗೆ ಇಲ್ಲಿ ಮತ ಕೇಳಲು ಮಾತುಗಳಿರುವುದಿಲ್ಲವಲ್ಲಾ….. ಟ್ರಂಪ್ ನಂತಹ ವಿಷಕಾರಿಯನ್ನು ಜನರಿಂದ ದೂರವಿಡುವ ಪ್ರಯತ್ನ ಮಾಡಿದ ಟ್ವಿಟರ್ ಕಂಪನಿಗೆ ಅಬಿನಂದನೆ.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...