Homeಅಂತರಾಷ್ಟ್ರೀಯಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ...

ಅಮೆರಿಕದ ಟೆಕ್ ಕಂಪನಿಗಳು ಸ್ವದೇಶಕ್ಕೆ ಆದ್ಯತೆ ನೀಡುವಂತೆ ಟ್ರಂಪ್ ಒತ್ತಾಯ: ಭಾರತದ ಐಟಿ ಕ್ಷೇತ್ರದ ಮೇಲೆ ಪರಿಣಾಮ ಬೀರುವ ಸಾಧ್ಯತೆ

- Advertisement -
- Advertisement -

ಟೆಕ್ ಕಂಪನಿಗಳು ನೇಮಕಾತಿಗಳಲ್ಲಿ ಅಮೆರಿಕದ ಜನರಿಗೆ ಆದ್ಯತೆ ಕೊಡಬೇಕು ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ವಾಷಿಂಗ್ಟನ್‌ನಲ್ಲಿ ನಡೆದ ಎಐ ಶೃಂಗಸಭೆಯಲ್ಲಿ ಮಾತನಾಡಿದ ಅವರು, ತಮ್ಮ ನೇಮಕಾತಿ ವಿಧಾನವನ್ನು ಬದಲಿಸಿಕೊಳ್ಳುವಂತೆ ಪ್ರಮುಖ ಟೆಕ್ ಕಂಪನಿಗಳಿಗೆ ಒತ್ತಾಯಿಸಿದ್ದಾರೆ ಎಂದು ವರದಿಯಾಗಿದೆ.

ಟ್ರಂಪ್ ಅವರು ನಿರ್ದಿಷ್ಟವಾಗಿ ಭಾರತ ಮತ್ತು ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಹೆಚ್ಚಾಗಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುತ್ತಿರುವ ಗೂಗಲ್ ಮತ್ತು ಮೈಕ್ರೋಸಾಫ್ಟ್‌ನಂತಹ ಕಂಪನಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದಾರೆ ಎಂದು ವರದಿಗಳು ಅಂದಾಜಿಸಿವೆ.

ತಂತ್ರಜ್ಞಾನ ಕ್ಷೇತ್ರದ ನೇಮಕಾತಿ ವ್ಯವಸ್ಥೆಯನ್ನು ‘ಜಾಗತಿಕವಾದಿ ಮನಸ್ಥಿತಿ’ ಎಂದು ಸಂಭೋಧಿಸಿದ ಟ್ರಂಪ್, ಅಮೆರಿಕನ್ನರನ್ನು ಕಡೆಗಣಿಸಿ ಹೊರಗುತ್ತಿಗೆ ಮೂಲಕ ವಿದೇಶಿ ಉದ್ಯೋಗಿಗಳನ್ನು ವ್ಯಾಪಕವಾಗಿ ನೇಮಿಸಿಕೊಳ್ಳಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ಬೇರೆಡೆ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ದ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಅಮೆರಿಕದ ಅವಕಾಶಗಳನ್ನು ಬಳಸಿಕೊಂಡ ಅನೇಕ ದೊಡ್ಡ ಟೆಕ್ ಕಂಪನಿಗಳು ಚೀನಾದಲ್ಲಿ ತಮ್ಮ ಘಟಕಗಳನ್ನು ಸ್ಥಾಪಿಸುತ್ತಿವೆ, ಭಾರತದಲ್ಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುತ್ತಿವೆ, ಐರ್ಲೆಂಡ್‌ನಲ್ಲಿ ಲಾಭ ಮಾಡುತ್ತಿವೆ” ಎಂದು ಹೇಳಿದ್ದಾರೆ.

ಇದೊಂದು ಅನ್ಯಾಯದ ವ್ಯವಸ್ಥೆ. ಅಮೆರಿಕದ ಕಂಪನಿಗಳು ಅಮೆರಿಕದ ಅವಕಾಶ ಮತ್ತು ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ವ್ಯವಹಾರವನ್ನು ವಿಸ್ತರಿಸಿಕೊಳ್ಳುತ್ತದೆ. ಆದರೆ, ಉದ್ಯೋಗಿಗಳನ್ನು ಬೇರೆ ದೇಶಗಳಿಂದ ನೇಮಿಸಿಕೊಳ್ಳುತ್ತದೆ. ಅಮೆರಿಕದ ಜನರಿಗೆ ಅವಕಾಶ ನಿರಾಕರಿಸುತ್ತಿವೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

ತಂತ್ರಜ್ಞಾನ ಉದ್ಯಮಕ್ಕೆ ನೇರ ಸಂದೇಶ ನೀಡಿದ ಟ್ರಂಪ್, “ನಮಗೆ ಅಮೆರಿಕದ ತಂತ್ರಜ್ಞಾನ ಕಂಪನಿಗಳು ಅಮೆರಿಕಕ್ಕೆ ಬೆಂಬಲ ನೀಡಬೇಕು. ಅಮೆರಿಕಕ್ಕೆ ಮೊದಲ ಆದ್ಯತೆ ಕೊಡಬೇಕು” ಎಂದಿದ್ದಾರೆ.

ಅಮೆರಿಕದ ಸಂಪನ್ಮೂಲಗಳು ಮತ್ತು ಸ್ವಾತಂತ್ರ್ಯಗಳನ್ನು ಬಳಸಿಕೊಂಡು ಕಂಪನಿಗಳು ಶ್ರೀಮಂತವಾಗಿ ಬೆಳೆದಿದ್ದರೂ, ಅವುಗಳ ವ್ಯವಹಾರ ನಿರ್ಧಾರಗಳು ಸ್ಥಳೀಯ ಉದ್ಯೋಗ ಮಾರುಕಟ್ಟೆಗಳಿಗೆ ಏಕಕಾಲದಲ್ಲಿ ಹಾನಿ ಮಾಡಿವೆ ಎಂದು ಟ್ರಂಪ್ ಹೇಳಿದ್ದು, ನೀತಿ ಬದಲಾವಣೆ ಮತ್ತು ಪ್ರಮುಖ ಕ್ಷೇತ್ರಗಳ ಮೇಲೆ ನೇರ ಒತ್ತಡ ಹೇರುವ ಮೂಲಕ ಈ ಪ್ರವೃತ್ತಿಯನ್ನು ಹಿಮ್ಮೆಟ್ಟಿಸಲು ಟ್ರಂಪ್ ಆಡಳಿತ ನಿರ್ಧರಿಸಿದಂತೆ ತೋರುತ್ತದೆ.

ಟ್ರಂಪ್ ಆಡಳಿತ ಟೆಕ್ ಕಂಪನಿಗಳಿಗೆ ಲಗಾಮು ಹಾಕಲು ನೀತಿ ಬದಲಾವಣೆ ಮಾಡಿದರೆ, ಹೊರಗುತ್ತಿಗೆ ಮತ್ತು ಅಂತಾರಾಷ್ಟ್ರೀಯ ನೇಮಕಾತಿ ವ್ಯವಸ್ಥೆ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು. ದೀರ್ಘಕಾಲದಿಂದ ಅಮೆರಿಕನ್ ತಂತ್ರಜ್ಞಾನ ಕಂಪನಿಗಳೊಂದಿಗೆ ಒಪ್ಪಂದ ಹೊಂದಿರುವ ಭಾರತೀಯ ಐಟಿ ವೃತ್ತಿಪರರು ಮತ್ತು ಹೊರಗುತ್ತಿಗೆ ಸಂಸ್ಥೆಗಳು ಅಡೆತಡೆಗಳನ್ನು ಎದುರಿಸಬಹುದು.

ಟ್ರಂಪ್ ಆಡಳಿತ ಕಠಿಣ ನೀತಿಗಳನ್ನು ಜಾರಿಗೆ ತಂದರೆ ಅಮೆರಿಕದ ಕಂಪನಿಗಳು ಭಾರತದಂತಹ ದೇಶಗಳಿಂದ ಕಾರ್ಮಿಕರನ್ನು ನೇಮಿಸಿಕೊಳ್ಳುವ ತಮ್ಮ ಪ್ರಸ್ತುತ ಪದ್ಧತಿಯನ್ನು ಮುಂದುವರಿಸುವುದು ಕಷ್ಟವಾಗಬಹುದು ಅಥವಾ ದುಬಾರಿಯಾಗಬಹುದು. ಟ್ರಂಪ್ ನೀತಿಯನ್ನು ಅನುಸರಿಸಿ ಟೆಕ್ ಕಂಪನಿಗಳು ತಮ್ಮ ಕಾರ್ಯಚರಣೆ ಮತ್ತು ನೇಮಕಾತಿ ನೀತಿಯನ್ನು ಹೇಗೆ ರೂಪಿಸಿಕೊಳ್ಳಲಿದೆ ಎಂಬುವುದರ ಮೇಲೆ ಇದು ಅವಲಂಬಿತವಾಗಿದೆ.

ಏಕೆಂದರೆ, ಟೆಕ್ ಕಂಪನಿಗಳಿಗೆ ಟ್ರಂಪ್ ನೀತಿಯನ್ನೂ ಅನುಸರಿಸಬೇಕಿದೆ ಜೊತೆಗೆ ತಮ್ಮ ಸಾಗರೋತ್ತರ ವ್ಯವಹಾರಗಳನ್ನು ಉಳಿಸಿಕೊಳ್ಳಬೇಕಿದೆ. ಟೆಕ್ ದೈತ್ಯಗಳು ಜಾಗತಿಕವಾಗಿ ಬಹುತೇಕ ಪ್ರದೇಶಗಳಲ್ಲಿ ತಮ್ಮ ಶಾಖೆಯನ್ನು ಹೊಂದಿವೆ. ಕಂಪನಿಗಳ ಕಾರ್ಯಾಚರಣೆಗಳ್ಳೂ ಈ ಶಾಖೆಗಳು ಸಂಕೋಲೆಯಾಗಿ ಕಾರ್ಯ ನಿರ್ವಹಿಸುತ್ತವೆ. ಆದ್ದರಿಂದ ಹಠಾತ್ ಬದಲಾವಣೆ ಟೆಕ್ ಕ್ಷೇತ್ರದಲ್ಲಿ ಬಿರುಗಾಳಿಗೆ ಕಾರಣವಾಗಬಹುದು.

ಟ್ರಂಪ್ ಈಗಾಗಲೇ ಸಹಿ ಹಾಕಿರುವ ಕಾರ್ಯಕಾರಿ ಆದೇಶಗಳು ತಂತ್ರಜ್ಞಾನ ವಲಯ ದೇಶೀಯ ಆದ್ಯತೆಗಳ ಮೇಲೆ ಕೇಂದ್ರೀಕರಿಸುವ ಸ್ಪಷ್ಟ ಉದ್ದೇಶವನ್ನು ಸೂಚಿಸುತ್ತವೆ. ವಿಶಾಲ ಆರ್ಥಿಕ ರಾಷ್ಟ್ರೀಯತೆಯ ಕಾರ್ಯಸೂಚಿಯ ಭಾಗವಾಗಿ ಟ್ರಂಪ್ ಅವರು ಉದ್ಯೋಗ ಸೃಷ್ಟಿ ಮತ್ತು ನಾವೀನ್ಯತೆಗೆ ಎಐ ಅಭಿವೃದ್ಧಿಯನ್ನು ನಿರ್ಣಾಯಕ ಕ್ಷೇತ್ರವೆಂದು ಪರಿಗಣಿಸುತ್ತಿದ್ದಾರೆ. ಕಂಪನಿಗಳು ಜಾಗತಿಕ ಕಾರ್ಯಪಡೆಯ ತಂತ್ರಗಳನ್ನು ಅನುಸರಿಸುವ ಬದಲು ರಾಷ್ಟ್ರೀಯ ಉದ್ದೇಶಗಳಿಗೆ ಕೊಡುಗೆ ನೀಡಬೇಕೆಂದು ಅವರು ನಿರೀಕ್ಷಿಸುತ್ತಿದ್ದಾರೆ.

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....