Homeಅಂತರಾಷ್ಟ್ರೀಯಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರೊಬ್ಬರು “ವೈಟ್‌ ಪವರ್” ಎಂದು ಜೋರಾಗಿ ಕೂಗುತ್ತಿರುವ ಜನಾಂಗೀಯ ತಾರತಮ್ಯದ ವೀಡಿಯೊವನ್ನು ರಿಟ್ವೀಟ್ ಮಾಡಿ ವಿವಾದಕ್ಕೊಳಗಾಗಿದ್ದಾರೆ.

ಫ್ಲೋರಿಡಾದ ನಿವೃತ್ತಿ ಸಂಕೀರ್ಣದಲ್ಲಿ ಟ್ರಂಪ್ ಪರ ರ್ಯಾಲಿಯಲ್ಲಿ ಭಾಗವಹಿಸುವ ಜನರ ಗುಂಪಿನಲ್ಲಿ ಈ ಘೋಷಣೆ ಕೂಗಿದ ಬೆಂಬಲಿಗನೂ ಇದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ಈ ವಿಡಿಯೋ ತುಣುಕಿನಲ್ಲಿ ಅಧ್ಯಕ್ಷರ ಬೆಂಬಲಿಗರು ಮತ್ತು ವಿರೋಧಿಗಳು ನಿಂದನೆ ಮತ್ತು ಪರಸ್ಪರರ ಮೇಲೆ ಟೀಕೆಗಳನ್ನು ಮಾಡುವುದನ್ನು ಗಮನಿಸಬಹುದಾಗಿದೆ. ನಂತರ ಆ ರಿಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜನಾಂಗೀಯ ಉದ್ವಿಗ್ನತೆಯನ್ನು ಲಾಭ ಮಾಡಿಕೊಳ್ಳಲು ಟ್ರಂಪ್‌ ಪ್ರಯತ್ನಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಆದರೆ ಈ ಆರೋಪವನ್ನು ಟ್ರಂಪ್ ನಿರಾಕರಿಸಿದ್ದಾರೆ. “ವೈಟ್ ಪವರ್” ಘೋಷಣೆ ಕೂಗುವುದು ಕೇಳಲಿಲ್ಲ ಎಂದು ಅವರ ವಕ್ತಾರರು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಸೇರಿಸಲಾಗಿರುವ ವೀಡಿಯೊದಲ್ಲಿ ಟ್ರಂಪ್ ಬೆಂಬಲಿಗರು ಗಾಲ್ಫ್ ಕಾರ್ಟ್‌ನಲ್ಲಿ ಮುಷ್ಟಿಯನ್ನು ಮೇಲೆತ್ತಿ “ವೈಟ್ ಪವರ್” ಎಂದು ಕೂಗುತ್ತಿದ್ದಾರೆ. ಇತರ ಟ್ರಂಪ್ ವಿರೋಧಿ ಪ್ರತಿಭಟನಾಕಾರರು ರ್ಯಾಲಿ-ನಡೆಸುವವರ ಮೇಲೆ “ನಾಜಿ” ಎಂದು ಕರೆದಿದ್ದಾರೆ.

ಯುಎಸ್ ಸೆನೆಟ್‌ನ ಏಕೈಕ ಕಪ್ಪು ರಿಪಬ್ಲಿಕನ್ ಟಿಮ್ ಸ್ಕಾಟ್ ಭಾನುವಾರ ಸಂದರ್ಶನವೊಂದರಲ್ಲಿ ಈ ವೀಡಿಯೊ “ಆಕ್ರಮಣಕಾರಿ” ಎಂದು ಕರೆದಿದ್ದಾರೆ ಮತ್ತು ಆ ಟ್ವೀಟ್ ಅನ್ನು ಡಿಲೀಟ್ ಮಾಡುವಂತೆ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಶ್ವೇತಭವನದ ವಕ್ತಾರ nಜುಡ್ ಡೀರೆ ಪ್ರತಿಕ್ರಿಯಿಸಿ ಅಧ್ಯಕ್ಷರು “ವೀಡಿಯೊದಲ್ಲಿ ವೈಟ್ ಪವರ್ ಎಂದು ಕೂಗುವುದು ಕೇಳಿಸಲಿಲ್ಲ. ಬದಲಿಗೆ ಜನರ ಹಷೋದ್ಘಾರ ಮಾತ್ರ ಕೇಳಿಸುತ್ತಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ಈ ಹಿಂದೆ ಸಹ ಜನಾಂಗೀಯ ವಿಷಯವನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಆರೋಪವನ್ನು ಎದುರಿಸಿದ್ದರು. 2017 ರಲ್ಲಿ ಅವರು ಬ್ರಿಟಿಷ್ ಬಲಪಂಥೀಯ ಗುಂಪಿನಿಂದ ಮೂರು ಪ್ರಚೋದನಾಕಾರಿ ವೀಡಿಯೊಗಳನ್ನು ರಿಟ್ವೀಟ್ ಮಾಡಿದ್ದರು. ಆಗಿನ ಯುಕೆ ಪ್ರಧಾನಿ ಥೆರೆಸಾ ಮೇ ಅದನ್ನು ಖಂಡಿಸಿದ್ದರು.

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

ಕೊರೋನಾ ವೈರಸ್ ಅನ್ನು ವಿವರಿಸಲು “ಕುಂಗ್-ಫ್ಲೂ” ಎಂಬ ಪದವನ್ನು ಪದೇ ಪದೇ ಬಳಸಿದ್ದಕ್ಕಾಗಿ ಟ್ರಂಪ್ ಇತ್ತೀಚಿನ ವಾರಗಳಲ್ಲಿ ವರ್ಣಭೇದ ನೀತಿಯ ಆರೋಪ ಎದುರಿಸುತ್ತಿದ್ದಾರೆ. ಅಧ್ಯಕ್ಷರು ಈ ಪದವನ್ನು ಬಳಸುವುದನ್ನು ವರ್ಣಭೇದ ನೀತಿಯೆಂದು ಶ್ವೇತಭವನ ನಿರಾಕರಿಸಿದೆ.

ಈ ಮಧ್ಯೆ ಸಿಬಿಎಸ್ ನ್ಯೂಸ್‌ನ ಸಮೀಕ್ಷೆಯು ಯುಎಸ್‌ನ ಸಾರ್ವಜನಿಕರಲ್ಲಿ ಹೆಚ್ಚಿನವರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನವನ್ನು ಒಪ್ಪುತ್ತಾರೆ ಮತ್ತು ಪ್ರತಿಭಟನೆಗಳು ಪೊಲೀಸ್ ಸುಧಾರಣೆಗಳಿಗೆ ಕಾರಣವಾಗುತ್ತವೆ ಎಂದು ನಂಬುತ್ತಾರೆ ಎಂದು ತಿಳಿಸಿದೆ.

ಇತ್ತೀಚಿನ ಪ್ರತಿಭಟನೆಗಳನ್ನು ಅಧ್ಯಕ್ಷ ಟ್ರಂಪ್ ನಿರ್ವಹಿಸುವುದನ್ನು 10 ರಲ್ಲಿ ಆರು ಅಮೆರಿಕನ್ನರು ಒಪ್ಪುವುದಿಲ್ಲ ಎನ್ನಲಾಗಿದೆ.


ಡೋನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...