Homeಮುಖಪುಟಅಮೆರಿಕ ತೆಕ್ಕೆಗೆ ಗಾಝಾ : ಪ್ಯಾಲೆಸ್ತೀನಿಯರಲ್ಲಿ ಆತಂಕ ಸೃಷ್ಟಿಸಿದ ಟ್ರಂಪ್ ಹೇಳಿಕೆ

ಅಮೆರಿಕ ತೆಕ್ಕೆಗೆ ಗಾಝಾ : ಪ್ಯಾಲೆಸ್ತೀನಿಯರಲ್ಲಿ ಆತಂಕ ಸೃಷ್ಟಿಸಿದ ಟ್ರಂಪ್ ಹೇಳಿಕೆ

ಪ್ಯಾಲೆಸ್ತೀನಿಯರನ್ನು ಗಾಝಾದಿಂದ ಹೊರದಬ್ಬುವ ಮುನ್ಸೂಚನೆ ನೀಡಿದ ಟ್ರಂಪ್!

- Advertisement -
- Advertisement -

ಪ್ಯಾಲೆಸ್ತೀನಿಯರು ನೆರೆಯ ದೇಶಗಳಿಗೆ ಸ್ಥಳಾಂತರಗೊಂಡ ನಂತರ, ಯುದ್ಧದಿಂದ ಜರ್ಜರಿತವಾಗಿರುವ ಗಾಝಾ ಪಟ್ಟಿಯನ್ನು ಅಮೆರಿಕ ಸ್ವಾಧೀನಪಡಿಸಿಕೊಳ್ಳಬೇಕು ಮತ್ತು ‘ವಿಶ್ವದ ಜನರು’ ಅಲ್ಲಿ ವಾಸಿಸುವಂತೆ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ದ್ವಿಪಕ್ಷೀಯ ಸಭೆಗಾಗಿ ಮಂಗಳವಾರ (ಫೆ.4) ಶ್ವೇತಭವನಕ್ಕೆ ಭೇಟಿ ನೀಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಟ್ರಂಪ್, ತಮ್ಮ ಆಘಾತಕಾರಿ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ.

ಪ್ಯಾಲೆಸ್ತೀನಿಯರು ‘ಗಾಝಾ ತೊರೆಯಲು ಮುಂದಾಗಿದ್ದಾರೆ’ ಎಂದು ಹೇಳುವ ಮೂಲಕ ಟ್ರಂಪ್ ಹೊಸ ಆತಂಕವನ್ನು ಹುಟ್ಟು ಹಾಕಿದ್ದಾರೆ. ಟ್ರಂಪ್ ಹೇಳಿಕೆ ಗಾಝಾ ಜನರಲ್ಲಿ ಜನಾಂಗೀಯ ನಿರ್ಮೂಲನೆಯ ಭಯವನ್ನು ಹುಟ್ಟು ಹಾಕಿದೆ.

ಟ್ರಂಪ್‌ಗೆ ಪ್ರತಿಕ್ರಿಯೆಯಾಗಿ ಹಮಾಸ್ ಹೇಳಿಕೆ ಬಿಡುಗಡೆ ಮಾಡಿದೆ. “ಟ್ರಂಪ್ ಯೋಜನೆಗಳು ಗಾಝಾದಲ್ಲಿ ಅವ್ಯವಸ್ಥೆ ಮತ್ತು ಉದ್ವಿಗ್ನತೆಯನ್ನು ಸೃಷ್ಟಿಸುವ ಒಂದು ಪಿತೂರಿಯಾಗಿದೆ. ಗಾಝಾ ಪಟ್ಟಿಯಲ್ಲಿರುವ ನಮ್ಮ ಜನರು ಈ ಯೋಜನೆಗಳನ್ನು ಜಾರಿಗೆ ತರಲು ಬಿಡುವುದಿಲ್ಲ” ಎಂದು ಹೇಳಿದೆ.

ನೆತನ್ಯಾಹು ಅಮೆರಿಕದ ಭೇಟಿಯನ್ನು ಖಂಡಿಸಿ ವಾಷಿಂಗ್ಟನ್ ಡಿಸಿಯಲ್ಲಿ ಜಮಾಯಿಸಿದ ಜನರು ಪ್ರತಿಭಟನೆ ನಡೆಸಿದ್ದಾರೆ. ಟ್ರಂಪ್ ಒಬ್ಬ ‘ಯುದ್ಧ ಅಪರಾಧಿ’ಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆತನ್ಯಾಹು ಅಮೆರಿಕ ಭೇಟಿಗೂ ಮುನ್ನವೇ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಟ್ರಂಪ್ “ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿ ನನಗಿಲ್ಲ” ಎಂದಿದ್ದರು. ಇದಕ್ಕೂ ಮುನ್ನ ಕೆಲ ದಿನಗಳ ಹಿಂದೆ ” ಗಾಝಾ ಜನತೆಯನ್ನು ಸುತ್ತಮುತ್ತಲಿನ ಈಜಿಪ್ಟ್, ಜೋರ್ಡಾನ್, ತುರ್ಕಿ ದೇಶಗಳು ಕರೆಸಿಕೊಳ್ಳಿ” ಎಂದಿದ್ದರು.

ಕುವೈತ್‌ನ ಶತ ಪ್ರಯತ್ನದ ಫಲವಾಗಿ 15 ತಿಂಗಳ ಬಳಿಕ ಜನವರಿ 16, 2025ರಿಂದ ಗಾಝಾದಲ್ಲಿ ಇಸ್ರೇಲ್ ಆಕ್ರಮಣ ತಾತ್ಕಾಲಿಕ ಕೊನೆಗೊಂಡಿದೆ. ಜನರು ತಮ್ಮ ಮೂಲ ಸ್ಥಳಗಳಿಗೆ ಮರಳಿ ಛಿದ್ರವಾದ ಬದುಕನ್ನು ಮರು ರೂಪಿಸುವ ಪ್ರಯತ್ನದಲ್ಲಿದ್ದಾರೆ.

ಈ ನಡುವೆ ಗಾಝಾದಲ್ಲಿ ನಿರಂತರ ನರಮೇಧ ನಡೆಸಿದ ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕಕ್ಕೆ ತೆರಳಿ ಟ್ರಂಪ್ ಅವರನ್ನು ಭೇಟಿಯಾಗಿದ್ದಾರೆ. ಟ್ರಂಪ್ ಕೂಡ ಪದೇ ಪದೇ ವಿಚಿತ್ರ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಇವೆಲ್ಲವೂ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಗಾಝಾ ಜನತೆಯನ್ನು ಅವರ ನಾಡಿನಿಂದ ಹೊರದಬ್ಬಿ ಗಾಝಾವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ.

ಗಾಝಾ ಕದನ ವಿರಾಮ ಮುಂದುವರಿಯುವ ಗ್ಯಾರಂಟಿಯಿಲ್ಲ : ನೆತನ್ಯಾಹು ಭೇಟಿಗೂ ಮುನ್ನ ಟ್ರಂಪ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...