Homeಅಂತರಾಷ್ಟ್ರೀಯಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ...

ಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಟೆಕ್ ಕಂಪನಿಗಳು ನೇಮಕಾತಿಗಳಲ್ಲಿ ಅಮೆರಿಕದ ಜನರಿಗೆ ಆದ್ಯತೆ ಕೊಡಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ಟನ್‌ನಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಮಾತನಾಡಿದ ಅವರು, ತಮ್ಮ ನೇಮಕಾತಿ ವಿಧಾನವನ್ನು ಬದಲಿಸಿಕೊಳ್ಳುವಂತೆ ಪ್ರಮುಖ ಟೆಕ್ ಕಂಪನಿಗಳಿಗೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಅವರು ನಿರ್ದಿಷ್ಟವಾಗಿ ಭಾರತ ಮತ್ತು ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಹೆಚ್ಚಾಗಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಕಂಪನಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ವರದಿಗಳು ಅಂದಾಜಿಸಿವೆ.

ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ವ್ಯವಸ್ಥೆಯನ್ನು ‘ಜಾಗತಿಕವಾದಿ ಮನಸ್ಥಿತಿ’ ಎಂದು ಸಂಭೋಧಿಸಿದ ಟ್ರಂಪ್, ಅಮೆರಿಕನ್ನರನ್ನು ಕಡೆಗಣಿಸಿ ಹೊರಗುತ್ತಿಗೆ ಮೂಲಕ ವಿದೇಶಿ ಉದ್ಯೋಗಿಗಳನ್ನು ವ್ಯಾಪಕವಾಗಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ಬೇರೆಡೆ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ದ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದ ಅವಕಾಶಗಳನ್ನು ಬಳಸಿಕೊಂಡ ಅನೇಕ ದೊಡ್ಡ ಟೆಕ್ ಕಂಪನಿಗಳು ಚೀನಾದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುತ್ತಿವೆ, ಭಾರತದಲ್ಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿವೆ, ಐರ್ಲೆಂಡ್‌ನಲ್ಲಿ ಲಾಭ ಮಾಡುತ್ತಿವೆ” ಎಂದು ಹೇಳಿದ್ದಾರೆ.

ಇದೊಂದು ಅನ್ಯಾಯದ ವ್ಯವಸ್ಥೆ. ಅಮೆರಿಕದ ಕಂಪನಿಗಳು ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳುತ್ತದೆ. ಆದರೆ, ಉದ್ಯೋಗಿಗಳನ್ನು ಬೇರೆ ದೇಶಗಳಿಂದ ನೇಮಿಸಿಕೊಳ್ಳುತ್ತದೆ. ಅಮೆರಿಕದ ಜನರಿಗೆ ಅವಕಾಶ ನಿರಾಕರಿಸುತ್ತಿವೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

ತಂತ್ರಜ್ಞಾನ ಉದ್ಯಮಕ್ಕೆ ನೇರ ಸಂದೇಶ ನೀಡಿದ ಟ್ರಂಪ್, “ನಮಗೆ ಅಮೆರಿಕದ ತಂತ್ರಜ್ಞಾನ ಕಂಪನಿಗಳು ಅಮೆರಿಕಕ್ಕೆ ಬೆಂಬಲ ನೀಡಬೇಕು. ಅಮೆರಿಕಕ್ಕೆ ಮೊದಲ ಆದ್ಯತೆ ಕೊಡಬೇಕು” ಎಂದಿದ್ದಾರೆ.

ಅಮೆರಿಕದ ಸಂಪನ್ಮೂಲಗಳು ಮತ್ತು ಸ್ವಾತಂತ್ರ್ಯಗಳನ್ನು ಬಳಸಿಕೊಂಡು ಕಂಪನಿಗಳು ಶ್ರೀಮಂತವಾಗಿ ಬೆಳೆದಿದ್ದರೂ, ಅವುಗಳ ವ್ಯವಹಾರ ನಿರ್ಧಾರಗಳು ಸ್ಥಳೀಯ ಉದ್ಯೋಗ ಮಾರುಕಟ್ಟೆಗಳಿಗೆ ಏಕಕಾಲದಲ್ಲಿ ಹಾನಿ ಮಾಡಿವೆ ಎಂದು ಟ್ರಂಪ್ ಹೇಳಿದ್ದು, ನೀತಿ ಬದಲಾವಣೆ ಮತ್ತು ಪ್ರಮುಖ ಕ್ಷೇತ್ರಗಳ ಮೇಲೆ ನೇರ ಒತ್ತಡ ಹೇರುವ ಮೂಲಕ ಈ ಪ್ರವೃತ್ತಿಯನ್ನು ಹಿಮ್ಮೆಟ್ಟಿಸಲು ಟ್ರಂಪ್ ಆಡಳಿತ ನಿರ್ಧರಿಸಿದಂತೆ ತೋರುತ್ತದೆ.

ಟ್ರಂಪ್ ಆಡಳಿತ ಟೆಕ್ ಕಂಪನಿಗಳಿಗೆ ಲಗಾಮು ಹಾಕಲು ನೀತಿ ಬದಲಾವಣೆ ಮಾಡಿದರೆ, ಹೊರಗುತ್ತಿಗೆ ಮತ್ತು ಅಂತಾರಾಷ್ಟ್ರೀಯ ನೇಮಕಾತಿ ವ್ಯವಸ್ಥೆ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು. ದೀರ್ಘಕಾಲದಿಂದ ಅಮೆರಿಕನ್ ತಂತ್ರಜ್ಞಾನ ಕಂಪನಿಗಳೊಂದಿಗೆ ಒಪ್ಪಂದ ಹೊಂದಿರುವ ಭಾರತೀಯ ಐಟಿ ವೃತ್ತಿಪರರು ಮತ್ತು ಹೊರಗುತ್ತಿಗೆ ಸಂಸ್ಥೆಗಳು ಅಡೆತಡೆಗಳನ್ನು ಎದುರಿಸಬಹುದು.

ಟ್ರಂಪ್ ಆಡಳಿತ ಕಠಿಣ ನೀತಿಗಳನ್ನು ಜಾರಿಗೆ ತಂದರೆ ಅಮೆರಿಕದ ಕಂಪನಿಗಳು ಭಾರತದಂತಹ ದೇಶಗಳಿಂದ ಕಾರ್ಮಿಕರನ್ನು ನೇಮಿಸಿಕೊಳ್ಳುವ ತಮ್ಮ ಪ್ರಸ್ತುತ ಪದ್ಧತಿಯನ್ನು ಮುಂದುವರಿಸುವುದು ಕಷ್ಟವಾಗಬಹುದು ಅಥವಾ ದುಬಾರಿಯಾಗಬಹುದು. ಟ್ರಂಪ್ ನೀತಿಯನ್ನು ಅನುಸರಿಸಿ ಟೆಕ್ ಕಂಪನಿಗಳು ತಮ್ಮ ಕಾರ್ಯಚರಣೆ ಮತ್ತು ನೇಮಕಾತಿ ನೀತಿಯನ್ನು ಹೇಗೆ ರೂಪಿಸಿಕೊಳ್ಳಲಿದೆ ಎಂಬುವುದರ ಮೇಲೆ ಇದು ಅವಲಂಬಿತವಾಗಿದೆ.

ಏಕೆಂದರೆ, ಟೆಕ್ ಕಂಪನಿಗಳಿಗೆ ಟ್ರಂಪ್ ನೀತಿಯನ್ನೂ ಅನುಸರಿಸಬೇಕಿದೆ ಜೊತೆಗೆ ತಮ್ಮ ಸಾಗರೋತ್ತರ ವ್ಯವಹಾರಗಳನ್ನು ಉಳಿಸಿಕೊಳ್ಳಬೇಕಿದೆ. ಟೆಕ್ ದೈತ್ಯಗಳು ಜಾಗತಿಕವಾಗಿ ಬಹುತೇಕ ಪ್ರದೇಶಗಳಲ್ಲಿ ತಮ್ಮ ಶಾಖೆಯನ್ನು ಹೊಂದಿವೆ. ಕಂಪನಿಗಳ ಕಾರ್ಯಾಚರಣೆಗಳ್ಳೂ ಈ ಶಾಖೆಗಳು ಸಂಕೋಲೆಯಾಗಿ ಕಾರ್ಯ ನಿರ್ವಹಿಸುತ್ತವೆ. ಆದ್ದರಿಂದ ಹಠಾತ್ ಬದಲಾವಣೆ ಟೆಕ್ ಕ್ಷೇತ್ರದಲ್ಲಿ ಬಿರುಗಾಳಿಗೆ ಕಾರಣವಾಗಬಹುದು.

ಟ್ರಂಪ್ ಈಗಾಗಲೇ ಸಹಿ ಹಾಕಿರುವ ಕಾರ್ಯಕಾರಿ ಆದೇಶಗಳು ತಂತ್ರಜ್ಞಾನ ವಲಯ ದೇಶೀಯ ಆದ್ಯತೆಗಳ ಮೇಲೆ ಕೇಂದ್ರೀಕರಿಸುವ ಸ್ಪಷ್ಟ ಉದ್ದೇಶವನ್ನು ಸೂಚಿಸುತ್ತವೆ. ವಿಶಾಲ ಆರ್ಥಿಕ ರಾಷ್ಟ್ರೀಯತೆಯ ಕಾರ್ಯಸೂಚಿಯ ಭಾಗವಾಗಿ ಟ್ರಂಪ್ ಅವರು ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಗೆ ಎಐ ಅಭಿವೃದ್ಧಿಯನ್ನು ನಿರ್ಣಾಯಕ ಕ್ಷೇತ್ರವೆಂದು ಪರಿಗಣಿಸುತ್ತಿದ್ದಾರೆ. ಕಂಪನಿಗಳು ಜಾಗತಿಕ ಕಾರ್ಯಪಡೆಯ ತಂತ್ರಗಳನ್ನು ಅನುಸರಿಸುವ ಬದಲು ರಾಷ್ಟ್ರೀಯ ಉದ್ದೇಶಗಳಿಗೆ ಕೊಡುಗೆ ನೀಡಬೇಕೆಂದು ಅವರು ನಿರೀಕ್ಷಿಸುತ್ತಿದ್ದಾರೆ.

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...