Homeಅಂತರಾಷ್ಟ್ರೀಯಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ...

ಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಟೆಕ್ ಕಂಪನಿಗಳು ನೇಮಕಾತಿಗಳಲ್ಲಿ ಅಮೆರಿಕದ ಜನರಿಗೆ ಆದ್ಯತೆ ಕೊಡಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ಟನ್‌ನಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಮಾತನಾಡಿದ ಅವರು, ತಮ್ಮ ನೇಮಕಾತಿ ವಿಧಾನವನ್ನು ಬದಲಿಸಿಕೊಳ್ಳುವಂತೆ ಪ್ರಮುಖ ಟೆಕ್ ಕಂಪನಿಗಳಿಗೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಅವರು ನಿರ್ದಿಷ್ಟವಾಗಿ ಭಾರತ ಮತ್ತು ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಹೆಚ್ಚಾಗಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಕಂಪನಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ವರದಿಗಳು ಅಂದಾಜಿಸಿವೆ.

ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ವ್ಯವಸ್ಥೆಯನ್ನು ‘ಜಾಗತಿಕವಾದಿ ಮನಸ್ಥಿತಿ’ ಎಂದು ಸಂಭೋಧಿಸಿದ ಟ್ರಂಪ್, ಅಮೆರಿಕನ್ನರನ್ನು ಕಡೆಗಣಿಸಿ ಹೊರಗುತ್ತಿಗೆ ಮೂಲಕ ವಿದೇಶಿ ಉದ್ಯೋಗಿಗಳನ್ನು ವ್ಯಾಪಕವಾಗಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ಬೇರೆಡೆ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ದ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದ ಅವಕಾಶಗಳನ್ನು ಬಳಸಿಕೊಂಡ ಅನೇಕ ದೊಡ್ಡ ಟೆಕ್ ಕಂಪನಿಗಳು ಚೀನಾದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುತ್ತಿವೆ, ಭಾರತದಲ್ಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿವೆ, ಐರ್ಲೆಂಡ್‌ನಲ್ಲಿ ಲಾಭ ಮಾಡುತ್ತಿವೆ” ಎಂದು ಹೇಳಿದ್ದಾರೆ.

ಇದೊಂದು ಅನ್ಯಾಯದ ವ್ಯವಸ್ಥೆ. ಅಮೆರಿಕದ ಕಂಪನಿಗಳು ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳುತ್ತದೆ. ಆದರೆ, ಉದ್ಯೋಗಿಗಳನ್ನು ಬೇರೆ ದೇಶಗಳಿಂದ ನೇಮಿಸಿಕೊಳ್ಳುತ್ತದೆ. ಅಮೆರಿಕದ ಜನರಿಗೆ ಅವಕಾಶ ನಿರಾಕರಿಸುತ್ತಿವೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

ತಂತ್ರಜ್ಞಾನ ಉದ್ಯಮಕ್ಕೆ ನೇರ ಸಂದೇಶ ನೀಡಿದ ಟ್ರಂಪ್, “ನಮಗೆ ಅಮೆರಿಕದ ತಂತ್ರಜ್ಞಾನ ಕಂಪನಿಗಳು ಅಮೆರಿಕಕ್ಕೆ ಬೆಂಬಲ ನೀಡಬೇಕು. ಅಮೆರಿಕಕ್ಕೆ ಮೊದಲ ಆದ್ಯತೆ ಕೊಡಬೇಕು” ಎಂದಿದ್ದಾರೆ.

ಅಮೆರಿಕದ ಸಂಪನ್ಮೂಲಗಳು ಮತ್ತು ಸ್ವಾತಂತ್ರ್ಯಗಳನ್ನು ಬಳಸಿಕೊಂಡು ಕಂಪನಿಗಳು ಶ್ರೀಮಂತವಾಗಿ ಬೆಳೆದಿದ್ದರೂ, ಅವುಗಳ ವ್ಯವಹಾರ ನಿರ್ಧಾರಗಳು ಸ್ಥಳೀಯ ಉದ್ಯೋಗ ಮಾರುಕಟ್ಟೆಗಳಿಗೆ ಏಕಕಾಲದಲ್ಲಿ ಹಾನಿ ಮಾಡಿವೆ ಎಂದು ಟ್ರಂಪ್ ಹೇಳಿದ್ದು, ನೀತಿ ಬದಲಾವಣೆ ಮತ್ತು ಪ್ರಮುಖ ಕ್ಷೇತ್ರಗಳ ಮೇಲೆ ನೇರ ಒತ್ತಡ ಹೇರುವ ಮೂಲಕ ಈ ಪ್ರವೃತ್ತಿಯನ್ನು ಹಿಮ್ಮೆಟ್ಟಿಸಲು ಟ್ರಂಪ್ ಆಡಳಿತ ನಿರ್ಧರಿಸಿದಂತೆ ತೋರುತ್ತದೆ.

ಟ್ರಂಪ್ ಆಡಳಿತ ಟೆಕ್ ಕಂಪನಿಗಳಿಗೆ ಲಗಾಮು ಹಾಕಲು ನೀತಿ ಬದಲಾವಣೆ ಮಾಡಿದರೆ, ಹೊರಗುತ್ತಿಗೆ ಮತ್ತು ಅಂತಾರಾಷ್ಟ್ರೀಯ ನೇಮಕಾತಿ ವ್ಯವಸ್ಥೆ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು. ದೀರ್ಘಕಾಲದಿಂದ ಅಮೆರಿಕನ್ ತಂತ್ರಜ್ಞಾನ ಕಂಪನಿಗಳೊಂದಿಗೆ ಒಪ್ಪಂದ ಹೊಂದಿರುವ ಭಾರತೀಯ ಐಟಿ ವೃತ್ತಿಪರರು ಮತ್ತು ಹೊರಗುತ್ತಿಗೆ ಸಂಸ್ಥೆಗಳು ಅಡೆತಡೆಗಳನ್ನು ಎದುರಿಸಬಹುದು.

ಟ್ರಂಪ್ ಆಡಳಿತ ಕಠಿಣ ನೀತಿಗಳನ್ನು ಜಾರಿಗೆ ತಂದರೆ ಅಮೆರಿಕದ ಕಂಪನಿಗಳು ಭಾರತದಂತಹ ದೇಶಗಳಿಂದ ಕಾರ್ಮಿಕರನ್ನು ನೇಮಿಸಿಕೊಳ್ಳುವ ತಮ್ಮ ಪ್ರಸ್ತುತ ಪದ್ಧತಿಯನ್ನು ಮುಂದುವರಿಸುವುದು ಕಷ್ಟವಾಗಬಹುದು ಅಥವಾ ದುಬಾರಿಯಾಗಬಹುದು. ಟ್ರಂಪ್ ನೀತಿಯನ್ನು ಅನುಸರಿಸಿ ಟೆಕ್ ಕಂಪನಿಗಳು ತಮ್ಮ ಕಾರ್ಯಚರಣೆ ಮತ್ತು ನೇಮಕಾತಿ ನೀತಿಯನ್ನು ಹೇಗೆ ರೂಪಿಸಿಕೊಳ್ಳಲಿದೆ ಎಂಬುವುದರ ಮೇಲೆ ಇದು ಅವಲಂಬಿತವಾಗಿದೆ.

ಏಕೆಂದರೆ, ಟೆಕ್ ಕಂಪನಿಗಳಿಗೆ ಟ್ರಂಪ್ ನೀತಿಯನ್ನೂ ಅನುಸರಿಸಬೇಕಿದೆ ಜೊತೆಗೆ ತಮ್ಮ ಸಾಗರೋತ್ತರ ವ್ಯವಹಾರಗಳನ್ನು ಉಳಿಸಿಕೊಳ್ಳಬೇಕಿದೆ. ಟೆಕ್ ದೈತ್ಯಗಳು ಜಾಗತಿಕವಾಗಿ ಬಹುತೇಕ ಪ್ರದೇಶಗಳಲ್ಲಿ ತಮ್ಮ ಶಾಖೆಯನ್ನು ಹೊಂದಿವೆ. ಕಂಪನಿಗಳ ಕಾರ್ಯಾಚರಣೆಗಳ್ಳೂ ಈ ಶಾಖೆಗಳು ಸಂಕೋಲೆಯಾಗಿ ಕಾರ್ಯ ನಿರ್ವಹಿಸುತ್ತವೆ. ಆದ್ದರಿಂದ ಹಠಾತ್ ಬದಲಾವಣೆ ಟೆಕ್ ಕ್ಷೇತ್ರದಲ್ಲಿ ಬಿರುಗಾಳಿಗೆ ಕಾರಣವಾಗಬಹುದು.

ಟ್ರಂಪ್ ಈಗಾಗಲೇ ಸಹಿ ಹಾಕಿರುವ ಕಾರ್ಯಕಾರಿ ಆದೇಶಗಳು ತಂತ್ರಜ್ಞಾನ ವಲಯ ದೇಶೀಯ ಆದ್ಯತೆಗಳ ಮೇಲೆ ಕೇಂದ್ರೀಕರಿಸುವ ಸ್ಪಷ್ಟ ಉದ್ದೇಶವನ್ನು ಸೂಚಿಸುತ್ತವೆ. ವಿಶಾಲ ಆರ್ಥಿಕ ರಾಷ್ಟ್ರೀಯತೆಯ ಕಾರ್ಯಸೂಚಿಯ ಭಾಗವಾಗಿ ಟ್ರಂಪ್ ಅವರು ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಗೆ ಎಐ ಅಭಿವೃದ್ಧಿಯನ್ನು ನಿರ್ಣಾಯಕ ಕ್ಷೇತ್ರವೆಂದು ಪರಿಗಣಿಸುತ್ತಿದ್ದಾರೆ. ಕಂಪನಿಗಳು ಜಾಗತಿಕ ಕಾರ್ಯಪಡೆಯ ತಂತ್ರಗಳನ್ನು ಅನುಸರಿಸುವ ಬದಲು ರಾಷ್ಟ್ರೀಯ ಉದ್ದೇಶಗಳಿಗೆ ಕೊಡುಗೆ ನೀಡಬೇಕೆಂದು ಅವರು ನಿರೀಕ್ಷಿಸುತ್ತಿದ್ದಾರೆ.

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...