Homeಅಂತರಾಷ್ಟ್ರೀಯಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರೊಬ್ಬರು “ವೈಟ್‌ ಪವರ್” ಎಂದು ಜೋರಾಗಿ ಕೂಗುತ್ತಿರುವ ಜನಾಂಗೀಯ ತಾರತಮ್ಯದ ವೀಡಿಯೊವನ್ನು ರಿಟ್ವೀಟ್ ಮಾಡಿ ವಿವಾದಕ್ಕೊಳಗಾಗಿದ್ದಾರೆ.

ಫ್ಲೋರಿಡಾದ ನಿವೃತ್ತಿ ಸಂಕೀರ್ಣದಲ್ಲಿ ಟ್ರಂಪ್ ಪರ ರ್ಯಾಲಿಯಲ್ಲಿ ಭಾಗವಹಿಸುವ ಜನರ ಗುಂಪಿನಲ್ಲಿ ಈ ಘೋಷಣೆ ಕೂಗಿದ ಬೆಂಬಲಿಗನೂ ಇದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ಈ ವಿಡಿಯೋ ತುಣುಕಿನಲ್ಲಿ ಅಧ್ಯಕ್ಷರ ಬೆಂಬಲಿಗರು ಮತ್ತು ವಿರೋಧಿಗಳು ನಿಂದನೆ ಮತ್ತು ಪರಸ್ಪರರ ಮೇಲೆ ಟೀಕೆಗಳನ್ನು ಮಾಡುವುದನ್ನು ಗಮನಿಸಬಹುದಾಗಿದೆ. ನಂತರ ಆ ರಿಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜನಾಂಗೀಯ ಉದ್ವಿಗ್ನತೆಯನ್ನು ಲಾಭ ಮಾಡಿಕೊಳ್ಳಲು ಟ್ರಂಪ್‌ ಪ್ರಯತ್ನಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಆದರೆ ಈ ಆರೋಪವನ್ನು ಟ್ರಂಪ್ ನಿರಾಕರಿಸಿದ್ದಾರೆ. “ವೈಟ್ ಪವರ್” ಘೋಷಣೆ ಕೂಗುವುದು ಕೇಳಲಿಲ್ಲ ಎಂದು ಅವರ ವಕ್ತಾರರು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಸೇರಿಸಲಾಗಿರುವ ವೀಡಿಯೊದಲ್ಲಿ ಟ್ರಂಪ್ ಬೆಂಬಲಿಗರು ಗಾಲ್ಫ್ ಕಾರ್ಟ್‌ನಲ್ಲಿ ಮುಷ್ಟಿಯನ್ನು ಮೇಲೆತ್ತಿ “ವೈಟ್ ಪವರ್” ಎಂದು ಕೂಗುತ್ತಿದ್ದಾರೆ. ಇತರ ಟ್ರಂಪ್ ವಿರೋಧಿ ಪ್ರತಿಭಟನಾಕಾರರು ರ್ಯಾಲಿ-ನಡೆಸುವವರ ಮೇಲೆ “ನಾಜಿ” ಎಂದು ಕರೆದಿದ್ದಾರೆ.

ಯುಎಸ್ ಸೆನೆಟ್‌ನ ಏಕೈಕ ಕಪ್ಪು ರಿಪಬ್ಲಿಕನ್ ಟಿಮ್ ಸ್ಕಾಟ್ ಭಾನುವಾರ ಸಂದರ್ಶನವೊಂದರಲ್ಲಿ ಈ ವೀಡಿಯೊ “ಆಕ್ರಮಣಕಾರಿ” ಎಂದು ಕರೆದಿದ್ದಾರೆ ಮತ್ತು ಆ ಟ್ವೀಟ್ ಅನ್ನು ಡಿಲೀಟ್ ಮಾಡುವಂತೆ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಶ್ವೇತಭವನದ ವಕ್ತಾರ nಜುಡ್ ಡೀರೆ ಪ್ರತಿಕ್ರಿಯಿಸಿ ಅಧ್ಯಕ್ಷರು “ವೀಡಿಯೊದಲ್ಲಿ ವೈಟ್ ಪವರ್ ಎಂದು ಕೂಗುವುದು ಕೇಳಿಸಲಿಲ್ಲ. ಬದಲಿಗೆ ಜನರ ಹಷೋದ್ಘಾರ ಮಾತ್ರ ಕೇಳಿಸುತ್ತಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ಈ ಹಿಂದೆ ಸಹ ಜನಾಂಗೀಯ ವಿಷಯವನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಆರೋಪವನ್ನು ಎದುರಿಸಿದ್ದರು. 2017 ರಲ್ಲಿ ಅವರು ಬ್ರಿಟಿಷ್ ಬಲಪಂಥೀಯ ಗುಂಪಿನಿಂದ ಮೂರು ಪ್ರಚೋದನಾಕಾರಿ ವೀಡಿಯೊಗಳನ್ನು ರಿಟ್ವೀಟ್ ಮಾಡಿದ್ದರು. ಆಗಿನ ಯುಕೆ ಪ್ರಧಾನಿ ಥೆರೆಸಾ ಮೇ ಅದನ್ನು ಖಂಡಿಸಿದ್ದರು.

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

ಕೊರೋನಾ ವೈರಸ್ ಅನ್ನು ವಿವರಿಸಲು “ಕುಂಗ್-ಫ್ಲೂ” ಎಂಬ ಪದವನ್ನು ಪದೇ ಪದೇ ಬಳಸಿದ್ದಕ್ಕಾಗಿ ಟ್ರಂಪ್ ಇತ್ತೀಚಿನ ವಾರಗಳಲ್ಲಿ ವರ್ಣಭೇದ ನೀತಿಯ ಆರೋಪ ಎದುರಿಸುತ್ತಿದ್ದಾರೆ. ಅಧ್ಯಕ್ಷರು ಈ ಪದವನ್ನು ಬಳಸುವುದನ್ನು ವರ್ಣಭೇದ ನೀತಿಯೆಂದು ಶ್ವೇತಭವನ ನಿರಾಕರಿಸಿದೆ.

ಈ ಮಧ್ಯೆ ಸಿಬಿಎಸ್ ನ್ಯೂಸ್‌ನ ಸಮೀಕ್ಷೆಯು ಯುಎಸ್‌ನ ಸಾರ್ವಜನಿಕರಲ್ಲಿ ಹೆಚ್ಚಿನವರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನವನ್ನು ಒಪ್ಪುತ್ತಾರೆ ಮತ್ತು ಪ್ರತಿಭಟನೆಗಳು ಪೊಲೀಸ್ ಸುಧಾರಣೆಗಳಿಗೆ ಕಾರಣವಾಗುತ್ತವೆ ಎಂದು ನಂಬುತ್ತಾರೆ ಎಂದು ತಿಳಿಸಿದೆ.

ಇತ್ತೀಚಿನ ಪ್ರತಿಭಟನೆಗಳನ್ನು ಅಧ್ಯಕ್ಷ ಟ್ರಂಪ್ ನಿರ್ವಹಿಸುವುದನ್ನು 10 ರಲ್ಲಿ ಆರು ಅಮೆರಿಕನ್ನರು ಒಪ್ಪುವುದಿಲ್ಲ ಎನ್ನಲಾಗಿದೆ.


ಡೋನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...