Homeಅಂತರಾಷ್ಟ್ರೀಯಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ...

ಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಟೆಕ್ ಕಂಪನಿಗಳು ನೇಮಕಾತಿಗಳಲ್ಲಿ ಅಮೆರಿಕದ ಜನರಿಗೆ ಆದ್ಯತೆ ಕೊಡಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ಟನ್‌ನಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಮಾತನಾಡಿದ ಅವರು, ತಮ್ಮ ನೇಮಕಾತಿ ವಿಧಾನವನ್ನು ಬದಲಿಸಿಕೊಳ್ಳುವಂತೆ ಪ್ರಮುಖ ಟೆಕ್ ಕಂಪನಿಗಳಿಗೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಅವರು ನಿರ್ದಿಷ್ಟವಾಗಿ ಭಾರತ ಮತ್ತು ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಹೆಚ್ಚಾಗಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಕಂಪನಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ವರದಿಗಳು ಅಂದಾಜಿಸಿವೆ.

ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ವ್ಯವಸ್ಥೆಯನ್ನು ‘ಜಾಗತಿಕವಾದಿ ಮನಸ್ಥಿತಿ’ ಎಂದು ಸಂಭೋಧಿಸಿದ ಟ್ರಂಪ್, ಅಮೆರಿಕನ್ನರನ್ನು ಕಡೆಗಣಿಸಿ ಹೊರಗುತ್ತಿಗೆ ಮೂಲಕ ವಿದೇಶಿ ಉದ್ಯೋಗಿಗಳನ್ನು ವ್ಯಾಪಕವಾಗಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ಬೇರೆಡೆ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ದ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದ ಅವಕಾಶಗಳನ್ನು ಬಳಸಿಕೊಂಡ ಅನೇಕ ದೊಡ್ಡ ಟೆಕ್ ಕಂಪನಿಗಳು ಚೀನಾದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುತ್ತಿವೆ, ಭಾರತದಲ್ಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿವೆ, ಐರ್ಲೆಂಡ್‌ನಲ್ಲಿ ಲಾಭ ಮಾಡುತ್ತಿವೆ” ಎಂದು ಹೇಳಿದ್ದಾರೆ.

ಇದೊಂದು ಅನ್ಯಾಯದ ವ್ಯವಸ್ಥೆ. ಅಮೆರಿಕದ ಕಂಪನಿಗಳು ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳುತ್ತದೆ. ಆದರೆ, ಉದ್ಯೋಗಿಗಳನ್ನು ಬೇರೆ ದೇಶಗಳಿಂದ ನೇಮಿಸಿಕೊಳ್ಳುತ್ತದೆ. ಅಮೆರಿಕದ ಜನರಿಗೆ ಅವಕಾಶ ನಿರಾಕರಿಸುತ್ತಿವೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

ತಂತ್ರಜ್ಞಾನ ಉದ್ಯಮಕ್ಕೆ ನೇರ ಸಂದೇಶ ನೀಡಿದ ಟ್ರಂಪ್, “ನಮಗೆ ಅಮೆರಿಕದ ತಂತ್ರಜ್ಞಾನ ಕಂಪನಿಗಳು ಅಮೆರಿಕಕ್ಕೆ ಬೆಂಬಲ ನೀಡಬೇಕು. ಅಮೆರಿಕಕ್ಕೆ ಮೊದಲ ಆದ್ಯತೆ ಕೊಡಬೇಕು” ಎಂದಿದ್ದಾರೆ.

ಅಮೆರಿಕದ ಸಂಪನ್ಮೂಲಗಳು ಮತ್ತು ಸ್ವಾತಂತ್ರ್ಯಗಳನ್ನು ಬಳಸಿಕೊಂಡು ಕಂಪನಿಗಳು ಶ್ರೀಮಂತವಾಗಿ ಬೆಳೆದಿದ್ದರೂ, ಅವುಗಳ ವ್ಯವಹಾರ ನಿರ್ಧಾರಗಳು ಸ್ಥಳೀಯ ಉದ್ಯೋಗ ಮಾರುಕಟ್ಟೆಗಳಿಗೆ ಏಕಕಾಲದಲ್ಲಿ ಹಾನಿ ಮಾಡಿವೆ ಎಂದು ಟ್ರಂಪ್ ಹೇಳಿದ್ದು, ನೀತಿ ಬದಲಾವಣೆ ಮತ್ತು ಪ್ರಮುಖ ಕ್ಷೇತ್ರಗಳ ಮೇಲೆ ನೇರ ಒತ್ತಡ ಹೇರುವ ಮೂಲಕ ಈ ಪ್ರವೃತ್ತಿಯನ್ನು ಹಿಮ್ಮೆಟ್ಟಿಸಲು ಟ್ರಂಪ್ ಆಡಳಿತ ನಿರ್ಧರಿಸಿದಂತೆ ತೋರುತ್ತದೆ.

ಟ್ರಂಪ್ ಆಡಳಿತ ಟೆಕ್ ಕಂಪನಿಗಳಿಗೆ ಲಗಾಮು ಹಾಕಲು ನೀತಿ ಬದಲಾವಣೆ ಮಾಡಿದರೆ, ಹೊರಗುತ್ತಿಗೆ ಮತ್ತು ಅಂತಾರಾಷ್ಟ್ರೀಯ ನೇಮಕಾತಿ ವ್ಯವಸ್ಥೆ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು. ದೀರ್ಘಕಾಲದಿಂದ ಅಮೆರಿಕನ್ ತಂತ್ರಜ್ಞಾನ ಕಂಪನಿಗಳೊಂದಿಗೆ ಒಪ್ಪಂದ ಹೊಂದಿರುವ ಭಾರತೀಯ ಐಟಿ ವೃತ್ತಿಪರರು ಮತ್ತು ಹೊರಗುತ್ತಿಗೆ ಸಂಸ್ಥೆಗಳು ಅಡೆತಡೆಗಳನ್ನು ಎದುರಿಸಬಹುದು.

ಟ್ರಂಪ್ ಆಡಳಿತ ಕಠಿಣ ನೀತಿಗಳನ್ನು ಜಾರಿಗೆ ತಂದರೆ ಅಮೆರಿಕದ ಕಂಪನಿಗಳು ಭಾರತದಂತಹ ದೇಶಗಳಿಂದ ಕಾರ್ಮಿಕರನ್ನು ನೇಮಿಸಿಕೊಳ್ಳುವ ತಮ್ಮ ಪ್ರಸ್ತುತ ಪದ್ಧತಿಯನ್ನು ಮುಂದುವರಿಸುವುದು ಕಷ್ಟವಾಗಬಹುದು ಅಥವಾ ದುಬಾರಿಯಾಗಬಹುದು. ಟ್ರಂಪ್ ನೀತಿಯನ್ನು ಅನುಸರಿಸಿ ಟೆಕ್ ಕಂಪನಿಗಳು ತಮ್ಮ ಕಾರ್ಯಚರಣೆ ಮತ್ತು ನೇಮಕಾತಿ ನೀತಿಯನ್ನು ಹೇಗೆ ರೂಪಿಸಿಕೊಳ್ಳಲಿದೆ ಎಂಬುವುದರ ಮೇಲೆ ಇದು ಅವಲಂಬಿತವಾಗಿದೆ.

ಏಕೆಂದರೆ, ಟೆಕ್ ಕಂಪನಿಗಳಿಗೆ ಟ್ರಂಪ್ ನೀತಿಯನ್ನೂ ಅನುಸರಿಸಬೇಕಿದೆ ಜೊತೆಗೆ ತಮ್ಮ ಸಾಗರೋತ್ತರ ವ್ಯವಹಾರಗಳನ್ನು ಉಳಿಸಿಕೊಳ್ಳಬೇಕಿದೆ. ಟೆಕ್ ದೈತ್ಯಗಳು ಜಾಗತಿಕವಾಗಿ ಬಹುತೇಕ ಪ್ರದೇಶಗಳಲ್ಲಿ ತಮ್ಮ ಶಾಖೆಯನ್ನು ಹೊಂದಿವೆ. ಕಂಪನಿಗಳ ಕಾರ್ಯಾಚರಣೆಗಳ್ಳೂ ಈ ಶಾಖೆಗಳು ಸಂಕೋಲೆಯಾಗಿ ಕಾರ್ಯ ನಿರ್ವಹಿಸುತ್ತವೆ. ಆದ್ದರಿಂದ ಹಠಾತ್ ಬದಲಾವಣೆ ಟೆಕ್ ಕ್ಷೇತ್ರದಲ್ಲಿ ಬಿರುಗಾಳಿಗೆ ಕಾರಣವಾಗಬಹುದು.

ಟ್ರಂಪ್ ಈಗಾಗಲೇ ಸಹಿ ಹಾಕಿರುವ ಕಾರ್ಯಕಾರಿ ಆದೇಶಗಳು ತಂತ್ರಜ್ಞಾನ ವಲಯ ದೇಶೀಯ ಆದ್ಯತೆಗಳ ಮೇಲೆ ಕೇಂದ್ರೀಕರಿಸುವ ಸ್ಪಷ್ಟ ಉದ್ದೇಶವನ್ನು ಸೂಚಿಸುತ್ತವೆ. ವಿಶಾಲ ಆರ್ಥಿಕ ರಾಷ್ಟ್ರೀಯತೆಯ ಕಾರ್ಯಸೂಚಿಯ ಭಾಗವಾಗಿ ಟ್ರಂಪ್ ಅವರು ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಗೆ ಎಐ ಅಭಿವೃದ್ಧಿಯನ್ನು ನಿರ್ಣಾಯಕ ಕ್ಷೇತ್ರವೆಂದು ಪರಿಗಣಿಸುತ್ತಿದ್ದಾರೆ. ಕಂಪನಿಗಳು ಜಾಗತಿಕ ಕಾರ್ಯಪಡೆಯ ತಂತ್ರಗಳನ್ನು ಅನುಸರಿಸುವ ಬದಲು ರಾಷ್ಟ್ರೀಯ ಉದ್ದೇಶಗಳಿಗೆ ಕೊಡುಗೆ ನೀಡಬೇಕೆಂದು ಅವರು ನಿರೀಕ್ಷಿಸುತ್ತಿದ್ದಾರೆ.

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...