Homeಅಂತರಾಷ್ಟ್ರೀಯಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜನಾಂಗೀಯ ತಾರತಮ್ಯದ ಘೋಷಣೆ ಕೂಗುವ ವಿಡಿಯೋ ರಿಟ್ವೀಟ್ ಮಾಡಿದ ಟ್ರಂಪ್!

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

- Advertisement -
- Advertisement -

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಬೆಂಬಲಿಗರೊಬ್ಬರು “ವೈಟ್‌ ಪವರ್” ಎಂದು ಜೋರಾಗಿ ಕೂಗುತ್ತಿರುವ ಜನಾಂಗೀಯ ತಾರತಮ್ಯದ ವೀಡಿಯೊವನ್ನು ರಿಟ್ವೀಟ್ ಮಾಡಿ ವಿವಾದಕ್ಕೊಳಗಾಗಿದ್ದಾರೆ.

ಫ್ಲೋರಿಡಾದ ನಿವೃತ್ತಿ ಸಂಕೀರ್ಣದಲ್ಲಿ ಟ್ರಂಪ್ ಪರ ರ್ಯಾಲಿಯಲ್ಲಿ ಭಾಗವಹಿಸುವ ಜನರ ಗುಂಪಿನಲ್ಲಿ ಈ ಘೋಷಣೆ ಕೂಗಿದ ಬೆಂಬಲಿಗನೂ ಇದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ಈ ವಿಡಿಯೋ ತುಣುಕಿನಲ್ಲಿ ಅಧ್ಯಕ್ಷರ ಬೆಂಬಲಿಗರು ಮತ್ತು ವಿರೋಧಿಗಳು ನಿಂದನೆ ಮತ್ತು ಪರಸ್ಪರರ ಮೇಲೆ ಟೀಕೆಗಳನ್ನು ಮಾಡುವುದನ್ನು ಗಮನಿಸಬಹುದಾಗಿದೆ. ನಂತರ ಆ ರಿಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದೆ.

ಜನಾಂಗೀಯ ಉದ್ವಿಗ್ನತೆಯನ್ನು ಲಾಭ ಮಾಡಿಕೊಳ್ಳಲು ಟ್ರಂಪ್‌ ಪ್ರಯತ್ನಿಸುತ್ತಿದ್ದಾರೆ ಎಂದು ವಿರೋಧ ಪಕ್ಷ ಆರೋಪಿಸಿದೆ. ಆದರೆ ಈ ಆರೋಪವನ್ನು ಟ್ರಂಪ್ ನಿರಾಕರಿಸಿದ್ದಾರೆ. “ವೈಟ್ ಪವರ್” ಘೋಷಣೆ ಕೂಗುವುದು ಕೇಳಲಿಲ್ಲ ಎಂದು ಅವರ ವಕ್ತಾರರು ಹೇಳಿದ್ದಾರೆ.

ಟ್ವೀಟ್‌ನಲ್ಲಿ ಸೇರಿಸಲಾಗಿರುವ ವೀಡಿಯೊದಲ್ಲಿ ಟ್ರಂಪ್ ಬೆಂಬಲಿಗರು ಗಾಲ್ಫ್ ಕಾರ್ಟ್‌ನಲ್ಲಿ ಮುಷ್ಟಿಯನ್ನು ಮೇಲೆತ್ತಿ “ವೈಟ್ ಪವರ್” ಎಂದು ಕೂಗುತ್ತಿದ್ದಾರೆ. ಇತರ ಟ್ರಂಪ್ ವಿರೋಧಿ ಪ್ರತಿಭಟನಾಕಾರರು ರ್ಯಾಲಿ-ನಡೆಸುವವರ ಮೇಲೆ “ನಾಜಿ” ಎಂದು ಕರೆದಿದ್ದಾರೆ.

ಯುಎಸ್ ಸೆನೆಟ್‌ನ ಏಕೈಕ ಕಪ್ಪು ರಿಪಬ್ಲಿಕನ್ ಟಿಮ್ ಸ್ಕಾಟ್ ಭಾನುವಾರ ಸಂದರ್ಶನವೊಂದರಲ್ಲಿ ಈ ವೀಡಿಯೊ “ಆಕ್ರಮಣಕಾರಿ” ಎಂದು ಕರೆದಿದ್ದಾರೆ ಮತ್ತು ಆ ಟ್ವೀಟ್ ಅನ್ನು ಡಿಲೀಟ್ ಮಾಡುವಂತೆ ಅಧ್ಯಕ್ಷರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಶ್ವೇತಭವನದ ವಕ್ತಾರ nಜುಡ್ ಡೀರೆ ಪ್ರತಿಕ್ರಿಯಿಸಿ ಅಧ್ಯಕ್ಷರು “ವೀಡಿಯೊದಲ್ಲಿ ವೈಟ್ ಪವರ್ ಎಂದು ಕೂಗುವುದು ಕೇಳಿಸಲಿಲ್ಲ. ಬದಲಿಗೆ ಜನರ ಹಷೋದ್ಘಾರ ಮಾತ್ರ ಕೇಳಿಸುತ್ತಿದೆ ಎಂದಿದ್ದಾರೆ.

ಅಧ್ಯಕ್ಷ ಟ್ರಂಪ್ ಈ ಹಿಂದೆ ಸಹ ಜನಾಂಗೀಯ ವಿಷಯವನ್ನು ಹಂಚಿಕೊಳ್ಳುವ ಅಥವಾ ಪ್ರಚಾರ ಮಾಡುವ ಆರೋಪವನ್ನು ಎದುರಿಸಿದ್ದರು. 2017 ರಲ್ಲಿ ಅವರು ಬ್ರಿಟಿಷ್ ಬಲಪಂಥೀಯ ಗುಂಪಿನಿಂದ ಮೂರು ಪ್ರಚೋದನಾಕಾರಿ ವೀಡಿಯೊಗಳನ್ನು ರಿಟ್ವೀಟ್ ಮಾಡಿದ್ದರು. ಆಗಿನ ಯುಕೆ ಪ್ರಧಾನಿ ಥೆರೆಸಾ ಮೇ ಅದನ್ನು ಖಂಡಿಸಿದ್ದರು.

ಜಾರ್ಜ್ ಫ್ಲಾಯ್ಡ್ ಹತ್ಯೆ ವಿಚಾರದಲ್ಲಿಯೂ ಟ್ರಂಪ್‌ ನಡವಳಿಕೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಫೇಸ್‌ಬುಕ್, ಟ್ವಿಟ್ಟರ್‌ ಸೇರಿದಂತೆ ಹಲವು ಜಾಲತಾಣಗಳು ಅಧ್ಯಕ್ಷರ ಹಲವು ಪೋಸ್ಟ್‌ಗಳನ್ನು ಡಿಲೀಟ್ ಮಾಡಿದ್ದವು.

ಕೊರೋನಾ ವೈರಸ್ ಅನ್ನು ವಿವರಿಸಲು “ಕುಂಗ್-ಫ್ಲೂ” ಎಂಬ ಪದವನ್ನು ಪದೇ ಪದೇ ಬಳಸಿದ್ದಕ್ಕಾಗಿ ಟ್ರಂಪ್ ಇತ್ತೀಚಿನ ವಾರಗಳಲ್ಲಿ ವರ್ಣಭೇದ ನೀತಿಯ ಆರೋಪ ಎದುರಿಸುತ್ತಿದ್ದಾರೆ. ಅಧ್ಯಕ್ಷರು ಈ ಪದವನ್ನು ಬಳಸುವುದನ್ನು ವರ್ಣಭೇದ ನೀತಿಯೆಂದು ಶ್ವೇತಭವನ ನಿರಾಕರಿಸಿದೆ.

ಈ ಮಧ್ಯೆ ಸಿಬಿಎಸ್ ನ್ಯೂಸ್‌ನ ಸಮೀಕ್ಷೆಯು ಯುಎಸ್‌ನ ಸಾರ್ವಜನಿಕರಲ್ಲಿ ಹೆಚ್ಚಿನವರು ಬ್ಲ್ಯಾಕ್ ಲೈವ್ಸ್ ಮ್ಯಾಟರ್ ಆಂದೋಲನವನ್ನು ಒಪ್ಪುತ್ತಾರೆ ಮತ್ತು ಪ್ರತಿಭಟನೆಗಳು ಪೊಲೀಸ್ ಸುಧಾರಣೆಗಳಿಗೆ ಕಾರಣವಾಗುತ್ತವೆ ಎಂದು ನಂಬುತ್ತಾರೆ ಎಂದು ತಿಳಿಸಿದೆ.

ಇತ್ತೀಚಿನ ಪ್ರತಿಭಟನೆಗಳನ್ನು ಅಧ್ಯಕ್ಷ ಟ್ರಂಪ್ ನಿರ್ವಹಿಸುವುದನ್ನು 10 ರಲ್ಲಿ ಆರು ಅಮೆರಿಕನ್ನರು ಒಪ್ಪುವುದಿಲ್ಲ ಎನ್ನಲಾಗಿದೆ.


ಡೋನಾಲ್ಡ್‌ ಟ್ರಂಪ್‌ ಜಾಹೀರಾತುಗಳನ್ನು ನಿಷೇಧಿಸಿದ ಫೇಸ್‌ಬುಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...