Homeಮುಖಪುಟಅಮೆರಿಕ ತೆಕ್ಕೆಗೆ ಗಾಝಾ : ಪ್ಯಾಲೆಸ್ತೀನಿಯರಲ್ಲಿ ಆತಂಕ ಸೃಷ್ಟಿಸಿದ ಟ್ರಂಪ್ ಹೇಳಿಕೆ

ಅಮೆರಿಕ ತೆಕ್ಕೆಗೆ ಗಾಝಾ : ಪ್ಯಾಲೆಸ್ತೀನಿಯರಲ್ಲಿ ಆತಂಕ ಸೃಷ್ಟಿಸಿದ ಟ್ರಂಪ್ ಹೇಳಿಕೆ

ಪ್ಯಾಲೆಸ್ತೀನಿಯರನ್ನು ಗಾಝಾದಿಂದ ಹೊರದಬ್ಬುವ ಮುನ್ಸೂಚನೆ ನೀಡಿದ ಟ್ರಂಪ್!

- Advertisement -
- Advertisement -

ಪ್ಯಾಲೆಸ್ತೀನಿಯರು ನೆರೆಯ ದೇಶಗಳಿಗೆ ಸ್ಥಳಾಂತರಗೊಂಡ ನಂತರ, ಯುದ್ಧದಿಂದ ಜರ್ಜರಿತವಾಗಿರುವ ಗಾಝಾ ಪಟ್ಟಿಯನ್ನು ಅಮೆರಿಕ ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ‘ವಿಶ್ವದ ಜನರು’ ಅಲ್ಲಿ ವಾಸಿಸುವಂತೆ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ದ್ವಿಪಕ್ಷೀಯ ಸಭೆಗಾಗಿ ಮಂಗಳವಾರ (ಫೆ.4) ಶ್ವೇತಭವನಕ್ಕೆ ಭೇಟಿ ನೀಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಟ್ರಂಪ್, ತಮ್ಮ ಆಘಾತಕಾರಿ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ.

ಪ್ಯಾಲೆಸ್ತೀನಿಯರು ‘ಗಾಝಾ ತೊರೆಯಲು ಮುಂದಾಗಿದ್ದಾರೆ’ ಎಂದು ಹೇಳುವ ಮೂಲಕ ಟ್ರಂಪ್ ಹೊಸ ಆತಂಕವನ್ನು ಹುಟ್ಟು ಹಾಕಿದ್ದಾರೆ. ಟ್ರಂಪ್ ಹೇಳಿಕೆ ಗಾಝಾ ಜನರಲ್ಲಿ ಜನಾಂಗೀಯ ನಿರ್ಮೂಲನೆಯ ಭಯವನ್ನು ಹುಟ್ಟು ಹಾಕಿದೆ.

ಟ್ರಂಪ್‌ಗೆ ಪ್ರತಿಕ್ರಿಯೆಯಾಗಿ ಹಮಾಸ್ ಹೇಳಿಕೆ ಬಿಡುಗಡೆ ಮಾಡಿದೆ. “ಟ್ರಂಪ್ ಯೋಜನೆಗಳು ಗಾಝಾದಲ್ಲಿ ಅವ್ಯವಸ್ಥೆ ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸುವ ಒಂದು ಪಿತೂರಿಯಾಗಿದೆ. ಗಾಝಾ ಪಟ್ಟಿಯಲ್ಲಿರುವ ನಮ್ಮ ಜನರು ಈ ಯೋಜನೆಗಳನ್ನು ಜಾರಿಗೆ ತರಲು ಬಿಡುವುದಿಲ್ಲ” ಎಂದು ಹೇಳಿದೆ.

ನೆತನ್ಯಾಹು ಅಮೆರಿಕದ ಭೇಟಿಯನ್ನು ಖಂಡಿಸಿ ವಾಷಿಂಗ್ಟನ್ ಡಿಸಿಯಲ್ಲಿ ಜಮಾಯಿಸಿದ ಜನರು ಪ್ರತಿಭಟನೆ ನಡೆಸಿದ್ದಾರೆ. ಟ್ರಂಪ್ ಒಬ್ಬ ‘ಯುದ್ಧ ಅಪರಾಧಿ’ಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆತನ್ಯಾಹು ಅಮೆರಿಕ ಭೇಟಿಗೂ ಮುನ್ನವೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಟ್ರಂಪ್ “ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿ ನನಗಿಲ್ಲ” ಎಂದಿದ್ದರು. ಇದಕ್ಕೂ ಮುನ್ನ ಕೆಲ ದಿನಗಳ ಹಿಂದೆ ” ಗಾಝಾ ಜನತೆಯನ್ನು ಸುತ್ತಮುತ್ತಲಿನ ಈಜಿಪ್ಟ್, ಜೋರ್ಡಾನ್, ತುರ್ಕಿ ದೇಶಗಳು ಕರೆಸಿಕೊಳ್ಳಿ” ಎಂದಿದ್ದರು.

ಕುವೈತ್‌ನ ಶತ ಪ್ರಯತ್ನದ ಫಲವಾಗಿ 15 ತಿಂಗಳ ಬಳಿಕ ಜನವರಿ 16, 2025ರಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ತಾತ್ಕಾಲಿಕ ಕೊನೆಗೊಂಡಿದೆ. ಜನರು ತಮ್ಮ ಮೂಲ ಸ್ಥಳಗಳಿಗೆ ಮರಳಿ ಛಿದ್ರವಾದ ಬದುಕನ್ನು ಮರು ರೂಪಿಸುವ ಪ್ರಯತ್ನದಲ್ಲಿದ್ದಾರೆ.

ಈ ನಡುವೆ ಗಾಝಾದಲ್ಲಿ ನಿರಂತರ ನರಮೇಧ ನಡೆಸಿದ ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕಕ್ಕೆ ತೆರಳಿ ಟ್ರಂಪ್ ಅವರನ್ನು ಭೇಟಿಯಾಗಿದ್ದಾರೆ. ಟ್ರಂಪ್ ಕೂಡ ಪದೇ ಪದೇ ವಿಚಿತ್ರ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಇವೆಲ್ಲವೂ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಗಾಝಾ ಜನತೆಯನ್ನು ಅವರ ನಾಡಿನಿಂದ ಹೊರದಬ್ಬಿ ಗಾಝಾವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ.

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...