Homeಮುಖಪುಟಅಮೆರಿಕ ತೆಕ್ಕೆಗೆ ಗಾಝಾ : ಪ್ಯಾಲೆಸ್ತೀನಿಯರಲ್ಲಿ ಆತಂಕ ಸೃಷ್ಟಿಸಿದ ಟ್ರಂಪ್ ಹೇಳಿಕೆ

ಅಮೆರಿಕ ತೆಕ್ಕೆಗೆ ಗಾಝಾ : ಪ್ಯಾಲೆಸ್ತೀನಿಯರಲ್ಲಿ ಆತಂಕ ಸೃಷ್ಟಿಸಿದ ಟ್ರಂಪ್ ಹೇಳಿಕೆ

ಪ್ಯಾಲೆಸ್ತೀನಿಯರನ್ನು ಗಾಝಾದಿಂದ ಹೊರದಬ್ಬುವ ಮುನ್ಸೂಚನೆ ನೀಡಿದ ಟ್ರಂಪ್!

- Advertisement -
- Advertisement -

ಪ್ಯಾಲೆಸ್ತೀನಿಯರು ನೆರೆಯ ದೇಶಗಳಿಗೆ ಸ್ಥಳಾಂತರಗೊಂಡ ನಂತರ, ಯುದ್ಧದಿಂದ ಜರ್ಜರಿತವಾಗಿರುವ ಗಾಝಾ ಪಟ್ಟಿಯನ್ನು ಅಮೆರಿಕ ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ‘ವಿಶ್ವದ ಜನರು’ ಅಲ್ಲಿ ವಾಸಿಸುವಂತೆ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ದ್ವಿಪಕ್ಷೀಯ ಸಭೆಗಾಗಿ ಮಂಗಳವಾರ (ಫೆ.4) ಶ್ವೇತಭವನಕ್ಕೆ ಭೇಟಿ ನೀಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಟ್ರಂಪ್, ತಮ್ಮ ಆಘಾತಕಾರಿ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ.

ಪ್ಯಾಲೆಸ್ತೀನಿಯರು ‘ಗಾಝಾ ತೊರೆಯಲು ಮುಂದಾಗಿದ್ದಾರೆ’ ಎಂದು ಹೇಳುವ ಮೂಲಕ ಟ್ರಂಪ್ ಹೊಸ ಆತಂಕವನ್ನು ಹುಟ್ಟು ಹಾಕಿದ್ದಾರೆ. ಟ್ರಂಪ್ ಹೇಳಿಕೆ ಗಾಝಾ ಜನರಲ್ಲಿ ಜನಾಂಗೀಯ ನಿರ್ಮೂಲನೆಯ ಭಯವನ್ನು ಹುಟ್ಟು ಹಾಕಿದೆ.

ಟ್ರಂಪ್‌ಗೆ ಪ್ರತಿಕ್ರಿಯೆಯಾಗಿ ಹಮಾಸ್ ಹೇಳಿಕೆ ಬಿಡುಗಡೆ ಮಾಡಿದೆ. “ಟ್ರಂಪ್ ಯೋಜನೆಗಳು ಗಾಝಾದಲ್ಲಿ ಅವ್ಯವಸ್ಥೆ ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸುವ ಒಂದು ಪಿತೂರಿಯಾಗಿದೆ. ಗಾಝಾ ಪಟ್ಟಿಯಲ್ಲಿರುವ ನಮ್ಮ ಜನರು ಈ ಯೋಜನೆಗಳನ್ನು ಜಾರಿಗೆ ತರಲು ಬಿಡುವುದಿಲ್ಲ” ಎಂದು ಹೇಳಿದೆ.

ನೆತನ್ಯಾಹು ಅಮೆರಿಕದ ಭೇಟಿಯನ್ನು ಖಂಡಿಸಿ ವಾಷಿಂಗ್ಟನ್ ಡಿಸಿಯಲ್ಲಿ ಜಮಾಯಿಸಿದ ಜನರು ಪ್ರತಿಭಟನೆ ನಡೆಸಿದ್ದಾರೆ. ಟ್ರಂಪ್ ಒಬ್ಬ ‘ಯುದ್ಧ ಅಪರಾಧಿ’ಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆತನ್ಯಾಹು ಅಮೆರಿಕ ಭೇಟಿಗೂ ಮುನ್ನವೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಟ್ರಂಪ್ “ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿ ನನಗಿಲ್ಲ” ಎಂದಿದ್ದರು. ಇದಕ್ಕೂ ಮುನ್ನ ಕೆಲ ದಿನಗಳ ಹಿಂದೆ ” ಗಾಝಾ ಜನತೆಯನ್ನು ಸುತ್ತಮುತ್ತಲಿನ ಈಜಿಪ್ಟ್, ಜೋರ್ಡಾನ್, ತುರ್ಕಿ ದೇಶಗಳು ಕರೆಸಿಕೊಳ್ಳಿ” ಎಂದಿದ್ದರು.

ಕುವೈತ್‌ನ ಶತ ಪ್ರಯತ್ನದ ಫಲವಾಗಿ 15 ತಿಂಗಳ ಬಳಿಕ ಜನವರಿ 16, 2025ರಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ತಾತ್ಕಾಲಿಕ ಕೊನೆಗೊಂಡಿದೆ. ಜನರು ತಮ್ಮ ಮೂಲ ಸ್ಥಳಗಳಿಗೆ ಮರಳಿ ಛಿದ್ರವಾದ ಬದುಕನ್ನು ಮರು ರೂಪಿಸುವ ಪ್ರಯತ್ನದಲ್ಲಿದ್ದಾರೆ.

ಈ ನಡುವೆ ಗಾಝಾದಲ್ಲಿ ನಿರಂತರ ನರಮೇಧ ನಡೆಸಿದ ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕಕ್ಕೆ ತೆರಳಿ ಟ್ರಂಪ್ ಅವರನ್ನು ಭೇಟಿಯಾಗಿದ್ದಾರೆ. ಟ್ರಂಪ್ ಕೂಡ ಪದೇ ಪದೇ ವಿಚಿತ್ರ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಇವೆಲ್ಲವೂ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಗಾಝಾ ಜನತೆಯನ್ನು ಅವರ ನಾಡಿನಿಂದ ಹೊರದಬ್ಬಿ ಗಾಝಾವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ.

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...