Homeಅಂತರಾಷ್ಟ್ರೀಯಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ...

ಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಟೆಕ್ ಕಂಪನಿಗಳು ನೇಮಕಾತಿಗಳಲ್ಲಿ ಅಮೆರಿಕದ ಜನರಿಗೆ ಆದ್ಯತೆ ಕೊಡಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ಟನ್‌ನಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಮಾತನಾಡಿದ ಅವರು, ತಮ್ಮ ನೇಮಕಾತಿ ವಿಧಾನವನ್ನು ಬದಲಿಸಿಕೊಳ್ಳುವಂತೆ ಪ್ರಮುಖ ಟೆಕ್ ಕಂಪನಿಗಳಿಗೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಅವರು ನಿರ್ದಿಷ್ಟವಾಗಿ ಭಾರತ ಮತ್ತು ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಹೆಚ್ಚಾಗಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಕಂಪನಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ವರದಿಗಳು ಅಂದಾಜಿಸಿವೆ.

ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ವ್ಯವಸ್ಥೆಯನ್ನು ‘ಜಾಗತಿಕವಾದಿ ಮನಸ್ಥಿತಿ’ ಎಂದು ಸಂಭೋಧಿಸಿದ ಟ್ರಂಪ್, ಅಮೆರಿಕನ್ನರನ್ನು ಕಡೆಗಣಿಸಿ ಹೊರಗುತ್ತಿಗೆ ಮೂಲಕ ವಿದೇಶಿ ಉದ್ಯೋಗಿಗಳನ್ನು ವ್ಯಾಪಕವಾಗಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ಬೇರೆಡೆ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ದ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದ ಅವಕಾಶಗಳನ್ನು ಬಳಸಿಕೊಂಡ ಅನೇಕ ದೊಡ್ಡ ಟೆಕ್ ಕಂಪನಿಗಳು ಚೀನಾದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುತ್ತಿವೆ, ಭಾರತದಲ್ಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿವೆ, ಐರ್ಲೆಂಡ್‌ನಲ್ಲಿ ಲಾಭ ಮಾಡುತ್ತಿವೆ” ಎಂದು ಹೇಳಿದ್ದಾರೆ.

ಇದೊಂದು ಅನ್ಯಾಯದ ವ್ಯವಸ್ಥೆ. ಅಮೆರಿಕದ ಕಂಪನಿಗಳು ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳುತ್ತದೆ. ಆದರೆ, ಉದ್ಯೋಗಿಗಳನ್ನು ಬೇರೆ ದೇಶಗಳಿಂದ ನೇಮಿಸಿಕೊಳ್ಳುತ್ತದೆ. ಅಮೆರಿಕದ ಜನರಿಗೆ ಅವಕಾಶ ನಿರಾಕರಿಸುತ್ತಿವೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

ತಂತ್ರಜ್ಞಾನ ಉದ್ಯಮಕ್ಕೆ ನೇರ ಸಂದೇಶ ನೀಡಿದ ಟ್ರಂಪ್, “ನಮಗೆ ಅಮೆರಿಕದ ತಂತ್ರಜ್ಞಾನ ಕಂಪನಿಗಳು ಅಮೆರಿಕಕ್ಕೆ ಬೆಂಬಲ ನೀಡಬೇಕು. ಅಮೆರಿಕಕ್ಕೆ ಮೊದಲ ಆದ್ಯತೆ ಕೊಡಬೇಕು” ಎಂದಿದ್ದಾರೆ.

ಅಮೆರಿಕದ ಸಂಪನ್ಮೂಲಗಳು ಮತ್ತು ಸ್ವಾತಂತ್ರ್ಯಗಳನ್ನು ಬಳಸಿಕೊಂಡು ಕಂಪನಿಗಳು ಶ್ರೀಮಂತವಾಗಿ ಬೆಳೆದಿದ್ದರೂ, ಅವುಗಳ ವ್ಯವಹಾರ ನಿರ್ಧಾರಗಳು ಸ್ಥಳೀಯ ಉದ್ಯೋಗ ಮಾರುಕಟ್ಟೆಗಳಿಗೆ ಏಕಕಾಲದಲ್ಲಿ ಹಾನಿ ಮಾಡಿವೆ ಎಂದು ಟ್ರಂಪ್ ಹೇಳಿದ್ದು, ನೀತಿ ಬದಲಾವಣೆ ಮತ್ತು ಪ್ರಮುಖ ಕ್ಷೇತ್ರಗಳ ಮೇಲೆ ನೇರ ಒತ್ತಡ ಹೇರುವ ಮೂಲಕ ಈ ಪ್ರವೃತ್ತಿಯನ್ನು ಹಿಮ್ಮೆಟ್ಟಿಸಲು ಟ್ರಂಪ್ ಆಡಳಿತ ನಿರ್ಧರಿಸಿದಂತೆ ತೋರುತ್ತದೆ.

ಟ್ರಂಪ್ ಆಡಳಿತ ಟೆಕ್ ಕಂಪನಿಗಳಿಗೆ ಲಗಾಮು ಹಾಕಲು ನೀತಿ ಬದಲಾವಣೆ ಮಾಡಿದರೆ, ಹೊರಗುತ್ತಿಗೆ ಮತ್ತು ಅಂತಾರಾಷ್ಟ್ರೀಯ ನೇಮಕಾತಿ ವ್ಯವಸ್ಥೆ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು. ದೀರ್ಘಕಾಲದಿಂದ ಅಮೆರಿಕನ್ ತಂತ್ರಜ್ಞಾನ ಕಂಪನಿಗಳೊಂದಿಗೆ ಒಪ್ಪಂದ ಹೊಂದಿರುವ ಭಾರತೀಯ ಐಟಿ ವೃತ್ತಿಪರರು ಮತ್ತು ಹೊರಗುತ್ತಿಗೆ ಸಂಸ್ಥೆಗಳು ಅಡೆತಡೆಗಳನ್ನು ಎದುರಿಸಬಹುದು.

ಟ್ರಂಪ್ ಆಡಳಿತ ಕಠಿಣ ನೀತಿಗಳನ್ನು ಜಾರಿಗೆ ತಂದರೆ ಅಮೆರಿಕದ ಕಂಪನಿಗಳು ಭಾರತದಂತಹ ದೇಶಗಳಿಂದ ಕಾರ್ಮಿಕರನ್ನು ನೇಮಿಸಿಕೊಳ್ಳುವ ತಮ್ಮ ಪ್ರಸ್ತುತ ಪದ್ಧತಿಯನ್ನು ಮುಂದುವರಿಸುವುದು ಕಷ್ಟವಾಗಬಹುದು ಅಥವಾ ದುಬಾರಿಯಾಗಬಹುದು. ಟ್ರಂಪ್ ನೀತಿಯನ್ನು ಅನುಸರಿಸಿ ಟೆಕ್ ಕಂಪನಿಗಳು ತಮ್ಮ ಕಾರ್ಯಚರಣೆ ಮತ್ತು ನೇಮಕಾತಿ ನೀತಿಯನ್ನು ಹೇಗೆ ರೂಪಿಸಿಕೊಳ್ಳಲಿದೆ ಎಂಬುವುದರ ಮೇಲೆ ಇದು ಅವಲಂಬಿತವಾಗಿದೆ.

ಏಕೆಂದರೆ, ಟೆಕ್ ಕಂಪನಿಗಳಿಗೆ ಟ್ರಂಪ್ ನೀತಿಯನ್ನೂ ಅನುಸರಿಸಬೇಕಿದೆ ಜೊತೆಗೆ ತಮ್ಮ ಸಾಗರೋತ್ತರ ವ್ಯವಹಾರಗಳನ್ನು ಉಳಿಸಿಕೊಳ್ಳಬೇಕಿದೆ. ಟೆಕ್ ದೈತ್ಯಗಳು ಜಾಗತಿಕವಾಗಿ ಬಹುತೇಕ ಪ್ರದೇಶಗಳಲ್ಲಿ ತಮ್ಮ ಶಾಖೆಯನ್ನು ಹೊಂದಿವೆ. ಕಂಪನಿಗಳ ಕಾರ್ಯಾಚರಣೆಗಳ್ಳೂ ಈ ಶಾಖೆಗಳು ಸಂಕೋಲೆಯಾಗಿ ಕಾರ್ಯ ನಿರ್ವಹಿಸುತ್ತವೆ. ಆದ್ದರಿಂದ ಹಠಾತ್ ಬದಲಾವಣೆ ಟೆಕ್ ಕ್ಷೇತ್ರದಲ್ಲಿ ಬಿರುಗಾಳಿಗೆ ಕಾರಣವಾಗಬಹುದು.

ಟ್ರಂಪ್ ಈಗಾಗಲೇ ಸಹಿ ಹಾಕಿರುವ ಕಾರ್ಯಕಾರಿ ಆದೇಶಗಳು ತಂತ್ರಜ್ಞಾನ ವಲಯ ದೇಶೀಯ ಆದ್ಯತೆಗಳ ಮೇಲೆ ಕೇಂದ್ರೀಕರಿಸುವ ಸ್ಪಷ್ಟ ಉದ್ದೇಶವನ್ನು ಸೂಚಿಸುತ್ತವೆ. ವಿಶಾಲ ಆರ್ಥಿಕ ರಾಷ್ಟ್ರೀಯತೆಯ ಕಾರ್ಯಸೂಚಿಯ ಭಾಗವಾಗಿ ಟ್ರಂಪ್ ಅವರು ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಗೆ ಎಐ ಅಭಿವೃದ್ಧಿಯನ್ನು ನಿರ್ಣಾಯಕ ಕ್ಷೇತ್ರವೆಂದು ಪರಿಗಣಿಸುತ್ತಿದ್ದಾರೆ. ಕಂಪನಿಗಳು ಜಾಗತಿಕ ಕಾರ್ಯಪಡೆಯ ತಂತ್ರಗಳನ್ನು ಅನುಸರಿಸುವ ಬದಲು ರಾಷ್ಟ್ರೀಯ ಉದ್ದೇಶಗಳಿಗೆ ಕೊಡುಗೆ ನೀಡಬೇಕೆಂದು ಅವರು ನಿರೀಕ್ಷಿಸುತ್ತಿದ್ದಾರೆ.

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...