Homeಅಂತರಾಷ್ಟ್ರೀಯಮಾಸ್ಕ್ ತಯಾರಿಸುವ ಕಾರ್ಖಾನೆಗೆ ಭೇಟಿ ನೀಡಿದರೂ ಮಾಸ್ಕ್ ಧರಿಸಲು ಒಪ್ಪದ ಟ್ರಂಪ್

ಮಾಸ್ಕ್ ತಯಾರಿಸುವ ಕಾರ್ಖಾನೆಗೆ ಭೇಟಿ ನೀಡಿದರೂ ಮಾಸ್ಕ್ ಧರಿಸಲು ಒಪ್ಪದ ಟ್ರಂಪ್

- Advertisement -
- Advertisement -

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರಿಜೋನಾದ ಫೀನಿಕ್ಸ್‌ನಲ್ಲಿ ಮಾಸ್ಕ್ ತಯಾರಿಸುವ ಕಾರ್ಖಾನೆಗೆ ಭೇಟಿ ನೀಡಿದರೂ ಮಾಸ್ಕ್ ಧರಿಸಲು ನಿರಾಕರಿಸಿರುವ ಘಟನೆ ಜರುಗಿದೆ.

ಕೊರೊನಾ ಲಾಕ್‌ಡೌನ್‌ ನಂತರ ತಮ್ಮ ಮೊದಲ ಪ್ರವಾಸದಲ್ಲಿ ಅರಿಜೋನಾದ ಫೀನಿಕ್ಸ್‌ನ ಮಾಸ್ಕ್ ತಯಾರಿಸುವ ಕಾರ್ಖಾನೆಯಾದ ಹನಿವೆಲ್‌ಗೆ ಭೇಟಿ ನೀಡಿದ್ದರು. ಅಲ್ಲಿಯ ಸಿಬ್ಬಂದಿ ಮಾಸ್ಕ್‌‌ ‌ಅನ್ನು ನೀಡಿದರೂ ಟ್ರಂಪ್ ಧರಿಸಲು ನಿರಾಕರಿಸಿದ್ದಾರೆ.

ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕಾದ ಆರ್ಥಿಕತೆಯನ್ನು ಪುನಃ ತೆರೆದರೆ ಹೆಚ್ಚಿನ ಅಮೆರಿಕನ್ನರು ಸಾಯುತ್ತಾರೆ ಎಂದು ಒಪ್ಪಿಕೊಂಡರು. “ಅಪಾರ್ಟ್ಮೆಂಟ್, ಮನೆ ಅಥವಾ ಅದು ಏನೇ ಇರಲಿ ನಿಮ್ಮನ್ನು ಲಾಕ್ ಮಾಡಲಾಗುವುದಿಲ್ಲ” ಎಂದು ಟ್ರಂಪ್ ಹೇಳಿದ್ದಾರೆ. ಕೆಲವು ಜನರ ಮೇಲೆ ಇದು ಕೆಟ್ಟ ಪರಿಣಾಮ ಬೀರುತ್ತಾರೆ ಎಂದು ಕಾರ್ಖಾನೆಯಲ್ಲಿ ಒಪ್ಪಿಕೊಂಡ ಅವರು, ಆದರೆ ನಾವು ನಮ್ಮ ದೇಶವನ್ನು ಮುಕ್ತಗೊಳಿಸಬೇಕು ಎಂದರು.

ವೈದ್ಯಕೀಯ ಸಿಬ್ಬಂದಿ ಮತ್ತು ಇತರರು ಬಳಸುವ ಮುಖವಾಡಗಳನ್ನು ತಯಾರಿಸುವ ಹನಿವೆಲ್ ಕಾರ್ಮಿಕರನ್ನು ಶ್ಲಾಘಿಸಿದ ಟ್ರಂಪ್, ಇದು ಮುಂದೆ ನೋಡುವ ಸಮಯವಾಗಿದೆ ಎಂದಿದ್ದಾರೆ.

ಅಮೆರಿಕಾದಲ್ಲಿ ನವೆಂಬರ್‌ನಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, ಟ್ರಂಪ್ ಮರು ಆಯ್ಕೆಯಾಗಲು ಬಯಸಿದ್ದಾರೆ. ಆದರೆ ಕೊರೊನಾ ಸಾಂಕ್ರಮಿಕವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲವೆಂದು ಅಮೆರಿಕಾದಾದ್ಯಂತ ಟ್ರಂಪ್ ಟೀಕೆಗೆ ಒಳಗಾಗಿದ್ದಾರೆ.

ಅಮೆರಿಕಾದಲ್ಲಿ ಇದುವರೆಗೂ 12 ಲಕ್ಷಕ್ಕಿಂತಲೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಳಿದ್ದು, 72 ಸಾವಿರಕ್ಕಿಂತಲೂ  ಹೆಚ್ಚು ಜನರು ಮೃತಪಟ್ಟಿದ್ದಾರೆ. ವಿಶ್ವದಾದ್ಯಂತ 36 ಲಕ್ಷ ಜನರಿಗೆ ಸೋಂಕು ಹರಡಿದ್ದು, 2,57,000 ಜನರು ಮೃತಪಟ್ಟಿದ್ದಾರೆ.


ಇದನ್ನೂ ಓದಿ:  ಕೊರೊನಾ ವೈರಸನ್ನು ಚೀನಾದಲ್ಲಿ ಸೃಷ್ಟಿಸಲಾಗಿದೆ: ಡೊನಾಲ್ಡ್ ಟ್ರಂಪ್ ಆರೋಪ


ವಿಡಿಯೊ ನೋಡಿ: ಸದ್ದು…ಈ ಸುದ್ದಿ ಏನಾಗಿದೆ ? 3 ನೇ ಸಂಚಿಕೆ

ಸದ್ದು ಈ ಸುದ್ದಿಗಳೇನಾದವು? – 03

ಮಾರತ್ತಹಳ್ಳಿ ಷೆಡ್‌ ಧ್ವಂಸ ಪ್ರಕರಣದಲ್ಲಿ ಹೈಕೋರ್ಟ್‌ ಹೇಳಿದ್ದು ಜಾರಿಯಾಯಿತಾ? ಅಕ್ರಮ ಕೆಲಸಕ್ಕೆ ಕುಮ್ಮಕ್ಕು ಕೊಟ್ಟಿದ್ದ ಅರವಿಂದ ಲಿಂಬಾವಳಿ ಮತ್ತು ಸುವರ್ಣ ಟಿವಿ ಏನು ಮಾಡಬೇಕಿತ್ತು?ಆನೇಕಲ್‌ ರೀ-ಪ್ಯಾಕಿಂಗ್‌ ಪ್ರಕರಣದಲ್ಲಿ ದೂರುದಾರರು ಸ್ಥಳೀಯ ಸರ್ಕಾರಿ ಅಧಿಕಾರಿಯಾಗಿದ್ದರೂ, ಇದುವರೆಗೆ ಕ್ರಮ ಏಕಾಗಿಲ್ಲ? ಇವೆರಡು ಫಾಲೋಅಪ್‌ ಒಳಗೊಂಡಂತೆ ಮರೆಯಬಾರದ ಹಳೆಯ ಸುದ್ದಿಗಳು ಮತ್ತು ಇಂದಿನ ಸುದ್ದಿಗಳ ಇನ್ನೊಂದು ಮಗ್ಗುಲನ್ನು ತೋರಿಸುವ ವಿಶಿಷ್ಟ ಕಾರ್ಯಕ್ರಮವಿದು.ನೋಡಿ ಷೇರ್‌ ಮಾಡಿ.

Posted by Naanu Gauri on Tuesday, May 5, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...