Homeಅಂತರಾಷ್ಟ್ರೀಯಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ...

ಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಟೆಕ್ ಕಂಪನಿಗಳು ನೇಮಕಾತಿಗಳಲ್ಲಿ ಅಮೆರಿಕದ ಜನರಿಗೆ ಆದ್ಯತೆ ಕೊಡಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ಟನ್‌ನಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಮಾತನಾಡಿದ ಅವರು, ತಮ್ಮ ನೇಮಕಾತಿ ವಿಧಾನವನ್ನು ಬದಲಿಸಿಕೊಳ್ಳುವಂತೆ ಪ್ರಮುಖ ಟೆಕ್ ಕಂಪನಿಗಳಿಗೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಅವರು ನಿರ್ದಿಷ್ಟವಾಗಿ ಭಾರತ ಮತ್ತು ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಹೆಚ್ಚಾಗಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಕಂಪನಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ವರದಿಗಳು ಅಂದಾಜಿಸಿವೆ.

ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ವ್ಯವಸ್ಥೆಯನ್ನು ‘ಜಾಗತಿಕವಾದಿ ಮನಸ್ಥಿತಿ’ ಎಂದು ಸಂಭೋಧಿಸಿದ ಟ್ರಂಪ್, ಅಮೆರಿಕನ್ನರನ್ನು ಕಡೆಗಣಿಸಿ ಹೊರಗುತ್ತಿಗೆ ಮೂಲಕ ವಿದೇಶಿ ಉದ್ಯೋಗಿಗಳನ್ನು ವ್ಯಾಪಕವಾಗಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ಬೇರೆಡೆ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ದ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದ ಅವಕಾಶಗಳನ್ನು ಬಳಸಿಕೊಂಡ ಅನೇಕ ದೊಡ್ಡ ಟೆಕ್ ಕಂಪನಿಗಳು ಚೀನಾದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುತ್ತಿವೆ, ಭಾರತದಲ್ಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿವೆ, ಐರ್ಲೆಂಡ್‌ನಲ್ಲಿ ಲಾಭ ಮಾಡುತ್ತಿವೆ” ಎಂದು ಹೇಳಿದ್ದಾರೆ.

ಇದೊಂದು ಅನ್ಯಾಯದ ವ್ಯವಸ್ಥೆ. ಅಮೆರಿಕದ ಕಂಪನಿಗಳು ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳುತ್ತದೆ. ಆದರೆ, ಉದ್ಯೋಗಿಗಳನ್ನು ಬೇರೆ ದೇಶಗಳಿಂದ ನೇಮಿಸಿಕೊಳ್ಳುತ್ತದೆ. ಅಮೆರಿಕದ ಜನರಿಗೆ ಅವಕಾಶ ನಿರಾಕರಿಸುತ್ತಿವೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

ತಂತ್ರಜ್ಞಾನ ಉದ್ಯಮಕ್ಕೆ ನೇರ ಸಂದೇಶ ನೀಡಿದ ಟ್ರಂಪ್, “ನಮಗೆ ಅಮೆರಿಕದ ತಂತ್ರಜ್ಞಾನ ಕಂಪನಿಗಳು ಅಮೆರಿಕಕ್ಕೆ ಬೆಂಬಲ ನೀಡಬೇಕು. ಅಮೆರಿಕಕ್ಕೆ ಮೊದಲ ಆದ್ಯತೆ ಕೊಡಬೇಕು” ಎಂದಿದ್ದಾರೆ.

ಅಮೆರಿಕದ ಸಂಪನ್ಮೂಲಗಳು ಮತ್ತು ಸ್ವಾತಂತ್ರ್ಯಗಳನ್ನು ಬಳಸಿಕೊಂಡು ಕಂಪನಿಗಳು ಶ್ರೀಮಂತವಾಗಿ ಬೆಳೆದಿದ್ದರೂ, ಅವುಗಳ ವ್ಯವಹಾರ ನಿರ್ಧಾರಗಳು ಸ್ಥಳೀಯ ಉದ್ಯೋಗ ಮಾರುಕಟ್ಟೆಗಳಿಗೆ ಏಕಕಾಲದಲ್ಲಿ ಹಾನಿ ಮಾಡಿವೆ ಎಂದು ಟ್ರಂಪ್ ಹೇಳಿದ್ದು, ನೀತಿ ಬದಲಾವಣೆ ಮತ್ತು ಪ್ರಮುಖ ಕ್ಷೇತ್ರಗಳ ಮೇಲೆ ನೇರ ಒತ್ತಡ ಹೇರುವ ಮೂಲಕ ಈ ಪ್ರವೃತ್ತಿಯನ್ನು ಹಿಮ್ಮೆಟ್ಟಿಸಲು ಟ್ರಂಪ್ ಆಡಳಿತ ನಿರ್ಧರಿಸಿದಂತೆ ತೋರುತ್ತದೆ.

ಟ್ರಂಪ್ ಆಡಳಿತ ಟೆಕ್ ಕಂಪನಿಗಳಿಗೆ ಲಗಾಮು ಹಾಕಲು ನೀತಿ ಬದಲಾವಣೆ ಮಾಡಿದರೆ, ಹೊರಗುತ್ತಿಗೆ ಮತ್ತು ಅಂತಾರಾಷ್ಟ್ರೀಯ ನೇಮಕಾತಿ ವ್ಯವಸ್ಥೆ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು. ದೀರ್ಘಕಾಲದಿಂದ ಅಮೆರಿಕನ್ ತಂತ್ರಜ್ಞಾನ ಕಂಪನಿಗಳೊಂದಿಗೆ ಒಪ್ಪಂದ ಹೊಂದಿರುವ ಭಾರತೀಯ ಐಟಿ ವೃತ್ತಿಪರರು ಮತ್ತು ಹೊರಗುತ್ತಿಗೆ ಸಂಸ್ಥೆಗಳು ಅಡೆತಡೆಗಳನ್ನು ಎದುರಿಸಬಹುದು.

ಟ್ರಂಪ್ ಆಡಳಿತ ಕಠಿಣ ನೀತಿಗಳನ್ನು ಜಾರಿಗೆ ತಂದರೆ ಅಮೆರಿಕದ ಕಂಪನಿಗಳು ಭಾರತದಂತಹ ದೇಶಗಳಿಂದ ಕಾರ್ಮಿಕರನ್ನು ನೇಮಿಸಿಕೊಳ್ಳುವ ತಮ್ಮ ಪ್ರಸ್ತುತ ಪದ್ಧತಿಯನ್ನು ಮುಂದುವರಿಸುವುದು ಕಷ್ಟವಾಗಬಹುದು ಅಥವಾ ದುಬಾರಿಯಾಗಬಹುದು. ಟ್ರಂಪ್ ನೀತಿಯನ್ನು ಅನುಸರಿಸಿ ಟೆಕ್ ಕಂಪನಿಗಳು ತಮ್ಮ ಕಾರ್ಯಚರಣೆ ಮತ್ತು ನೇಮಕಾತಿ ನೀತಿಯನ್ನು ಹೇಗೆ ರೂಪಿಸಿಕೊಳ್ಳಲಿದೆ ಎಂಬುವುದರ ಮೇಲೆ ಇದು ಅವಲಂಬಿತವಾಗಿದೆ.

ಏಕೆಂದರೆ, ಟೆಕ್ ಕಂಪನಿಗಳಿಗೆ ಟ್ರಂಪ್ ನೀತಿಯನ್ನೂ ಅನುಸರಿಸಬೇಕಿದೆ ಜೊತೆಗೆ ತಮ್ಮ ಸಾಗರೋತ್ತರ ವ್ಯವಹಾರಗಳನ್ನು ಉಳಿಸಿಕೊಳ್ಳಬೇಕಿದೆ. ಟೆಕ್ ದೈತ್ಯಗಳು ಜಾಗತಿಕವಾಗಿ ಬಹುತೇಕ ಪ್ರದೇಶಗಳಲ್ಲಿ ತಮ್ಮ ಶಾಖೆಯನ್ನು ಹೊಂದಿವೆ. ಕಂಪನಿಗಳ ಕಾರ್ಯಾಚರಣೆಗಳ್ಳೂ ಈ ಶಾಖೆಗಳು ಸಂಕೋಲೆಯಾಗಿ ಕಾರ್ಯ ನಿರ್ವಹಿಸುತ್ತವೆ. ಆದ್ದರಿಂದ ಹಠಾತ್ ಬದಲಾವಣೆ ಟೆಕ್ ಕ್ಷೇತ್ರದಲ್ಲಿ ಬಿರುಗಾಳಿಗೆ ಕಾರಣವಾಗಬಹುದು.

ಟ್ರಂಪ್ ಈಗಾಗಲೇ ಸಹಿ ಹಾಕಿರುವ ಕಾರ್ಯಕಾರಿ ಆದೇಶಗಳು ತಂತ್ರಜ್ಞಾನ ವಲಯ ದೇಶೀಯ ಆದ್ಯತೆಗಳ ಮೇಲೆ ಕೇಂದ್ರೀಕರಿಸುವ ಸ್ಪಷ್ಟ ಉದ್ದೇಶವನ್ನು ಸೂಚಿಸುತ್ತವೆ. ವಿಶಾಲ ಆರ್ಥಿಕ ರಾಷ್ಟ್ರೀಯತೆಯ ಕಾರ್ಯಸೂಚಿಯ ಭಾಗವಾಗಿ ಟ್ರಂಪ್ ಅವರು ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಗೆ ಎಐ ಅಭಿವೃದ್ಧಿಯನ್ನು ನಿರ್ಣಾಯಕ ಕ್ಷೇತ್ರವೆಂದು ಪರಿಗಣಿಸುತ್ತಿದ್ದಾರೆ. ಕಂಪನಿಗಳು ಜಾಗತಿಕ ಕಾರ್ಯಪಡೆಯ ತಂತ್ರಗಳನ್ನು ಅನುಸರಿಸುವ ಬದಲು ರಾಷ್ಟ್ರೀಯ ಉದ್ದೇಶಗಳಿಗೆ ಕೊಡುಗೆ ನೀಡಬೇಕೆಂದು ಅವರು ನಿರೀಕ್ಷಿಸುತ್ತಿದ್ದಾರೆ.

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...