Homeಅಂತರಾಷ್ಟ್ರೀಯಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರೊಬ್ಬರು “ವೈಟ್‌ ಪವರ್” ಎಂದು ಜೋರಾಗಿ ಕೂಗುತ್ತಿರುವ ಜನಾಂಗೀಯ ತಾರತಮ್ಯದ ವೀಡಿಯೊವನ್ನು ರಿಟ್ವೀಟ್ ಮಾಡಿ ವಿವಾದಕ್ಕೊಳಗಾಗಿದ್ದಾರೆ.

ಫ್ಲೋರಿಡಾದ ನಿವೃತ್ತಿ ಸಂಕೀರ್ಣದಲ್ಲಿ ಟ್ರಂಪ್ ಪರ ರ್ಯಾಲಿಯಲ್ಲಿ ಭಾಗವಹಿಸುವ ಜನರ ಗುಂಪಿನಲ್ಲಿ ಈ ಘೋಷಣೆ ಕೂಗಿದ ಬೆಂಬಲಿಗನೂ ಇದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ಈ ವಿಡಿಯೋ ತುಣುಕಿನಲ್ಲಿ ಅಧ್ಯಕ್ಷರ ಬೆಂಬಲಿಗರು ಮತ್ತು ವಿರೋಧಿಗಳು ನಿಂದನೆ ಮತ್ತು ಪರಸ್ಪರರ ಮೇಲೆ ಟೀಕೆಗಳನ್ನು ಮಾಡುವುದನ್ನು ಗಮನಿಸಬಹುದಾಗಿದೆ. ನಂತರ ಆ ರಿಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜನಾಂಗೀಯ ಉದ್ವಿಗ್ನತೆಯನ್ನು ಲಾಭ ಮಾಡಿಕೊಳ್ಳಲು ಟ್ರಂಪ್‌ ಪ್ರಯತ್ನಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಆದರೆ ಈ ಆರೋಪವನ್ನು ಟ್ರಂಪ್ ನಿರಾಕರಿಸಿದ್ದಾರೆ. “ವೈಟ್ ಪವರ್” ಘೋಷಣೆ ಕೂಗುವುದು ಕೇಳಲಿಲ್ಲ ಎಂದು ಅವರ ವಕ್ತಾರರು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಸೇರಿಸಲಾಗಿರುವ ವೀಡಿಯೊದಲ್ಲಿ ಟ್ರಂಪ್ ಬೆಂಬಲಿಗರು ಗಾಲ್ಫ್ ಕಾರ್ಟ್‌ನಲ್ಲಿ ಮುಷ್ಟಿಯನ್ನು ಮೇಲೆತ್ತಿ “ವೈಟ್ ಪವರ್” ಎಂದು ಕೂಗುತ್ತಿದ್ದಾರೆ. ಇತರ ಟ್ರಂಪ್ ವಿರೋಧಿ ಪ್ರತಿಭಟನಾಕಾರರು ರ್ಯಾಲಿ-ನಡೆಸುವವರ ಮೇಲೆ “ನಾಜಿ” ಎಂದು ಕರೆದಿದ್ದಾರೆ.

ಯುಎಸ್ ಸೆನೆಟ್‌ನ ಏಕೈಕ ಕಪ್ಪು ರಿಪಬ್ಲಿಕನ್ ಟಿಮ್ ಸ್ಕಾಟ್ ಭಾನುವಾರ ಸಂದರ್ಶನವೊಂದರಲ್ಲಿ ಈ ವೀಡಿಯೊ “ಆಕ್ರಮಣಕಾರಿ” ಎಂದು ಕರೆದಿದ್ದಾರೆ ಮತ್ತು ಆ ಟ್ವೀಟ್ ಅನ್ನು ಡಿಲೀಟ್ ಮಾಡುವಂತೆ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಶ್ವೇತಭವನದ ವಕ್ತಾರ nಜುಡ್ ಡೀರೆ ಪ್ರತಿಕ್ರಿಯಿಸಿ ಅಧ್ಯಕ್ಷರು “ವೀಡಿಯೊದಲ್ಲಿ ವೈಟ್ ಪವರ್ ಎಂದು ಕೂಗುವುದು ಕೇಳಿಸಲಿಲ್ಲ. ಬದಲಿಗೆ ಜನರ ಹಷೋದ್ಘಾರ ಮಾತ್ರ ಕೇಳಿಸುತ್ತಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ಈ ಹಿಂದೆ ಸಹ ಜನಾಂಗೀಯ ವಿಷಯವನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಆರೋಪವನ್ನು ಎದುರಿಸಿದ್ದರು. 2017 ರಲ್ಲಿ ಅವರು ಬ್ರಿಟಿಷ್ ಬಲಪಂಥೀಯ ಗುಂಪಿನಿಂದ ಮೂರು ಪ್ರಚೋದನಾಕಾರಿ ವೀಡಿಯೊಗಳನ್ನು ರಿಟ್ವೀಟ್ ಮಾಡಿದ್ದರು. ಆಗಿನ ಯುಕೆ ಪ್ರಧಾನಿ ಥೆರೆಸಾ ಮೇ ಅದನ್ನು ಖಂಡಿಸಿದ್ದರು.

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

ಕೊರೋನಾ ವೈರಸ್ ಅನ್ನು ವಿವರಿಸಲು “ಕುಂಗ್-ಫ್ಲೂ” ಎಂಬ ಪದವನ್ನು ಪದೇ ಪದೇ ಬಳಸಿದ್ದಕ್ಕಾಗಿ ಟ್ರಂಪ್ ಇತ್ತೀಚಿನ ವಾರಗಳಲ್ಲಿ ವರ್ಣಭೇದ ನೀತಿಯ ಆರೋಪ ಎದುರಿಸುತ್ತಿದ್ದಾರೆ. ಅಧ್ಯಕ್ಷರು ಈ ಪದವನ್ನು ಬಳಸುವುದನ್ನು ವರ್ಣಭೇದ ನೀತಿಯೆಂದು ಶ್ವೇತಭವನ ನಿರಾಕರಿಸಿದೆ.

ಈ ಮಧ್ಯೆ ಸಿಬಿಎಸ್ ನ್ಯೂಸ್‌ನ ಸಮೀಕ್ಷೆಯು ಯುಎಸ್‌ನ ಸಾರ್ವಜನಿಕರಲ್ಲಿ ಹೆಚ್ಚಿನವರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನವನ್ನು ಒಪ್ಪುತ್ತಾರೆ ಮತ್ತು ಪ್ರತಿಭಟನೆಗಳು ಪೊಲೀಸ್ ಸುಧಾರಣೆಗಳಿಗೆ ಕಾರಣವಾಗುತ್ತವೆ ಎಂದು ನಂಬುತ್ತಾರೆ ಎಂದು ತಿಳಿಸಿದೆ.

ಇತ್ತೀಚಿನ ಪ್ರತಿಭಟನೆಗಳನ್ನು ಅಧ್ಯಕ್ಷ ಟ್ರಂಪ್ ನಿರ್ವಹಿಸುವುದನ್ನು 10 ರಲ್ಲಿ ಆರು ಅಮೆರಿಕನ್ನರು ಒಪ್ಪುವುದಿಲ್ಲ ಎನ್ನಲಾಗಿದೆ.


ಡೋನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...