Homeಅಂತರಾಷ್ಟ್ರೀಯಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ...

ಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಟೆಕ್ ಕಂಪನಿಗಳು ನೇಮಕಾತಿಗಳಲ್ಲಿ ಅಮೆರಿಕದ ಜನರಿಗೆ ಆದ್ಯತೆ ಕೊಡಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ಟನ್‌ನಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಮಾತನಾಡಿದ ಅವರು, ತಮ್ಮ ನೇಮಕಾತಿ ವಿಧಾನವನ್ನು ಬದಲಿಸಿಕೊಳ್ಳುವಂತೆ ಪ್ರಮುಖ ಟೆಕ್ ಕಂಪನಿಗಳಿಗೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಅವರು ನಿರ್ದಿಷ್ಟವಾಗಿ ಭಾರತ ಮತ್ತು ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಹೆಚ್ಚಾಗಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಕಂಪನಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ವರದಿಗಳು ಅಂದಾಜಿಸಿವೆ.

ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ವ್ಯವಸ್ಥೆಯನ್ನು ‘ಜಾಗತಿಕವಾದಿ ಮನಸ್ಥಿತಿ’ ಎಂದು ಸಂಭೋಧಿಸಿದ ಟ್ರಂಪ್, ಅಮೆರಿಕನ್ನರನ್ನು ಕಡೆಗಣಿಸಿ ಹೊರಗುತ್ತಿಗೆ ಮೂಲಕ ವಿದೇಶಿ ಉದ್ಯೋಗಿಗಳನ್ನು ವ್ಯಾಪಕವಾಗಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ಬೇರೆಡೆ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ದ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದ ಅವಕಾಶಗಳನ್ನು ಬಳಸಿಕೊಂಡ ಅನೇಕ ದೊಡ್ಡ ಟೆಕ್ ಕಂಪನಿಗಳು ಚೀನಾದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುತ್ತಿವೆ, ಭಾರತದಲ್ಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿವೆ, ಐರ್ಲೆಂಡ್‌ನಲ್ಲಿ ಲಾಭ ಮಾಡುತ್ತಿವೆ” ಎಂದು ಹೇಳಿದ್ದಾರೆ.

ಇದೊಂದು ಅನ್ಯಾಯದ ವ್ಯವಸ್ಥೆ. ಅಮೆರಿಕದ ಕಂಪನಿಗಳು ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳುತ್ತದೆ. ಆದರೆ, ಉದ್ಯೋಗಿಗಳನ್ನು ಬೇರೆ ದೇಶಗಳಿಂದ ನೇಮಿಸಿಕೊಳ್ಳುತ್ತದೆ. ಅಮೆರಿಕದ ಜನರಿಗೆ ಅವಕಾಶ ನಿರಾಕರಿಸುತ್ತಿವೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

ತಂತ್ರಜ್ಞಾನ ಉದ್ಯಮಕ್ಕೆ ನೇರ ಸಂದೇಶ ನೀಡಿದ ಟ್ರಂಪ್, “ನಮಗೆ ಅಮೆರಿಕದ ತಂತ್ರಜ್ಞಾನ ಕಂಪನಿಗಳು ಅಮೆರಿಕಕ್ಕೆ ಬೆಂಬಲ ನೀಡಬೇಕು. ಅಮೆರಿಕಕ್ಕೆ ಮೊದಲ ಆದ್ಯತೆ ಕೊಡಬೇಕು” ಎಂದಿದ್ದಾರೆ.

ಅಮೆರಿಕದ ಸಂಪನ್ಮೂಲಗಳು ಮತ್ತು ಸ್ವಾತಂತ್ರ್ಯಗಳನ್ನು ಬಳಸಿಕೊಂಡು ಕಂಪನಿಗಳು ಶ್ರೀಮಂತವಾಗಿ ಬೆಳೆದಿದ್ದರೂ, ಅವುಗಳ ವ್ಯವಹಾರ ನಿರ್ಧಾರಗಳು ಸ್ಥಳೀಯ ಉದ್ಯೋಗ ಮಾರುಕಟ್ಟೆಗಳಿಗೆ ಏಕಕಾಲದಲ್ಲಿ ಹಾನಿ ಮಾಡಿವೆ ಎಂದು ಟ್ರಂಪ್ ಹೇಳಿದ್ದು, ನೀತಿ ಬದಲಾವಣೆ ಮತ್ತು ಪ್ರಮುಖ ಕ್ಷೇತ್ರಗಳ ಮೇಲೆ ನೇರ ಒತ್ತಡ ಹೇರುವ ಮೂಲಕ ಈ ಪ್ರವೃತ್ತಿಯನ್ನು ಹಿಮ್ಮೆಟ್ಟಿಸಲು ಟ್ರಂಪ್ ಆಡಳಿತ ನಿರ್ಧರಿಸಿದಂತೆ ತೋರುತ್ತದೆ.

ಟ್ರಂಪ್ ಆಡಳಿತ ಟೆಕ್ ಕಂಪನಿಗಳಿಗೆ ಲಗಾಮು ಹಾಕಲು ನೀತಿ ಬದಲಾವಣೆ ಮಾಡಿದರೆ, ಹೊರಗುತ್ತಿಗೆ ಮತ್ತು ಅಂತಾರಾಷ್ಟ್ರೀಯ ನೇಮಕಾತಿ ವ್ಯವಸ್ಥೆ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು. ದೀರ್ಘಕಾಲದಿಂದ ಅಮೆರಿಕನ್ ತಂತ್ರಜ್ಞಾನ ಕಂಪನಿಗಳೊಂದಿಗೆ ಒಪ್ಪಂದ ಹೊಂದಿರುವ ಭಾರತೀಯ ಐಟಿ ವೃತ್ತಿಪರರು ಮತ್ತು ಹೊರಗುತ್ತಿಗೆ ಸಂಸ್ಥೆಗಳು ಅಡೆತಡೆಗಳನ್ನು ಎದುರಿಸಬಹುದು.

ಟ್ರಂಪ್ ಆಡಳಿತ ಕಠಿಣ ನೀತಿಗಳನ್ನು ಜಾರಿಗೆ ತಂದರೆ ಅಮೆರಿಕದ ಕಂಪನಿಗಳು ಭಾರತದಂತಹ ದೇಶಗಳಿಂದ ಕಾರ್ಮಿಕರನ್ನು ನೇಮಿಸಿಕೊಳ್ಳುವ ತಮ್ಮ ಪ್ರಸ್ತುತ ಪದ್ಧತಿಯನ್ನು ಮುಂದುವರಿಸುವುದು ಕಷ್ಟವಾಗಬಹುದು ಅಥವಾ ದುಬಾರಿಯಾಗಬಹುದು. ಟ್ರಂಪ್ ನೀತಿಯನ್ನು ಅನುಸರಿಸಿ ಟೆಕ್ ಕಂಪನಿಗಳು ತಮ್ಮ ಕಾರ್ಯಚರಣೆ ಮತ್ತು ನೇಮಕಾತಿ ನೀತಿಯನ್ನು ಹೇಗೆ ರೂಪಿಸಿಕೊಳ್ಳಲಿದೆ ಎಂಬುವುದರ ಮೇಲೆ ಇದು ಅವಲಂಬಿತವಾಗಿದೆ.

ಏಕೆಂದರೆ, ಟೆಕ್ ಕಂಪನಿಗಳಿಗೆ ಟ್ರಂಪ್ ನೀತಿಯನ್ನೂ ಅನುಸರಿಸಬೇಕಿದೆ ಜೊತೆಗೆ ತಮ್ಮ ಸಾಗರೋತ್ತರ ವ್ಯವಹಾರಗಳನ್ನು ಉಳಿಸಿಕೊಳ್ಳಬೇಕಿದೆ. ಟೆಕ್ ದೈತ್ಯಗಳು ಜಾಗತಿಕವಾಗಿ ಬಹುತೇಕ ಪ್ರದೇಶಗಳಲ್ಲಿ ತಮ್ಮ ಶಾಖೆಯನ್ನು ಹೊಂದಿವೆ. ಕಂಪನಿಗಳ ಕಾರ್ಯಾಚರಣೆಗಳ್ಳೂ ಈ ಶಾಖೆಗಳು ಸಂಕೋಲೆಯಾಗಿ ಕಾರ್ಯ ನಿರ್ವಹಿಸುತ್ತವೆ. ಆದ್ದರಿಂದ ಹಠಾತ್ ಬದಲಾವಣೆ ಟೆಕ್ ಕ್ಷೇತ್ರದಲ್ಲಿ ಬಿರುಗಾಳಿಗೆ ಕಾರಣವಾಗಬಹುದು.

ಟ್ರಂಪ್ ಈಗಾಗಲೇ ಸಹಿ ಹಾಕಿರುವ ಕಾರ್ಯಕಾರಿ ಆದೇಶಗಳು ತಂತ್ರಜ್ಞಾನ ವಲಯ ದೇಶೀಯ ಆದ್ಯತೆಗಳ ಮೇಲೆ ಕೇಂದ್ರೀಕರಿಸುವ ಸ್ಪಷ್ಟ ಉದ್ದೇಶವನ್ನು ಸೂಚಿಸುತ್ತವೆ. ವಿಶಾಲ ಆರ್ಥಿಕ ರಾಷ್ಟ್ರೀಯತೆಯ ಕಾರ್ಯಸೂಚಿಯ ಭಾಗವಾಗಿ ಟ್ರಂಪ್ ಅವರು ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಗೆ ಎಐ ಅಭಿವೃದ್ಧಿಯನ್ನು ನಿರ್ಣಾಯಕ ಕ್ಷೇತ್ರವೆಂದು ಪರಿಗಣಿಸುತ್ತಿದ್ದಾರೆ. ಕಂಪನಿಗಳು ಜಾಗತಿಕ ಕಾರ್ಯಪಡೆಯ ತಂತ್ರಗಳನ್ನು ಅನುಸರಿಸುವ ಬದಲು ರಾಷ್ಟ್ರೀಯ ಉದ್ದೇಶಗಳಿಗೆ ಕೊಡುಗೆ ನೀಡಬೇಕೆಂದು ಅವರು ನಿರೀಕ್ಷಿಸುತ್ತಿದ್ದಾರೆ.

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...